ಉಡುಪಿ: ಪ್ರಾಣ ಭಯ ಹಾಗೂ ಭದ್ರತೆಯ ಹಿನ್ನೆಲೆಯಲ್ಲಿ ಹಿರಿಯಡ್ಕ ಜಿಲ್ಲಾ ಕಾರಾಗೃಹದಲ್ಲಿದ್ದ ನೇಜಾರಿನ ಒಂದೇ ಕುಟುಂಬದ ನಾಲ್ವರ ಹತ್ಯೆ ಪ್ರಕರಣದ ಆರೋಪಿ ಪ್ರವೀಣ್ ಚೌಗುಲೆಯನ್ನು ನ್ಯಾಯಾಲಯದ ಅನುಮತಿ ಪಡೆದು ಸೋಮವಾರ ಬೆಂಗಳೂರಿನ ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹಕ್ಕೆ ಇಂದು ಸ್ಥಳಾಂತರಿಸಲಾಗಿದೆ.
ನ.22ರಿಂದ ಹಿರಿಯಡ್ಕ ಜೈಲಿನಲ್ಲಿ ನ್ಯಾಯಾಂಗ ಬಂಧನದಲ್ಲಿರುವ ಪ್ರವೀಣ್ ಚೌಗುಲೆಯನ್ನು ಗಂಭೀರ ಪ್ರಕರಣದ ಕಾರಣಕ್ಕೆ ಸುರಕ್ಷತೆಯ ಹಿನ್ನೆಲೆಯಲ್ಲಿ ಪ್ರತ್ಯೇಕ ಸೆಲ್ ಮತ್ತು ವಿಶೇಷ ಭದ್ರತೆಯೊಂದಿಗೆ ಇರಿಸಲಾಗಿತ್ತು. ಜಿಲ್ಲಾ ಕಾರಾಗೃಹದಲ್ಲಿನ ಭದ್ರತೆ ಕೊರತೆಯ ಹಿನ್ನೆಲೆಯಲ್ಲಿ ಆತನನ್ನು ಬೇರೆ ಜೈಲಿಗೆ ಸ್ಥಳಾಂತರಿಸುವ ಬಗ್ಗೆ ಜೈಲಾಧಿಕಾರಿಗಳು ಉಡುಪಿ ನ್ಯಾಯಾಲಯದಿಂದ ಅನುಮತಿಯನ್ನು ಪಡೆದುಕೊಂಡಿದ್ದರು.
ಇದೀಗ ಬಂಧಿಖಾನೆ ಇಲಾಖೆಯ ಮೇಲಾಧಿಕಾರಿಗಳ ಅನುಮತಿ ಹಾಗೂ ನಿರ್ದೇಶನದಂತೆ ಇಂದು ಬೆಳಗ್ಗೆ ಪೊಲೀಸ್ ಭದ್ರತೆಯಲ್ಲಿ ಆರೋಪಿ ಪ್ರವೀಣ್ ಚೌಗುಲೆಯನ್ನು ಬೆಂಗಳೂರಿನ ಕಾರಾಗೃಹಕ್ಕೆ ಕೊಂಡೊಯ್ಯಲಾಯಿತು. ಸಂಜೆ ವೇಳೆ ಬೆಂಗಳೂರು ತಲುಪಿದ್ದು ಅಲ್ಲಿನ ಕೇಂದ್ರ ಕಾರಾಗೃಹಕ್ಕೆ ಆರೋಪಿಯನ್ನು ಹಸ್ತಾಂತರಿಸಲಾಗಿದೆ ಎಂದು ತಿಳಿದುಬಂದಿದೆ.
ಉಳ್ಳಾಲ: ನಾಪತ್ತೆಯಾಗಿದ್ದ ಕುಂದಾಪುರ ಮೂಲದ ಮೀನುಗಾರನ ಮೃತದೇಹ ಪತ್ತೆ ಉಳ್ಳಾಲ : ಮೀನುಗಾರಿಕೆಗೆ ತೆರಳಿದ್ದ ವೇಳೆ ದೈತ್ಯ ಗಾತ್ರದ ಅಲೆಗೆ…
ನಿರೂಪಣಾ ವೃತ್ತಿಗೆ ಅಧಿಕೃತವಾಗಿ ನಿವೃತ್ತಿ ಘೋಷಿಸಿದ ಅನುಪಮಾ ಗೌಡ ಬೆಂಗಳೂರು : ನಟಿ ಅನುಪಮಾ ಗೌಡ ಅವರು ನಟನೆಯ ಮೂಲಕ…
ಉಪ್ಪೂರು : ವಯೋವಂದನ ಆತಿಥ್ಯ ಗೃಹ "ಸೈಟ್ ಆಫೀಸ್" ಉದ್ಘಾಟನೆ ; ರಾಷ್ಟ್ರಧ್ವಜಾರೋಹಣ, ವೃಕ್ಷಾರೋಪಣ ಕಾರ್ಯಕ್ರಮ ಉಡುಪಿ ಜಿಲ್ಲೆ ಬ್ರಹ್ಮಾವರ…
ಪುತ್ತೂರು: ಕೆಎಸ್ಆರ್ಟಿಸಿ ಬಸ್ ಮತ್ತು ಬೈಕ್ ನಡುವೆ ಭೀಕರ ಅಪಘಾತ: ಸವಾರ ಸ್ಥಳದಲ್ಲೇ ಮೃತ್ಯು ಪುತ್ತೂರು: ಕೆಯ್ಯರು ಗ್ರಾಮದ ಬೊಳಿಕ್ಕಳ…
ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ ಬೆಂಗಳೂರು : ಕೇಂದ್ರ ಸರಕಾರದ…
ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ ಬೆಂಗಳೂರು: ನಗರದ ರಾಜೇಶ್ವರಿ ನಗರದಲ್ಲಿ ಹೆಂಡತಿಯನ್ನು ಕೊಂದು ಗಂಡ…