ಉಡುಪಿ: ನೇಜಾರಿನ ತಾಯಿ ಮತ್ತು ಮೂವರು ಮಕ್ಕಳ ಭೀಕರ ಹತ್ಯೆ ಪ್ರಕರಣದ ಸಾಕ್ಷ್ಯಗಳ ವಿಚಾರಣೆಯ ಆಡಿಯೋ ಮತ್ತು ವಿಡಿಯೋ ದಾಖಲಿಸಬೇಕೆಂದು ಆರೋಪಿ ಪ್ರವೀಣ್ ಚೌಗುಲೆ ಸಲ್ಲಿಸಿದ ಅರ್ಜಿಗೆ ವಿಶೇಷ ಅಭಿಯೋಜಕರ ಆಕ್ಷೇಪ ಸಲ್ಲಿಸಿದ್ದು, ಈ ಕುರಿತು ಜ.31ಕ್ಕೆ ವಾದ ಪ್ರತಿವಾದ ವನ್ನು ಮಂಡಿಸಲು ಉಡುಪಿ ಎರಡನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ವಿಚಾರಣೆ ಮುಂದೂಡಿ ಶನಿವಾರ ಆದೇಶಿಸಿದೆ.
ಬೆಂಗಳೂರು ಜೈಲಿನಲ್ಲಿರುವ ಆರೋಪಿ ಪ್ರವೀಣ್ ಚೌಗುಲೆಯನ್ನು ವಿಡಿಯೋ ಕಾನ್ಫರೆನ್ಸ್ ಮೂಲಕ ನ್ಯಾಯಾಲಯಕ್ಕೆ ಹಾಜರುಪಡಿಸಲಾಯಿತು. ಇದೇ ವೇಳೆ ಸಂತ್ರಸ್ತ ಕುಟುಂಬದ ಯಜಮಾನ ನೂರ್ ಮುಹಮ್ಮದ್ ಹಾಜರಿದ್ದರು. ಪ್ರಕರಣದ ಸಾಕ್ಷ್ಯಗಳ ವಿಚಾರಣೆಯ ಆಡಿಯೋ ಮತ್ತು ವಿಡಿಯೋ ದಾಖಲಿಸಬೇಕೆಂದು ಆರೋಪಿಯ ಅರ್ಜಿಗೆ ವಿಶೇಷ ಸರಕಾರಿ ಅಭಿಯೋಜಕ ಶಿವಪ್ರಸಾದ್ ಆಳ್ವ ಕೆ. ಆಕ್ಷೇಪಣೆ ಸಲ್ಲಿಸಿದ್ದರು.
ಈ ಬಗ್ಗೆ ವಾದ ಮಂಡಿಸಲು ಫೆ.10ರವರೆಗೆ ಕಾಲಾವಕಾಶ ಬೇಕೆಂಬುದಾಗಿ ಆರೋಪಿ ಪರ ವಕೀಲರು ನ್ಯಾಯಾಲಯಕ್ಕೆ ಮನವಿ ಮಾಡಿದರು. ವಿನಾಕಾರಣ ವಿಚಾರಣೆಯನ್ನು ಮುಂದೂಡಿ ವಿಳಂಬ ಮಾಡಲಾಗುತ್ತಿದೆ ಎಂದು ವಿಶೇಷ ಅಭಿಯೋ ಜಕರು ಹೇಳಿದರು. ಇದಕ್ಕಾಗಿ ಸಂತ್ರಸ್ತ ಕುಟುಂಬದ ಯಜಮಾನ ಕೂಡ ವಿದೇಶದಿಂದ ಬಂದಿದ್ದು, ಅವರು ಶೀಘ್ರ ನ್ಯಾಯದ ನಿರೀಕ್ಷೆಯಲ್ಲಿದ್ದಾರೆ. ಆದುದರಿಂದ ವಿಚಾರಣೆಯನ್ನು ವಿಳಂಬ ಮಾಡಬಾರದು ಎಂದು ವಿಶೇಷ ಅಭಿಯೋಜಕರು ನ್ಯಾಯಾಲಯಕ್ಕೆ ಮನವಿ ಮಾಡಿದರು.
ಆ ಹಿನ್ನೆಲೆಯಲ್ಲಿ ನ್ಯಾಯಾಧೀಶ ಸಮಿವುಲ್ಲಾ, ಆರೋಪಿ ಪರ ವಕೀಲರಿಗೆ ವಾದ ಮಂಡಿಸಲು ಜ.31ಕ್ಕೆ ದಿನಾಂಕ ನಿಗದಿಪಡಿಸಿ ಆದೇಶಿಸಿದರು. ಆರೋಪಿ ಪರ ವಕೀಲರ ವಾದದ ಬಳಿ ವಿಶೇಷ ಸರಕಾರಿ ಅಭಿಯೋಜಕರು ಪ್ರತಿವಾದ ಮಂಡಿಸಲಿದ್ದಾರೆ ಎಂದು ಮೂಲಗಳು ತಿಳಿಸಿವೆ.
ವಿಧಾನ ಪರಿಷತ್ ನೂತನ ಸಭಾಪತಿಯಾಗಿ ಸಲೀಂ ಅಹಮದ್ ಆಯ್ಕೆ ಬೆಂಗಳೂರು: ಬಸವರಾಜ ಹೊರಟ್ಟಿ ಅವರ ರಾಜೀನಾಮೆಯಿಂದ ತೆರವಾಗಿದ್ದ ವಿಧಾನ ಪರಿಷತ್…
15,000 ಸರ್ಕಾರಿ ಶಿಕ್ಷಕರ ಬೃಹತ್ ನೇಮಕಾತಿ : ಆ.18ರಿಂದ ಅರ್ಜಿ ಸಲ್ಲಿಕೆ ಆರಂಭ ಬೆಂಗಳೂರು : ರಾಜ್ಯದ ಸರ್ಕಾರಿ ಶಾಲೆಗಳಲ್ಲಿ…
ಕರ್ನಾಟಕದ 17 ಪೊಲೀಸ್ ಅಧಿಕಾರಿ, ಸಿಬ್ಬಂದಿಗೆ ಪ್ರತಿಷ್ಠಿತ ರಾಷ್ಟ್ರಪತಿ ಪದಕ ಗೌರವ ಬೆಂಗಳೂರು : ದೇಶದ 80ನೇ ಸ್ವಾತಂತ್ರ್ಯ ದಿನೋತ್ಸವದ…
ಏಳೆಂಟು ಜಿಲ್ಲೆಯ ಅಡಿಕೆ ಬೆಳೆಗಾರರ ಮೇಲೆ ಪರಿಣಾಮ ಗುಟ್ಕಾ ನಿಷೇಧ ಆದೇಶ ಶೀಘ್ರದಲ್ಲೇ ಹಿಂಪಡೆಯಲು ಸಿಎಂ ಡಿಕೆಶಿ ಸೂಚನೆ ಬೆಂಗಳೂರು…
ಉಡುಪಿ:ಮಾದಕ ದ್ರವ್ಯ ಪ್ರಕರಣ : ಪಿಐಟಿ ಎನ್ಡಿಪಿಎಸ್ ಕಾಯ್ದೆಯಡಿ ಆರೋಪಿ ಬಂಧನ ಕಲಬುರಗಿಯ ಕೇಂದ್ರ ಕಾರಾಗೃಹದಲ್ಲಿ ಬಂಧನದಲ್ಲಿರಿಸಲು ಆದೇಶ ಉಡುಪಿ:…
ಕುದುರೆಮುಖದಲ್ಲಿ ಅನಧಿಕೃತ ಜೀಪುಗಳ ಆಫ್ ರೋಡಿಂಗ್ .. ನಿಷೇಧಿಸುವಂತೆ ಜಿಲ್ಲಾಡಳಿತಕ್ಕೆ ಸ್ಥಳೀಯರು, ಪರಿಸರ ಪ್ರೇಮಿಗಳ ಒತ್ತಾಯ ಮೋಜು-ಮಸ್ತಿಗಾಗಿ ಸೂಕ್ಷ್ಮ ಪರಿಸರದಲ್ಲಿ…