Featured

ಉಡುಪಿ : ನೇಹಾ ಹಿರೇಮಠಳಿಗೆ ನ್ಯಾಯಕ್ಕಾಗಿ ಪ್ರತಿಭಟನೆಗಿಳಿದ ABVP – ಕಾರ್ಯಕರ್ತರ ಮೇಲೆ ಎಫ್.ಐ.ಆರ್ ವಜಾಗೊಳಿಸದಿದ್ದಲ್ಲಿ ರಾಜ್ಯಾದ್ಯಂತ ಪ್ರತಿಭಟನೆಯ ಎಚ್ಚರಿಕೆ : vishwanews24

ಉಡುಪಿ : ನೇಹಾ ಹಿರೇಮಠಳಿಗೆ ನ್ಯಾಯಕ್ಕಾಗಿ ಪ್ರತಿಭಟನೆಗಿಳಿದ ABVP ..

ಕಾರ್ಯಕರ್ತರ ಮೇಲೆ ಎಫ್.ಐ.ಆರ್ ವಜಾಗೊಳಿಸದಿದ್ದಲ್ಲಿ ರಾಜ್ಯಾದ್ಯಂತ ಪ್ರತಿಭಟನೆಯ ಎಚ್ಚರಿಕೆ : vishwanews24

ಉಡುಪಿ : ಶಾಲಾ ಕಾಲೇಜುಗಳು ಜ್ಞಾನದ ದೇಗುಲಗಳು ಇಂತಹ ದೇಗುಲದಲ್ಲಿ ಹಾಡು ಹಗಲೇ ವಿದ್ಯಾರ್ಥಿನಿ ನೇಹಾ ಹಿರೇಮಗಳನ್ನು ಭೀಕರ ಹತ್ಯೆಯನ್ನು ಮಾಡಿರುವ ಘಟನೆ ನಿಜಕ್ಕೂ ವಿದ್ಯಾರ್ಥಿ ಸಮುದಾಯದಲ್ಲಿ ಭಯದ ವಾತಾವರಣ ಮೂಡಿಸಿದಂತಾಗಿದೆ. ಕೆ.ಎಲ್.ಇ ತಾಂತ್ರಿಕ ವಿಶ್ವವಿದ್ಯಾಲಯದಲ್ಲಿ ಎಂಸಿಎ ವಿದ್ಯಾಭ್ಯಾಸ ಮಾಡುತ್ತಿದ್ದ ವಿದ್ಯಾರ್ಥಿ ನೇಹಾ ಹಿರೇಮಠ ಅವಳನ್ನು ಜಿಹಾದಿ ಕ್ರೂರ ಮನಸ್ಥಿತಿಯ ಪಯಾಜ್ ಎಂಬಾತ ಲವ್ ಜಿಹಾದಿಗಾಗಿ ಅವಳನ್ನು ಪ್ರೀತಿಸುವಂತೆ ಒತ್ತಾಯಿಸುತ್ತಿದ್ದ. ಈ ಪ್ರೀತಿಯನ್ನು ವಿದ್ಯಾರ್ಥಿನಿ ನಿರಾಕರಿಸಿದಕ್ಕಾಗಿ ಆಕೆಯ ಕಾಲೇಜಿಗೆ ಅಕ್ರಮವಾಗಿ ಪ್ರವೇಶಿಸಿ ಚಾಕುವಿನಿಂದ 9 ಬಾರಿ ಇರಿದು ಬರ್ಬರವಾಗಿ ಹತ್ಯೆ ಮಾಡಲಾಗಿದೆ.

ಕಾಲೇಜಿನ ಒಳಗೆ ಬಂದು ವಿದ್ಯಾರ್ಥಿನಿಯನ್ನು ಹತ್ಯೆ ಮಾಡಲು ಸಾಧ್ಯವಾಗಿರಬೇಕಾದರೆ ಕೊಲೆಗಾರನಿಗೆ ಕಾನೂನಿನ ಯಾವುದೇ ಭಯವೂ ಇಲ್ಲದೆ ರಾಜಾರೋಷವಾಗಿ ಕ್ರತ್ಯ ಮಾಡುವ ಸ್ಥಿತಿ ನಿರ್ಮಾಣವಾಗಿದೆ ಎಂದರೆ ನಮ್ಮ ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಎಷ್ಟು ಕುಸಿದು ಹೋಗಿದೆ ಎನ್ನುವುದು ಸ್ಪಷ್ಟವಾಗಿ ತಿಳಿಯುವಂತಾಗಿದೆ. ಈ ಘಟನೆಯಿಂದ ರಾಜ್ಯದ ವಿದ್ಯಾರ್ಥಿ ಸಮುದಾಯ ಭಯಭೀತ ಗೊಂಡಿದೆ. ಪೊಲೀಸರು ಕೂಡಲೇ ಸೂಕ್ತ ತನಿಖೆಯನ್ನು ಕೈಗೊಂಡು, ಅಪರಾಧಿಗೆ ಉಗ್ರ ಶಿಕ್ಷೆ ಆಗುವ ಹಾಗೆ ಮಾಡಿ ವಿದ್ಯಾರ್ಥಿನಿಯ ಕುಂಟುಂಬಕ್ಕೆ ನ್ಯಾಯ ಒದಗಿಸಬೇಕಾಗಿದೆ. ಜತೆಗೆ ರಾಜ್ಯಾದ್ಯಂತ ಪೊಲೀಸರು ಶಾಲಾ ಕಾಲೇಜುಗಳ ಬಳಿ ಮಪ್ತಿಯಲ್ಲಿ ಕಾರ್ಯನಿರ್ವಹಿಸಿ ಸಂಭಾವ್ಯ ಘಟನೆಗಳನ್ನು ತಡೆಯಲು ಪ್ರಯತ್ನಿಸಬೇಕು.

ಜ್ಞಾನ ದೇಗುಲವಿದು ಧೈರ್ಯವಾಗಿ ಪ್ರಶ್ನಿಸಿ ಎನ್ನುವ ರಾಜ್ಯ ಸರ್ಕಾರ ಕಾಲೇಜು ಕ್ಯಾಂಪಸ್ ನಲ್ಲಿ ವಿದ್ಯಾರ್ಥಿಗಳ ವಿರುದ್ಧ ನಡೆಯುತ್ತಿರುವ ಅನ್ಯಾಯವನ್ನು ಪ್ರಶ್ನಿಸಿದ ವಿದ್ಯಾರ್ಥಿಗಳ ಮೇಲೆ ಸರ್ಕಾರ ಕ್ರಮ ತೆಗೆದುಕೊಳ್ಳುತ್ತಿದೆ. ನೇಹಾ ಹೀರೆಮಠ ಪರವಾಗಿ ನ್ಯಾಯಕ್ಕಾಗಿ ರಾಜ್ಯಾದ್ಯಂತ ಸುಮಾರು 5 ಲಕ್ಷಕ್ಕೂ ಅಧಿಕ ಸಾಮಾನ್ಯ ವಿದ್ಯಾರ್ಥಿಗಳು ಬೀದಿಗಿಳದು ಪ್ರತಿಭಟಿಸಿದ್ದಾರೆ. ಆದರೆ ಕಾರ್ಕಳದಲ್ಲಿ ನಡೆದ ಪ್ರತಿಭಟನೆ ವಿರುದ್ಧ ಸರ್ಕಾರ FIR ದಾಖಲಿಸಿ ವಿದ್ಯಾರ್ಥಿಗಳ ಧ್ವನಿಯನ್ನು ಕುಗ್ಗಿಸುವ ಪ್ರಯತ್ನ ಮಾಡಿದ ಸರ್ಕಾರದ ನಡೆಯನ್ನು ವಿದ್ಯಾರ್ಥಿ ಪರಿಷತ್ ತೀವ್ರವಾಗಿ ಖಂಡಿಸುತ್ತದೆ.

ದಿನಾಂಕ 19-04-2024 ಶುಕ್ರವಾರ ಸಾಯಂಕಾಲ ಎಬಿವಿಪಿಯ ಕಾರ್ಕಳ ಶಾಖೆ ವತಿಯಿಂದ ಸರ್ವಜ್ಞ ವೃತ್ತದಿಂದ ಬಂಡೀಮಠದವರೆಗೆ ಪಂಜಿನ ಮೆರವಣಿಗೆ ಮೂಲಕ ಶಾಂತಿಯುತ ಪ್ರತಿಭಟನೆಯನ್ನು ನಡೆಸಲಾಗಿತ್ತು. ಇದರ ವಿರುದ್ಧ 3 ಎಬಿವಿಪಿ ಕಾರ್ಯಕರ್ತರ ಮೇಲೆ ಪೋಲೀಸ್ ಇಲಾಖೆ FIR ದಾಖಲಿಸಿರುವುದು ಖಂಡನಾರ್ಹ ಮತ್ತು ಸಮಾಜಕ್ಕೆ ಇಲಾಖೆಯ ಮೇಲೆ ತಪ್ಪು ಸಂದೇಶವನ್ನು ಕೊಡುವಂತಹದು ಆಗಿದೆ. ಆದ್ದರಿಂದ ಇಲಾಖೆ ಈ ಕೂಡಲೇ ಈ ವಿಚಾರವನ್ನು ಮರು ಪರಿಶೀಲಿಸಿ FIR ಅನ್ನು ವಜಾಗೊಳಿಸಬೇಕಾಗಿ ಎಬಿವಿಪಿ ಆಗ್ರಹಿಸುತ್ತದೆ. ತಪ್ಪಿದ್ದಲ್ಲಿ ಬೃಹತ್ ಮಟ್ಟದ ಪ್ರತಿಭಟನೆ ನಡೆಸುವುದಾಗಿ ಈ ಮೂಲಕ ಎಚ್ಚರಿಸುತ್ತೇವೆ ಎಂದು ಪತ್ರಿಕಾಗೋಷ್ಠಿಯಲ್ಲಿ ಕಾರ್ಯಕರ್ತರು ತಿಳಿಸಿದರು.

 

ಈ ಸಂಧರ್ಭದಲ್ಲಿ ಪ್ರಮುಖರಾದ ಶ್ರೀವತ್ಸ,ಹರ್ಷಿತ್ ಕೊಯ್ಲ,ಗಣೇಶ್ ಪೂಜಾರಿ,ಕುಮಾರಿ ಸಂಹಿತ ಉಪಸ್ಥಿತರಿದ್ದರು.

Vishwa News 24

Recent Posts

ಉಡುಪಿ : ಅಕ್ಕ ಕೆಫೆ ನಿರ್ವಹಣೆ ;  ಏ. 13 ರಂದು ನೇರ ಸಂದರ್ಶನ – vishwanews24

ಉಡುಪಿ : ಅಕ್ಕ ಕೆಫೆ ನಿರ್ವಹಣೆ ;  ಏ. 13 ರಂದು ನೇರ ಸಂದರ್ಶನ ಉಡುಪಿ : ರಾಷ್ಟ್ರೀಯ ಗ್ರಾಮೀಣ…

23 hours ago

ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ : ಉಡುಪಿ ಜಿಲ್ಲೆ ಪ್ರಥಮ,  ದ.ಕ ಜಿಲ್ಲೆ ದ್ವೀತಿಯ – vishwanews24

ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ : ಉಡುಪಿ ಜಿಲ್ಲೆ ಪ್ರಥಮ,  ದ.ಕ ಜಿಲ್ಲೆ ದ್ವೀತಿಯ ಬೆಂಗಳೂರು: 2025-26ನೇ ಸಾಲಿನ ದ್ವೀತಿಯ…

24 hours ago

ಗುಜರಾತಿಗಳು ಅನಕ್ಷರಸ್ಥರು ಹೇಳಿಕೆಗೆ ವಿಷಾದ ವ್ಯಕ್ತಪಡಿಸಿದ ಖರ್ಗೆ – vishwanews24

ಗುಜರಾತ್ ಜನರ ಭಾವನೆಗಳನ್ನು ನೋಯಿಸುವುದು ನನ್ನ ಉದ್ದೇಶವಾಗಿರಲಿಲ್ಲ .. ಗುಜರಾತಿಗಳು ಅನಕ್ಷರಸ್ಥರು ಹೇಳಿಕೆಗೆ ವಿಷಾದ ವ್ಯಕ್ತಪಡಿಸಿದ ಖರ್ಗೆ ಬೆಂಗಳೂರು: ಕೇರಳ…

2 days ago

ಮಂಗಳೂರು : ಗುರುಪುರ ಬಳಿ ಬಸ್ ಹಾಗೂ ಲಾರಿ ಮುಖಾಮುಖಿ ಡಿಕ್ಕಿ ; ಬಸ್ ಚಾಲಕನಿಗೆ ಗಂಭೀರ ಗಾಯ – vishwanews24

ಮಂಗಳೂರು : ಗುರುಪುರ ಬಳಿ ಬಸ್ ಹಾಗೂ ಲಾರಿ ಮುಖಾಮುಖಿ ಡಿಕ್ಕಿ ; ಬಸ್ ಚಾಲಕನಿಗೆ ಗಂಭೀರ ಗಾಯ ಮಂಗಳೂರು:…

2 days ago

ಬಾಗಲಕೋಟೆ: ಕ್ಷುಲ್ಲಕ ಕಾರಣಕ್ಕೆ ಯುವ ಪ್ರೇಮಿಗಳು ಸಾವಿಗೆ ಶರಣು – vishwanews24

ಬಾಗಲಕೋಟೆ: ಕ್ಷುಲ್ಲಕ ಕಾರಣಕ್ಕೆ ಯುವ ಪ್ರೇಮಿಗಳು ಸಾವಿಗೆ ಶರಣು ಬಾಗಲಕೋಟೆ: ಯುವ ಪ್ರೇಮಿಗಳಿಬ್ಬರು ನೇಣು ಹಾಕಿಕೊಂಡು ಸಾವಿಗೆ ಶರಣಾದಂತಹ ಆಘಾತಕಾರಿ…

2 days ago

ನಾಳೆ ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ – vishwanews24

ನಾಳೆ ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ ಬೆಂಗಳೂರು: ದ್ವಿತೀಯ ಪಿಯುಸಿ ವಿದ್ಯಾರ್ಥಿಗಳ ಬಹುದಿನಗಳ ನಿರೀಕ್ಷೆ ಕೊನೆಗೂ ಅಂತ್ಯಗೊಳ್ಳಲಿದೆ. ನಾಳೆ (ಏಪ್ರಿಲ್…

2 days ago