Featured

ಉಡುಪಿ:  ನೇಜಾರು ಹತ್ಯೆ ಪ್ರಕರಣ ;  ಜೂ.19-20ರಂದು ಸಾಕ್ಷಿಗಳ ವಿಚಾರಣೆಗೆ ದಿನ ನಿಗದಿ – vishwanews24

ಉಡುಪಿ:  ನೇಜಾರು ಹತ್ಯೆ ಪ್ರಕರಣ ;  ಜೂ.19-20ರಂದು ಸಾಕ್ಷಿಗಳ ವಿಚಾರಣೆಗೆ ದಿನ ನಿಗದಿ

ಉಡುಪಿ: ನೇಜಾರಿನ ತಾಯಿ ಮತ್ತು ಮೂವರು ಮಕ್ಕಳ ಭೀಕರ ಹತ್ಯೆ ಪ್ರಕರಣದ ಸಾಕ್ಷಿಗಳ ವಿಚಾರಣೆಗೆ ಉಡುಪಿ ಎರಡನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ಇಂದು ಜೂ.19 ಮತ್ತು ಜೂ.20ರಂದು ದಿನ ನಿಗದಿ ಪಡಿಸಿದೆ.

ಪ್ರಕರಣದ ಸಾಕ್ಷ್ಯಗಳ ವಿಚಾರಣೆಯ ಆಡಿಯೋ ಮತ್ತು ವಿಡಿಯೋ ದಾಖಲಿಸಬೇಕೆಂಬ ಅರ್ಜಿಯನ್ನು ಜಿಲ್ಲಾ ನ್ಯಾಯಾಲಯದಲ್ಲಿ ತಿರಸ್ಕೃತಗೊಂಡ ಹಿನ್ನೆಲೆಯಲ್ಲಿ ಹೈಕೋರ್ಟ್‌ನಲ್ಲಿ ಮೇಲ್ಮನವಿ ಸಲ್ಲಿಸಲಾಗಿದ್ದು, ಈ ನಿಟ್ಟಿನಲ್ಲಿ ಸದ್ಯ ಸಾಕ್ಷಿಗಳ ವಿಚಾರಣೆಗೆ ದಿನ ನಿಗದಿ ಪಡಿಸುವುದು ಬೇಡ ಎಂದು ಆರೋಪಿ ಪ್ರವೀಣ್ ಚೌಗುಲೆ ಪರ ವಕೀಲರು ನ್ಯಾಯಾಲಯಕ್ಕೆ ಮನವಿ ಮಾಡಿದರು.

ಇದಕ್ಕೆ ಪ್ರತಿಕ್ರಿಯಿಸಿದ ವಿಶೇಷ ಸರಕಾರಿ ಅಭಿಯೋಜಕ ಶಿವಪ್ರಸಾದ್ ಆಳ್ವ, ಈ ಸಂಬಂಧ ವಿಚಾರಣೆಗೆ ಹೈಕೋರ್ಟ್ ಯಾವುದೇ ತಡೆಯಾಜ್ಞೆ ನೀಡಿಲ್ಲ. ಈ ಪ್ರಕರಣದ ಸಾಕ್ಷಿಗಳ ವಿಚಾರಣೆ ಕಳೆದ ಜೂನ್ ತಿಂಗಳಲ್ಲಿಯೇ ಆರಂಭ ವಾಗಬೇಕಿತ್ತು. ಆದರೆ ಆರೋಪಿ ಒಂದಲ್ಲ ಒಂದು ಕಾರಣ ನೀಡಿ, ಅದನ್ನು ಮುಂದೂಡುತ್ತಿದ್ದಾರೆ. ಇದರಿಂದ ಸಂತ್ರಸ್ತರಿಗೆ ನ್ಯಾಯ ವಿಳಂಬವಾಗುತ್ತಿದೆ. ಆದುದರಿಂದ ಇವತ್ತೇ ಸಾಕ್ಷಿಗಳ ವಿಚಾರಣೆಗೆ ದಿನ ನಿಗದಿಪಡಿಸಬೇಕೆಂದು ಹೇಳಿದರು.

ವಾದ ಪ್ರತಿವಾದ ಆಲಿಸಿದ ನ್ಯಾಯಾಧೀಶ ಸಮಿವುಲ್ಲಾ, ಜೂ.19ರಂದು ದೂರುದಾರೆ ಹಾಗೂ ಒಂದನೇ ಸಾಕ್ಷಿಯ ವಿಚಾರಣೆ ಮತ್ತು ಜೂ.20ರಂದು ಎರಡು ಮತ್ತು ಮೂರನೇ ಸಾಕ್ಷಿಗಳ ವಿಚಾರಣೆಗೆ ದಿನ ನಿಗದಿಪಡಿಸಿದರು. ಆ ದಿನದಂದು ಬೆಂಗಳೂರು ಜೈಲಿನಲ್ಲಿರುವ ಆರೋಪಿ ಪ್ರವೀಣ್ ಚೌಗುಲೆಯನ್ನು ಖುದ್ಧು ನ್ಯಾಯಾಲಯಕ್ಕೆ ಹಾಜರುಪಡಿಸುವಂತೆ ಅವರು ಆದೇಶ ನೀಡಿದರು.

Vishwa News 24

Recent Posts

ರಾಷ್ಟ್ರಪ್ರಶಸ್ತಿ ವಿಜೇತ ಖ್ಯಾತ ತಮಿಳು ನಿರ್ದೇಶಕ, ನಟ ಭಾರತಿರಾಜ ವಿಧಿವಶ – vishwanews24

ರಾಷ್ಟ್ರಪ್ರಶಸ್ತಿ ವಿಜೇತ ಖ್ಯಾತ ತಮಿಳು ನಿರ್ದೇಶಕ, ನಟ ಭಾರತಿರಾಜ ವಿಧಿವಶ ಚೆನ್ನೈ: ರಾಷ್ಟ್ರಪ್ರಶಸ್ತಿ ವಿಜೇತ ಖ್ಯಾತ ತಮಿಳು ನಿರ್ದೇಶಕ, ನಟ…

7 minutes ago

ದೇವೇಗೌಡರ ಕುರಿತು ಕಾಂಗ್ರೆಸ್ ಮೊಸಳೆ ಕಣ್ಣೀರು ಸುರಿಸುವ ಅವಶ್ಯಕತೆ ಇಲ್ಲ: ಬಿ.ವೈ.ವಿಜಯೇಂದ್ರ – vishwanews24

ದೇವೇಗೌಡರ ಕುರಿತು ಕಾಂಗ್ರೆಸ್ ಮೊಸಳೆ ಕಣ್ಣೀರು ಸುರಿಸುವ ಅವಶ್ಯಕತೆ ಇಲ್ಲ: ಬಿ.ವೈ.ವಿಜಯೇಂದ್ರ ಬೆಂಗಳೂರು,: ಕರ್ನಾಟಕದ ಕಾಂಗ್ರೆಸ್ ಪಕ್ಷದ ಉಸ್ತುವಾರಿ ಸುರ್ಜೇವಾಲ…

20 hours ago

ಕಾರವಾರ – ಮಡಗಾಂವ್ ವಿಶೇಷ ರೈಲು ಸೇವೆ ಇನ್ನು ಮುಂದೆ ಖಾಯಂ – vishwanews24

ಕಾರವಾರ - ಮಡಗಾಂವ್  ವಿಶೇಷ ರೈಲು ಸೇವೆ ಇನ್ನು ಮುಂದೆ ಖಾಯಂ ಶಿರಸಿ: ಕಾರವಾರ ಮತ್ತು ಮಡಗಾಂವ್ ನಡುವೆ ಸಂಚರಿಸುತ್ತಿದ್ದ ವಿಶೇಷ…

20 hours ago

ಡಿಕೆಶಿ ಸಂಪುಟದಲ್ಲಿ ಸಚಿವ ಸ್ಥಾನಕ್ಕಾಗಿ ಯಾವುದೇ ಬೇಡಿಕೆ ಇಟ್ಟಿಲ್ಲ: ರಾಜಣ್ಣ ಖಡಕ್ ಹೇಳಿಕೆ – vishwanews24

ಡಿಕೆಶಿ ಸಂಪುಟದಲ್ಲಿ ಸಚಿವ ಸ್ಥಾನಕ್ಕಾಗಿ ಯಾವುದೇ ಬೇಡಿಕೆ ಇಟ್ಟಿಲ್ಲ, ಸ್ಪರ್ಧೆಯಲ್ಲೂ ಇಲ್ಲ: ರಾಜಣ್ಣ ಖಡಕ್ ಹೇಳಿಕೆ ಬೆಂಗಳೂರು: ನೂತನ ಮುಖ್ಯಮಂತ್ರಿ ಡಿ.…

21 hours ago

ಬೆಳ್ತಂಗಡಿ ಮನೆ ಕಳ್ಳತನ ಪ್ರಕರಣ : ಇಬ್ಬರು ಅಂತರಾಜ್ಯ ಕಳ್ಳರ ಬಂಧನ ;  ₹23.67 ಲಕ್ಷ ಮೌಲ್ಯದ ಸೊತ್ತು ವಶ – vishwanews24

ಬೆಳ್ತಂಗಡಿ ಮನೆ ಕಳ್ಳತನ ಪ್ರಕರಣ : ಇಬ್ಬರು ಅಂತರಾಜ್ಯ ಕಳ್ಳರ ಬಂಧನ ;  ₹23.67 ಲಕ್ಷ ಮೌಲ್ಯದ ಸೊತ್ತು ವಶ…

23 hours ago

ಉಡುಪಿ : ಯುವಕ ನಾಪತ್ತೆ – vishwanews24

ಉಡುಪಿ : ಯುವಕ ನಾಪತ್ತೆ ಉಡುಪಿ : ಮೂಲತಃ ನೇಪಾಳ ದೇಶದವರಾದ, ಪ್ರಸ್ತುತ ಮಣಿಪಾಲದ ಲಕ್ಷಿö್ಮÃಶ ನಗರದಲ್ಲಿರುವ ಹೋಟೆಲ್ ಒಂದರಲ್ಲಿ…

23 hours ago