ಉಡುಪಿ : ನೇಪಾಳದಲ್ಲಿ ನಡೆದ ಇಂಡೊ – ನೇಪಾಲ್ ತ್ರೋ ಬಾಲ್ ಚಾಂಪಿಯನ್ ಶಿಪ್ ಪಂದ್ಯಾಟದಲ್ಲಿ ಭಾರತ ಗೆಲುವಿನ ಸಾಧನೆ ಮಾಡಿದ್ದು, ತಂಡದಲ್ಲಿ ಉಡುಪಿ ಜಿಲ್ಲೆಯ ಮೂವರು ಆಟಗಾರ್ತಿಯರು ಇದ್ದು ಜಿಲ್ಲೆಗೆ ಹೆಮ್ಮೆ ತಂದಿದ್ದಾರೆ.
ನವಂಬರ್ 12 ಮತ್ತು 13 ಕ್ಕೆ ನೇಪಾಳದಲ್ಲಿ ಐದು ರಾಜ್ಯಗಳ ತ್ರೋಬಾಲ್ ಕ್ರೀಡಾಕೂಟ ನಡೆದಿದೆ. ದೇಶವನ್ನು ಪ್ರತಿನಿಧಿಸಿದ್ದ ತಂಡದಲ್ಲಿ ಕರ್ನಾಟಕದ ಮೂವರು ಯುವತಿಯರು ದೇಶಕ್ಕೆ ಗೌರವ ತಂದು ಕೊಡುವ ಕೆಲಸ ಮಾಡಿದ್ದಾರೆ. ಇಂಡೋ ನೇಪಾಳ ಚಾಂಪಿಯನ್ಶಿಪ್ ನಲ್ಲಿ ಭಾರತ ಶ್ರೀಲಂಕಾ ಬಾಂಗ್ಲಾದೇಶ ನೇಪಾಳ ಮತ್ತು ಮಲೇಶಿಯಾ ತಂಡಗಳು ಭಾಗವಹಿಸಿದ್ದವು. ಭಾರತ ಚಿನ್ನದ ಪದಕ ಗೆದ್ದು ದೊಡ್ಡ ಸಾಧನೆ ಮಾಡಿದೆ.
ಕಾಪು ತಾಲೂಕು ಶಿರ್ವದ ಶಮಿತಾ ಮತ್ತು ಧನ್ಯ, ಮುದರಂಗಡಿಯ ರಶ್ಮೀ ಥ್ರೋ ಬಾಲ್ ಚಾಂಪಿಯನ್ಶಿಪ್ ನಲ್ಲಿ ಪಾಲ್ಗೊಂಡ ಹೆಮ್ಮೆಯ ಆಟಗಾರ್ತಿಯರು. ಇವರಲ್ಲಿ ಶಮಿತಾ ರಾಜ್ಯಮಟ್ಟದ ಸ್ಪರ್ಧೆಯಲ್ಲಿ ಭಾಗವಹಿಸಿ ರಾಷ್ಟ್ರಮಟ್ಟಕ್ಕೆ ನೇರವಾಗಿ ಆಯ್ಕೆಯಾದರು.
ಪೈನಲ್ ಪಂದ್ಯಾಟದಲ್ಲಿ ಮೊದಲ ಸೆಟ್ನಲ್ಲಿ ಭಾರತ 20 ಮತ್ತು ನೇಪಾಳ 25 ಅಂಕಗಳಿಂದ ಮುನ್ನಡೆಯನ್ನು ಸಾಧಿಸಿತ್ತು. 2ನೇ ಸೆಟ್ನಲ್ಲಿ ಭಾರತ 25 ಮತ್ತು ನೇಪಾಳ 15 ಮತ್ತು ಅಂತಿಮ ಸೆಟ್ನಲ್ಲಿ ಭಾರತ 25 ಮತ್ತು ನೇಪಾಳ 18 ಅಂಕಗಳಿಂದ ಭಾರತ ತ್ರೋಬಾಲ್ ತಂಡ ಜಯಭೇರಿಯನ್ನು ಬಾರಿಸಿತು. ಪೈನಲ್ ಪಂದ್ಯಾಟದ ಉತ್ತಮ ಆಟಗಾರ್ತಿಯಾಗಿ ಸೌಂದರ್ಯ ಹಾಗೂ Best Smasher ಆಗಿ ಶಮಿತಾ ಆಯ್ಕೆಯಾದರು.
ತೆಕ್ಕಟ್ಟೆ :ನಿಯಂತ್ರಣ ತಪ್ಪಿ ಕಡಲ ತೀರಕ್ಕೆ ಬಂದು ಅಪ್ಪಳಿಸಿದ ಮೀನುಗಾರಿಕಾ ಬೋಟ್; ಮೀನುಗಾರರು ಪಾರು – Vishwanews24
ಉಳ್ಳಾಲ: ನಾಪತ್ತೆಯಾಗಿದ್ದ ಕುಂದಾಪುರ ಮೂಲದ ಮೀನುಗಾರನ ಮೃತದೇಹ ಪತ್ತೆ ಉಳ್ಳಾಲ : ಮೀನುಗಾರಿಕೆಗೆ ತೆರಳಿದ್ದ ವೇಳೆ ದೈತ್ಯ ಗಾತ್ರದ ಅಲೆಗೆ…
ನಿರೂಪಣಾ ವೃತ್ತಿಗೆ ಅಧಿಕೃತವಾಗಿ ನಿವೃತ್ತಿ ಘೋಷಿಸಿದ ಅನುಪಮಾ ಗೌಡ ಬೆಂಗಳೂರು : ನಟಿ ಅನುಪಮಾ ಗೌಡ ಅವರು ನಟನೆಯ ಮೂಲಕ…
ಉಪ್ಪೂರು : ವಯೋವಂದನ ಆತಿಥ್ಯ ಗೃಹ "ಸೈಟ್ ಆಫೀಸ್" ಉದ್ಘಾಟನೆ ; ರಾಷ್ಟ್ರಧ್ವಜಾರೋಹಣ, ವೃಕ್ಷಾರೋಪಣ ಕಾರ್ಯಕ್ರಮ ಉಡುಪಿ ಜಿಲ್ಲೆ ಬ್ರಹ್ಮಾವರ…
ಪುತ್ತೂರು: ಕೆಎಸ್ಆರ್ಟಿಸಿ ಬಸ್ ಮತ್ತು ಬೈಕ್ ನಡುವೆ ಭೀಕರ ಅಪಘಾತ: ಸವಾರ ಸ್ಥಳದಲ್ಲೇ ಮೃತ್ಯು ಪುತ್ತೂರು: ಕೆಯ್ಯರು ಗ್ರಾಮದ ಬೊಳಿಕ್ಕಳ…
ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ ಬೆಂಗಳೂರು : ಕೇಂದ್ರ ಸರಕಾರದ…
ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ ಬೆಂಗಳೂರು: ನಗರದ ರಾಜೇಶ್ವರಿ ನಗರದಲ್ಲಿ ಹೆಂಡತಿಯನ್ನು ಕೊಂದು ಗಂಡ…