ಉಡುಪಿ: ಪ್ರಸಕ್ತ ಸಾಲಿನ ಮುಂಗಾರು ಋತುವಿನಲ್ಲಿ ಕನಿಷ್ಠ ಬೆಂಬಲ ಬೆಲೆ ಯೋಜನೆಯಡಿ ಕೇಂದ್ರ ಸರ್ಕಾರವು ಸಾಮಾನ್ಯ ಭತ್ತಕ್ಕೆ ಪ್ರತಿ ಕ್ವಿಂ. ಗೆ ೨೦೪೦ ರೂ. ಮತ್ತು ಗ್ರೇಡ್ ಎ ಭತ್ತಕ್ಕೆ ೨೦೬೦ ರೂ. ಕನಿಷ್ಠ ಬೆಂಬಲ ಬೆಲೆ ನಿಗಧಿಪಡಿಸಿರುತ್ತದೆ. ಕರಾವಳಿ ಜಿಲ್ಲೆಗಳಲ್ಲಿ ಸ್ಥಳೀಯವಾಗಿ ಬೆಳೆಯಲಾಗುವ ಕಜೆ, ಜಯ, ಜ್ಯೋತಿ, ಪಂಚಮುಖಿ, ಸಹ್ಯಾದ್ರಿ, ಉಮಾ, ಅಭಿಲಾಷ ಮತ್ತು ಎಂಓ೪ ಭತ್ತದ ತಳಿಗಳನ್ನು ಜಿಲ್ಲೆಯ ರೈತರಿಂದ ಖರೀದಿಸಿ, ಅದನ್ನು ಕುಚ್ಚಲಕ್ಕಿಯನ್ನಾಗಿ ಪರಿವರ್ತಿಸಿ, ಸಾರ್ವಜನಿಕ ವಿತರಣಾ ಪದ್ಧತಿಯಡಿ ಪಡಿತರ ಫಲಾನುಭವಿಗಳಿಗೆ ವಿತರಿಸಲು ಕೇಂದ್ರ ಸರ್ಕಾರವು ಅನುಮತಿ ನೀಡಿದ್ದು, ಸ್ಥಳೀಯ ತಳಿಗಳ ಭತ್ತಕ್ಕೆ ಪ್ರತಿ ಕ್ವಿಂಟಾಲ್ಗೆ ೫೦೦ ರೂ. ಪ್ರೋತ್ಸಾಹಧನ ನೀಡಲು ಆದೇಶಿಸಿದ್ದು, ಪ್ರತಿ ಕ್ವಿಂ. ಭತ್ತಕ್ಕೆ ಒಟ್ಟು ೨೫೪೦ ರೂ. ನಿಗಧಿಪಡಿಸಲಾಗಿರುತ್ತದೆ.
ಹಿಂದೂ ಧರ್ಮದಿಂದ ಮುಸ್ಲಿಂ ಧರ್ಮಕ್ಕೆ ಮತಾಂತರ ಆಗುವಂತೆ ಪತಿಯಿಂದ ಚಿತ್ರಹಿಂಸೆ.. 🚨 ಪೊಲೀಸ್ ಮೊರೆಹೋದ ಮಹಿಳೆ..
ಜಿಲ್ಲೆಯ ರೈತರಿಂದ ಪ್ರತಿ ಎಕರೆಗೆ ಗರಿಷ್ಠ ೧೬ ಕ್ವಿಂ. ನಂತೆ ಪ್ರತಿ ರೈತರಿಂದ ಗರಿಷ್ಠ ೪೦ ಕ್ವಿಂ. ಭತ್ತ ಖರೀದಿಸಲು ಕರ್ನಾಟಕ ಆಹಾರ ಮತ್ತು ನಾಗರಿಕ ಸರಬರಾಜು ನಿಗಮವನ್ನು ಖರೀದಿ ಏಜೆನ್ಸಿಯನ್ನಾಗಿ ನೇಮಿಸಲಾಗಿದ್ದು, ನವೆಂಬರ್ ೨೧ ರಿಂದ ಒಂದು ತಿಂಗಳು ರೈತರ ನೋಂದಣಿ ಕಾರ್ಯವನ್ನು ಉಡುಪಿ, ಕುಂದಾಪುರ ಹಾಗೂ ಕಾರ್ಕಳ ಕೃಷಿ ಮಾರುಕಟ್ಟೆ ಸಮಿತಿಯ ಎ.ಪಿ.ಎಂ.ಸಿ ಯಾರ್ಡ್ಗಳಲ್ಲಿ, ಕಾಪು, ಬ್ರಹ್ಮಾವರ, ಕೋಟ, ಬೈಂದೂರು ಹಾಗೂ ಅಜೆಕಾರು ರೈತ ಸಂಪರ್ಕ ಕೇಂದ್ರಗಳಲ್ಲಿ, ಕುಂದಾಪುರ ತಾಲೂಕು ವಂಡ್ಸೆ ವಿ.ಎಸ್.ಎಸ್.ಎನ್ ಹಾಗೂ ಹೆಬ್ರಿ ತಾಲೂಕು ಕಚೇರಿಯಲ್ಲಿ ಕೈಗೊಳ್ಳಲಿದ್ದು, ಡಿಸೆಂಬರ್ ೧ ರಿಂದ ೨೦೨೩ ಫೆಬ್ರವರಿ ೨೮ ರ ವರೆಗೆ ಭತ್ತ ಖರೀದಿ ಕಾರ್ಯ ನಡೆಯಲಿದೆ.
ಜಿಲ್ಲೆಯ ರೈತರು ಕೃಷಿ ಇಲಾಖೆಯಿಂದ ನೀಡಿರುವ ಫ್ರೂಟ್ಸ್ ದತ್ತಾಂಶದಲ್ಲಿ ಸೇರ್ಪಡೆಗೊಂಡು ಮತ್ತು ಸೇರ್ಪಡೆಗೊಂಡಿರುವ ಬಗ್ಗೆ ಫ್ರೂಟ್ಸ್ ತಂತ್ರಾAಶದ ಗುರುತಿನ ಸಂಖ್ಯೆಯೊAದಿಗೆ ಆಧಾರ್ ಜೋಡಣೆಯ ಬ್ಯಾಂಕ್ ಖಾತೆಯ ಮಾಹಿತಿಯೊಂದಿಗೆ ನೋಂದಣಿ ಕೇಂದ್ರದಲ್ಲಿ ನೋಂದಾಯಿಕೊಳ್ಳಬಹುದಾಗಿದೆ.
ಕೃಷಿ ಇಲಾಖೆಯ ಗುಣಮಟ್ಟ ಪರಿವೀಕ್ಷಕರು ಸರ್ಕಾರ ನಿಗಧಿಪಡಿಸಿರುವ ಮಾನದಂಡದ0ತೆ ಎಫ್ಎಕ್ಯೂ ಗುಣಮಟ್ಟ ಹೊಂದಿರುವ ಭತ್ತವನ್ನು ಪರಿಶೀಲಿಸಿ, ಖರೀದಿಸಲು ಕ್ರಮ ಕೈಗೊಳ್ಳಲಿದ್ದು, ರೈತರು ಈ ಯೋಜನೆಯ ಸದುಪಯೋಗಪಡೆದುಕೊಳ್ಳುವಂತೆ ಜಿಲ್ಲಾಧಿಕಾರಿ ಕೂರ್ಮಾರಾವ್ ಎಂ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ರೇಣುಕಾಸ್ವಾಮಿ ಕೊಲೆ ಪ್ರಕರಣ : ದರ್ಶನ್ ಅರ್ಜಿ ವಿಚಾರಣೆಗೆ ಅರ್ಹವಲ್ಲ: ಮತ್ತೊಮ್ಮೆ ಜಾಮೀನು ತಿರಸ್ಕರಿಸಿದ ಸುಪ್ರೀಂ ನಟ ದರ್ಶನ್ ರೇಣುಕಾ…
ಗೃಹ ಜ್ಯೋತಿ ಪರಿಶೀಲನೆ: ಪ್ರವರ್ಗ ಮಾಹಿತಿ (ಜಾತಿ ಪ್ರಮಾಣಪತ್ರ) ಕಡ್ಡಾಯವಲ್ಲ ಬೆಂಗಳೂರು: ರಾಜ್ಯಾದ್ಯಂತ ಜುಲೈ 1 ರಿಂದ ಆರಂಭಗೊಂಡಿರುವ ಗೃಹ ಜ್ಯೋತಿ…
ಎಸ್ಐಆರ್ ಪ್ರಕ್ರಿಯೆಯಲ್ಲಿ ಭಾರೀ ಅಕ್ರಮ : ಸಮಗ್ರ ತನಿಖೆಗೆ ಪ್ರಲ್ಹಾದ ಜೋಶಿ ಆಗ್ರಹ ನವದೆಹಲಿ: ರಾಮನಗರ ಜಿಲ್ಲೆಯಲ್ಲಿ ನಡೆದ ಮತದಾರರ…
ಅಕ್ರಮ ಎಸ್ಐಆರ್ ಪ್ರಕ್ರಿಯೆ : 2028ರ ಚುನಾವಣೆ ಗೆಲ್ಲಲು ಬಾಂಗ್ಲಾದೇಶಿಯರ ಸಕ್ರಮಕ್ಕೆ ಕಾಂಗ್ರೆಸ್ ಸಂಚು : ಶೋಭಾ ಕರಂದ್ಲಾಜೆ ಗಂಭೀರ…
ಮೂಲ ನೆಲದಿಂದ ಬೇರ್ಪಡಿಸಿ ಕರಾವಳಿಯ ಮಣ್ಣಿನ ಸಂಸ್ಕೃತಿಯ ಪಾವಿತ್ರ್ಯಕ್ಕೆ ಧಕ್ಕೆ ತರಬೇಡಿ .. ಕರಾವಳಿ ಕಂಬಳವು ತನ್ನದೇ ಆದ ಆಳವಾದ ಸಾಂಪ್ರದಾಯಿಕ…
ಮಂಗಳೂರು:ಸಾಮಾಜಿಕ ಜಾಲತಾಣಗಳಲ್ಲಿ ಸೆಲಿನಾ ಟ್ರಾವೆಲ್ಸ್ ವಿರುದ್ಧ ಹರಿದಾಡಿದ ಕರಪತ್ರ : ಪೊಲೀಸ್ ಇಲಾಖೆ ಸ್ಪಷ್ಟನೆ ಮಂಗಳೂರು: ಖಾಸಗಿ ಸಾರಿಗೆ ಸಂಸ್ಥೆಯಾದ…