Featured

ಉಡುಪಿ: ನೇಜಾರು ನಾಲ್ವರ ಹತ್ಯೆ – ಊಹಾಪೋಹದ, ಚಾರಿತ್ರ್ಯ ಹನನದ ವರದಿಗಾರಿಕೆ ಬೇಡ: ಜಿಲ್ಲಾ ಮುಸ್ಲಿಂ ಒಕ್ಕೂಟ – vishwanews24

ಉಡುಪಿ: ನೇಜಾರು ನಾಲ್ವರ ಹತ್ಯೆ – ಈ ಪ್ರಕರಣದ ವಿಚಾರಣೆಗೆ ಸಹಕರಿಸಲು ಒಬ್ಬ ವಿಶೇಷ ಪಬ್ಲಿಕ್ ಪ್ರಾಸಿಕ್ಯೂಟರ್ ರನ್ನು  ಸರಕಾರ ನೇಮಿಸಬೇಕು :  ಜಿಲ್ಲಾ ಮುಸ್ಲಿಂ ಒಕ್ಕೂಟ ಆಗ್ರಹ

ಉಡುಪಿ : ನೇಜಾರಿನಲ್ಲಿ ನಡೆದ ಭಯಾನಕ ಹತ್ಯಾಕಾಂಡದ ಆರೋಪಿಯನ್ನು ಉಡುಪಿ ಪೊಲೀಸರು ಎರಡು ದಿನಗಳೊಳಗೆ ಪತ್ತೆ ಹಚ್ಚಿ ಬಂಧಿಸಿದ್ದಾರೆ. ಉಡುಪಿ ಪೋಲೀಸರ ಈ ದಕ್ಷತೆ ಹಾಗು ಚುರುಕಿನ ಕಾರ್ಯಾಚರಣೆ ಅಭಿನಂದನಾರ್ಹವಾಗಿದೆ. ಭೀಕರ ಕಗ್ಗೊಲೆಗಳನ್ನು ನಡೆಸಿದ ಹಂತಕನನ್ನು ತಡ ಮಾಡದೇ ಬಂಧಿಸಿರುವುದರಿಂದ ನೇಜಾರು ಪರಿಸರ ಮಾತ್ರವಲ್ಲ ಇಡೀ ಅವಿಭಜಿತ ದಕ್ಷಿಣ ಕನ್ನಡ ಜಿಲ್ಲೆಯ ಜನರು ಸಮಾಧಾನದ ನಿಟ್ಟುಸಿರು ಬಿಡುವಂತಾಗಿದೆ. ಉಡುಪಿ ಪೊಲೀಸ್ ವರಿಷ್ಠಾಧಿಕಾರಿಗಳ ನೇತೃತ್ವದ ಎಲ್ಲ ಪೊಲೀಸ್ ಸಿಬ್ಬಂದಿಗೆ ಇದಕ್ಕಾಗಿ ಕೃತಜ್ಞತೆ ಸಲ್ಲಿಸುತ್ತೇವೆ ಎಂದು ಉಡುಪಿ ಜಿಲ್ಲಾ ಮುಸ್ಲಿಂ ಒಕ್ಕೂಟದ ಹೊಣೆಗಾರರ ತುರ್ತು ಸಭೆ ಬಳಿಕ ನೀಡಿರುವ ಪ್ರಕಟಣೆಯಲ್ಲಿ ತಿಳಿಸಿದೆ.

ಇದೇ ಸಂದರ್ಭದಲ್ಲಿ ಕೆಲವು ಚಾನಲ್ ಗಳು, ವೆಬ್ ಸೈಟ್ ಗಳು ಸಹಿತ ಮಾಧ್ಯಮದ ಕೆಲವು ವಿಭಾಗಗಳಲ್ಲಿ ಕಗ್ಗೊಲೆಯಾಗಿರುವ ಕುಟುಂಬದ ಸದಸ್ಯರ ಬಗ್ಗೆ ಕೀಳು ಅಭಿರುಚಿಯ, ಆಧಾರ ರಹಿತ ಊಹಾಪೋಹಗಳನ್ನೇ ಅಧಿಕೃತ ಸುದ್ದಿಯಂತೆ ಪ್ರಕಟಿಸುತ್ತಿರುವುದು ಅತ್ಯಂತ ಖಂಡನಾರ್ಹವಾಗಿದೆ ಎಂದು ಉಡುಪಿ ಜಿಲ್ಲಾ ಮುಸ್ಲಿಂ ಒಕ್ಕೂಟ ಹೇಳಿದೆ. ಈಗಷ್ಟೇ ಹಂತಕನ ಬಂಧನವಾಗಿದೆ. ಆತನ ಪೂರ್ಣ ವಿಚಾರಣೆಗಾಗಿ ಪೊಲೀಸರು ಆತನನ್ನು ವಶಕ್ಕೆ ತೆಗೆದುಕೊಂಡಿದ್ದಾರೆ. ಹತ್ಯಾಕಾಂಡದ ಹಿಂದಿನ ನಿಜವಾದ ಕಾರಣಗಳು ಪೋಲೀಸರ ಸಮಗ್ರ ತನಿಖೆ ಹಾಗು ವಿಚಾರಣೆ ಬಳಿಕವೇ ಗೊತ್ತಾಗಬೇಕಿದೆ. ಹೀಗಿರುವಾಗ ಕೆಲವು ಮಾಧ್ಯಮಗಳು ತೀರಾ ಬೇಜವಾಬ್ದಾರಿಯುತವಾಗಿ ವದಂತಿಗಳು, ಊಹಾಪೋಹಗಳನ್ನು ಆಧರಿಸಿ ತೀರಾ ಕೀಳು ಮಟ್ಟದ ಹಾಗು ಕೊಲೆಯಾದವರ ಚಾರಿತ್ರ್ಯ ಹನನವಾಗುವಂತಹ ವರದಿಗಳನ್ನು ಪ್ರಕಟಿಸುವುದು ಅತ್ಯಂತ ಖಂಡನೀಯ. ಕಾರಣ ಏನಿದ್ದರೂ ಇಂತಹದೊಂದು ಹತ್ಯಾಕಾಂಡಕ್ಕೆ ಸಮರ್ಥನೆ ಇಲ್ಲ ಎಂಬುದು ಅತ್ಯಂತ ಸ್ಪಷ್ಟವಾಗಿದೆ. ಆ ಬಗ್ಗೆ ಯಾರಿಗೂ ಯಾವುದೇ ಸಂಶಯವಿಲ್ಲ. ಹಾಗಾಗಿ ಈಗ ಪೋಲೀಸರ ವಿಚಾರಣೆ ಮುಗಿಯುವವರೆಗೆ ಎಲ್ಲರೂ ತಾಳ್ಮೆಯಿಂದ ಸಹಕರಿಸಬೇಕಾಗಿದೆ. ಈ ಸಂದರ್ಭದಲ್ಲಿ ವದಂತಿಗಳನ್ನು ಹರಡಬಾರದು. ಮಾಧ್ಯಮಗಳು ಇನ್ನಷ್ಟು ಸಂಯಮದಿಂದ ವರದಿಗಾರಿಕೆ ಮಾಡಬೇಕು. ಇಂತಹ ಆಘಾತಕಾರಿ ಘಟನೆಯನ್ನು ತಮ್ಮ ಟಿ ಆರ್ ಪಿ ಹೆಚ್ಚಿಸುವ ದಾಳವಾಗಿ ಯಾವುದೇ ಮಾಧ್ಯಮ ಬಳಸಬಾರದು ಎಂದು ಉಡುಪಿ ಜಿಲ್ಲಾ ಮುಸ್ಲಿಂ ಒಕ್ಕೂಟ ಹೇಳಿದೆ.

ಉಡುಪಿಯ ಇತಿಹಾಸದಲ್ಲೇ ನಡೆದಿರುವ ಈ ಅತ್ಯಂತ ಬರ್ಬರ ಹತ್ಯಾಕಾಂಡದ ಸಮಗ್ರ ತನಿಖೆ ನಡೆಯಬೇಕು. ಈ ಪ್ರಕರಣದ ವಿಚಾರಣೆ ನ್ಯಾಯಾಲಯದಲ್ಲಿ ಆದಷ್ಟು ಶೀಘ್ರವಾಗಿ ಮುಗಿಯಬೇಕು. ಆರೋಪಿ ಹಾಗು ಆತನ ಹಿಂದೆ ಯಾರೇ ಇದ್ದರೂ ಅವರೆಲ್ಲರಿಗೂ ಕಾನೂನು ಪ್ರಕಾರ ಅತ್ಯಂತ ಕಠಿಣ ಶಿಕ್ಷೆಯಾಗಬೇಕು. ಅದಕ್ಕಾಗಿ ಒಬ್ಬ ವಿಶೇಷ ಪಬ್ಲಿಕ್ ಪ್ರಾಸಿಕ್ಯೂಟರ್ ರನ್ನು ಈ ಪ್ರಕರಣದ ವಿಚಾರಣೆಗೆ ಸಹಕರಿಸಲು ಸರಕಾರ ನೇಮಿಸಬೇಕು ಎಂದು ಮುಸ್ಲಿಂ ಒಕ್ಕೂಟ ಆಗ್ರಹಿಸಿದೆ.

Vishwa News 24

Recent Posts

ಉಡುಪಿ ಮಲಬಾರ್ ಗೋಲ್ಡ್‌ನಲ್ಲಿ ಹಫೀಝ್ ರೆಹಮಾನ್‌ಗೆ ಬೀಳ್ಕೊಡುಗೆ -vishwanews24

ಉಡುಪಿ ಮಲಬಾರ್ ಗೋಲ್ಡ್‌ನಲ್ಲಿ ಹಫೀಝ್ ರೆಹಮಾನ್‌ಗೆ ಬೀಳ್ಕೊಡುಗೆ ಉಡುಪಿ : ಉಡುಪಿ ಮಲಬಾರ್ ಗೋಲ್ಡ್ ಆಂಡ್ ಡೈಮಂಡ್ಸ್ ಶಾಖೆಯಲ್ಲಿ ಕಳೆದ…

3 days ago

ದೋಣಿ ಮುಗುಚಿ ಇಬ್ಬರು ಯುವಕರು ನೀರುಪಾಲು : ಓರ್ವನ ಮೃತದೇಹ ಪತ್ತೆ, ಇನ್ನೋರ್ವನಿಗಾಗಿ ಶೋಧ – vishwanews24

ಫಲ್ಗುಣಿ ನದಿಯಲ್ಲಿ ಮಗುಚಿ ಬಿದ್ದ ದೋಣಿ: ಇಬ್ಬರು ಯುವಕರು ನೀರುಪಾಲು  ಮೀನುಗಾರಿಕೆಗೆ ತೆರಳಿದ್ದಾಗ ಆಕಸ್ಮಿಕವಾಗಿ ದೋಣಿ ಮುಗುಚಿ ಇಬ್ಬರು ಯುವಕರು…

4 days ago

ಬಿಜೆಪಿ ಬೆಂಬಲಿಸುವವರೂ ನಮ್ಮ ಗ್ಯಾರಂಟಿಗಳ ಫಲಾನುಭವಿಗಳು : ಸಿದ್ದರಾಮಯ್ಯ – vishwanews24

 ನಮ್ಮದು ಪಕ್ಷಾತೀತ ಅಭಿವೃದ್ಧಿಪರ ಸರ್ಕಾರ.. ದಲಿತರಿಗೆ ಮೀಸಲಾತಿ ತಂದವರು ನಾವು .. ರಾಜ್ಯದಲ್ಲಿ ಬಿಜೆಪಿ ಸ್ವಂತ ಬಲದಿಂದ ಯಾವತ್ತೂ ಅಧಿಕಾರಕ್ಕೆ…

4 days ago

ಕಾಪು : 94/ಸಿಯಡಿ ಹಕ್ಕುಪತ್ರ ; ಉಚಿತ ಉಪಕರಣಗಳ ವಿತರಣೆ – vishwanews24

ಕಾಪು : 94/ಸಿಯಡಿ ಹಕ್ಕುಪತ್ರ ; ಉಚಿತ ಉಪಕರಣಗಳ ವಿತರಣೆ ಕಾಪು : ವಿಧಾನಸಭಾ ಕ್ಷೇತ್ರದ ಕಾಪು ತಾಲ್ಲೂಕು ವ್ಯಾಪ್ತಿಯ…

4 days ago

ರೈಲು ಪ್ರಯಾಣಿಕರ ಗಮನಕ್ಕೆ: ಇಂದಿನಿಂದ ಬುಕ್ಕಿಂಗ್ ಮತ್ತು ರದ್ದತಿ  ನಿಯಮದಲ್ಲಿ ಭಾರಿ ಬದಲಾವಣೆ ; ಇಲ್ಲಿದೆ ಪೂರ್ಣ ಮಾಹಿತಿ – vishwanews24

ರೈಲ್ವೆ ಇಲಾಖೆಯ 5 ಹೊಸ ನಿಯಮ ಜಾರಿ: ತತ್ಕಾಲ್ ಬುಕಿಂಗ್‌ಗೆ ಆಧಾರ್ ಕಡ್ಡಾಯ; ರೀಫಂಡ್ ನಿಯಮ ಹೇಗಿದೆ? ರೈಲ್ವೆ ಇಲಾಖೆಯ…

4 days ago

ಉಡುಪಿ:  ಯುವ‌ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ – vishwanews24

ಉಡುಪಿ:  ಯುವ‌ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ ಉಡುಪಿ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ(ಕೆಯುಡಬ್ಲೂಜೆ)ದ 2024ನೇ…

4 days ago