Featured

ಉಡುಪಿ:  ನ. 21 ರಿಂದ ಭತ್ತ ಖರೀದಿ ನೋಂದಣಿ ಪ್ರಕ್ರಿಯೆ ಆರಂಭ: ಜಿಲ್ಲಾಧಿಕಾರಿ ಕೂರ್ಮಾರಾವ್ ಎಂ – Vishwanews24

ಉಡುಪಿ:  ನ. 21 ರಿಂದ ಭತ್ತ ಖರೀದಿ ನೋಂದಣಿ ಪ್ರಕ್ರಿಯೆ ಆರಂಭ: ಜಿಲ್ಲಾಧಿಕಾರಿ ಕೂರ್ಮಾರಾವ್ ಎಂ

ಉಡುಪಿ: ಪ್ರಸಕ್ತ ಸಾಲಿನ ಮುಂಗಾರು ಋತುವಿನಲ್ಲಿ ಕನಿಷ್ಠ ಬೆಂಬಲ ಬೆಲೆ ಯೋಜನೆಯಡಿ ಕೇಂದ್ರ ಸರ್ಕಾರವು ಸಾಮಾನ್ಯ ಭತ್ತಕ್ಕೆ ಪ್ರತಿ ಕ್ವಿಂ. ಗೆ ೨೦೪೦ ರೂ. ಮತ್ತು ಗ್ರೇಡ್ ಎ ಭತ್ತಕ್ಕೆ ೨೦೬೦ ರೂ. ಕನಿಷ್ಠ ಬೆಂಬಲ ಬೆಲೆ ನಿಗಧಿಪಡಿಸಿರುತ್ತದೆ. ಕರಾವಳಿ ಜಿಲ್ಲೆಗಳಲ್ಲಿ ಸ್ಥಳೀಯವಾಗಿ ಬೆಳೆಯಲಾಗುವ ಕಜೆ, ಜಯ, ಜ್ಯೋತಿ, ಪಂಚಮುಖಿ, ಸಹ್ಯಾದ್ರಿ, ಉಮಾ, ಅಭಿಲಾಷ ಮತ್ತು ಎಂಓ೪ ಭತ್ತದ ತಳಿಗಳನ್ನು ಜಿಲ್ಲೆಯ ರೈತರಿಂದ ಖರೀದಿಸಿ, ಅದನ್ನು ಕುಚ್ಚಲಕ್ಕಿಯನ್ನಾಗಿ ಪರಿವರ್ತಿಸಿ, ಸಾರ್ವಜನಿಕ ವಿತರಣಾ ಪದ್ಧತಿಯಡಿ ಪಡಿತರ ಫಲಾನುಭವಿಗಳಿಗೆ ವಿತರಿಸಲು ಕೇಂದ್ರ ಸರ್ಕಾರವು ಅನುಮತಿ ನೀಡಿದ್ದು, ಸ್ಥಳೀಯ ತಳಿಗಳ ಭತ್ತಕ್ಕೆ ಪ್ರತಿ ಕ್ವಿಂಟಾಲ್‌ಗೆ ೫೦೦ ರೂ. ಪ್ರೋತ್ಸಾಹಧನ ನೀಡಲು ಆದೇಶಿಸಿದ್ದು, ಪ್ರತಿ ಕ್ವಿಂ. ಭತ್ತಕ್ಕೆ ಒಟ್ಟು ೨೫೪೦ ರೂ. ನಿಗಧಿಪಡಿಸಲಾಗಿರುತ್ತದೆ.

ಹಿಂದೂ ಧರ್ಮದಿಂದ ಮುಸ್ಲಿಂ ಧರ್ಮಕ್ಕೆ ಮತಾಂತರ ಆಗುವಂತೆ ಪತಿಯಿಂದ ಚಿತ್ರಹಿಂಸೆ.. 🚨 ಪೊಲೀಸ್ ಮೊರೆಹೋದ ಮಹಿಳೆ..

ಜಿಲ್ಲೆಯ ರೈತರಿಂದ ಪ್ರತಿ ಎಕರೆಗೆ ಗರಿಷ್ಠ ೧೬ ಕ್ವಿಂ. ನಂತೆ ಪ್ರತಿ ರೈತರಿಂದ ಗರಿಷ್ಠ ೪೦ ಕ್ವಿಂ. ಭತ್ತ ಖರೀದಿಸಲು ಕರ್ನಾಟಕ ಆಹಾರ ಮತ್ತು ನಾಗರಿಕ ಸರಬರಾಜು ನಿಗಮವನ್ನು ಖರೀದಿ ಏಜೆನ್ಸಿಯನ್ನಾಗಿ ನೇಮಿಸಲಾಗಿದ್ದು, ನವೆಂಬರ್ ೨೧ ರಿಂದ ಒಂದು ತಿಂಗಳು ರೈತರ ನೋಂದಣಿ ಕಾರ್ಯವನ್ನು ಉಡುಪಿ, ಕುಂದಾಪುರ ಹಾಗೂ ಕಾರ್ಕಳ ಕೃಷಿ ಮಾರುಕಟ್ಟೆ ಸಮಿತಿಯ ಎ.ಪಿ.ಎಂ.ಸಿ ಯಾರ್ಡ್ಗಳಲ್ಲಿ, ಕಾಪು, ಬ್ರಹ್ಮಾವರ, ಕೋಟ, ಬೈಂದೂರು ಹಾಗೂ ಅಜೆಕಾರು ರೈತ ಸಂಪರ್ಕ ಕೇಂದ್ರಗಳಲ್ಲಿ, ಕುಂದಾಪುರ ತಾಲೂಕು ವಂಡ್ಸೆ ವಿ.ಎಸ್.ಎಸ್.ಎನ್ ಹಾಗೂ ಹೆಬ್ರಿ ತಾಲೂಕು ಕಚೇರಿಯಲ್ಲಿ ಕೈಗೊಳ್ಳಲಿದ್ದು, ಡಿಸೆಂಬರ್ ೧ ರಿಂದ ೨೦೨೩ ಫೆಬ್ರವರಿ ೨೮ ರ ವರೆಗೆ ಭತ್ತ ಖರೀದಿ ಕಾರ್ಯ ನಡೆಯಲಿದೆ.

ಜಿಲ್ಲೆಯ ರೈತರು ಕೃಷಿ ಇಲಾಖೆಯಿಂದ ನೀಡಿರುವ ಫ್ರೂಟ್ಸ್ ದತ್ತಾಂಶದಲ್ಲಿ ಸೇರ್ಪಡೆಗೊಂಡು ಮತ್ತು ಸೇರ್ಪಡೆಗೊಂಡಿರುವ ಬಗ್ಗೆ ಫ್ರೂಟ್ಸ್ ತಂತ್ರಾAಶದ ಗುರುತಿನ ಸಂಖ್ಯೆಯೊAದಿಗೆ ಆಧಾರ್ ಜೋಡಣೆಯ ಬ್ಯಾಂಕ್ ಖಾತೆಯ ಮಾಹಿತಿಯೊಂದಿಗೆ ನೋಂದಣಿ ಕೇಂದ್ರದಲ್ಲಿ ನೋಂದಾಯಿಕೊಳ್ಳಬಹುದಾಗಿದೆ.
ಕೃಷಿ ಇಲಾಖೆಯ ಗುಣಮಟ್ಟ ಪರಿವೀಕ್ಷಕರು ಸರ್ಕಾರ ನಿಗಧಿಪಡಿಸಿರುವ ಮಾನದಂಡದ0ತೆ ಎಫ್‌ಎಕ್ಯೂ ಗುಣಮಟ್ಟ ಹೊಂದಿರುವ ಭತ್ತವನ್ನು ಪರಿಶೀಲಿಸಿ, ಖರೀದಿಸಲು ಕ್ರಮ ಕೈಗೊಳ್ಳಲಿದ್ದು, ರೈತರು ಈ ಯೋಜನೆಯ ಸದುಪಯೋಗಪಡೆದುಕೊಳ್ಳುವಂತೆ ಜಿಲ್ಲಾಧಿಕಾರಿ ಕೂರ್ಮಾರಾವ್ ಎಂ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಉಡುಪಿ: ಪ.ಜಾತಿ ಮತ್ತು ಪ.ಪಂಗಡದ ಗಂಗಾ ಕಲ್ಯಾಣ ಫಲಾನುಭವಿಗಳಿಗೆ 1700 ಕೊಳವೆ ಬಾವಿ ನಿರ್ಮಾಣಕ್ಕೆ ನೇರ ಹಣ ಪಾವತಿ : ಸಚಿವ ಕೋಟ ಶ್ರೀನಿವಾಸ ಪೂಜಾರಿ – Vishwanews24

Vishwa News 24

Recent Posts

ಉಳ್ಳಾಲ: ನಾಪತ್ತೆಯಾಗಿದ್ದ ಕುಂದಾಪುರ ಮೂಲದ ಮೀನುಗಾರನ  ಮೃತದೇಹ ಪತ್ತೆ -vishwanews24

ಉಳ್ಳಾಲ: ನಾಪತ್ತೆಯಾಗಿದ್ದ ಕುಂದಾಪುರ ಮೂಲದ ಮೀನುಗಾರನ  ಮೃತದೇಹ ಪತ್ತೆ ಉಳ್ಳಾಲ : ಮೀನುಗಾರಿಕೆಗೆ ತೆರಳಿದ್ದ ವೇಳೆ ದೈತ್ಯ ಗಾತ್ರದ ಅಲೆಗೆ…

1 day ago

ನಿರೂಪಣಾ ವೃತ್ತಿಗೆ ಅಧಿಕೃತವಾಗಿ ನಿವೃತ್ತಿ ಘೋಷಿಸಿದ ಅನುಪಮಾ ಗೌಡ -vishwanews24

ನಿರೂಪಣಾ ವೃತ್ತಿಗೆ ಅಧಿಕೃತವಾಗಿ ನಿವೃತ್ತಿ ಘೋಷಿಸಿದ ಅನುಪಮಾ ಗೌಡ ಬೆಂಗಳೂರು : ನಟಿ ಅನುಪಮಾ ಗೌಡ ಅವರು ನಟನೆಯ ಮೂಲಕ…

1 day ago

ಉಪ್ಪೂರು : ವಯೋವಂದನ ಆತಿಥ್ಯ ಗೃಹ “ಸೈಟ್ ಆಫೀಸ್” ಉದ್ಘಾಟನೆ ; ರಾಷ್ಟ್ರಧ್ವಜಾರೋಹಣ, ವೃಕ್ಷಾರೋಪಣ ಕಾರ್ಯಕ್ರಮ -vishwanews24

ಉಪ್ಪೂರು : ವಯೋವಂದನ ಆತಿಥ್ಯ ಗೃಹ "ಸೈಟ್ ಆಫೀಸ್" ಉದ್ಘಾಟನೆ ; ರಾಷ್ಟ್ರಧ್ವಜಾರೋಹಣ, ವೃಕ್ಷಾರೋಪಣ ಕಾರ್ಯಕ್ರಮ ಉಡುಪಿ ಜಿಲ್ಲೆ ಬ್ರಹ್ಮಾವರ…

3 days ago

ಪುತ್ತೂರು:  ಕೆಎಸ್‌ಆರ್‌ಟಿಸಿ ಬಸ್ – ಬೈಕ್ ನಡುವೆ ಭೀಕರ ಅಪಘಾತ : ಸವಾರ ಸ್ಥಳದಲ್ಲೇ ಮೃತ್ಯು – vishwanews24

ಪುತ್ತೂರು:  ಕೆಎಸ್‌ಆರ್‌ಟಿಸಿ ಬಸ್ ಮತ್ತು ಬೈಕ್ ನಡುವೆ  ಭೀಕರ ಅಪಘಾತ: ಸವಾರ ಸ್ಥಳದಲ್ಲೇ ಮೃತ್ಯು ಪುತ್ತೂರು: ಕೆಯ್ಯರು ಗ್ರಾಮದ ಬೊಳಿಕ್ಕಳ…

4 days ago

ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ – vishwanews24

ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ ಬೆಂಗಳೂರು : ಕೇಂದ್ರ ಸರಕಾರದ…

4 days ago

ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ – vishwanews24

ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ ಬೆಂಗಳೂರು: ನಗರದ ರಾಜೇಶ್ವರಿ ನಗರದಲ್ಲಿ ಹೆಂಡತಿಯನ್ನು ಕೊಂದು ಗಂಡ…

4 days ago