Featured

ಉಡುಪಿ : ನೇಜಾರು ಪ್ರಕರಣ ; ನ.20ರಿಂದ ಸಾಕ್ಷಿಗಳ ವಿಚಾರಣೆ ಆರಂಭ – vishwanews24

ಉಡುಪಿ ನೇಜಾರು ಪ್ರಕರಣ: ನ.20ರಿಂದ ಸಾಕ್ಷಿಗಳ ವಿಚಾರಣೆ ಆರಂಭ

ಉಡುಪಿ: ನೇಜಾರಿನ ತಾಯಿ ಮತ್ತು ಮೂವರು ಮಕ್ಕಳ ಭೀಕರ ಹತ್ಯೆ ಪ್ರಕರಣದ ಸಾಕ್ಷಿಗಳ ವಿಚಾರಣೆಯು ನ.20ರಿಂದ ಉಡುಪಿ ಎರಡನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯದಲ್ಲಿ ಆರಂಭಗೊಳ್ಳಲಿದೆ.

ಪ್ರಕರಣದ ವಿಚಾರಣೆಗೆ ರಾಜ್ಯ ಉಚ್ಚ ನ್ಯಾಯಾಲಯ ನೀಡಿದ್ದ ತಡೆಯಾಜ್ಞೆ 2024ರ ಆ.30ರಂದು ತೆರವಾಗಿದ್ದು, ಪ್ರಕರಣದ ಸಾಕ್ಷ್ಯ ವಿಚಾರಣೆ ಆರಂಭಿಸುವಂತೆ ಪ್ರಕರಣದ ವಿಶೇಷ ಸರಕಾರಿ ಅಭಿಯೋಜಕ ಶಿವಪ್ರಸಾದ್ ಆಳ್ವ ನ್ಯಾಯಾಲಯವನ್ನು ಕೋರಿದರು. ಅಲ್ಲದೆ ಸಾಕ್ಷಿಗಳು ಆರೋಪಿಯ ಗುರುತು ಪತ್ತೆ ಮಾಡಲು ಆತನನ್ನು ವಿಚಾರಣೆ ಸಂದರ್ಭ ನ್ಯಾಯಾಲಯಕ್ಕೆ ಹಾಜರುಪಡಿಸುವಂತೆ ಅವರು ನ್ಯಾಯಾಲಯಕ್ಕೆ ಮನವಿ ಮಾಡಿದರು.

ವಿಶೇಷ ಸರಕಾರಿ ಅಭಿಯೋಜಕರ ವಾದವನ್ನು ಆಲಿಸಿದ ನ್ಯಾಯಾಧೀಶ ಎ.ಸಮೀವುಲ್ಲಾ, ನ.20 ಮತ್ತು 21ರಂದು ಸಾಕ್ಷಿಗಳ ವಿಚಾರಣೆಗೆ ದಿನಾಂಕ ನಿಗದಿಪಡಿಸಿ, ಅದೇ ದಿನ ಸೂಕ್ತ ಭದ್ರತೆಯೊಂದಿಗೆ ಕೊಲೆ ಆರೋಪಿ ಪ್ರವೀಣ್ ಚೌಗುಲೆ ಯನ್ನು ನ್ಯಾಯಾಲಯಕ್ಕೆ ಹಾಜರು ಪಡಿಸುವಂತೆ ಮಲ್ಪೆ ಪೊಲೀಸ್ ನಿರೀಕ್ಷಕರಿಗೆ ನಿರ್ದೇಶನ ನೀಡಿದರು. ನ. 20ರಂದು 1 ಹಾಗೂ 2 ಹಾಗೂ ನ.21ರಂದು 3 ಹಾಗೂ 4ನೇ ಸಾಕ್ಷಿಗಳು ವಿಚಾರಣೆಗೆ ಹಾಜರಾಗುವಂತೆ ಸಮನ್ಸ್ ಜಾರಿಗೊಳಿಸಲಾಗಿದೆ.

ಈ ಹಿಂದೆ ಸಾಕ್ಷಿಗಳ ವಿಚಾರಣೆಗೆ ದಿನಾಂಕ ನಿಗದಿಯಾಗಿದ್ದು ಬಳಿಕ ಹೈಕೋರ್ಟ್ ತಡೆಯಾಜ್ಞೆ ಹಿನ್ನೆಲೆಯಲ್ಲಿ ಅದನ್ನು ಮುಂದೂಡಲಾಗಿತ್ತು.

Vishwa News 24

Recent Posts

ಪುತ್ತೂರು:  ಕೆಎಸ್‌ಆರ್‌ಟಿಸಿ ಬಸ್ – ಬೈಕ್ ನಡುವೆ ಭೀಕರ ಅಪಘಾತ : ಸವಾರ ಸ್ಥಳದಲ್ಲೇ ಮೃತ್ಯು – vishwanews24

ಪುತ್ತೂರು:  ಕೆಎಸ್‌ಆರ್‌ಟಿಸಿ ಬಸ್ ಮತ್ತು ಬೈಕ್ ನಡುವೆ  ಭೀಕರ ಅಪಘಾತ: ಸವಾರ ಸ್ಥಳದಲ್ಲೇ ಮೃತ್ಯು ಪುತ್ತೂರು: ಕೆಯ್ಯರು ಗ್ರಾಮದ ಬೊಳಿಕ್ಕಳ…

6 hours ago

ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ – vishwanews24

ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ ಬೆಂಗಳೂರು : ಕೇಂದ್ರ ಸರಕಾರದ…

6 hours ago

ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ – vishwanews24

ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ ಬೆಂಗಳೂರು: ನಗರದ ರಾಜೇಶ್ವರಿ ನಗರದಲ್ಲಿ ಹೆಂಡತಿಯನ್ನು ಕೊಂದು ಗಂಡ…

6 hours ago

ನಾನು ಹಿಂದೂಸ್ತಾನಿ, ನಾನು ಕನ್ನಡಿಗ, ದೇಶದ ಅಭಿಮಾನವನ್ನ ಬಿಜೆಪಿಯವರಿಂದ ಕಲಿಯಬೇಕಿಲ್ಲ : ವಿಪಕ್ಷಗಳಿಗೆ ಜಮೀರ್ ಅಹ್ಮದ್ ಖಾನ್‌  ತಿರುಗೇಟು – vishwanews24

ಸ್ವಕ್ಷೇತ್ರದಲ್ಲಿ 80ನೇ ಸ್ವಾತಂತ್ರ್ಯೋತ್ಸವ  ಧ್ವಜಾರೋಹಣ ಕಾರ್ಯಕ್ರಮದಲ್ಲಿ ಜಮೀರ್‌ ಅಹ್ಮದ್‌ ಭಾಗಿ ನಾನು ಹಿಂದೂಸ್ತಾನಿ, ನಾನು ಕನ್ನಡಿಗ, ದೇಶದ ಅಭಿಮಾನವನ್ನ ಬಿಜೆಪಿಯವರಿಂದ…

6 hours ago

ಗುಟ್ಕಾ, ಪಾನ್ ಮಸಾಲ ನಿಷೇಧ ಆದೇಶ ನಾವು ವಾಪಸ್ ಪಡೆದಿಲ್ಲ: ಯು.ಟಿ.ಖಾದರ್ ಸ್ಪಷ್ಟನೆ – vishwanews24

ಗುಟ್ಕಾ, ಪಾನ್ ಮಸಾಲ ನಿಷೇಧ ಆದೇಶ ನಾವು ವಾಪಸ್ ಪಡೆದಿಲ್ಲ: ಯು.ಟಿ.ಖಾದರ್ ಸ್ಪಷ್ಟನೆ ಅಡಿಕೆ ಬೆಲೆ ಕುಸಿಯಲ್ಲ, ಬೆಳೆಗಾರರಿಗೆ ಸಮಸ್ಯೆ…

7 hours ago

2047ರ ವೇಳೆಗೆ ಅಭಿವೃದ್ಧಿ ಹೊಂದಿದ ರಾಷ್ಟ್ರವನ್ನು ನಿರ್ಮಿಸುತ್ತೇವೆ : ಪ್ರಧಾನಿ ಮೋದಿ – vishwanews24

2047ರ ವೇಳೆಗೆ ಅಭಿವೃದ್ಧಿ ಹೊಂದಿದ ರಾಷ್ಟ್ರವನ್ನು ನಿರ್ಮಿಸುತ್ತೇವೆ : ಪ್ರಧಾನಿ ಮೋದಿ ನವದೆಹಲಿ: 2047ರ ವೇಳೆಗೆ ‘ವಿಕಸಿತ ಭಾರತ’ದ ಕನಸನ್ನು…

7 hours ago