Featured

ಉಡುಪಿ: ನ.14ರಿಂದ 20ರವರೆಗೆ 72ನೇ ಅಖಿಲ ಭಾರತ ಸಹಕಾರ ಸಪ್ತಾಹ – vishwanews24

ಉಡುಪಿ: ನ.14ರಿಂದ 20ರವರೆಗೆ 72ನೇ ಅಖಿಲ ಭಾರತ ಸಹಕಾರ ಸಪ್ತಾಹ

ಉಡುಪಿ: ಕರ್ನಾಟಕ ರಾಜ್ಯ ಸಹಕಾರ ಮಹಾಮಂಡಳ ನಿ. ಬೆಂಗಳೂರು, ಉಡುಪಿ ಜಿಲ್ಲಾ ಸಹಕಾರ ಯೂನಿಯನ್, ಸಹಕಾರ ಇಲಾಖೆ ಹಾಗೂ ಉಡುಪಿ ಜಿಲ್ಲೆಯ ವಿವಿಧ ಸಹಕಾರ ಸಂಸ್ಥೆಗಳ ಸಹಯೋಗದೊಂದಿಗೆ ಇದೇ ನ. 14ರಿಂದ 20ರವರೆಗೆ ಉಡುಪಿ ಜಿಲ್ಲೆಯಾದ್ಯಂತ 72ನೇ ಅಖಿಲ ಭಾರತ ಸಹಕಾರ ಸಪ್ತಾಹ ಕಾರ್ಯಕ್ರಮ ನಡೆಯಲಿದೆ ಎಂದು ಉಡುಪಿ ಜಿಲ್ಲಾ ಸಹಕಾರ ಯೂನಿಯನ್ ಅಧ್ಯಕ್ಷರಾದ ಜಯಕರ ಶೆಟ್ಟಿ ಇಂದ್ರಾಳಿ ಹೇಳಿದರು.

ಈ ಕುರಿತು‌ ಉಡುಪಿ ಪತ್ರಿಕಾ ಭವನದಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಸಪ್ತಾಹದ ಅವಧಿಯಲ್ಲಿ ಪ್ರತಿಯೊಂದು ಸಹಕಾರ ಸಂಘದ ಕಚೇರಿಯ ಆವರಣದಲ್ಲಿ ಏಳು ಬಣ್ಣಗಳ ಸಹಕಾರ ಧ್ವಜವನ್ನು ಹಾರಿಸಲಾಗುವುದು ಮತ್ತು ಸಹಕಾರ ವಿಚಾರಗಳನ್ನು ಸಾರ್ವಜನಿಕರಿಗೆ ತಿಳಿಯಪಡಿಸಲು ಸಹಕಾರ ಪ್ರಚಾರ ರಥವನ್ನು 7 ದಿನಗಳ ಕಾಲ ಸಹಕಾರ ಸಪ್ತಾಹ ನಡೆಯುವ ಸ್ಥಳಗಳಿಗೆ ಕಳುಹಿಸಲಾಗುತ್ತಿದೆ ಎಂದರು.

ನ.14ರಂದು ಬೆಳಿಗ್ಗೆ 10.30ಕ್ಕೆ ಮಂದಾರ್ತಿಯ ಶ್ರೀದುರ್ಗಾ ಸಹಕಾರ ಸೌಧದ ಶ್ರೀ ಚಾಮುಂಡೇಶ್ವರಿ ಸಭಾಂಗಣದಲ್ಲಿ‌ ಸಹಕಾರ ಸಪ್ತಾಹದ ಉದ್ಘಾಟನಾ ಸಮಾರಂಭ ನಡೆಯಲಿದೆ. ಕರ್ನಾಟಕ ರಾಜ್ಯ ಸಹಕಾರ ಮಹಾಮಂಡಳದ ಅಧ್ಯಕ್ಷರಾದ ಡಾ. ಎಂ.ಎನ್. ರಾಜೇಂದ್ರ ಕುಮಾರ್ ಅವರು ಸಹಕಾರ ಸಪ್ತಾಹವನ್ನು ಉದ್ಘಾಟಿಸಲಿದ್ದಾರೆ. ಕುಂದಾಪುರ ಶಾಸಕ ಕಿರಣ್ ಕುಮಾರ್ ಕೊಡ್ಗಿ ಅಧ್ಯಕ್ಷತೆ ವಹಿಸಲಿದ್ದಾರೆ. ಸಭಾಕಾರ್ಯಕ್ರಮಕ್ಕೂ ಮೊದಲು ಒಂದು ವಾರ ಜಿಲ್ಲೆಯಾದ್ಯಂತ ಸಂಚರಿಸುವ ಸಹಕಾರ ರಥಕ್ಕೆ ಚಾಲನೆ ನೀಡಲಾಗುವುದು ಎಂದು ತಿಳಿಸಿದರು.

ನ.15ರಂದು ಮಧ್ಯಾಹ್ನ‌ 3ಗಂಟೆಗೆ ಹೆಮ್ಮಾಡಿಯ ಮತ್ಸ್ಯ ಜ್ಯೋತಿ ಸಭಾಂಗಣದಲ್ಲಿ “ತ್ರಿಭುವನ್ ಸಹಕಾರ ವಿಶ್ವವಿದ್ಯಾಲಯ: ಸಂಶೋಧನೆ ಮತ್ತು ತರಬೇತಿಯಿಂದ ಸಹಕಾರ ಶಿಕ್ಷಣದಲ್ಲಿ ಪರಿವರ್ತನೆ” ಎಂಬ ವಿಷಯದೊಂದಿಗೆ ಎರಡನೇ ದಿನದ ಕಾರ್ಯಕ್ರಮವನ್ನು ಆಯೋಜಿಸಲಾಗಿದೆ. ನ.16ರಂದು ಬೆಳಿಗ್ಗೆ ಮಂಗಳೂರಿನ ಕರಾವಳಿ ಉತ್ಸವ ಮೈದಾನದಲ್ಲಿ ‘ಸಹಕಾರ ಸಂಸ್ಥೆಗಳ ಮೂಲಕ ಗ್ರಾಮೀಣ ಅಭಿವೃದ್ಧಿಯ ಬಲವರ್ಧನೆ” ಎಂಬ ವಿಷಯದೊಂದಿಗೆ ರಾಜ್ಯಮಟ್ಟದ ಸಹಕಾರ ಸಪ್ತಾಹ ಕಾರ್ಯಕ್ರಮ ನಡೆಯಲಿದೆ. ಅಂದು ಉಡುಪಿ ಜಿಲ್ಲೆಯಲ್ಲಿ ಯಾವುದೇ ಕಾರ್ಯಕ್ರಮ ಇರುವುದಿಲ್ಲ ಎಂದರು.

ನ.17ರಂದು ಬೆಳಿಗ್ಗೆ 9.30ಕ್ಕೆ ಪಡುಬಿದ್ರೆ ಸಹಕಾರಿ ವ್ಯವಸಾಯಿಕ ಸೊಸೈಟಿಯ ವೈ ಲಕ್ಷ್ಮಣ ಸಭಾಂಗಣದಲ್ಲಿ ‘ರಾಷ್ಟ್ರೀಯ ಸಹಕಾರ ನೀತಿಯ ಪರಿಸರ ವ್ಯವಸ್ಥೆ ಭಾರತದ ಸಹಕಾರ ಸಂಸ್ಥೆಗಳ ರಚನಾತ್ಮಕ ಮಾರ್ಗಸೂಚಿ’ ಎಂಬ ವಿಷಯದೊಂದಿಗೆ ನಾಲ್ಕನೇ ದಿನದ ಕಾರ್ಯಕ್ರಮ ಜರುಗಲಿದೆ. ನ.18ರಂದು ಮಧ್ಯಾಹ್ನ 3ಗಂಟೆಗೆ ಕೊರಂಗ್ರಪಾಡಿ ಸಹಕಾರಿ ವ್ಯವಸಾಯಿಕ ಸಂಘದ ಸಮೃದ್ಧಿ ಸಹಕಾರ ಸೌಧದಲ್ಲಿ ‘ಸಹಕಾರಿ ಉದ್ಯಮ ಶೀಲತೆಯಿಂದ ಯುವಜನ, ಮಹಿಳಾ ಮತ್ತು ಅಬಲ ವರ್ಗದ ಸಬಲೀಕರಣ’ ಎಂಬ ವಿಷಯದೊಂದಿಗೆ ಐದನೇ ದಿನದ ಕಾರ್ಯಕ್ರಮ ನಡೆಯಲಿದೆ. ನ.19ರಂದು ಬೆಳಿಗ್ಗೆ 10.30ಕ್ಕೆ ಹೆಬ್ರಿಯ ಬಂಟರ ಭವನದಲ್ಲಿ ‘ಪ್ರವಾಸೋದ್ಯಮ, ಆರೋಗ್ಯ, ಹಸಿರು ಇಂಧನ, ಫ್ಲಾಟ್ ಫಾರಂ ಸಹಕಾರಿ ಸಂಸ್ಥೆಗಳು, ಕಿಚನ್ ಸಹಕಾರ ಸಂಘಗಳು ಮತ್ತಿತರ ಉದಯೋನ್ಮುಖ ಸಹಕಾರ ಸಂಘಗಳನ್ನು ಅನುಕೂಲಕರ ಪ್ರದೇಶಗಳಿಗೆ ವಿಸ್ತರಣೆ” ಎಂಬ ವಿಷಯದೊಂದಿಗೆ ಆರನೇ ದಿನದ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ. ಹಾಗೆಯೇ ನ. 20ರಂದು ಬೆಳಿಗ್ಗೆ 10.30ಕ್ಕೆ ನಾಗೂರು ಒಡೆಯರಮಠ ಶ್ರೀಗೋಪಾಲಕೃಷ್ಣ ಕಲಾಮಂದಿರದಲ್ಲಿ ” ಜಾಗತಿಕ ಸ್ಪರ್ಧಾತ್ಮಕತೆಗಾಗಿ ನವನವೀನ್ಯತೆಯ ಸಹಕಾರಿ ವ್ಯವಹಾರದ ಮಾದರಿಗಳು’ ಎಂಬ ವಿಷಯದೊಂದಿಗೆ ಸಪ್ತಾಹದ ಸಮಾರೋಪ ಸಮಾರಂಭ ನಡೆಯಲಿದೆ. ಬೈಂದೂರು ಶಾಸಕ ಗುರುರಾಜ್ ಗಂಟಿಹೊಳೆ ಕಾರ್ಯಕ್ರಮವನ್ನು ಉದ್ಘಾಟಿಸಲಿದ್ದಾರೆ ಎಂದು ಅವರು ತಿಳಿಸಿದರು.
ಸುದ್ದಿಗೋಷ್ಠಿಯಲ್ಲಿ ಸಹಕಾರ ಯೂನಿಯನ್ ನಿರ್ದೇಶಕರಾದ ಹರೀಶ್ ಕಿಣಿ ಅಲೆವೂರು, ವೈ ಸುಧೀರ್ ಕುಮಾರ್, ಮುಖ್ಯ ಕಾರ್ಯನಿರ್ವಾಹಣಾಧಿಕಾರಿ ಅನುಷಾ ಕೋಟ್ಯಾನ್, ಮ್ಯಾನೇಜರ್ ವಿಶ್ವನಾಥ್ ಇದ್ದರು.

Vishwa News 24

Recent Posts

ಉಡುಪಿ ಜಿಲ್ಲೆಯ ನಿರ್ಲಕ್ಷ್ಯ : ಮೇ 16ರಂದು ಜಿಲ್ಲಾ ಉಸ್ತುವಾರಿ ಸಚಿವರಿಗೆ ಕಪ್ಪು ಬಾವುಟ ಪ್ರದರ್ಶಿಸಿ ಪ್ರತಿಭಟನೆ :  ಪೃಥ್ವಿರಾಜ್ ಶೆಟ್ಟಿ ಬಿಲ್ಲಾಡಿ – vishwanews24

ಉಡುಪಿ ಜಿಲ್ಲೆಯ ನಿರ್ಲಕ್ಷ್ಯ : ಮೇ 16ರಂದು ಜಿಲ್ಲಾ ಉಸ್ತುವಾರಿ ಸಚಿವರಿಗೆ ಕಪ್ಪು ಬಾವುಟ ಪ್ರದರ್ಶಿಸಿ ಪ್ರತಿಭಟನೆ :  ಪೃಥ್ವಿರಾಜ್…

9 hours ago

ಜನಿವಾರ, ಹಿಜಾಬ್, ಉಡುದಾರ, ರುದ್ರಾಕ್ಷಿ ಹಾಕಿಕೊಳ್ಳಬಹುದು ಹೊರತು ಕೇಸರಿ ಶಾಲಿಗೆ ಅವಕಾಶ ಇಲ್ಲ : ಸಿಎಂ ಸ್ಪಷ್ಟನೆ – vishwanews24

ಸಾಂಪ್ರದಾಯಿಕ ಧಾರ್ಮಿಕ ಸಂಕೇತಗಳನ್ನು ಧರಿಸಬಹುದು, ಹೊಸದಾಗಿ ಮಾಡುವಂತಿಲ್ಲ : ಸಿಎಂ ಸ್ಪಷ್ಟನೆ ಮೈಸೂರು : "ಪ್ರಾಥಮಿಕ ತರಗತಿಯಿಂದ 12ನೇ ತರಗತಿಯವರೆಗೆ…

11 hours ago

ಮದ್ಯ ಖರೀದಿ, ಮಾರಾಟ ಮಾಡಲು 21 ವರ್ಷ ಕಡ್ಡಾಯ : ತಮಿಳುನಾಡು ಸರ್ಕಾರ ಆದೇಶ – vishwanews24

ಮದ್ಯ ಖರೀದಿ, ಮಾರಾಟ ಮಾಡಲು 21 ವರ್ಷ ಕಡ್ಡಾಯ :  ಸಿಎಂ ವಿಜಯ್ ಸರ್ಕಾರ ಆದೇಶ ಚೆನ್ನೈ: ಇನ್ನು ಮುಂದೆ…

11 hours ago

ಇಂದಿರಾ ಗಾಂಧಿ ನಂತರ ಯಾರಾದ್ರೂ ಮಾಸ್ ಲೀಡರ್ ಇದ್ರೆ, ಅದು ಮೋದಿ ಮಾತ್ರ: ಕೆ.ಎನ್‌ ರಾಜಣ್ಣ – vishwanews24

ಇಂದಿರಾ ಗಾಂಧಿ ನಂತರ ಯಾರಾದ್ರೂ ಮಾಸ್ ಲೀಡರ್ ಇದ್ರೆ, ಅದು ಮೋದಿ ಮಾತ್ರ: ಕೆ.ಎನ್‌ ರಾಜಣ್ಣ ನಾನು ಮೋದಿಯವರನ್ನು ಹೊಗಳುತ್ತಿಲ್ಲ.…

11 hours ago

ಸಕ್ಕರೆ ರಫ್ತಿಗೆ ಸೆ.30 ರವರೆಗೆ ಸಂಪೂರ್ಣ ನಿಷೇಧ ಹೇರಿದ ಸರ್ಕಾರ – vishwanews24

ಸಕ್ಕರೆ ರಫ್ತಿಗೆ ಸೆ.30 ರವರೆಗೆ ಸಂಪೂರ್ಣ ನಿಷೇಧ ಹೇರಿದ ಸರ್ಕಾರ ನವದೆಹಲಿ: ದೇಶೀಯ ಮಾರುಕಟ್ಟೆಯಲ್ಲಿ ಸಕ್ಕರೆ ಬೆಲೆಯನ್ನು ನಿಯಂತ್ರಿಸಲು ಮತ್ತು…

11 hours ago

ಹಿಜಬ್‌ಗೆ ಅವಕಾಶ :ಪ್ರಣಾಳಿಕೆಯಲ್ಲಿ ಸಮಾನತೆಯ ಮಾತು ಕೊಟ್ಟಿದ್ವಿ , ಯಾವುದೇ ಕಾರಣಕ್ಕೂ ಆದೇಶ ವಾಪಸ್ ಪಡೆಯಲ್ಲ : ಮಧು ಬಂಗಾರಪ್ಪ – vishwanews24

ಹಿಜಬ್ ಬಗ್ಗೆ ಮಾತಾಡುವ ಬಿಜೆಪಿಯವರು  ನೀಟ್ ಬಗ್ಗೆ ಮಾತಾಡಲಿ : ಮಧು ಬಂಗಾರಪ್ಪ ಆಕ್ರೋಶ ಬೆಂಗಳೂರು: ಹಿಜಬ್ ಬಗ್ಗೆ ಮಾತಾಡುವ…

11 hours ago