ಉಡುಪಿ : ನಾಡನ್ನೇ ತಲ್ಲಣಗೊಳಿಸಿದ್ದ ಉಡುಪಿ ನೇಜಾರು ಹತ್ಯಾಕಾಂಡದ ಆರೋಪಿ ಪ್ರವೀಣ್ ಚೌಗುಲೆ ಅವರು ತನ್ನ ಮೇಲಿನ ಆರೋಪವನ್ನು ನ್ಯಾಯಾಲಯದಲ್ಲಿ ನಿರಾಕರಿಸಿರುವ ಬಗ್ಗೆ ವರದಿಯಾಗಿದೆ.
ಬೆಂಗಳೂರಿನ ಪರಪ್ಪನ ಅಗ್ರಹಾರದ ಜೈಲಿನಲ್ಲಿರುವ ಆರೋಪಿ ಪ್ರವೀಣ್ ಚೌಗುಲೆಯನ್ನು ಬಿಗಿ ಪೊಲೀಸ್ ಭದ್ರತೆಯಲ್ಲಿ ಪ್ರಕರಣದ ತನಿಖಾಧಿಕಾರಿ ಯಾಗಿರುವ ಮಲ್ಪೆ ಪೊಲೀಸ್ ವೃತ್ತ ನಿರೀಕ್ಷಕ ಕೃಷ್ಣ ಎಸ್.ಕೆ. ಉಡುಪಿ ನ್ಯಾಯಾಲಯಕ್ಕೆ ಹಾಜರು ಪಡಿಸಿದರು. ಈ ವೇಳೆ ನ್ಯಾಯಾಧೀಶರಾದ ದಿನೇಶ್ ಹೆಗ್ಡೆ ಆರೋಪಿ ಮೇಲಿನ ಆಪಾದನೆಯನ್ನು ವಾಚಿಸಿದರು.
ಆದರೆ ಚೌಗುಲೆ ನಾನು ಯಾವುದೇ ತಪ್ಪು ಮಾಡಿಲ್ಲ ಎಂದು ಹೇಳಿ ತನ್ನ ಮೇಲಿನ ಆರೋಪವನ್ನು ನಿರಾಕರಿಸಿ, ವಿಚಾರಣೆ ಎದುರಿಸುವುದಾಗಿ ತಿಳಿಸಿದನು ಎನ್ನಲಾಗಿದೆ. ಈ ಹಿನ್ನೆಲೆಯಲ್ಲಿ ನ್ಯಾಯಾಧೀಶರು ಈ ಗಂಭೀರ ಪ್ರಕರಣದ ವಿಚಾರಣೆಗೆ ಪೂರ್ವಭಾವಿಯಾಗಿ ಎ.5ರಂದು ಪ್ರಿ ಟ್ರಾಯಲ್ ಕಾನ್ಫರೆನ್ಸ್ ನಡೆಸಲು ಆದೇಶ ನೀಡಿದರು. ನ್ಯಾಯಾಧೀಶರ ಸಮಕ್ಷಮದಲ್ಲಿ ನಡೆಯುವ ಈ ಕಾನ್ಪರೆನ್ಸ್ನಲ್ಲಿ ಪ್ರಕರಣದ ತನಿಖಾಧಿಕಾರಿ, ವಿಶೇಷ ಪಿಪಿ, ಆರೋಪಿ ಪರ ವಕೀಲರು ಭಾಗವಹಿಸಿ, ಮುಂದಿನ ವಿಚಾರಣೆ ಯಾವ ರೀತಿ ನಡೆಸಬೇಕೆಂಬುದರ ಬಗ್ಗೆ ಚರ್ಚೆ ನಡೆಸಲಿದ್ದಾರೆ. ಯಾವ ವಿಚಾರಣೆ ಅಗತ್ಯ ಇದೆ ಎಂಬುದರ ಬಗ್ಗೆ ಈ ಸಭೆಯಲ್ಲಿ ತೀರ್ಮಾನಿಸಿ, ವಿಚಾರಣೆ ಆರಂಭಿಸಲು ಸಾಕ್ಷಿಗಳಿಗೆ ಸಮನ್ಸ್ ಮಾಡಲಾಗುತ್ತದೆ ಎಂದು ತಿಳಿದುಬಂದಿದೆ. ಬಳಿಕ ಆರೋಪಿಯ ನ್ಯಾಯಾಂಗ ಬಂಧನ ಅವಧಿಯನ್ನು ಎ.5ರವರೆಗೆ ವಿಸ್ತರಿಸಿ ನ್ಯಾಯಾಲಯ ಆದೇಶ ನೀಡಿದೆ. ಈ ಸಂದರ್ಭದಲ್ಲಿ ಪ್ರಕರಣದ ವಿಶೇಷ ಸರಕಾರಿ ಅಭಿಯೋಜಕ ಶಿವ ಪ್ರಸಾದ್ ಆಳ್ವ ಹಾಜರಿದ್ದರು. ಕೋರ್ಟ್ ಆವರಣದಲ್ಲಿ ಬಿಗಿ ಪೊಲೀಸ್ ಬಂದೋಬಸ್ತ್ ಮಾಡಲಾಗಿದ್ದು, ಭದ್ರತೆ ಉಸ್ತುವಾರಿಯನ್ನು ಪ್ರಭು ಡಿ.ಟಿ. ವಹಿಸಿದ್ದರು. ಬಳಿಕ ಆರೋಪಿ ಯನ್ನು ಬಿಗಿ ಪೊಲೀಸ್ ಭದ್ರತೆಯಲ್ಲಿ ಬೆಂಗಳೂರಿನ ಜೈಲಿಗೆ ಕರೆದೊಯ್ಯಲಾಯಿತು.
2023ರ ನ.12ರಂದು ಆರೋಪಿ ಪ್ರವೀಣ್ ಚೌಗುಲೆ ನೇಜಾರು ತೃಪ್ತಿ ಲೇಔಟ್ನ ಹಸೀನಾ ಹಾಗೂ ಅವರ ಮೂವರು ಮಕ್ಕಳನ್ನು ಚೂರಿಯಿಂದ ಇರಿದು ಬರ್ಬರವಾಗಿ ಹತ್ಯೆಗೈದು ಪರಾರಿಯಾಗಿದ್ದನು. ಆತನನ್ನು ಪೊಲೀಸರು ನ.14ರಂದು ಬೆಳಗಾವಿ ಬಂಧಿಸಿದ್ದರು.
ಉಡುಪಿ: ಆಸ್ತಿಯನ್ನು ಬಲವಂತವಾಗಿ ತನ್ನ ಹೆಸರಿಗೆ ವರ್ಗಾಯಿಸಿಕೊಂಡು ವೃದ್ಧ ಪೋಷಕರನ್ನು ಮನೆಯಿಂದ ಹೊರಹಾಕಿದ ಮಗ ಉಡುಪಿ: ತಾಯಿಯ ಹೆಸರಿನಲ್ಲಿದ್ದ ಆಸ್ತಿಯನ್ನು…
ವಿಟ್ಲ : ಚಲಿಸುತ್ತಿದ್ದ ಕಾರಿನ ಮೇಲೆ ಬಿದ್ದ ಮರ ಹಾಗೂ ವಿದ್ಯುತ್ ಕಂಬ: ದಂಪತಿ ಅಪಾಯದಿಂದ ಪಾರು ವಿಟ್ಲ: ಮರ ಹಾಗೂ…
ಮಂಗಳೂರು: ಉದ್ಯಮಿಯ ಕಾರು ಅಡ್ಡಗಟ್ಟಿ ಕಾರು ಸಹಿತ ಚಿನ್ನಾಭರಣ ದರೋಡೆ ಮಂಗಳೂರು: ಕೇರಳ ಮೂಲದ ಉದ್ಯಮಿಯೊಬ್ಬರ ಕಾರನ್ನು ಅಡ್ಡಗಟ್ಟಿ ಕಾರು…
ವಯೋವಂದನ ಯೋಜನೆ : ವೇದಿಕೆಯ ನೇತೃತ್ವಕ್ಕೆ ಸಮಾಜದ ಸಹಭಾಗಿತ್ವ ಅಗತ್ಯ : ಸಿ ಎಂ ಗುಜ್ಜಾಡಿ ಪ್ರಭಾಕರ್ ನಾಯಕ್ ಜಿ…
ಉಡುಪಿ ಮಲಬಾರ್ ಗೋಲ್ಡ್ನಲ್ಲಿ ‘ನುವಾ’ ವಜ್ರಾಭರಣ ಅನಾವರಣ ಉಡುಪಿ: ಮಲಬಾರ್ ಗೋಲ್ಡ್ ಆ್ಯಂಡ್ ಡೈಮಂಡ್ಸ್ ಉಡುಪಿ ಶಾಖೆಯಲ್ಲಿ ಮೈನ್ ಬ್ರಾಂಡಿನ…
ಧರ್ಮಸ್ಥಳ ಪ್ರಕರಣ : ವಿಠಲ್ ಗೌಡ ವಿರುದ್ಧ ಅರೆಸ್ಟ್ ವಾರಂಟ್: ಪೊಲೀಸರಿಂದ ಹುಡುಕಾಟ ಬೆಳ್ತಂಗಡಿ: ಧರ್ಮಸ್ಥಳ ಮತ್ತು ವೀರೇಂದ್ರ ಹೆಗ್ಗಡೆ…