Featured

ಉಡುಪಿ: ನ್ಯುಮೋನಿಯಾ ಸಾವು ಶೂನ್ಯಕ್ಕೆ ತನ್ನಿ : ಜಿಲ್ಲಾಧಿಕಾರಿ ಕೂರ್ಮಾರಾವ್ ಎಂ – Vishwanews24

ಉಡುಪಿ: ನ್ಯುಮೋನಿಯಾ ಸಾವು ಶೂನ್ಯಕ್ಕೆ ತನ್ನಿ : ಜಿಲ್ಲಾಧಿಕಾರಿ ಕೂರ್ಮಾರಾವ್ ಎಂ

ಉಡುಪಿ: ಜಿಲ್ಲೆಯಲ್ಲಿ 0-5 ವರ್ಷದ ಮಕ್ಕಳು ನ್ಯುಮೋನಿಯಾದಿಂದ ಮರಣ ಹೊಂದದಂತೆ ವೈದ್ಯರು , ಆಶಾ ಮತ್ತು ಅಂಗನವಾಡಿ ಕಾರ್ಯಕರ್ತರು ಶೀಘ್ರದಲ್ಲಿ ಮಕ್ಕಳಲ್ಲಿನ ಈ ಸಮಸ್ಯೆಯನ್ನು ಪತ್ತೆ ಹಚ್ಚಿ ಸೂಕ್ತ ಚಿಕಿತ್ಸೆ ನೀಡುವಂತೆ ಹಾಗೂ ಪೋಷಕರಿಗೆ ಈ ರೋಗದ ಬಗ್ಗೆ ಜಾಗೃತಿ ಮೂಡಿಸುವ ಮೂಲಕ ಜಿಲ್ಲೆಯಲ್ಲಿ ನ್ಯುಮೋನಿಯಾ ಸಾವು ಪ್ರಕರಣಗಳನ್ನು ಶೂನ್ಯಕ್ಕೆ ತರಲು ಕಾರ್ಯ ಪ್ರವೃತ್ತರಾಗುವಂತೆ ಜಿಲ್ಲಾಧಿಕಾರಿ ಕೂರ್ಮಾರಾವ್ ಎಂ ಹೇಳಿದರು.

ಅವರು ಇಂದು ಉಡುಪಿಯ ತಾಯಿ ಮತ್ತು ಮಕ್ಕಳ ಆಸ್ಪತ್ರೆಯಲ್ಲಿ ನಡೆದ, ನ್ಯುಮೋನಿಯಾವನ್ನು ಯಶಸ್ವಿಯಾಗಿ ಕೊನೆಗಾಳಿಸಲು ಸಾಮಾಜಿಕ ಜಾಗೃತಿ ಮತ್ತು ಕ್ರಿಯಾ ಅಭಿಯಾನ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು. ಮಕ್ಕಳ ಶ್ವಾಸಕೋಶದಲ್ಲಿ ರೋಗಾಣುಗಳು ಉಲ್ಬಣವಾಗುವುದರಿಂದ ನ್ಯುಮೋನಿಯಾ ಉಂಟಾಗಲಿದ್ದು, ಇದರಿಂದ ದೇಶದಲ್ಲಿ 5 ವರ್ಷದೊಳಗಿನ ಮಕ್ಕಳು ಮರಣ ಹೊಂದುವ ಪ್ರಮಾಣ ಅಧಿಕವಾಗಿದೆ. ಈ ರೋಗ ಲಕ್ಷಣಗಳ ಬಗ್ಗೆ ಆರೋಗ್ಯ ಸಿಬ್ಬಂದಿಗೆ ತರಬೇತಿ ನೀಡಿ ಪ್ರಾರಂಭಿಕ ಹಂತದಲ್ಲಿ ಇದನ್ನು ಗುರುತಿಸಿ ಚಿಕಿತ್ಸೆ ನೀಡುವ ಮೂಲಕ ಗುಣಪಡಿಸಬಹುದಾಗಿದ್ದು,
ಅಂಗನವಾಡಿಗಳಿಗೆ ಬರುವ ಮಕ್ಕಳಲ್ಲಿ ಮತ್ತು ಆಶಾ ಕಾರ್ಯಕರ್ತೆಯರು ಮನೆ ಮನೆಗೆ ಭೇಟಿ ನೀಡುವ ಸಂದರ್ಭದಲ್ಲಿ ಕೆಮ್ಮು ಉಸಿರಾಟ ಸಮಸ್ಯೆಯಿರುವ ಮಕ್ಕಳು ಕಂಡುಬಂದಲ್ಲಿ ಕೂಡಲೇ ಸಮೀಪದ ಆರೋಗ್ಯ ಕೇಂದ್ರಗಳಿಗೆ ಮಾಹಿತಿ ನೀಡುವಂತೆ ತಿಳಿಸಿದರು.

ಉಡುಪಿ ಜಿಲ್ಲಾ ಪ್ಲವರ್ ಡೆಕೋರೇಟರ್ಸ್ ಮಾಲಕರ ಸಂಘ ಉದ್ಘಾಟನೆ ಸಮಾರಂಭ :- ಪತ್ರಿಕಾಗೋಷ್ಠಿಯಲ್ಲಿ ಅಕ್ಷಯ ಜೈನ್ – Vishwanews24

ಜಿಲ್ಲೆಯಲ್ಲಿ ನವೆಂಬರ್ 12 ರಿಂದ 2023 ರ ಫೆಬ್ರವರಿ 28 ರ ವರೆಗೆ ನಡೆಯುವ ಈ ಅಭಿಯಾನದಲ್ಲಿ ಹೆಚ್ಚಿನ ಅರಿವು ಮತ್ತು ಜಾಗೃತಿ ಕಾರ್ಯಕ್ರಮಗಳನ್ನು ಆಯೋಜಿಸಬೇಕು, ಎಲ್ಲಾ ಸ್ಥಳೀಯ ಸಂಸ್ಥೆಗಳ ಪ್ರತಿನಿಧಿಗಳು, ಸ್ವಯಂ ಸೇವಾ ಸಂಘಟನೆಗಳ ಸಹಕಾರ ಪಡೆಯುವುದರ ಜೊತೆಗೆ ಮನೆಗಳಲ್ಲಿ ಹೊಗೆ ರಹಿತ ಅಡುಗೆ ಮಾಡುವ ಬಗ್ಗೆ, ಕೈ ತೊಳೆಯುವ ವಿಧಾನ , ಸ್ವಚ್ಚತೆ ಹಾಗೂ ಶುದ್ದ ಕುಡಿಯುವ ನೀರಿನ ಬಗ್ಗೆ ಕೂಡಾ ಅರಿವು ಮೂಡಿಸಬೇಕು ಎಂದರು.

ನ್ಯುಮೋನಿಯಾ ರೋಗ ಲಕ್ಷಣಗಳ ಬಗ್ಗೆ ಮಾಹಿತಿ ನೀಡಿದ ಮಹಿಳಾ ಮತ್ತು ಮಕ್ಕಳ ಆಸ್ಪತ್ರೆಯ ಮಕ್ಕಳ ವೈದ್ಯ ಡಾ.ಮಹದೇವ ಭಟ್, 5 ವರ್ಷದೊಳಗಿನ ಮಕ್ಕಳಲ್ಲಿ ನ್ಯುಮೋನಿಯಾ ರೋಗ ಲಕ್ಷಣಗಳಾದ ಕೆಮ್ಮು, ನೆಗಡಿ, ಉಸಿರಾಟದ ತೊಂದರೆ, ಉಸಿರಾಡುವ ಸಂದರ್ಭದಲ್ಲಿ ಪಕ್ಕೆ ಅಥವಾ ಎದೆಯ ಕೆಳಗೆ ಸೆಳೆತ, ಸಾಮಾನ್ಯಕ್ಕಿಂತ ಹೆಚ್ಚಿನ ವೇಗದ ಉಸಿರಾಟ ಲಕ್ಷಣಗಳು ಇದ್ದಲ್ಲಿ ವೈದ್ಯರನ್ನು ಸಂಪರ್ಕಿಸುವಂತೆ ಮತ್ತು ಮಗುವನ್ನು ಬೆಚ್ಚಗಿಡುವುದುಮ ಮೈ ತುಂಬಾ ಬಟ್ಟೆ ಹಾಕುವುದು ಹಾಗೂ ಸಾರ್ವತ್ರಿಕ ಲಸಿಕಾ ಕಾರ್ಯಕ್ರಮದಲ್ಲಿ ನ್ಯುಮೋನಿಯಾ ತಡೆಗಟ್ಟುವ ಲಸಿಕೆಯನ್ನು ಮಕ್ಕಳಿಗೆ ಹಾಕಿಸುವಂತೆ
ತಿಳಿಸಿದರು.

ಮಂಗಳೂರು : ಕರಾವಳಿಯಲ್ಲಿ ಹರಡುತ್ತಿರುವ ಕೆಂಗಣ್ಣು ಕಾಯಿಲೆ ಸಮಸ್ಯೆ – Vishwanews24

ಕಾರ್ಯಕ್ರಮದಲ್ಲಿ ತಾಯಿ ಮತ್ತು ಮಕ್ಕಳ ಆಸ್ಪತ್ರೆಯ ಆಡಳಿತ ವೈದ್ಯಾಧಿಕಾರಿ ಡಾ.ರಾಜಗೋಪಾಲ ಭಂಡಾರಿ , ಉಡುಪಿ ತಾಲೂಕು ಆರೋಗ್ಯಾಧಿಕಾರಿ ಡಾ.ವಾಸುದೇವ ಉಪಾಧ್ಯಾಯ ಉಪಸ್ಥಿತರಿದ್ದರು. ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ (ಪ್ರಭಾರ) ಡಾ.ರಾಮರಾವ್ ಸ್ವಾಗತಿಸಿದರು. ಜಿಲ್ಲಾ ಸರ್ಜನ್ ಡಾ.ಮಧುಸೂದನ್ ನಾಯಕ್ ವಂದಿಸಿದರು. ಜಿಲ್ಲಾ ಆರ್.ಸಿ.ಹೆಚ್. ಅಧಿಕಾರಿ ಡಾ.ಎಂ.ಜಿ.ರಾಮ ನಿರೂಪಿಸಿದರು.

Vishwa News 24

Recent Posts

ರೇಣುಕಾಸ್ವಾಮಿ ಕೊಲೆ ಪ್ರಕರಣ : ದರ್ಶನ್ ಅರ್ಜಿ ವಿಚಾರಣೆಗೆ ಅರ್ಹವಲ್ಲ: ಮತ್ತೊಮ್ಮೆ ಜಾಮೀನು ತಿರಸ್ಕರಿಸಿದ ಸುಪ್ರೀಂ – vishwanews24

 ರೇಣುಕಾಸ್ವಾಮಿ ಕೊಲೆ ಪ್ರಕರಣ : ದರ್ಶನ್ ಅರ್ಜಿ ವಿಚಾರಣೆಗೆ ಅರ್ಹವಲ್ಲ: ಮತ್ತೊಮ್ಮೆ ಜಾಮೀನು ತಿರಸ್ಕರಿಸಿದ ಸುಪ್ರೀಂ ನಟ ದರ್ಶನ್ ರೇಣುಕಾ…

2 days ago

ಗೃಹ ಜ್ಯೋತಿ ಪರಿಶೀಲನೆ: ಪ್ರವರ್ಗ ಮಾಹಿತಿ (ಜಾತಿ ಪ್ರಮಾಣಪತ್ರ) ಕಡ್ಡಾಯವಲ್ಲ : ಬೆಸ್ಕಾಂ ಸ್ಪಷ್ಟನೆ – vishwanews24

ಗೃಹ ಜ್ಯೋತಿ ಪರಿಶೀಲನೆ: ಪ್ರವರ್ಗ ಮಾಹಿತಿ (ಜಾತಿ ಪ್ರಮಾಣಪತ್ರ) ಕಡ್ಡಾಯವಲ್ಲ ಬೆಂಗಳೂರು: ರಾಜ್ಯಾದ್ಯಂತ ಜುಲೈ 1 ರಿಂದ ಆರಂಭಗೊಂಡಿರುವ ಗೃಹ ಜ್ಯೋತಿ…

2 days ago

ಎಸ್‌ಐಆರ್ ಪ್ರಕ್ರಿಯೆಯಲ್ಲಿ ಭಾರೀ ಅಕ್ರಮ : ಸಮಗ್ರ ತನಿಖೆಗೆ ಪ್ರಲ್ಹಾದ ಜೋಶಿ ಆಗ್ರಹ – vishwanews24

ಎಸ್‌ಐಆರ್ ಪ್ರಕ್ರಿಯೆಯಲ್ಲಿ ಭಾರೀ ಅಕ್ರಮ : ಸಮಗ್ರ ತನಿಖೆಗೆ ಪ್ರಲ್ಹಾದ ಜೋಶಿ ಆಗ್ರಹ ನವದೆಹಲಿ: ರಾಮನಗರ ಜಿಲ್ಲೆಯಲ್ಲಿ ನಡೆದ ಮತದಾರರ…

2 days ago

ಅಕ್ರಮ ಎಸ್‌ಐಆರ್‌ ಪ್ರಕ್ರಿಯೆ : 2028ರ ಚುನಾವಣೆ ಗೆಲ್ಲಲು ಬಾಂಗ್ಲಾದೇಶಿಯರ ಸಕ್ರಮಕ್ಕೆ ಕಾಂಗ್ರೆಸ್‌ ಸಂಚು : ಶೋಭಾ ಕರಂದ್ಲಾಜೆ ಆರೋಪ – vishwanews24

ಅಕ್ರಮ ಎಸ್‌ಐಆರ್‌ ಪ್ರಕ್ರಿಯೆ : 2028ರ ಚುನಾವಣೆ ಗೆಲ್ಲಲು ಬಾಂಗ್ಲಾದೇಶಿಯರ ಸಕ್ರಮಕ್ಕೆ ಕಾಂಗ್ರೆಸ್‌ ಸಂಚು : ಶೋಭಾ ಕರಂದ್ಲಾಜೆ ಗಂಭೀರ…

2 days ago

ಮೈಸೂರು ದಸರಾದಲ್ಲಿ ಕಂಬಳ ಆಯೋಜನೆ: ಸಂಸದ ಯದುವೀರ್ ಒಡೆಯರ್ ಆಕ್ಷೇಪ – vishwanews24

ಮೂಲ ನೆಲದಿಂದ ಬೇರ್ಪಡಿಸಿ ಕರಾವಳಿಯ ಮಣ್ಣಿನ ಸಂಸ್ಕೃತಿಯ ಪಾವಿತ್ರ್ಯಕ್ಕೆ ಧಕ್ಕೆ ತರಬೇಡಿ .. ಕರಾವಳಿ ಕಂಬಳವು ತನ್ನದೇ ಆದ ಆಳವಾದ ಸಾಂಪ್ರದಾಯಿಕ…

2 days ago

ಮಂಗಳೂರು:ಸಾಮಾಜಿಕ ಜಾಲತಾಣಗಳಲ್ಲಿ ಸೆಲಿನಾ ಟ್ರಾವೆಲ್ಸ್ ವಿರುದ್ಧ ಹರಿದಾಡಿದ ಕರಪತ್ರ : ಪೊಲೀಸ್ ಇಲಾಖೆ ಸ್ಪಷ್ಟನೆ – vishwanews24

ಮಂಗಳೂರು:ಸಾಮಾಜಿಕ ಜಾಲತಾಣಗಳಲ್ಲಿ ಸೆಲಿನಾ ಟ್ರಾವೆಲ್ಸ್ ವಿರುದ್ಧ ಹರಿದಾಡಿದ ಕರಪತ್ರ : ಪೊಲೀಸ್ ಇಲಾಖೆ ಸ್ಪಷ್ಟನೆ ಮಂಗಳೂರು: ಖಾಸಗಿ ಸಾರಿಗೆ ಸಂಸ್ಥೆಯಾದ…

3 days ago