ಉಡುಪಿ : ನೇಜಾರು ಹತ್ಯೆ ಪ್ರಕರಣದ ಆರೋಪಿ ಪ್ರವೀಣ್ ಚೌಗುಲೆ ಬೆಂಗಳೂರಿನ ಪರಪ್ಪನ‌ ಅಗ್ರಹಾರ ಕೇಂದ್ರ ಕಾರಾಗೃಹಕ್ಕೆ ಸ್ಥಳಾಂತರ – vishwanews24

Featured, ಉಡುಪಿ

ಉಡುಪಿ : ನೇಜಾರು ಹತ್ಯೆ ಪ್ರಕರಣದ ಆರೋಪಿ ಪ್ರವೀಣ್ ಚೌಗುಲೆ ಬೆಂಗಳೂರಿನ ಪರಪ್ಪನ‌ ಅಗ್ರಹಾರ ಕೇಂದ್ರ ಕಾರಾಗೃಹಕ್ಕೆ ಸ್ಥಳಾಂತರ

ಉಡುಪಿ: ಪ್ರಾಣ ಭಯ ಹಾಗೂ ಭದ್ರತೆಯ ಹಿನ್ನೆಲೆಯಲ್ಲಿ ಹಿರಿಯಡ್ಕ ಜಿಲ್ಲಾ ಕಾರಾಗೃಹದಲ್ಲಿದ್ದ ನೇಜಾರಿನ ಒಂದೇ ಕುಟುಂಬದ ನಾಲ್ವರ ಹತ್ಯೆ ಪ್ರಕರಣದ ಆರೋಪಿ ಪ್ರವೀಣ್ ಚೌಗುಲೆಯನ್ನು ನ್ಯಾಯಾಲಯದ ಅನುಮತಿ ಪಡೆದು ಸೋಮವಾರ ಬೆಂಗಳೂರಿನ ಪರಪ್ಪನ‌ ಅಗ್ರಹಾರ ಕೇಂದ್ರ ಕಾರಾಗೃಹಕ್ಕೆ ಇಂದು ಸ್ಥಳಾಂತರಿಸಲಾಗಿದೆ.

ನ.22ರಿಂದ ಹಿರಿಯಡ್ಕ ಜೈಲಿನಲ್ಲಿ ನ್ಯಾಯಾಂಗ ಬಂಧನದಲ್ಲಿರುವ ಪ್ರವೀಣ್ ಚೌಗುಲೆಯನ್ನು ಗಂಭೀರ ಪ್ರಕರಣದ ಕಾರಣಕ್ಕೆ ಸುರಕ್ಷತೆಯ ಹಿನ್ನೆಲೆಯಲ್ಲಿ ಪ್ರತ್ಯೇಕ ಸೆಲ್ ಮತ್ತು ವಿಶೇಷ ಭದ್ರತೆಯೊಂದಿಗೆ ಇರಿಸಲಾಗಿತ್ತು. ಜಿಲ್ಲಾ ಕಾರಾಗೃಹದಲ್ಲಿನ ಭದ್ರತೆ ಕೊರತೆಯ ಹಿನ್ನೆಲೆಯಲ್ಲಿ ಆತನನ್ನು ಬೇರೆ ಜೈಲಿಗೆ ಸ್ಥಳಾಂತರಿಸುವ ಬಗ್ಗೆ ಜೈಲಾಧಿಕಾರಿಗಳು ಉಡುಪಿ ನ್ಯಾಯಾಲಯದಿಂದ ಅನುಮತಿಯನ್ನು ಪಡೆದುಕೊಂಡಿದ್ದರು.

ಮಂಗಳೂರು: ವಾಮಂಜೂರು ಸಮೀಪದ ಕೆತ್ತಿಕಲ್‌’ನಲ್ಲಿ ಐತಿಹಾಸಿಕ ಕಲ್ಲು ಪತ್ತೆ – vishwanews24

ಇದೀಗ ಬಂಧಿಖಾನೆ ಇಲಾಖೆಯ ಮೇಲಾಧಿಕಾರಿಗಳ ಅನುಮತಿ ಹಾಗೂ ನಿರ್ದೇಶನದಂತೆ ಇಂದು ಬೆಳಗ್ಗೆ ಪೊಲೀಸ್ ಭದ್ರತೆಯಲ್ಲಿ ಆರೋಪಿ ಪ್ರವೀಣ್ ಚೌಗುಲೆಯನ್ನು ಬೆಂಗಳೂರಿನ ಕಾರಾಗೃಹಕ್ಕೆ ಕೊಂಡೊಯ್ಯಲಾಯಿತು. ಸಂಜೆ ವೇಳೆ ಬೆಂಗಳೂರು ತಲುಪಿದ್ದು ಅಲ್ಲಿನ ಕೇಂದ್ರ ಕಾರಾಗೃಹಕ್ಕೆ ಆರೋಪಿಯನ್ನು ಹಸ್ತಾಂತರಿಸಲಾಗಿದೆ ಎಂದು ತಿಳಿದುಬಂದಿದೆ.

Leave a Reply