Featured

ಉಡುಪಿ: ನ.14ರಿಂದ 20ರವರೆಗೆ 72ನೇ ಅಖಿಲ ಭಾರತ ಸಹಕಾರ ಸಪ್ತಾಹ – vishwanews24

ಉಡುಪಿ: ನ.14ರಿಂದ 20ರವರೆಗೆ 72ನೇ ಅಖಿಲ ಭಾರತ ಸಹಕಾರ ಸಪ್ತಾಹ

ಉಡುಪಿ: ಕರ್ನಾಟಕ ರಾಜ್ಯ ಸಹಕಾರ ಮಹಾಮಂಡಳ ನಿ. ಬೆಂಗಳೂರು, ಉಡುಪಿ ಜಿಲ್ಲಾ ಸಹಕಾರ ಯೂನಿಯನ್, ಸಹಕಾರ ಇಲಾಖೆ ಹಾಗೂ ಉಡುಪಿ ಜಿಲ್ಲೆಯ ವಿವಿಧ ಸಹಕಾರ ಸಂಸ್ಥೆಗಳ ಸಹಯೋಗದೊಂದಿಗೆ ಇದೇ ನ. 14ರಿಂದ 20ರವರೆಗೆ ಉಡುಪಿ ಜಿಲ್ಲೆಯಾದ್ಯಂತ 72ನೇ ಅಖಿಲ ಭಾರತ ಸಹಕಾರ ಸಪ್ತಾಹ ಕಾರ್ಯಕ್ರಮ ನಡೆಯಲಿದೆ ಎಂದು ಉಡುಪಿ ಜಿಲ್ಲಾ ಸಹಕಾರ ಯೂನಿಯನ್ ಅಧ್ಯಕ್ಷರಾದ ಜಯಕರ ಶೆಟ್ಟಿ ಇಂದ್ರಾಳಿ ಹೇಳಿದರು.

ಈ ಕುರಿತು‌ ಉಡುಪಿ ಪತ್ರಿಕಾ ಭವನದಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಸಪ್ತಾಹದ ಅವಧಿಯಲ್ಲಿ ಪ್ರತಿಯೊಂದು ಸಹಕಾರ ಸಂಘದ ಕಚೇರಿಯ ಆವರಣದಲ್ಲಿ ಏಳು ಬಣ್ಣಗಳ ಸಹಕಾರ ಧ್ವಜವನ್ನು ಹಾರಿಸಲಾಗುವುದು ಮತ್ತು ಸಹಕಾರ ವಿಚಾರಗಳನ್ನು ಸಾರ್ವಜನಿಕರಿಗೆ ತಿಳಿಯಪಡಿಸಲು ಸಹಕಾರ ಪ್ರಚಾರ ರಥವನ್ನು 7 ದಿನಗಳ ಕಾಲ ಸಹಕಾರ ಸಪ್ತಾಹ ನಡೆಯುವ ಸ್ಥಳಗಳಿಗೆ ಕಳುಹಿಸಲಾಗುತ್ತಿದೆ ಎಂದರು.

ನ.14ರಂದು ಬೆಳಿಗ್ಗೆ 10.30ಕ್ಕೆ ಮಂದಾರ್ತಿಯ ಶ್ರೀದುರ್ಗಾ ಸಹಕಾರ ಸೌಧದ ಶ್ರೀ ಚಾಮುಂಡೇಶ್ವರಿ ಸಭಾಂಗಣದಲ್ಲಿ‌ ಸಹಕಾರ ಸಪ್ತಾಹದ ಉದ್ಘಾಟನಾ ಸಮಾರಂಭ ನಡೆಯಲಿದೆ. ಕರ್ನಾಟಕ ರಾಜ್ಯ ಸಹಕಾರ ಮಹಾಮಂಡಳದ ಅಧ್ಯಕ್ಷರಾದ ಡಾ. ಎಂ.ಎನ್. ರಾಜೇಂದ್ರ ಕುಮಾರ್ ಅವರು ಸಹಕಾರ ಸಪ್ತಾಹವನ್ನು ಉದ್ಘಾಟಿಸಲಿದ್ದಾರೆ. ಕುಂದಾಪುರ ಶಾಸಕ ಕಿರಣ್ ಕುಮಾರ್ ಕೊಡ್ಗಿ ಅಧ್ಯಕ್ಷತೆ ವಹಿಸಲಿದ್ದಾರೆ. ಸಭಾಕಾರ್ಯಕ್ರಮಕ್ಕೂ ಮೊದಲು ಒಂದು ವಾರ ಜಿಲ್ಲೆಯಾದ್ಯಂತ ಸಂಚರಿಸುವ ಸಹಕಾರ ರಥಕ್ಕೆ ಚಾಲನೆ ನೀಡಲಾಗುವುದು ಎಂದು ತಿಳಿಸಿದರು.

ನ.15ರಂದು ಮಧ್ಯಾಹ್ನ‌ 3ಗಂಟೆಗೆ ಹೆಮ್ಮಾಡಿಯ ಮತ್ಸ್ಯ ಜ್ಯೋತಿ ಸಭಾಂಗಣದಲ್ಲಿ “ತ್ರಿಭುವನ್ ಸಹಕಾರ ವಿಶ್ವವಿದ್ಯಾಲಯ: ಸಂಶೋಧನೆ ಮತ್ತು ತರಬೇತಿಯಿಂದ ಸಹಕಾರ ಶಿಕ್ಷಣದಲ್ಲಿ ಪರಿವರ್ತನೆ” ಎಂಬ ವಿಷಯದೊಂದಿಗೆ ಎರಡನೇ ದಿನದ ಕಾರ್ಯಕ್ರಮವನ್ನು ಆಯೋಜಿಸಲಾಗಿದೆ. ನ.16ರಂದು ಬೆಳಿಗ್ಗೆ ಮಂಗಳೂರಿನ ಕರಾವಳಿ ಉತ್ಸವ ಮೈದಾನದಲ್ಲಿ ‘ಸಹಕಾರ ಸಂಸ್ಥೆಗಳ ಮೂಲಕ ಗ್ರಾಮೀಣ ಅಭಿವೃದ್ಧಿಯ ಬಲವರ್ಧನೆ” ಎಂಬ ವಿಷಯದೊಂದಿಗೆ ರಾಜ್ಯಮಟ್ಟದ ಸಹಕಾರ ಸಪ್ತಾಹ ಕಾರ್ಯಕ್ರಮ ನಡೆಯಲಿದೆ. ಅಂದು ಉಡುಪಿ ಜಿಲ್ಲೆಯಲ್ಲಿ ಯಾವುದೇ ಕಾರ್ಯಕ್ರಮ ಇರುವುದಿಲ್ಲ ಎಂದರು.

ನ.17ರಂದು ಬೆಳಿಗ್ಗೆ 9.30ಕ್ಕೆ ಪಡುಬಿದ್ರೆ ಸಹಕಾರಿ ವ್ಯವಸಾಯಿಕ ಸೊಸೈಟಿಯ ವೈ ಲಕ್ಷ್ಮಣ ಸಭಾಂಗಣದಲ್ಲಿ ‘ರಾಷ್ಟ್ರೀಯ ಸಹಕಾರ ನೀತಿಯ ಪರಿಸರ ವ್ಯವಸ್ಥೆ ಭಾರತದ ಸಹಕಾರ ಸಂಸ್ಥೆಗಳ ರಚನಾತ್ಮಕ ಮಾರ್ಗಸೂಚಿ’ ಎಂಬ ವಿಷಯದೊಂದಿಗೆ ನಾಲ್ಕನೇ ದಿನದ ಕಾರ್ಯಕ್ರಮ ಜರುಗಲಿದೆ. ನ.18ರಂದು ಮಧ್ಯಾಹ್ನ 3ಗಂಟೆಗೆ ಕೊರಂಗ್ರಪಾಡಿ ಸಹಕಾರಿ ವ್ಯವಸಾಯಿಕ ಸಂಘದ ಸಮೃದ್ಧಿ ಸಹಕಾರ ಸೌಧದಲ್ಲಿ ‘ಸಹಕಾರಿ ಉದ್ಯಮ ಶೀಲತೆಯಿಂದ ಯುವಜನ, ಮಹಿಳಾ ಮತ್ತು ಅಬಲ ವರ್ಗದ ಸಬಲೀಕರಣ’ ಎಂಬ ವಿಷಯದೊಂದಿಗೆ ಐದನೇ ದಿನದ ಕಾರ್ಯಕ್ರಮ ನಡೆಯಲಿದೆ. ನ.19ರಂದು ಬೆಳಿಗ್ಗೆ 10.30ಕ್ಕೆ ಹೆಬ್ರಿಯ ಬಂಟರ ಭವನದಲ್ಲಿ ‘ಪ್ರವಾಸೋದ್ಯಮ, ಆರೋಗ್ಯ, ಹಸಿರು ಇಂಧನ, ಫ್ಲಾಟ್ ಫಾರಂ ಸಹಕಾರಿ ಸಂಸ್ಥೆಗಳು, ಕಿಚನ್ ಸಹಕಾರ ಸಂಘಗಳು ಮತ್ತಿತರ ಉದಯೋನ್ಮುಖ ಸಹಕಾರ ಸಂಘಗಳನ್ನು ಅನುಕೂಲಕರ ಪ್ರದೇಶಗಳಿಗೆ ವಿಸ್ತರಣೆ” ಎಂಬ ವಿಷಯದೊಂದಿಗೆ ಆರನೇ ದಿನದ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ. ಹಾಗೆಯೇ ನ. 20ರಂದು ಬೆಳಿಗ್ಗೆ 10.30ಕ್ಕೆ ನಾಗೂರು ಒಡೆಯರಮಠ ಶ್ರೀಗೋಪಾಲಕೃಷ್ಣ ಕಲಾಮಂದಿರದಲ್ಲಿ ” ಜಾಗತಿಕ ಸ್ಪರ್ಧಾತ್ಮಕತೆಗಾಗಿ ನವನವೀನ್ಯತೆಯ ಸಹಕಾರಿ ವ್ಯವಹಾರದ ಮಾದರಿಗಳು’ ಎಂಬ ವಿಷಯದೊಂದಿಗೆ ಸಪ್ತಾಹದ ಸಮಾರೋಪ ಸಮಾರಂಭ ನಡೆಯಲಿದೆ. ಬೈಂದೂರು ಶಾಸಕ ಗುರುರಾಜ್ ಗಂಟಿಹೊಳೆ ಕಾರ್ಯಕ್ರಮವನ್ನು ಉದ್ಘಾಟಿಸಲಿದ್ದಾರೆ ಎಂದು ಅವರು ತಿಳಿಸಿದರು.
ಸುದ್ದಿಗೋಷ್ಠಿಯಲ್ಲಿ ಸಹಕಾರ ಯೂನಿಯನ್ ನಿರ್ದೇಶಕರಾದ ಹರೀಶ್ ಕಿಣಿ ಅಲೆವೂರು, ವೈ ಸುಧೀರ್ ಕುಮಾರ್, ಮುಖ್ಯ ಕಾರ್ಯನಿರ್ವಾಹಣಾಧಿಕಾರಿ ಅನುಷಾ ಕೋಟ್ಯಾನ್, ಮ್ಯಾನೇಜರ್ ವಿಶ್ವನಾಥ್ ಇದ್ದರು.

Vishwa News 24

Recent Posts

ಇಸ್ಲಾಂ ಧರ್ಮದಲ್ಲಿ ಹಿಜಾಬ್ ಕಡ್ಡಾಯವಲ್ಲ: ಅಲಹಾಬಾದ್ ಹೈಕೋರ್ಟ್ – vishwanews24

ಇಸ್ಲಾಂ ಧರ್ಮದಲ್ಲಿ ಹಿಜಾಬ್ ಕಡ್ಡಾಯವಲ್ಲ: ಅಲಹಾಬಾದ್ ಹೈಕೋರ್ಟ್ ಮುಸ್ಲಿಂ ವಿದ್ಯಾರ್ಥಿನಿಯ ಅರ್ಜಿ ವಜಾಗೊಳಿಸಿದ ಹೈಕೋರ್ಟ್ ಪ್ರಯಾಗ್‌ರಾಜ್: ಶಾಲಾ ಸಮವಸ್ತ್ರದೊಂದಿಗೆ ಹಿಜಾಬ್…

52 minutes ago

ಉಡುಪಿ: ನೂತನ ಜಿಲ್ಲಾಸ್ಪತ್ರೆಯನ್ನು ಶೀಘ್ರವೇ ಆರಂಭಿಸಿ : ಕರವೇ ಆಗ್ರಹ – vishwanews24

ನೂತನ ಜಿಲ್ಲಾಸ್ಪತ್ರೆಯನ್ನು ಶೀಘ್ರವೇ ಆರಂಭಿಸಿ : ಕರವೇ ಆಗ್ರಹ ಸೆ.30ರೊಳಗೆ ಆಸ್ಪತ್ರೆಯ ಸೇವೆ ಆರಂಭಿಸದಿದ್ದರೆ ಅ.1ರಿಂದ ಅನಿರ್ದಿಷ್ಟಾವಧಿ ಪ್ರತಿಭಟನೆಯ ಎಚ್ಚರಿಕೆ…

1 hour ago

ಮಂಗಳೂರಿಗೆ ಆಗಮಿಸಿದ ರಾಕಿಂಗ್ ಸ್ಟಾರ್ ಯಶ್ ; ಧರ್ಮಸ್ಥಳಕ್ಕೆ ಭೇಟಿ – vishwanews24

‘ಟಾಕ್ಸಿಕ್’ ಸಿನಿಮಾ ಬಿಡುಗಡೆ ಹಿನ್ನೆಲೆ: ಮಂಗಳೂರಿಗೆ ಆಗಮಿಸಿದ ರಾಕಿಂಗ್ ಸ್ಟಾರ್ ಯಶ್ ; ಧರ್ಮಸ್ಥಳಕ್ಕೆ ಭೇಟಿ ಮಂಗಳೂರು: ಸ್ಯಾಂಡಲ್‌ವುಡ್‌ನ ರಾಕಿಂಗ್ ಸ್ಟಾರ್…

2 hours ago

ಉಡುಪಿ: ಜಿಲ್ಲೆಯಲ್ಲಿ 97,706 ಮತದಾರರ ವಿವರಗಳಲ್ಲಿ ವ್ಯತ್ಯಾಸಗಳು ಪತ್ತೆ – vishwanews24

ಉಡುಪಿ: ಜಿಲ್ಲೆಯಲ್ಲಿ 97,706 ಮತದಾರರ ವಿವರಗಳಲ್ಲಿ ವ್ಯತ್ಯಾಸಗಳು ಪತ್ತೆ ಉಡುಪಿ: ಹಿಂದಿನ ಮತದಾರರ ಪಟ್ಟಿಯೊಂದಿಗೆ ಮತದಾರರ ವಿವರಗಳನ್ನು ಜೋಡಿಸಲು ಸಾಧ್ಯವಾಗದ…

2 hours ago

ವಿಷಕಾರಿ ದತ್ತೂರ ಬೀಜ ಮಾರಾಟ : ಅಮೆಜಾನ್,ಸ್ವಿಗ್ಗಿ ಇನ್‌ಸ್ಟಾಮಾರ್ಟ್‌ ನ ಆಹಾರ ಪರವಾನಗಿ ಅಮಾನತು – vishwanews24

ವಿಷಕಾರಿ ದತ್ತೂರ ಬೀಜ ಮಾರಾಟ : ಅಮೆಜಾನ್, ಸ್ವಿಗ್ಗಿ ಇನ್‌ಸ್ಟಾಮಾರ್ಟ್‌ನ ಆಹಾರ ಪರವಾನಗಿ ಅಮಾನತು ಬೆಂಗಳೂರು: ವಿಷಕಾರಿ ದತ್ತೂರ ಬೀಜಗಳನ್ನು…

2 hours ago

ಉಡುಪಿ: ಡೇವಿಡ್ ಡಿಸೋಜಾ ಶೂಟೌಟ್ ಪ್ರಕರಣ ; ಹತ್ಯೆಯ ಹಿಂದಿನ ಮಾಸ್ಟರ್ ಮೈಂಡ್ ಇನ್ನೂ ಪತ್ತೆಯಾಗಿಲ್ಲ: ಹರಿರಾಮ್ ಶಂಕರ್  – vishwanews24

ಉಡುಪಿ: ಡೇವಿಡ್ ಡಿಸೋಜಾ ಶೂಟೌಟ್ ಪ್ರಕರಣ ; ಹತ್ಯೆಯ ಹಿಂದಿನ ಮಾಸ್ಟರ್ ಮೈಂಡ್ ಇನ್ನೂ ಪತ್ತೆಯಾಗಿಲ್ಲ: ಹರಿರಾಮ್ ಶಂಕರ್  ಉಡುಪಿ: ಉದ್ಯಮಿ…

2 hours ago