Featured

ಉಡುಪಿ: ನ್ಯುಮೋನಿಯಾ ಸಾವು ಶೂನ್ಯಕ್ಕೆ ತನ್ನಿ : ಜಿಲ್ಲಾಧಿಕಾರಿ ಕೂರ್ಮಾರಾವ್ ಎಂ – Vishwanews24

ಉಡುಪಿ: ನ್ಯುಮೋನಿಯಾ ಸಾವು ಶೂನ್ಯಕ್ಕೆ ತನ್ನಿ : ಜಿಲ್ಲಾಧಿಕಾರಿ ಕೂರ್ಮಾರಾವ್ ಎಂ

ಉಡುಪಿ: ಜಿಲ್ಲೆಯಲ್ಲಿ 0-5 ವರ್ಷದ ಮಕ್ಕಳು ನ್ಯುಮೋನಿಯಾದಿಂದ ಮರಣ ಹೊಂದದಂತೆ ವೈದ್ಯರು , ಆಶಾ ಮತ್ತು ಅಂಗನವಾಡಿ ಕಾರ್ಯಕರ್ತರು ಶೀಘ್ರದಲ್ಲಿ ಮಕ್ಕಳಲ್ಲಿನ ಈ ಸಮಸ್ಯೆಯನ್ನು ಪತ್ತೆ ಹಚ್ಚಿ ಸೂಕ್ತ ಚಿಕಿತ್ಸೆ ನೀಡುವಂತೆ ಹಾಗೂ ಪೋಷಕರಿಗೆ ಈ ರೋಗದ ಬಗ್ಗೆ ಜಾಗೃತಿ ಮೂಡಿಸುವ ಮೂಲಕ ಜಿಲ್ಲೆಯಲ್ಲಿ ನ್ಯುಮೋನಿಯಾ ಸಾವು ಪ್ರಕರಣಗಳನ್ನು ಶೂನ್ಯಕ್ಕೆ ತರಲು ಕಾರ್ಯ ಪ್ರವೃತ್ತರಾಗುವಂತೆ ಜಿಲ್ಲಾಧಿಕಾರಿ ಕೂರ್ಮಾರಾವ್ ಎಂ ಹೇಳಿದರು.

ಅವರು ಇಂದು ಉಡುಪಿಯ ತಾಯಿ ಮತ್ತು ಮಕ್ಕಳ ಆಸ್ಪತ್ರೆಯಲ್ಲಿ ನಡೆದ, ನ್ಯುಮೋನಿಯಾವನ್ನು ಯಶಸ್ವಿಯಾಗಿ ಕೊನೆಗಾಳಿಸಲು ಸಾಮಾಜಿಕ ಜಾಗೃತಿ ಮತ್ತು ಕ್ರಿಯಾ ಅಭಿಯಾನ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು. ಮಕ್ಕಳ ಶ್ವಾಸಕೋಶದಲ್ಲಿ ರೋಗಾಣುಗಳು ಉಲ್ಬಣವಾಗುವುದರಿಂದ ನ್ಯುಮೋನಿಯಾ ಉಂಟಾಗಲಿದ್ದು, ಇದರಿಂದ ದೇಶದಲ್ಲಿ 5 ವರ್ಷದೊಳಗಿನ ಮಕ್ಕಳು ಮರಣ ಹೊಂದುವ ಪ್ರಮಾಣ ಅಧಿಕವಾಗಿದೆ. ಈ ರೋಗ ಲಕ್ಷಣಗಳ ಬಗ್ಗೆ ಆರೋಗ್ಯ ಸಿಬ್ಬಂದಿಗೆ ತರಬೇತಿ ನೀಡಿ ಪ್ರಾರಂಭಿಕ ಹಂತದಲ್ಲಿ ಇದನ್ನು ಗುರುತಿಸಿ ಚಿಕಿತ್ಸೆ ನೀಡುವ ಮೂಲಕ ಗುಣಪಡಿಸಬಹುದಾಗಿದ್ದು,
ಅಂಗನವಾಡಿಗಳಿಗೆ ಬರುವ ಮಕ್ಕಳಲ್ಲಿ ಮತ್ತು ಆಶಾ ಕಾರ್ಯಕರ್ತೆಯರು ಮನೆ ಮನೆಗೆ ಭೇಟಿ ನೀಡುವ ಸಂದರ್ಭದಲ್ಲಿ ಕೆಮ್ಮು ಉಸಿರಾಟ ಸಮಸ್ಯೆಯಿರುವ ಮಕ್ಕಳು ಕಂಡುಬಂದಲ್ಲಿ ಕೂಡಲೇ ಸಮೀಪದ ಆರೋಗ್ಯ ಕೇಂದ್ರಗಳಿಗೆ ಮಾಹಿತಿ ನೀಡುವಂತೆ ತಿಳಿಸಿದರು.

ಉಡುಪಿ ಜಿಲ್ಲಾ ಪ್ಲವರ್ ಡೆಕೋರೇಟರ್ಸ್ ಮಾಲಕರ ಸಂಘ ಉದ್ಘಾಟನೆ ಸಮಾರಂಭ :- ಪತ್ರಿಕಾಗೋಷ್ಠಿಯಲ್ಲಿ ಅಕ್ಷಯ ಜೈನ್ – Vishwanews24

ಜಿಲ್ಲೆಯಲ್ಲಿ ನವೆಂಬರ್ 12 ರಿಂದ 2023 ರ ಫೆಬ್ರವರಿ 28 ರ ವರೆಗೆ ನಡೆಯುವ ಈ ಅಭಿಯಾನದಲ್ಲಿ ಹೆಚ್ಚಿನ ಅರಿವು ಮತ್ತು ಜಾಗೃತಿ ಕಾರ್ಯಕ್ರಮಗಳನ್ನು ಆಯೋಜಿಸಬೇಕು, ಎಲ್ಲಾ ಸ್ಥಳೀಯ ಸಂಸ್ಥೆಗಳ ಪ್ರತಿನಿಧಿಗಳು, ಸ್ವಯಂ ಸೇವಾ ಸಂಘಟನೆಗಳ ಸಹಕಾರ ಪಡೆಯುವುದರ ಜೊತೆಗೆ ಮನೆಗಳಲ್ಲಿ ಹೊಗೆ ರಹಿತ ಅಡುಗೆ ಮಾಡುವ ಬಗ್ಗೆ, ಕೈ ತೊಳೆಯುವ ವಿಧಾನ , ಸ್ವಚ್ಚತೆ ಹಾಗೂ ಶುದ್ದ ಕುಡಿಯುವ ನೀರಿನ ಬಗ್ಗೆ ಕೂಡಾ ಅರಿವು ಮೂಡಿಸಬೇಕು ಎಂದರು.

ನ್ಯುಮೋನಿಯಾ ರೋಗ ಲಕ್ಷಣಗಳ ಬಗ್ಗೆ ಮಾಹಿತಿ ನೀಡಿದ ಮಹಿಳಾ ಮತ್ತು ಮಕ್ಕಳ ಆಸ್ಪತ್ರೆಯ ಮಕ್ಕಳ ವೈದ್ಯ ಡಾ.ಮಹದೇವ ಭಟ್, 5 ವರ್ಷದೊಳಗಿನ ಮಕ್ಕಳಲ್ಲಿ ನ್ಯುಮೋನಿಯಾ ರೋಗ ಲಕ್ಷಣಗಳಾದ ಕೆಮ್ಮು, ನೆಗಡಿ, ಉಸಿರಾಟದ ತೊಂದರೆ, ಉಸಿರಾಡುವ ಸಂದರ್ಭದಲ್ಲಿ ಪಕ್ಕೆ ಅಥವಾ ಎದೆಯ ಕೆಳಗೆ ಸೆಳೆತ, ಸಾಮಾನ್ಯಕ್ಕಿಂತ ಹೆಚ್ಚಿನ ವೇಗದ ಉಸಿರಾಟ ಲಕ್ಷಣಗಳು ಇದ್ದಲ್ಲಿ ವೈದ್ಯರನ್ನು ಸಂಪರ್ಕಿಸುವಂತೆ ಮತ್ತು ಮಗುವನ್ನು ಬೆಚ್ಚಗಿಡುವುದುಮ ಮೈ ತುಂಬಾ ಬಟ್ಟೆ ಹಾಕುವುದು ಹಾಗೂ ಸಾರ್ವತ್ರಿಕ ಲಸಿಕಾ ಕಾರ್ಯಕ್ರಮದಲ್ಲಿ ನ್ಯುಮೋನಿಯಾ ತಡೆಗಟ್ಟುವ ಲಸಿಕೆಯನ್ನು ಮಕ್ಕಳಿಗೆ ಹಾಕಿಸುವಂತೆ
ತಿಳಿಸಿದರು.

ಮಂಗಳೂರು : ಕರಾವಳಿಯಲ್ಲಿ ಹರಡುತ್ತಿರುವ ಕೆಂಗಣ್ಣು ಕಾಯಿಲೆ ಸಮಸ್ಯೆ – Vishwanews24

ಕಾರ್ಯಕ್ರಮದಲ್ಲಿ ತಾಯಿ ಮತ್ತು ಮಕ್ಕಳ ಆಸ್ಪತ್ರೆಯ ಆಡಳಿತ ವೈದ್ಯಾಧಿಕಾರಿ ಡಾ.ರಾಜಗೋಪಾಲ ಭಂಡಾರಿ , ಉಡುಪಿ ತಾಲೂಕು ಆರೋಗ್ಯಾಧಿಕಾರಿ ಡಾ.ವಾಸುದೇವ ಉಪಾಧ್ಯಾಯ ಉಪಸ್ಥಿತರಿದ್ದರು. ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ (ಪ್ರಭಾರ) ಡಾ.ರಾಮರಾವ್ ಸ್ವಾಗತಿಸಿದರು. ಜಿಲ್ಲಾ ಸರ್ಜನ್ ಡಾ.ಮಧುಸೂದನ್ ನಾಯಕ್ ವಂದಿಸಿದರು. ಜಿಲ್ಲಾ ಆರ್.ಸಿ.ಹೆಚ್. ಅಧಿಕಾರಿ ಡಾ.ಎಂ.ಜಿ.ರಾಮ ನಿರೂಪಿಸಿದರು.

Vishwa News 24

Recent Posts

ಉಡುಪಿ : ಆ. 20 ರಂದು ನೇರ ಸಂದರ್ಶನ -vishwanews24

ಉಡುಪಿ : ಆ. 20 ರಂದು ನೇರ ಸಂದರ್ಶನ ಉಡುಪಿ : ನಗರದ ಅಂಬಲಪಾಡಿ ಕರಾವಳಿ ಬೈಪಾಸ್ ಬಳಿಯ ರೀಗಲ್…

13 hours ago

ಉಡುಪಿ: ಗೃಹ ಜ್ಯೋತಿ ಫಲಾನುಭವಿಗಳು ಮರುಪರಿಶೀಲನೆ ಪ್ರಕ್ರಿಯೆ ಪೂರ್ಣಗೊಳಿಸಿಕೊಳ್ಳಿ: ರಮೇಶ್ ಕಾಂಚನ್ -vishwanews24

ಉಡುಪಿ: ಗೃಹ ಜ್ಯೋತಿ ಫಲಾನುಭವಿಗಳು ಮರುಪರಿಶೀಲನೆ ಪ್ರಕ್ರಿಯೆ ಪೂರ್ಣಗೊಳಿಸಿಕೊಳ್ಳಿ: ರಮೇಶ್ ಕಾಂಚನ್ ಗೃಹ ಜ್ಯೋತಿ ಯೋಜನೆಯ ಫಲಾನುಭವಿಗಳ ಮನೆಗಳ ಮರುಪರಿಶೀಲನೆಗೆ…

13 hours ago

ಕರಾವಳಿಯಲ್ಲಿ ಹೈಕೋರ್ಟ್ ಪೀಠ ಸ್ಥಾಪನೆಗೆ ಆಗ್ರಹ: ಆ.22ರಂದು ಉಡುಪಿಯಲ್ಲಿ ಸಭೆ -vishwanews24

ಕರಾವಳಿಯಲ್ಲಿ ಹೈಕೋರ್ಟ್ ಪೀಠ ಸ್ಥಾಪನೆಗೆ ಆಗ್ರಹ: ಆ.22ರಂದು ಉಡುಪಿಯಲ್ಲಿ ಸಭೆ ಉಡುಪಿ: ಉಡುಪಿ, ದಕ್ಷಿಣ ಕನ್ನಡ ಹಾಗೂ ಉತ್ತರ ಕನ್ನಡ…

13 hours ago

ಉಡುಪಿ: ಗಣಪತಿ ಹಬ್ಬದ ಪ್ರಯುಕ್ತ ವಿಶೇಷ ರೈಲುಗಳ ಹೆಚ್ಚುವರಿ ಸಂಚಾರ -vishwanews24

ಉಡುಪಿ: ಗಣಪತಿ ಹಬ್ಬದ ಪ್ರಯುಕ್ತ ವಿಶೇಷ ರೈಲುಗಳ ಹೆಚ್ಚುವರಿ ಸಂಚಾರ ಉಡುಪಿ: ಗಣಪತಿ ಹಬ್ಬದ ಪ್ರಯುಕ್ತ ಪ್ರಯಾಣಿಕರ ಬೇಡಿಕೆಗೆ ಅನುಸಾರ…

13 hours ago

ಉಳ್ಳಾಲ: ನಾಪತ್ತೆಯಾಗಿದ್ದ ಕುಂದಾಪುರ ಮೂಲದ ಮೀನುಗಾರನ  ಮೃತದೇಹ ಪತ್ತೆ -vishwanews24

ಉಳ್ಳಾಲ: ನಾಪತ್ತೆಯಾಗಿದ್ದ ಕುಂದಾಪುರ ಮೂಲದ ಮೀನುಗಾರನ  ಮೃತದೇಹ ಪತ್ತೆ ಉಳ್ಳಾಲ : ಮೀನುಗಾರಿಕೆಗೆ ತೆರಳಿದ್ದ ವೇಳೆ ದೈತ್ಯ ಗಾತ್ರದ ಅಲೆಗೆ…

2 days ago

ನಿರೂಪಣಾ ವೃತ್ತಿಗೆ ಅಧಿಕೃತವಾಗಿ ನಿವೃತ್ತಿ ಘೋಷಿಸಿದ ಅನುಪಮಾ ಗೌಡ -vishwanews24

ನಿರೂಪಣಾ ವೃತ್ತಿಗೆ ಅಧಿಕೃತವಾಗಿ ನಿವೃತ್ತಿ ಘೋಷಿಸಿದ ಅನುಪಮಾ ಗೌಡ ಬೆಂಗಳೂರು : ನಟಿ ಅನುಪಮಾ ಗೌಡ ಅವರು ನಟನೆಯ ಮೂಲಕ…

2 days ago