ಉಡುಪಿ: ನೇಜಾರು ತಾಯಿ ಮತ್ತು ಮೂವರು ಮಕ್ಕಳ ಕಗ್ಗೊಲೆ ಪ್ರಕರಣದ ತ್ವರಿತ ವಿಚಾರಣೆ ನಡೆಸಿ ನ್ಯಾಯ ಒದಗಿಸಲು ರಾಜ್ಯ ಸರಕಾರಕ್ಕೆ ಮಾರ್ಗದರ್ಶನ ನೀಡುವಂತೆ ಆಗ್ರಹಿಸಿ ಮಾಜಿ ಮುಖ್ಯಮಂತ್ರಿ ವೀರಪ್ಪ ಮೊಲಿ ಅವರನ್ನು ನಿಯೋಗವೊಂದು ಉಡುಪಿಯಲ್ಲಿ ಭೇಟಿ ಮಾಡಿ ಮನವಿ ಸಲ್ಲಿಸಿತು.
ರಾಜ್ಯ ಸರಕಾರವು ಈ ಪ್ರಕರಣಕ್ಕೆ ಸಂಬಂಧಿಸಿದಂತೆ ವಿಶೇಷ ಪಬ್ಲಿಕ್ ಪ್ರಾಸಿಕ್ಯೂಟರ್ನ್ನು ಕೂಡಲೇ ನೇಮಿಸಬೇಕು. ತ್ವರಿತಗತಿಯಲ್ಲಿ ವಿಚಾರಣೆ ಪೂರ್ಣಗೊಳಿಸಿ ಆರೋಪಿಗೆ ಶಿಕ್ಷೆ ಖಾತ್ರಿ ಪಡಿಸಲು ವಿಶೇಷ ನ್ಯಾಯಾಲಯವನ್ನು ಸ್ಥಾಪಿಸಬೇಕು. ಸಂತ್ರಸ್ತ ಕುಟುಂಬದ ನೂರ್ ಮುಹಮ್ಮದ್ ಅವರ ಮಗ ಅಸಾದ್ ಅವರಿಗೆ ಅನುಕಂಪದ ಆಧಾರದಲ್ಲಿ ಸರಕಾರಿ ಉದ್ಯೋಗ ನೀಡಬೇಕು ಎಂದು ನಿಯೋಗ ಮನವಿಯಲ್ಲಿ ಒತ್ತಾಯಿಸಿದೆ.
ನಿಯೋಗದಲ್ಲಿ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಎಂ.ಎ.ಗಫೂರ್, ಕಾಂಗ್ರೆಸ್ ಉಡುಪಿ ಜಿಲ್ಲಾಧ್ಯಕ್ಷ ಅಶೋಕ್ ಕುಮಾರ್ ಕೊಡವೂರು, ಮಂಗಳೂರು ಮಹಾ ನಗರ ಪಾಲಿಕೆ ಸದಸ್ಯ ಡಿ.ಕೆ.ಅಶೋಕ್, ಮಾಜಿ ಮೇಯರ್ ಭಾಸ್ಕರ ಮೊಲಿ, ಮುಖಂಡರಾದ ಉದಯ ಕುಮಾರ್ ಮುನಿಯಾಲು, ವ್ನಿೇಶ್ ಕಿಣಿ, ಕೃಷ್ಣಮೂರ್ತಿ ಆಚಾರ್ಯ ಕಾರ್ಕಳ, ಪ್ರಭಾಕರ ಬಂಗೇರ ಮೊದಲಾದವರು ಉಪಸ್ಥಿತರಿದ್ದರು.
ಉಪ್ಪೂರು : ವಯೋವಂದನ ಆತಿಥ್ಯ ಗೃಹ "ಸೈಟ್ ಆಫೀಸ್" ಉದ್ಘಾಟನೆ ; ರಾಷ್ಟ್ರಧ್ವಜಾರೋಹಣ, ವೃಕ್ಷಾರೋಪಣ ಕಾರ್ಯಕ್ರಮ ಉಡುಪಿ ಜಿಲ್ಲೆ ಬ್ರಹ್ಮಾವರ…
ಪುತ್ತೂರು: ಕೆಎಸ್ಆರ್ಟಿಸಿ ಬಸ್ ಮತ್ತು ಬೈಕ್ ನಡುವೆ ಭೀಕರ ಅಪಘಾತ: ಸವಾರ ಸ್ಥಳದಲ್ಲೇ ಮೃತ್ಯು ಪುತ್ತೂರು: ಕೆಯ್ಯರು ಗ್ರಾಮದ ಬೊಳಿಕ್ಕಳ…
ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ ಬೆಂಗಳೂರು : ಕೇಂದ್ರ ಸರಕಾರದ…
ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ ಬೆಂಗಳೂರು: ನಗರದ ರಾಜೇಶ್ವರಿ ನಗರದಲ್ಲಿ ಹೆಂಡತಿಯನ್ನು ಕೊಂದು ಗಂಡ…
ಸ್ವಕ್ಷೇತ್ರದಲ್ಲಿ 80ನೇ ಸ್ವಾತಂತ್ರ್ಯೋತ್ಸವ ಧ್ವಜಾರೋಹಣ ಕಾರ್ಯಕ್ರಮದಲ್ಲಿ ಜಮೀರ್ ಅಹ್ಮದ್ ಭಾಗಿ ನಾನು ಹಿಂದೂಸ್ತಾನಿ, ನಾನು ಕನ್ನಡಿಗ, ದೇಶದ ಅಭಿಮಾನವನ್ನ ಬಿಜೆಪಿಯವರಿಂದ…
ಗುಟ್ಕಾ, ಪಾನ್ ಮಸಾಲ ನಿಷೇಧ ಆದೇಶ ನಾವು ವಾಪಸ್ ಪಡೆದಿಲ್ಲ: ಯು.ಟಿ.ಖಾದರ್ ಸ್ಪಷ್ಟನೆ ಅಡಿಕೆ ಬೆಲೆ ಕುಸಿಯಲ್ಲ, ಬೆಳೆಗಾರರಿಗೆ ಸಮಸ್ಯೆ…