ಉಡುಪಿ: ಜಿಲ್ಲೆಯ ಇತಿಹಾಸದಲ್ಲೇ ನೇಜಾರು ತೃಪ್ತಿ ಲೇಔಟ್ ನಲ್ಲಿ ಅತ್ಯಂತ ಕ್ರೂರ ರೀತಿಯಲ್ಲಿ ನಡೆದ ಒಂದೇ ಕುಟುಂಬದ ನಾಲ್ಕು ಮಂದಿಯ ಅಮಾನುಷ ಹತ್ಯೆ ನಾಗರಿಕ ಸಮಾಜವನ್ನು ಬೆಚ್ಚಿ ಬೀಳಿಸಿದೆ. ಪೊಲೀಸ್ ಇಲಾಖೆ ಈ ಪ್ರಕರಣವನ್ನು ಸವಾಲಾಗಿ ಸ್ವೀಕರಿಸಿ ಸಿಸಿ ಟಿವಿ ಹಾಗೂ ಇನ್ನಿತರ ಮೂಲಗಳ ಜಾಡು ಹಿಡಿದು ಕೊಲೆ ಆರೋಪಿಯನ್ನು ಬಂಧಿಸಿರುವುದು ಶ್ಲಾಘನೀಯ. ಆರೋಪಿಯನ್ನು ಶೀಘ್ರ ವಿಚಾರಣೆಗೆ ಒಳಪಡಿಸಿ ಕಾನೂನಾತ್ಮಕ ಶಿಕ್ಷೆಗೆ ಗುರಿಪಡಿಸಬೇಕು ಎಂದು ಬಿಜೆಪಿ ಉಡುಪಿ ಜಿಲ್ಲಾಧ್ಯಕ್ಷ ಕುಯಿಲಾಡಿ ಸುರೇಶ್ ನಾಯಕ್ ಆಗ್ರಹಿಸಿದ್ದಾರೆ.
ಉಡುಪಿ ಜಿಲ್ಲೆಯ ಸುಶಿಕ್ಷಿತ ಜನತೆ ಕಾನೂನು ಸುವ್ಯವಸ್ಥೆಯೊಂದಿಗೆ ನಿರ್ಭೀತಿಯಿಂದ ಸಹಬಾಳ್ವೆ ಯನ್ನು ನಡೆಸುತ್ತಿದ್ದು, ಈ ಅಮಾನುಷ ಹತ್ಯೆ ಪ್ರಕರಣ ಜನರಲ್ಲಿ ಭಯದ ವಾತಾವರಣವನ್ನು ಸೃಷ್ಟಿಸಿದೆ.
ತಕ್ಷಣ ಕಾರ್ಯಪ್ರವೃತ್ತರಾಗಿರುವ ಪೊಲೀಸರು ಆರೋಪಿಯನ್ನು ಬೆಳಗಾವಿಯ ಕುಡುಚಿಯಲ್ಲಿ ಬಂಧಿಸಿರುವ ಬಗ್ಗೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳು ಮಾಹಿತಿ ನೀಡಿದ್ದು ಹೆಚ್ಚಿನ ಮಾಹಿತಿ ಕಲೆಹಾಕಲು ತಂಡಗಳನ್ನು ರಚಿಸಿ ಕಾರ್ಯ ಪ್ರವೃತ್ತರಾಗಿರುವುದನ್ನೂ ಖಚಿತಪಡಿಸಿದ್ದಾರೆ.
ಪೊಲೀಸರ ಪರಿಣಾಮಕಾರಿ ಕಾರ್ಯಾಚರಣೆಗೆ ಮೆಚ್ಚುಗೆ ಸೂಚಿಸುವ ಜೊತೆಗೆ ಮುಂದಿನ ದಿನಗಳಲ್ಲಿ ಇಂತಹ ಭೀಭತ್ಸ ಘಟನೆಗಳು ಶಾoತಿ ಪ್ರಿಯರ ಜಿಲ್ಲೆ ಉಡುಪಿಯಲ್ಲಿ ಮರುಕಳಿಸದಂತೆ ಇಲಾಖೆಗಳು ಕಟ್ಟುನಿಟ್ಟಿನ ಮುಂಜಾಗ್ರತಾ ಕ್ರಮಗಳನ್ನು ರೂಪಿಸುವುದು ಸೂಕ್ತ ಎಂದು ಕುಯಿಲಾಡಿ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಉಡುಪಿ: ಪ್ರಶ್ನೆಪತ್ರಿಕೆ ಸೋರಿಕೆ ಪ್ರಕರಣ : ಪ್ರತಿಭಟನೆ ನಡೆಸಿದ ವಿದ್ಯಾರ್ಥಿಗಳ ಮೇಲಿನ ದೌರ್ಜನ್ಯ ಖಂಡನೀಯ: ಮಂಜುನಾಥ್ ಭಂಡಾರಿ ಉಡುಪಿ: ಪ್ರಶ್ನೆಪತ್ರಿಕೆ…
ಉಡುಪಿ: ರಿಕ್ಷಾ ಚಾಲಕ ನೇಣು ಬಿಗಿದು ಆತ್ಮಹತ್ಯೆ ಉಡುಪಿ: ಆದಿಉಡುಪಿಯ ಮಧ್ವನಗರದ ರಿಕ್ಷಾ ಚಾಲಕ ತನ್ನ ಮನೆಯಲ್ಲಿ ನೇಣು ಬಿಗಿದು…
ಕೊಂಕಣ ರೈಲ್ವೆಯಲ್ಲಿ ಕಳ್ಳರ ಜಾಲ : ಮತ್ಸ್ಯಗಂಧ, ಮಂಗಳೂರು ಎಕ್ಸ್ಪ್ರೆಸ್ನಲ್ಲಿ ಸರಣಿ ಕಳ್ಳತನ ಹಾಗೂ ದರೋಡೆ ಪ್ರಕರಣ ಉಡುಪಿ: ಮಂಗಳೂರಿನಿಂದ…
ಆಳ್ವಾಸ್ ಪ್ರಗತಿ - 2026 : ಆ.7 ಮತ್ತು 8ರಂದು ಬೃಹತ್ ಉದ್ಯೋಗ ಮೇಳ ಉಡುಪಿ: ದೇಶದ ಯುವಜನರ ಉದ್ಯೋಗ…
ಯುವಕರ ಭವಿಷ್ಯಕ್ಕೆ ಅತಿ ಹೆಚ್ಚು ಹಾನಿ ಮಾಡಿರುವುದು ಪ್ರಧಾನಿ ಮೋದಿ : ರಾಹುಲ್ ಗಾಂಧಿ ಆರೋಪ ಹೊಸದಿಲ್ಲಿ: ಪ್ರಶ್ನೆಪತ್ರಿಕೆ ಸೋರಿಕೆ…
ಪಡುಬಿದ್ರಿ: ಪಾನ್ ಸ್ಟಾಲ್ನಲ್ಲಿ ಗಾಂಜಾ ಮಾರಾಟ : ಆರೋಪಿ ಅರೆಸ್ಟ್ ಪಡುಬಿದ್ರಿ: ಪಾನ್ ಸ್ಟಾಲ್ ಅಂಗಡಿಯಲ್ಲೇ ಅಕ್ರಮವಾಗಿ ಗಾಂಜಾ ಮಾರಾಟ…