ಉಡುಪಿ : ನೇಪಾಳದಲ್ಲಿ ನಡೆದ ಇಂಡೊ – ನೇಪಾಲ್ ತ್ರೋ ಬಾಲ್ ಚಾಂಪಿಯನ್ ಶಿಪ್ ಪಂದ್ಯಾಟದಲ್ಲಿ ಭಾರತ ಗೆಲುವಿನ ಸಾಧನೆ ಮಾಡಿದ್ದು, ತಂಡದಲ್ಲಿ ಉಡುಪಿ ಜಿಲ್ಲೆಯ ಮೂವರು ಆಟಗಾರ್ತಿಯರು ಇದ್ದು ಜಿಲ್ಲೆಗೆ ಹೆಮ್ಮೆ ತಂದಿದ್ದಾರೆ.
ನವಂಬರ್ 12 ಮತ್ತು 13 ಕ್ಕೆ ನೇಪಾಳದಲ್ಲಿ ಐದು ರಾಜ್ಯಗಳ ತ್ರೋಬಾಲ್ ಕ್ರೀಡಾಕೂಟ ನಡೆದಿದೆ. ದೇಶವನ್ನು ಪ್ರತಿನಿಧಿಸಿದ್ದ ತಂಡದಲ್ಲಿ ಕರ್ನಾಟಕದ ಮೂವರು ಯುವತಿಯರು ದೇಶಕ್ಕೆ ಗೌರವ ತಂದು ಕೊಡುವ ಕೆಲಸ ಮಾಡಿದ್ದಾರೆ. ಇಂಡೋ ನೇಪಾಳ ಚಾಂಪಿಯನ್ಶಿಪ್ ನಲ್ಲಿ ಭಾರತ ಶ್ರೀಲಂಕಾ ಬಾಂಗ್ಲಾದೇಶ ನೇಪಾಳ ಮತ್ತು ಮಲೇಶಿಯಾ ತಂಡಗಳು ಭಾಗವಹಿಸಿದ್ದವು. ಭಾರತ ಚಿನ್ನದ ಪದಕ ಗೆದ್ದು ದೊಡ್ಡ ಸಾಧನೆ ಮಾಡಿದೆ.
ಕಾಪು ತಾಲೂಕು ಶಿರ್ವದ ಶಮಿತಾ ಮತ್ತು ಧನ್ಯ, ಮುದರಂಗಡಿಯ ರಶ್ಮೀ ಥ್ರೋ ಬಾಲ್ ಚಾಂಪಿಯನ್ಶಿಪ್ ನಲ್ಲಿ ಪಾಲ್ಗೊಂಡ ಹೆಮ್ಮೆಯ ಆಟಗಾರ್ತಿಯರು. ಇವರಲ್ಲಿ ಶಮಿತಾ ರಾಜ್ಯಮಟ್ಟದ ಸ್ಪರ್ಧೆಯಲ್ಲಿ ಭಾಗವಹಿಸಿ ರಾಷ್ಟ್ರಮಟ್ಟಕ್ಕೆ ನೇರವಾಗಿ ಆಯ್ಕೆಯಾದರು.
ಪೈನಲ್ ಪಂದ್ಯಾಟದಲ್ಲಿ ಮೊದಲ ಸೆಟ್ನಲ್ಲಿ ಭಾರತ 20 ಮತ್ತು ನೇಪಾಳ 25 ಅಂಕಗಳಿಂದ ಮುನ್ನಡೆಯನ್ನು ಸಾಧಿಸಿತ್ತು. 2ನೇ ಸೆಟ್ನಲ್ಲಿ ಭಾರತ 25 ಮತ್ತು ನೇಪಾಳ 15 ಮತ್ತು ಅಂತಿಮ ಸೆಟ್ನಲ್ಲಿ ಭಾರತ 25 ಮತ್ತು ನೇಪಾಳ 18 ಅಂಕಗಳಿಂದ ಭಾರತ ತ್ರೋಬಾಲ್ ತಂಡ ಜಯಭೇರಿಯನ್ನು ಬಾರಿಸಿತು. ಪೈನಲ್ ಪಂದ್ಯಾಟದ ಉತ್ತಮ ಆಟಗಾರ್ತಿಯಾಗಿ ಸೌಂದರ್ಯ ಹಾಗೂ Best Smasher ಆಗಿ ಶಮಿತಾ ಆಯ್ಕೆಯಾದರು.
ತೆಕ್ಕಟ್ಟೆ :ನಿಯಂತ್ರಣ ತಪ್ಪಿ ಕಡಲ ತೀರಕ್ಕೆ ಬಂದು ಅಪ್ಪಳಿಸಿದ ಮೀನುಗಾರಿಕಾ ಬೋಟ್; ಮೀನುಗಾರರು ಪಾರು – Vishwanews24
ಉಡುಪಿ ಮಲಬಾರ್ ಗೋಲ್ಡ್ನಲ್ಲಿ ಹಫೀಝ್ ರೆಹಮಾನ್ಗೆ ಬೀಳ್ಕೊಡುಗೆ ಉಡುಪಿ : ಉಡುಪಿ ಮಲಬಾರ್ ಗೋಲ್ಡ್ ಆಂಡ್ ಡೈಮಂಡ್ಸ್ ಶಾಖೆಯಲ್ಲಿ ಕಳೆದ…
ಫಲ್ಗುಣಿ ನದಿಯಲ್ಲಿ ಮಗುಚಿ ಬಿದ್ದ ದೋಣಿ: ಇಬ್ಬರು ಯುವಕರು ನೀರುಪಾಲು ಮೀನುಗಾರಿಕೆಗೆ ತೆರಳಿದ್ದಾಗ ಆಕಸ್ಮಿಕವಾಗಿ ದೋಣಿ ಮುಗುಚಿ ಇಬ್ಬರು ಯುವಕರು…
ನಮ್ಮದು ಪಕ್ಷಾತೀತ ಅಭಿವೃದ್ಧಿಪರ ಸರ್ಕಾರ.. ದಲಿತರಿಗೆ ಮೀಸಲಾತಿ ತಂದವರು ನಾವು .. ರಾಜ್ಯದಲ್ಲಿ ಬಿಜೆಪಿ ಸ್ವಂತ ಬಲದಿಂದ ಯಾವತ್ತೂ ಅಧಿಕಾರಕ್ಕೆ…
ಕಾಪು : 94/ಸಿಯಡಿ ಹಕ್ಕುಪತ್ರ ; ಉಚಿತ ಉಪಕರಣಗಳ ವಿತರಣೆ ಕಾಪು : ವಿಧಾನಸಭಾ ಕ್ಷೇತ್ರದ ಕಾಪು ತಾಲ್ಲೂಕು ವ್ಯಾಪ್ತಿಯ…
ರೈಲ್ವೆ ಇಲಾಖೆಯ 5 ಹೊಸ ನಿಯಮ ಜಾರಿ: ತತ್ಕಾಲ್ ಬುಕಿಂಗ್ಗೆ ಆಧಾರ್ ಕಡ್ಡಾಯ; ರೀಫಂಡ್ ನಿಯಮ ಹೇಗಿದೆ? ರೈಲ್ವೆ ಇಲಾಖೆಯ…
ಉಡುಪಿ: ಯುವ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ ಉಡುಪಿ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ(ಕೆಯುಡಬ್ಲೂಜೆ)ದ 2024ನೇ…