Featured

ಉಡುಪಿ : ನೇಜಾರು ಹತ್ಯಾಕಾಂಡ – ಶೋಭಾ ಕರಂದ್ಲಾಜೆಯವರ ವರ್ತನೆ ನಾಚೀಕೆಗೇಡು : ರಮೇಶ್ ಕಾಂಚನ್ ಆಕ್ರೋಶ – vishwanews24

ಉಡುಪಿ : ನೇಜಾರು ಹತ್ಯಾಕಾಂಡ – ಶೋಭಾ ಕರಂದ್ಲಾಜೆಯವರ ವರ್ತನೆ ನಾಚೀಕೆಗೇಡು : ರಮೇಶ್ ಕಾಂಚನ್ ಆಕ್ರೋಶ

ಉಡುಪಿ:ಇಡೀ ಕರಾವಳಿಯನ್ನೇ ಬೆಚ್ಚಿಬೀಳಿಸುವಂತಹ ರೀತಿಯಲ್ಲಿ ನೇಜಾರು ಹತ್ಯಾಕಾಂಡ ನಡೆದು ಒಂದೇ ಮನೆಯ ನಾಲ್ಕು ಮಂದಿ ಸದಸ್ಯರು ಬರ್ಬರವಾಗಿ ಕೊಲೆಯಾದರೂ ಕೂಡ ಕನಿಷ್ಠ ಸೌಜನ್ಯಕ್ಕಾದರೂ ಮೃತ ಕುಟುಂಬದ ಸದಸ್ಯರಿಗೆ ಸಾಂತ್ವಾನ ಹೇಳುವ ಕೆಲಸ ಮಾಡಲು ಸಾಧ್ಯವಾಗದ ಉಡುಪಿ-ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದ ಸಂಸದೆ, ಕೇಂದ್ರ ಸಚಿವೆಯಾದ ಶೋಭಾ ಕರಂದ್ಲಾಜೆಯವರ ವರ್ತನೆ ನಾಚೀಕೆಗೇಡು ಎಂದು ಉಡುಪಿ ಬ್ಲಾಕ್ ಕಾಂಗ್ರೆಸ್ ಸಮಿತಿಯ ಅಧ್ಯಕ್ಷ ರಮೇಶ್ ಕಾಂಚನ್ ಅವರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ರಾಜ್ಯದ ಯಾವುದೇ ಭಾಗದಲ್ಲಿ ಕೂಡ ಯಾರೇ ಸತ್ತರೂ ಅದಕ್ಕೆ ಧರ್ಮದ ರಾಜಕೀಯವನ್ನು ಬೆರೆಸಿ ಅರಚಾಟ ಮಾಡುವ ಸಂಸದೆಯವರು ತನ್ನದೇ ಕ್ಷೇತ್ರದಲ್ಲಿ ತಾಯಿ ಮತ್ತು ಮೂವರು ಮಕ್ಕಳು ಒಬ್ಬ ವ್ಯಕ್ತಿಯಿಂದ ಅಮಾನುಷವಾಗಿ ಕೊಲೆಯಾಗಿ ಹೋಗಿದ್ದಾರೆ. ಕೊಲೆಯಾದವರಲ್ಲಿ ಮೂವರು ಮಹಿಳೆಯರಾಗಿದ್ದು ಸಂಸದೆಯವರೂ ಕೂಡ ಮಹಿಳೆಯಾಗಿದ್ದು ಕನಿಷ್ಠ ಮೃತ ಕುಟುಂಬದ ಸದಸ್ಯರ ದುಃಖದಲ್ಲಿ ಭಾಗಿಯಾಗುವ ಸೌಜನ್ಯ ಕೂಡ ತೋರಿಸದಿರುವುದು ಅತ್ಯಂತ ಕಳವಳಕಾರಿ ಸಂಗತಿಯಾಗಿದೆ.

ಸಂಸದೆ ಅವರು ಕೇವಲ ಒಂದು ಧರ್ಮಕ್ಕೆ ಅಥವಾ ಸಮುದಾಯಕ್ಕೆ ಸೀಮಿತರಾಗಿಲ್ಲ ಎನ್ನುವುದನ್ನು ಶೋಭಾ ಕರಂದ್ಲಾಜೆಯವರು ಮರೆತಿದ್ದಾರೆ. ಸಬ್ ಕಾ ಸಾಥ್ ಸಬಕಾ ವಿಕಾಸ್ ಎನ್ನುವ ಮೋದಿಯವರ ತತ್ವದಿಂದ ಶೋಭಾ ಕರಂದ್ಲಾಜೆಯವರು ಹೊರಗಿದ್ದಾರೆಯೇ? ಅಥವಾ ಒಂದು ಸಮುದಾಯದವರು ಕೊಲೆಯಾದಾಗ ಅಥವಾ ಮೃತರಾದಾಗ ಬಂದು ಮೊಸಳೆ ಕಣ್ಣೀರು ಹಾಕುತ್ತಾರೆಯೇ? ಬಿಜೆಪಿ ಪಕ್ಷದವರು ಪ್ರತಿಯೊಂದನ್ನು ಧರ್ಮಧ ದೃಷ್ಟಿಯಲ್ಲಿ ನೋಡುತ್ತಿದ್ದಾರೆ ಎನ್ನುವುದನ್ನು ಸಂಸದೆಯವರು ಸಾಬೀತುಪಡಿಸಿದ್ದಾರೆ.

ಜಿಲ್ಲೆಯ ಪೊಲೀಸ್ ಇಲಾಖೆ ಕ್ಷಿಪ್ರವಾಗಿ ಕಾರ್ಯಾಚರಣೆ ನಡೆಸಿ ಕೊಲೆ ಆರೋಪಿಯನ್ನು ಬಂಧಿಸುವಲ್ಲಿ ಯಶಸ್ವಿಯಾಗಿದೆ. ಇಲ್ಲವಾದಲ್ಲಿ ಬಿಜೆಪಿಗರು ಅದನ್ನು ಕೂಡ ಧರ್ಮದ ಲೇಬಲ್ ಅಂಟಿಸಿ ಜಿಲ್ಲೆಯಲ್ಲಿ ಅಶಾಂತಿ ಸೃಷ್ಟಿಸುವ ಕೆಲಸ ಮಾಡುತ್ತಿದ್ದರು. ಜಿಲ್ಲೆಯ ಪೊಲೀಸ್ ವರಿಷ್ಠಾಧಿಕಾರಿ ಮತ್ತವರ ತಂಡದ ಕಾರ್ಯ ಶ್ಲಾಘನೀಯವಾಗಿದೆ. ಜಿಲ್ಲೆಯಿಂದ ಆಯ್ಕೆಯಾದ ಸಂಸದೆಯವರು ಪ್ರತಿಯೊಂದು ವಿಚಾರವನ್ನು ತಮ್ಮ ರಾಜಕೀಯ ಬೇಳೆ ಬೇಯಿಸುವುದಕ್ಕೆ ಉಪಯೋಗಿಸುವುದನ್ನು ಬಿಟ್ಟು ಸ್ವಲ್ಪ ಮನುಷ್ಯತ್ವಕ್ಕೂ ಬೆಲೆ ನೀಡುವ ಕೆಲಸ ಮಾಡಲಿ ಇಲ್ಲವಾದರೆ ಮುಂದಿನ ದಿನಗಳಲ್ಲಿ ಜಿಲ್ಲೆಯ ಜನರು ತಕ್ಕ ಪಾಠ ಕಲಿಸಲಿದ್ದಾರೆ ಎಂದು ಉಡುಪಿ ಬ್ಲಾಕ್ ಕಾಂಗ್ರೆಸ್ ಸಮಿತಿಯ ಅಧ್ಯಕ್ಷರಾದ ರಮೇಶ್ ಕಾಂಚನ್ ಅವರು ಪತ್ರಿಕಾ ಪ್ರಕಟಣೆಯ ಮೂಲಕ ಆಗ್ರಹಿಸಿದ್ದಾರೆ.

Vishwa News 24

Recent Posts

ಉಡುಪಿ ಮಲಬಾರ್ ಗೋಲ್ಡ್‌ನಲ್ಲಿ ಹಫೀಝ್ ರೆಹಮಾನ್‌ಗೆ ಬೀಳ್ಕೊಡುಗೆ -vishwanews24

ಉಡುಪಿ ಮಲಬಾರ್ ಗೋಲ್ಡ್‌ನಲ್ಲಿ ಹಫೀಝ್ ರೆಹಮಾನ್‌ಗೆ ಬೀಳ್ಕೊಡುಗೆ ಉಡುಪಿ : ಉಡುಪಿ ಮಲಬಾರ್ ಗೋಲ್ಡ್ ಆಂಡ್ ಡೈಮಂಡ್ಸ್ ಶಾಖೆಯಲ್ಲಿ ಕಳೆದ…

5 days ago

ದೋಣಿ ಮುಗುಚಿ ಇಬ್ಬರು ಯುವಕರು ನೀರುಪಾಲು : ಓರ್ವನ ಮೃತದೇಹ ಪತ್ತೆ, ಇನ್ನೋರ್ವನಿಗಾಗಿ ಶೋಧ – vishwanews24

ಫಲ್ಗುಣಿ ನದಿಯಲ್ಲಿ ಮಗುಚಿ ಬಿದ್ದ ದೋಣಿ: ಇಬ್ಬರು ಯುವಕರು ನೀರುಪಾಲು  ಮೀನುಗಾರಿಕೆಗೆ ತೆರಳಿದ್ದಾಗ ಆಕಸ್ಮಿಕವಾಗಿ ದೋಣಿ ಮುಗುಚಿ ಇಬ್ಬರು ಯುವಕರು…

6 days ago

ಬಿಜೆಪಿ ಬೆಂಬಲಿಸುವವರೂ ನಮ್ಮ ಗ್ಯಾರಂಟಿಗಳ ಫಲಾನುಭವಿಗಳು : ಸಿದ್ದರಾಮಯ್ಯ – vishwanews24

 ನಮ್ಮದು ಪಕ್ಷಾತೀತ ಅಭಿವೃದ್ಧಿಪರ ಸರ್ಕಾರ.. ದಲಿತರಿಗೆ ಮೀಸಲಾತಿ ತಂದವರು ನಾವು .. ರಾಜ್ಯದಲ್ಲಿ ಬಿಜೆಪಿ ಸ್ವಂತ ಬಲದಿಂದ ಯಾವತ್ತೂ ಅಧಿಕಾರಕ್ಕೆ…

6 days ago

ಕಾಪು : 94/ಸಿಯಡಿ ಹಕ್ಕುಪತ್ರ ; ಉಚಿತ ಉಪಕರಣಗಳ ವಿತರಣೆ – vishwanews24

ಕಾಪು : 94/ಸಿಯಡಿ ಹಕ್ಕುಪತ್ರ ; ಉಚಿತ ಉಪಕರಣಗಳ ವಿತರಣೆ ಕಾಪು : ವಿಧಾನಸಭಾ ಕ್ಷೇತ್ರದ ಕಾಪು ತಾಲ್ಲೂಕು ವ್ಯಾಪ್ತಿಯ…

6 days ago

ರೈಲು ಪ್ರಯಾಣಿಕರ ಗಮನಕ್ಕೆ: ಇಂದಿನಿಂದ ಬುಕ್ಕಿಂಗ್ ಮತ್ತು ರದ್ದತಿ  ನಿಯಮದಲ್ಲಿ ಭಾರಿ ಬದಲಾವಣೆ ; ಇಲ್ಲಿದೆ ಪೂರ್ಣ ಮಾಹಿತಿ – vishwanews24

ರೈಲ್ವೆ ಇಲಾಖೆಯ 5 ಹೊಸ ನಿಯಮ ಜಾರಿ: ತತ್ಕಾಲ್ ಬುಕಿಂಗ್‌ಗೆ ಆಧಾರ್ ಕಡ್ಡಾಯ; ರೀಫಂಡ್ ನಿಯಮ ಹೇಗಿದೆ? ರೈಲ್ವೆ ಇಲಾಖೆಯ…

6 days ago

ಉಡುಪಿ:  ಯುವ‌ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ – vishwanews24

ಉಡುಪಿ:  ಯುವ‌ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ ಉಡುಪಿ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ(ಕೆಯುಡಬ್ಲೂಜೆ)ದ 2024ನೇ…

6 days ago