ಉಡುಪಿ : ಉಡುಪಿಯ ನೇಜಾರಿನಲ್ಲಿ ಗಗನಸಖಿ ಸೇರಿದಂತೆ ಒಂದೇ ಕುಟುಂಬದ ನಾಲ್ವರನ್ನು ಹತ್ಯೆಗೈದ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಪ್ರವೀಣ್ ಚೌಗಲೆ (35) ಎಂಬಾತನನ್ನು ಬಂಧಿಸಿದ್ದು, ಆತನ ಬಂಧನದ ಬಳಿಕ ಕೆಲವು ಸಂಗತಿಗಳು ಬೆಳಕಿಗೆ ಬಂದಿವೆ.
ಮೂಲಗಳ ಪ್ರಕಾರ, ಪ್ರವೀಣ್ ಚೌಗಲೆ ಮತ್ತು ಹತ್ಯೆಯಾದ ಗಗನಸಖಿ ಅಯ್ನಾಜ್ ಅವರು ಸಹೋದ್ಯೋಗಿಗಳಾಗಿದ್ದರು ಎಂದು ತಿಳಿದು ಬಂದಿದೆ.
ಇನ್ನು ಅಯ್ನಾಜ್ ಮತ್ತು ಆರೋಪಿ ಪ್ರವೀಣ್ ನಡುವಿನ ಪ್ರೇಮದಿಂದ ಒಂದೇ ಕುಟುಂಬದ ನಾಲ್ವರ ಹತ್ಯೆ ನಡೆದಿದೆ ಎನ್ನಲಾಗುತ್ತಿದ್ದು ಈ ಬಗ್ಗೆ ಪೊಲೀಸರು ಎಲ್ಲಾ ರೀತಿಯ ತನಿಖೆಯನ್ನು ನಡೆಸುತ್ತಿದ್ದಾರೆ.
ಉಡುಪಿ ಜಿಲ್ಲೆಯ ಮಲ್ಪೆ ಪೊಲೀಸ್ ಠಾಣಾ ವ್ಯಾಪ್ತಿಯ ನೇಜಾರಿನಲ್ಲಿ ನವೆಂಬರ್ 12ರಂದು ತಾಯಿ ಹಸೀನಾ(46), ಪುತ್ರಿಯರಾದ ಅಫ್ನಾನ್ (23), ಅಯ್ನಾಜ್ (21) ಮತ್ತು ಪುತ್ರ ಆಸೀಮ್ (12) ನನ್ನು ಹತ್ಯೆ ಮಾಡಲಾಗಿದ್ದು, ಘಟನೆಯಲ್ಲಿ ಅಯ್ನಾಜ್ ಅವರ ಅಜ್ಜಿ ಹಾಜಿರಾಬಿ ಅವರು ಗಾಯಗೊಂಡಿದ್ದು ಈಗ ಚೇತರಿಸಿಕೊಂಡಿದ್ದಾರೆ.
ಎರಡು ದಿನಗಳ ಶೋಧದ ನಂತರ ಆರೋಪಿ ಪ್ರವೀಣ್ ನನ್ನು ಉಡುಪಿ ಮತ್ತು ಬೆಳಗಾವಿ ಪೊಲೀಸರ ಜಂಟಿ ಕಾರ್ಯಾಚರಣೆಯಲ್ಲಿ ಬೆಳಗಾವಿ ಜಿಲ್ಲೆಯ ರಾಯಭಾಗ ತಾಲೂಕಿನ ಕುಡಚಿಯಲ್ಲಿ ಬಂಧಿಸಿದ್ದಾರೆ.
ಇನ್ನು ಪ್ರವೀಣ್ ಈ ಹಿಂದೆ ಸಿಆರ್ಪಿಎಫ್ನಲ್ಲಿ ಪೊಲೀಸ್ ಆಗಿದ್ದರು ಎಂದು ವರದಿಯಾಗಿದೆ.
ಮಂಗಳೂರು: ವಿದ್ಯಾರ್ಥಿಗಳು, ವಿಪಕ್ಷ ನಾಯಕನ ಜೊತೆ ಆಡಳಿತ ಪಕ್ಷ ನಡೆಸಿಕೊಂಡ ರೀತಿ ಖಂಡನೀಯ: ರಮಾನಾಥ ರೈ ಮಂಗಳೂರು: ನೀಟ್ ಪರೀಕ್ಷೆಯಲ್ಲಿನ…
ಪ್ರಶ್ನೆ ಪತ್ರಿಕೆ ಸೋರಿಕೆ: ಕೇಂದ್ರ ಸರ್ಕಾರ ಯಾರನ್ನೂ ಕಾಪಾಡಬಾರದು : ಡಿ ಕೆ ಶಿವಕುಮಾರ್ ಆಗ್ರಹ ಬೆಂಗಳೂರು: ಪ್ರಶ್ನೆ ಪತ್ರಿಕೆ…
ವಿದ್ಯಾರ್ಥಿಗಳ ಹಿತಕ್ಕಾಗಿ ಕಾಂಗ್ರೆಸ್ ಪ್ರತಿಭಟನೆ ನಡೆಸುತ್ತಿದ್ದರೆ, ಬಿಜೆಪಿ ನಾಯಕರು ಮೋದಿ ಮೆಚ್ಚಿಸಲು ಪ್ರತಿಭಟಿಸುತ್ತಿದ್ದಾರೆ : ಗೃಹ ಸಚಿವ ಪ್ರಿಯಾಂಕ್ ಖರ್ಗೆ ಬೆಂಗಳೂರು:…
ಉಡುಪಿ: ಪ್ರಶ್ನೆಪತ್ರಿಕೆ ಸೋರಿಕೆ ಪ್ರಕರಣ : ಪ್ರತಿಭಟನೆ ನಡೆಸಿದ ವಿದ್ಯಾರ್ಥಿಗಳ ಮೇಲಿನ ದೌರ್ಜನ್ಯ ಖಂಡನೀಯ: ಮಂಜುನಾಥ್ ಭಂಡಾರಿ ಉಡುಪಿ: ಪ್ರಶ್ನೆಪತ್ರಿಕೆ…
ಉಡುಪಿ: ರಿಕ್ಷಾ ಚಾಲಕ ನೇಣು ಬಿಗಿದು ಆತ್ಮಹತ್ಯೆ ಉಡುಪಿ: ಆದಿಉಡುಪಿಯ ಮಧ್ವನಗರದ ರಿಕ್ಷಾ ಚಾಲಕ ತನ್ನ ಮನೆಯಲ್ಲಿ ನೇಣು ಬಿಗಿದು…
ಕೊಂಕಣ ರೈಲ್ವೆಯಲ್ಲಿ ಕಳ್ಳರ ಜಾಲ : ಮತ್ಸ್ಯಗಂಧ, ಮಂಗಳೂರು ಎಕ್ಸ್ಪ್ರೆಸ್ನಲ್ಲಿ ಸರಣಿ ಕಳ್ಳತನ ಹಾಗೂ ದರೋಡೆ ಪ್ರಕರಣ ಉಡುಪಿ: ಮಂಗಳೂರಿನಿಂದ…