Featured

ಉಡುಪಿ : ನೇಜಾರು ಕೊಲೆ ಪ್ರಕರಣ – ಮುಂದಿನ  ವಿಚಾರಣೆಗಾಗಿ ಪ್ರಕರಣ ಉಡುಪಿ ಜಿಲ್ಲಾ ನ್ಯಾಯಾಲಯಕ್ಕೆ – Vishwanews24

ಉಡುಪಿ : ನೇಜಾರು ಕೊಲೆ ಪ್ರಕರಣ – ಮುಂದಿನ  ವಿಚಾರಣೆಗಾಗಿ ಪ್ರಕರಣ ಉಡುಪಿ ಜಿಲ್ಲಾ ನ್ಯಾಯಾಲಯಕ್ಕೆ

ಉಡುಪಿ: ನೇಜಾರಿನಲ್ಲಿ ತಾಯಿ ಮತ್ತು ಮೂವರು ಮಕ್ಕಳ ಕಗ್ಗೊಲೆ ಪ್ರಕರಣದ ದೋಷಾರೋಪಣಾ ಪಟ್ಟಿಯನ್ನು ಸಲ್ಲಿಸಿ ರುವ ಹಿನ್ನೆಲೆಯಲ್ಲಿ ಉಡುಪಿಯ ಪ್ರಧಾನ ಸಿವಿಲ್ ನ್ಯಾಯಾಧೀಶರು ಮತ್ತು ಜೆಎಂಎಫ್‌ಸಿ ನ್ಯಾಯಾಲಯವು ಮುಂದಿನ ವಿಚಾರಣೆಯನ್ನು ಆರಂಭಿಸಲು ಪ್ರಕರಣವನ್ನು ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಲಯಕ್ಕೆ ಇಂದು ಒಪ್ಪಿಸಿತು.

ಉಡುಪಿಯ ಪ್ರಧಾನ ಸಿವಿಲ್ ನ್ಯಾಯಾಧೀಶರು ಮತ್ತು ಜೆಎಂಎಫ್‌ಸಿ ನ್ಯಾಯಾಲಯದಲ್ಲಿ ದೋಷಾರೋಪಣಾ ಪಟ್ಟಿಯ ಪರಿಶೀಲನೆ ಪೂರ್ಣಗೊಂಡ ಬಳಿಕ ವಕೀಲರಿಗೆ 15 ಸಂಪುಟಗಳ 2202 ಪುಟಗಳ ದೋಷಾ ರೋಪಣಾ ಪಟ್ಟಿಯನ್ನು ನೀಡಲಾಯಿತು.

ಈ ವೇಳೆ ಬೆಂಗಳೂರಿನ ಪರಪ್ಪನ ಅಗ್ರಹಾರ ಜೈಲಿನಲ್ಲಿರುವ ಆರೋಪಿ ಪ್ರವೀಣ್ ಚೌಗುಲೆಯನ್ನು ವಿಡಿಯೋ ಕಾನ್ಫರೆನ್ಸ್ ಮೂಲಕ ನ್ಯಾಯಾಲಯಕ್ಕೆ ಹಾಜರು ಪಡಿಸಲಾಯಿತು. ಪ್ರಕರಣದ ವಿಶೇಷ ಸರಕಾರಿ ಅಭಿಯೋಜಕ ಶಿವಪ್ರಸಾದ್ ಆಳ್ವ ಹಾಗೂ ಹಿರಿಯ ಸಹಾಯಕ ಸರಕಾರಿ ಅಭಿಯೋಜಕ ಎಚ್.ಎಂ.ನದಾಫ್ ಹಾಜರಿದ್ದರು.

ಮುಂದೆ ಜಿಲ್ಲಾ ಮತ್ತು ಸತ್ರ ನ್ಯಾಯಾಲಯದಲ್ಲಿ ಈ ಪ್ರಕರಣಕ್ಕೆ ಸೇಷನ್ಸ್ ಕೇಸು(ಎಸ್‌ಸಿ) ನಂಬರ್ ನೀಡಲಾಗುತ್ತದೆ. ನಂತರ ಆರೋಪಿಯನ್ನು ಮುಂದಿನ ವಿಚಾರಣೆಗೆ ಹಾಜರುಪಡಿಸುವಂತೆ ನ್ಯಾಯಾಲಯ ಕಾರಾಗೃಹಕ್ಕೆ ನೋಟೀಸು ಜಾರಿ ಮಾಡುತ್ತದೆ. ಆದುದರಿಂದ ಆರೋಪಿ ಪ್ರವೀಣ್ ಚೌಗುಲೆನ್ನು ಮುಂದಿನ ವಿಚಾರಣೆ ಸಂದರ್ಭದಲ್ಲಿ ಉಡುಪಿ ಜಿಲ್ಲಾ ಕೋರ್ಟಗೆ ಹಾಜರು ಪಡಿಸುವ ಸಾಧ್ಯತೆ ಇದೆ ಎಂದು ತಿಳಿದುಬಂದಿದೆ.

Vishwa News 24

Recent Posts

ಉಡುಪಿ: ಕುಕ್ಕೆಹಳ್ಳಿ ಕೊರಗಜ್ಜ ಕ್ಷೇತ್ರದಿಂದ ನವೆಂಬರ್‌ನಿಂದ ಹೊಸ ಯಕ್ಷಗಾನ ಮೇಳ ಆರಂಭ – vishwanews24

ಉಡುಪಿ: ಕುಕ್ಕೆಹಳ್ಳಿ ಕೊರಗಜ್ಜ ಕ್ಷೇತ್ರದಿಂದ ನವೆಂಬರ್‌ನಿಂದ ಹೊಸ ಯಕ್ಷಗಾನ ಮೇಳ ಆರಂಭ ಉಡುಪಿ: ಕುಕ್ಕೆಹಳ್ಳಿ ಈಶ್ವರನಗರದಲ್ಲಿರುವ ಸ್ವಾಮಿ ಕೊರಗಜ್ಜ ಕ್ಷೇತ್ರದ…

5 hours ago

ಕೋಟ: ಹೆದ್ದಾರಿ ಮಧ್ಯೆ ಟಿವಿ, ಟೇಬಲ್ ಇಟ್ಟು ಯುವಕನ ಹುಚ್ಚಾಟ – ಪೊಲೀಸರ ಮೇಲೆ ಕತ್ತಿ ಬೀಸಿ ಹಲ್ಲೆಗೆ ಯತ್ನ ; ಯುವಕ ವಶಕ್ಕೆ – vishwanews24

ಕೋಟ: ಹೆದ್ದಾರಿ ಮಧ್ಯೆ ಟಿವಿ, ಟೇಬಲ್ ಇಟ್ಟು ಯುವಕನ ಹುಚ್ಚಾಟ - ಪೊಲೀಸರ ಮೇಲೆ ಕತ್ತಿ ಬೀಸಿ ಹಲ್ಲೆಗೆ ಯತ್ನ…

6 hours ago

ಕರಾವಳಿಯಲ್ಲಿ ಅಕ್ರಮ ಬಾಂಗ್ಲಾದೇಶಿ ವಲಸಿಗರ ವಿರುದ್ಧ ಕಾರ್ಯಾಚರಣೆ ತೀವ್ರಗೊಳಿಸಿ: ವಿಶ್ವ ಹಿಂದೂ ಪರಿಷತ್ ಆಗ್ರಹ – vishwanews24

ಕರಾವಳಿಯಲ್ಲಿ ಅಕ್ರಮ ಬಾಂಗ್ಲಾದೇಶಿ ವಲಸಿಗರ ವಿರುದ್ಧ ಕಾರ್ಯಾಚರಣೆ ತೀವ್ರಗೊಳಿಸಿ: ವಿಶ್ವ ಹಿಂದೂ ಪರಿಷತ್ ಆಗ್ರಹ ಮಂಗಳೂರು: ಮಂಗಳೂರು ನಗರ ಪೊಲೀಸ್…

6 hours ago

ಮಂಗಳೂರು : ಜೈಲಿಗೆ ಡ್ರಗ್ಸ್‌, ಮೊಬೈಲ್‌ ಎಸೆತಕ್ಕೆ ಬ್ರೇಕ್ : ಆವರಣ ಗೋಡೆಗೆ 12 ಅಡಿ ಎತ್ತರದ ತಂತಿ ಬೇಲಿ ಅಳವಡಿಕೆ – vishwanews24

ಮಂಗಳೂರು : ಜೈಲಿಗೆ ಡ್ರಗ್ಸ್‌, ಮೊಬೈಲ್‌ ಎಸೆತಕ್ಕೆ ಬ್ರೇಕ್ : ಆವರಣ ಗೋಡೆಗೆ 12 ಅಡಿ ಎತ್ತರದ ತಂತಿ ಬೇಲಿ…

6 hours ago

ಚಿಕನ್ ಪ್ರಿಯರಿಗೆ ಶಾಕ್ : ದಾಖಲೆಯ ಏರಿಕೆ ಕಂಡ ಚಿಕನ್, ಮೊಟ್ಟೆ ದರ – vishwanews24

ಗ್ರಾಹಕರಿಗೆ ಚಿಕನ್ ಮತ್ತು ಮೊಟ್ಟೆ ಬೆಲೆ ಏರಿಕೆ ಶಾಕ್: ದಾಖಲೆ ಬರೆದ ದರ ಬೆಂಗಳೂರು: ಚಿಕನ್ ಮತ್ತು ಮೊಟ್ಟೆ ಪ್ರಿಯರಿಗೆ…

6 hours ago

ಶಿಕ್ಷಣ ಸಂಸ್ಥೆಯ ವಿದ್ಯಾರ್ಥಿಗಳ ವಿಚಿತ್ರ ವರ್ತನೆಗೆ ವ್ಯಾಪಕ ಆಕ್ರೋಶ : ಸೂಕ್ತ ಕ್ರಮಕ್ಕೆ ಒತ್ತಾಯ – vishwanews24

ಶಿಕ್ಷಣ ಸಂಸ್ಥೆಯ ವಿದ್ಯಾರ್ಥಿಗಳ ವಿಚಿತ್ರ ವರ್ತನೆಗೆ ವ್ಯಾಪಕ ಆಕ್ರೋಶ : ಸೂಕ್ತ ಕ್ರಮಕ್ಕೆ ಒತ್ತಾಯ ಮಂಗಳೂರು:  ಸರ್ಕಾರಿ ಕಾಲೇಜಿನ ಬಿಬಿಎ…

7 hours ago