ಉಡುಪಿ: ಇಡೀ ರಾಜ್ಯವನ್ನೇ ಬೆಚ್ಚಿ ಬೀಳಿಸಿದ್ದ ಉಡುಪಿಯ ನೇಜಾರಿನಲ್ಲಿ ತಾಯಿ ಮತ್ತು ಮೂವರು ಮಕ್ಕಳ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿ ನ್ಯಾಯಾಲಯದಲ್ಲಿ ಸರಕಾರದ ಪರವಾಗಿ ವಾದಿಸಲು ಮಂಗಳೂರಿನ ಹಿರಿಯ ನ್ಯಾಯವಾದಿ ಶಿವಪ್ರಸಾದ್ ಆಳ್ವ ಅವರನ್ನು ವಿಶೇಷ ಸರಕಾರಿ ಅಭಿಯೋಜಕರಾಗಿ ನೇಮಕ ಮಾಡಿ ರಾಜ್ಯ ಸರಕಾರ ಆದೇಶಿಸಿದೆ.
ಈ ಪ್ರಕಣದಲ್ಲಿ ಸಂಬಂಧಪಟ್ಟ ವಿಚರಣಾ ಹಾಗೂ ಜಿಲ್ಲಾ ಮತ್ತು ಸತ್ರ ನ್ಯಾಯಾಲಯಗಳಲ್ಲಿ ಸರಕಾರದ ಪರವಾಗಿ ಹಾಜರಾ ಗಲು ಮತ್ತು ಪ್ರಕರಣವನ್ನು ನಡೆಸಲು ಆಳ್ವರನ್ನು ವಿಶೇಷ ಸರಕಾರಿ ಅಭಿಯೋಜಕರಾಗಿ ಮುಂದಿನ ಆದೇಶದವರೆಗೆ ನಿಯೋ ಜಿಸಿದ್ದು, ಈ ಪ್ರಕರಣದ ವಿಚಾರಣೆ ದಿನಾಂಕಗಳಂದು ನ್ಯಾಯಾಲಯಗಳಲ್ಲಿ ಹಾಜರಿದ್ದು, ಪ್ರಕರಣವನ್ನು ನಡೆಸುವಂತೆ ಒಳಾಡಳಿತ ಇಲಾಖೆ(ಪೊಲೀಸ್ ಸೇವೆಗಳು-ಬಿ) ಸರಕಾರದ ಅಧೀನ ಕಾರ್ಯದರ್ಶಿ ಜಿ.ಶ್ಯಾಮ ಹೊಳ್ಳ ಆದೇಶ ನೀಡಿದ್ದಾರೆ.
ಮಲ್ಪೆ ಪೊಲೀಸ್ ಠಾಣಾ ವ್ಯಾಪ್ತಿಯ ನೇಜಾರು ತೃಪ್ತಿ ಲೇಔಟ್ ಎಂಬಲ್ಲಿ 2023ರ ನ.12ರಂದು ನೂರು ಮುಹಮ್ಮದ್ ಎಂಬವರ ಪತ್ನಿ ಹಸೀನಾ ಹಾಗೂ ಅವರ ಪುತ್ರಿಯರಾದ ಅಫ್ನಾನ್ ಮತ್ತು ಅಯ್ನಾಝ್ ಹಾಗೂ ಪುತ್ರ ಆಸೀಮ್ ಎಂಬವರನ್ನು ಏರ್ ಇಂಡಿಯಾ ಎಕ್ಸ್ಪ್ರೆಸ್ ಉದ್ಯೋಗಿ ಪ್ರವೀಣ್ ಚೌಗುಳೆ ಬರ್ಬರವಾಗಿ ಕೊಲೈಗಿದಿದ್ದನು. ಎರಡು ದಿನಗಳ ನಂತರ ಆರೋಪಿಯನ್ನು ಪೊಲೀಸರು ಬಂಧಿಸಿದ್ದು, ಇದೀಗ ಆರೋಪಿ ನ್ಯಾಯಾಂಗ ಬಂಧನದಲ್ಲಿ ಬೆಂಗಳೂರಿನ ಕಾರಾಗೃಹದಲ್ಲಿದ್ದಾನೆ.
ಡಿಕೆಶಿ ಮುಂದಿನ ಸಿಎಂ ಬ್ಯಾನರ್ : ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಪ್ರತಿಕ್ರಿಯೆ ಉಡುಪಿ: ಮುಖ್ಯಮಂತ್ರಿ ಬದಲಾವಣೆ ಹೈಕಮಾಂಡ್ಗೆ ಬಿಟ್ಟ ವಿಚಾರ.…
ನಾನು ಮತ್ತೆ ಹೊಸದಾಗಿ ಪಕ್ಷ ಕಟ್ಟುತ್ತೇನೆ ; ಪಕ್ಷ ಬಿಟ್ಟು ಹೋಗುವವರು ಹೋಗಲಿ : ಮಮತಾ ಬ್ಯಾನರ್ಜಿ ಕೋಲ್ಕತ್ತಾ: ಇತರ…
ಉಡುಪಿ : ಮಲಬಾರ್ ಗೋಲ್ದ್ ನಲ್ಲಿ ಬ್ರಾಂಡ್ ವಾಚ್ಗಳ ವಿಶೇಷ ಪ್ರದರ್ಶನ-ಮಾರಾಟ ಮೇಳಕ್ಕೆ ಚಾಲನೆ ಉಡುಪಿ: ಮಲಬಾರ್ ಗೋಲ್ಡ್ ಅಂಡ್…
ಮಂಗಳೂರು: ಕೇರಳಕ್ಕೆ ಅಕ್ರಮವಾಗಿ ಸಾಗಿಸುತ್ತಿದ್ದ 27 ಜಾನುವಾರುಗಳು ವಶಕ್ಕೆ; ಇಬ್ಬರ ಬಂಧನ ಮಂಗಳೂರು: ಹಾವೇರಿಯಿಂದ ಮಲಪ್ಪುರಂಗೆ ಲಾರಿಯಲ್ಲಿ ಅಕ್ರಮವಾಗಿ ಸಾಗಿಸಲಾಗುತ್ತಿದ್ದ…
ಮಲ್ಪೆ : ಸೈಂಟ್ಮೇರೀಸ್ ದ್ವೀಪ ಪ್ರವೇಶ ಹಾಗೂ ಜಲ ಕ್ರೀಡೆಗಳಿಗೆ ಮೇ 16ರಿಂದ ಸೆಪ್ಟೆಂಬರ್15ರ ವರೆಗೆ ಸಂಪೂರ್ಣ ನಿಷೇಧ ಮಲ್ಪೆ:…
ಜೂನ್ 21ರಂದು ನೀಟ್ ಯುಜಿ ಮರು ಪರೀಕ್ಷೆ ನವದೆಹಲಿ: ಜೂನ್ 21 ರಂದು ನೀಟ್–ಯುಜಿ ಮರು ಪರೀಕ್ಷೆ ನಡೆಸಲಾಗುವುದು ರಾಷ್ಟ್ರೀಯ…