ಉಡುಪಿ: ನೇಜಾರು ತಾಯಿ ಮತ್ತು ಮೂವರು ಮಕ್ಕಳ ಕಗ್ಗೊಲೆ ಪ್ರಕರಣದ ತ್ವರಿತ ವಿಚಾರಣೆ ನಡೆಸಿ ನ್ಯಾಯ ಒದಗಿಸಲು ರಾಜ್ಯ ಸರಕಾರಕ್ಕೆ ಮಾರ್ಗದರ್ಶನ ನೀಡುವಂತೆ ಆಗ್ರಹಿಸಿ ಮಾಜಿ ಮುಖ್ಯಮಂತ್ರಿ ವೀರಪ್ಪ ಮೊಲಿ ಅವರನ್ನು ನಿಯೋಗವೊಂದು ಉಡುಪಿಯಲ್ಲಿ ಭೇಟಿ ಮಾಡಿ ಮನವಿ ಸಲ್ಲಿಸಿತು.
ರಾಜ್ಯ ಸರಕಾರವು ಈ ಪ್ರಕರಣಕ್ಕೆ ಸಂಬಂಧಿಸಿದಂತೆ ವಿಶೇಷ ಪಬ್ಲಿಕ್ ಪ್ರಾಸಿಕ್ಯೂಟರ್ನ್ನು ಕೂಡಲೇ ನೇಮಿಸಬೇಕು. ತ್ವರಿತಗತಿಯಲ್ಲಿ ವಿಚಾರಣೆ ಪೂರ್ಣಗೊಳಿಸಿ ಆರೋಪಿಗೆ ಶಿಕ್ಷೆ ಖಾತ್ರಿ ಪಡಿಸಲು ವಿಶೇಷ ನ್ಯಾಯಾಲಯವನ್ನು ಸ್ಥಾಪಿಸಬೇಕು. ಸಂತ್ರಸ್ತ ಕುಟುಂಬದ ನೂರ್ ಮುಹಮ್ಮದ್ ಅವರ ಮಗ ಅಸಾದ್ ಅವರಿಗೆ ಅನುಕಂಪದ ಆಧಾರದಲ್ಲಿ ಸರಕಾರಿ ಉದ್ಯೋಗ ನೀಡಬೇಕು ಎಂದು ನಿಯೋಗ ಮನವಿಯಲ್ಲಿ ಒತ್ತಾಯಿಸಿದೆ.
ನಿಯೋಗದಲ್ಲಿ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಎಂ.ಎ.ಗಫೂರ್, ಕಾಂಗ್ರೆಸ್ ಉಡುಪಿ ಜಿಲ್ಲಾಧ್ಯಕ್ಷ ಅಶೋಕ್ ಕುಮಾರ್ ಕೊಡವೂರು, ಮಂಗಳೂರು ಮಹಾ ನಗರ ಪಾಲಿಕೆ ಸದಸ್ಯ ಡಿ.ಕೆ.ಅಶೋಕ್, ಮಾಜಿ ಮೇಯರ್ ಭಾಸ್ಕರ ಮೊಲಿ, ಮುಖಂಡರಾದ ಉದಯ ಕುಮಾರ್ ಮುನಿಯಾಲು, ವ್ನಿೇಶ್ ಕಿಣಿ, ಕೃಷ್ಣಮೂರ್ತಿ ಆಚಾರ್ಯ ಕಾರ್ಕಳ, ಪ್ರಭಾಕರ ಬಂಗೇರ ಮೊದಲಾದವರು ಉಪಸ್ಥಿತರಿದ್ದರು.
ಭಾರೀ ಮಳೆ ಮುನ್ಸೂಚನೆ : ನಾಳೆ(ಜುಲೈ 2)ದ.ಕ ಜಿಲ್ಲೆಯ ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ ಮಂಗಳೂರು: ಕರಾವಳಿ ಕರ್ನಾಟಕದಲ್ಲಿ ಭಾರೀ ಮಳೆಯಾಗುವ…
ಶಿರ್ವ : ಕಾರಿಗೆ ಡೀಸೆಲ್ ತುಂಬಿಸಿ ಹಣ ನೀಡದೆ ಪಾವತಿಸದೆ ಪರಾರಿ ; ಪ್ರಕರಣ ದಾಖಲು ಶಿರ್ವ : ಶಂಕರಪುರದ…
ಹಜ್ ಯಾತ್ರೆ - 2027 : ಅರ್ಜಿ ಸಲ್ಲಿಕೆಗೆ ಜುಲೈ 20 ಕೊನೆ ದಿನ ಬೆಂಗಳೂರು: ಮುಂದಿನ (2027ನೇ) ಸಾಲಿನಲ್ಲಿ…
ಉಡುಪಿ: ಭಾರೀ ಮಳೆಯಾಗುವ ಸಾಧ್ಯತೆ ; ಜುಲೈ 2 ಮತ್ತು 3ರಂದು ರೆಡ್ ಅಲರ್ಟ್ ಘೋಷಣೆ ಮೀನುಗಾರರು ಸಮುದ್ರಕ್ಕೆ ಇಳಿಯದಂತೆ…
ಇಂದಿನಿಂದ ಜಾರಿಗೆ ಬರಲಿವೆ ಹೊಸ ರೂಲ್ಸ್: LPG, ಆಧಾರ್, ರೈಲ್ವೆ, ಬ್ಯಾಂಕ್ ಸೇವೆಗಳಲ್ಲಿ ಬದಲಾವಣೆ ನವದೆಹಲಿ: ಇಂದಿನಿಂದ ದೇಶಾದ್ಯಂತ ಹಲವು…
ಬ್ರಹ್ಮಾವರ :ಭೀಕರ ರಸ್ತೆ ಅಪಘಾತ: ಪ್ರಸಿದ್ಧ ಹುಲಿ ವೇಷ ಕಲಾವಿದ ಸಾವು ಬ್ರಹ್ಮಾವರ: ರಾಷ್ಟ್ರೀಯ ಹೆದ್ದಾರಿ 66ರ ಬ್ರಹ್ಮಾವರದ ಹೇರೂರು…