Featured

ಉಡುಪಿ: ನೇಜಾರು ಹತ್ಯೆ ಪ್ರಕರಣ – ಪೊಲೀಸರ ಪರಿಣಾಮಕಾರಿ ಕಾರ್ಯಾಚರಣೆ ಶ್ಲಾಘನೀಯ : ಕುಯಿಲಾಡಿ – vishwanews24

ಉಡುಪಿ: ನೇಜಾರು ಹತ್ಯೆ ಪ್ರಕರಣ – ಪೊಲೀಸರ ಪರಿಣಾಮಕಾರಿ ಕಾರ್ಯಾಚರಣೆ ಶ್ಲಾಘನೀಯ : ಕುಯಿಲಾಡಿ

ಉಡುಪಿ: ಜಿಲ್ಲೆಯ ಇತಿಹಾಸದಲ್ಲೇ ನೇಜಾರು ತೃಪ್ತಿ ಲೇಔಟ್ ನಲ್ಲಿ ಅತ್ಯಂತ ಕ್ರೂರ ರೀತಿಯಲ್ಲಿ ನಡೆದ ಒಂದೇ ಕುಟುಂಬದ ನಾಲ್ಕು ಮಂದಿಯ ಅಮಾನುಷ ಹತ್ಯೆ ನಾಗರಿಕ ಸಮಾಜವನ್ನು ಬೆಚ್ಚಿ ಬೀಳಿಸಿದೆ. ಪೊಲೀಸ್ ಇಲಾಖೆ ಈ ಪ್ರಕರಣವನ್ನು ಸವಾಲಾಗಿ ಸ್ವೀಕರಿಸಿ ಸಿಸಿ ಟಿವಿ ಹಾಗೂ ಇನ್ನಿತರ ಮೂಲಗಳ ಜಾಡು ಹಿಡಿದು ಕೊಲೆ ಆರೋಪಿಯನ್ನು ಬಂಧಿಸಿರುವುದು ಶ್ಲಾಘನೀಯ. ಆರೋಪಿಯನ್ನು ಶೀಘ್ರ ವಿಚಾರಣೆಗೆ ಒಳಪಡಿಸಿ ಕಾನೂನಾತ್ಮಕ ಶಿಕ್ಷೆಗೆ ಗುರಿಪಡಿಸಬೇಕು ಎಂದು ಬಿಜೆಪಿ ಉಡುಪಿ ಜಿಲ್ಲಾಧ್ಯಕ್ಷ ಕುಯಿಲಾಡಿ ಸುರೇಶ್ ನಾಯಕ್ ಆಗ್ರಹಿಸಿದ್ದಾರೆ.

ಉಡುಪಿ ಜಿಲ್ಲೆಯ ಸುಶಿಕ್ಷಿತ ಜನತೆ ಕಾನೂನು ಸುವ್ಯವಸ್ಥೆಯೊಂದಿಗೆ ನಿರ್ಭೀತಿಯಿಂದ ಸಹಬಾಳ್ವೆ ಯನ್ನು ನಡೆಸುತ್ತಿದ್ದು, ಈ ಅಮಾನುಷ ಹತ್ಯೆ ಪ್ರಕರಣ ಜನರಲ್ಲಿ ಭಯದ ವಾತಾವರಣವನ್ನು ಸೃಷ್ಟಿಸಿದೆ.

ತಕ್ಷಣ ಕಾರ್ಯಪ್ರವೃತ್ತರಾಗಿರುವ ಪೊಲೀಸರು ಆರೋಪಿಯನ್ನು ಬೆಳಗಾವಿಯ ಕುಡುಚಿಯಲ್ಲಿ ಬಂಧಿಸಿರುವ ಬಗ್ಗೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳು ಮಾಹಿತಿ ನೀಡಿದ್ದು ಹೆಚ್ಚಿನ ಮಾಹಿತಿ ಕಲೆಹಾಕಲು ತಂಡಗಳನ್ನು ರಚಿಸಿ ಕಾರ್ಯ ಪ್ರವೃತ್ತರಾಗಿರುವುದನ್ನೂ ಖಚಿತಪಡಿಸಿದ್ದಾರೆ.

ಪೊಲೀಸರ ಪರಿಣಾಮಕಾರಿ ಕಾರ್ಯಾಚರಣೆಗೆ ಮೆಚ್ಚುಗೆ ಸೂಚಿಸುವ ಜೊತೆಗೆ ಮುಂದಿನ ದಿನಗಳಲ್ಲಿ ಇಂತಹ ಭೀಭತ್ಸ ಘಟನೆಗಳು ಶಾoತಿ ಪ್ರಿಯರ ಜಿಲ್ಲೆ ಉಡುಪಿಯಲ್ಲಿ ಮರುಕಳಿಸದಂತೆ ಇಲಾಖೆಗಳು ಕಟ್ಟುನಿಟ್ಟಿನ ಮುಂಜಾಗ್ರತಾ ಕ್ರಮಗಳನ್ನು ರೂಪಿಸುವುದು ಸೂಕ್ತ ಎಂದು ಕುಯಿಲಾಡಿ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Vishwa News 24

Recent Posts

2028ಕ್ಕೆ ರಾಜ್ಯದಲ್ಲಿ ಇದೇ ಡಿ.ಕೆ. ಶಿವಕುಮಾರ್ ಹಾಗೂ ಕಾಂಗ್ರೆಸ್ ಪಕ್ಷ  ಅಧಿಕಾರಕ್ಕೆ : ಡಿ.ಕೆ.ಶಿವಕುಮಾರ್  – vishwanews24

2028ಕ್ಕೆ ರಾಜ್ಯದಲ್ಲಿ ಇದೇ ಡಿ.ಕೆ. ಶಿವಕುಮಾರ್ ಹಾಗೂ ಕಾಂಗ್ರೆಸ್ ಪಕ್ಷ  ಅಧಿಕಾರಕ್ಕೆ : ಡಿ.ಕೆ.ಶಿವಕುಮಾರ್ ವಿಶ್ವಾಸ ಬೆಂಗಳೂರು: '2028ಕ್ಕೆ ರಾಜ್ಯದಲ್ಲಿ…

8 hours ago

ಬೆಳ್ತಂಗಡಿ : ಡೋರ್ ಲಾಕ್ ಆಗಿ ಕಾರಿನೊಳಗೆ ಸಿಲುಕಿಕೊಂಡ ಮಗು; ಗ್ಲಾಸ್ ಒಡೆದು ರಕ್ಷಣೆ – vishwanews24

ಬೆಳ್ತಂಗಡಿ : ಡೋರ್ ಲಾಕ್ ಆಗಿ ಕಾರಿನೊಳಗೆ ಸಿಲುಕಿಕೊಂಡ ಮಗು; ಗ್ಲಾಸ್ ಒಡೆದು ರಕ್ಷಣೆ ಬೆಳ್ತಂಗಡಿ: ಕುವೆಟ್ಟು ಗ್ರಾಮದ ಮದ್ದಡ್ಕದಲ್ಲಿ…

8 hours ago

ತೈಲ ದರ ಹೆಚ್ಚಳದಿಂದ ಲಾಭ ಇರೋದು ರಾಜ್ಯಕ್ಕೆ ,ಕೇಂದ್ರಕ್ಕಲ್ಲ: ಆರ್. ಅಶೋಕ್ ಸಮರ್ಥನೆ – vishwanews24

ತೈಲ ದರ ಹೆಚ್ಚಳದಿಂದ ಲಾಭ ಇರೋದು ರಾಜ್ಯಕ್ಕೆ ,ಕೇಂದ್ರಕ್ಕಲ್ಲ: ಆರ್. ಅಶೋಕ್ ಸಮರ್ಥನೆ ಬೆಂಗಳೂರು: ತೈಲ ದರ ಹೆಚ್ಚಳದಿಂದ ಕೇಂದ್ರಕ್ಕೆ…

8 hours ago

ಬಕ್ರೀದ್ ಹಬ್ಬದ ವೇಳೆ ಸಾರ್ವಜನಿಕ ಸ್ಥಳಗಳಲ್ಲಿ ಪ್ರಾಣಿ ಬಲಿ, ರಸ್ತೆ ತಡೆದು ನಮಾಝ್‌ಗೆ ಅವಕಾಶವಿಲ್ಲ: ಯೋಗಿ ಆದಿತ್ಯನಾಥ್ – vishwanews24

ಬಕ್ರೀದ್ ಹಬ್ಬದ ವೇಳೆ ಸಾರ್ವಜನಿಕ ಸ್ಥಳಗಳಲ್ಲಿ ಪ್ರಾಣಿ ಬಲಿ, ರಸ್ತೆ ತಡೆದು ನಮಾಝ್‌ಗೆ ಅವಕಾಶವಿಲ್ಲ: ಯೋಗಿ ಆದಿತ್ಯನಾಥ್ ಲಕ್ನೋ: ಬಕ್ರೀದ್…

9 hours ago

ಉಡುಪಿ : ಕೇಂದ್ರ ಮೋದಿ ಸರ್ಕಾರದಿಂದ ಪೆಟ್ರೋಲ್ ದರ ಹೆಚ್ಚಳಕ್ಕೆ ನವೀನ್ ಸಾಲಿಯಾನ್ ಖಂಡನೆ – vishwanews24

ಉಡುಪಿ : ಕೇಂದ್ರ ಮೋದಿ ಸರ್ಕಾರದಿಂದ ಪೆಟ್ರೋಲ್ ದರ ಹೆಚ್ಚಳಕ್ಕೆ ನವೀನ್ ಸಾಲಿಯಾನ್ ಖಂಡನೆ ಉಡುಪಿ: ದೇಶದಲ್ಲಿ ಮತ್ತೆ ಇಂಧನ…

9 hours ago

ಕೊಲ್ಲೂರು : ಅಪಘಾತದಿಂದ ಮೃತಪಟ್ಟ ಮಹಿಳೆಯ ಚಿನ್ನಾಭರಣ ಕಳವು ಪ್ರಕರಣ : ಆರೋಪಿ ಬಂಧನ – vishwanews24

ಕೊಲ್ಲೂರು : ಅಪಘಾತದಿಂದ ಮೃತಪಟ್ಟ ಮಹಿಳೆಯ ಚಿನ್ನಾಭರಣ ಕಳವು ಪ್ರಕರಣ : ಆರೋಪಿ ಬಂಧನ ಉಡುಪಿ: ಬೈಂದೂರು ತಾಲೂಕು ಕೊಲ್ಲೂರು…

10 hours ago