ಉಡುಪಿ: ಮಹಾಲಕ್ಷ್ಮೀ ಕೋ ಓಪರೇಟಿವ್ ಬ್ಯಾಂಕ್ ಉಡುಪಿ ಇದರ ವತಿಯಿಂದ ಉಡುಪಿ ಜಿಲ್ಲೆಯ ಎಸ್.ಎಸ್.ಎಲ್.ಸಿ., ಪಿ.ಯು.ಸಿ., ಪದವಿ ಹಾಗೂ ಸ್ನಾತಕೋತ್ತರ ವಿಭಾಗದ 1,500 ಮಂದಿ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ರೂ. 25 ಲಕ್ಷ ಮೊತ್ತದ ಪ್ರತಿಭಾ ಪುರಸ್ಕಾರ ವಿತರಣೆ, 2025ನೇ ಸಾಲಿನ ಡೈರಿ ಬಿಡುಗಡೆ ಹಾಗೂ ವಿಧಾನಪರಿಷತ್ ನೂತನ ಸದಸ್ಯರಾದ ಕಿಶೋರ್ ಕುಮಾರ್ ಪುತ್ತೂರು ಹಾಗೂ ಈ ಸಾಲಿನ ಸಹಕಾರ ರತ್ನ ಪ್ರಶಸ್ತಿ ಪುರಸ್ಕೃತರಾದ ಖಂಬದಕೋಣೆ ರೈತರ ಸೇವಾ ಸಂಘದ ಅಧ್ಯಕ್ಷರಾದ ಎಸ್. ಪ್ರಕಾಶ್ಚಂದ್ರ ಶೆಟ್ಟಿ, ಕೊಡವೂರು ವ್ಯವಸಾಯ ಸೇವಾ ಸಹಕಾರಿ ಸಂಘದ ಅಧ್ಯಕ್ಷರಾದ ಕೆ. ನಾರಾಯಣ ಬಲ್ಲಾಳ್, ಹೆಮ್ಮಾಡಿ ಮೀನುಗಾರರ ಸಹಕಾರಿ ಸಂಘದ ಪ್ರಧಾನ ವ್ಯವಸ್ಥಾಪಕರಾದ ಉದಯ ಹಟ್ಟಿಯಂಗಡಿ ರವರಿಗೆ ಅಭಿನಂದನಾ ಕಾರ್ಯಕ್ರಮ ಉಡುಪಿಯ ಪುರಭವನದಲ್ಲಿ ನವೆಂಬರ್ 23 ಶನಿವಾರ ಮಧ್ಯಾಹ್ನ 3.00ಕ್ಕೆ ಆಯೋಜಿಸಿರುವುದಾಗಿ ಬ್ಯಾಂಕಿನ ಅಧ್ಯಕ್ಷರಾದ ಉಡುಪಿ ಶಾಸಕ ಯಶ್ಪಾಲ್ ಎ. ಸುವರ್ಣ ತಿಳಿಸಿದ್ದಾರೆ.
ಬ್ಯಾಂಕಿನ ಅಧ್ಯಕ್ಷರಾದ ಯಶ್ಪಾಲ್ ಎ. ಸುವರ್ಣ ಸಮಾರಂಭದ ಅಧ್ಯಕ್ಷತೆ ವಹಿಸಲಿದ್ದು, ಸಮಾರಂಭವನ್ನು ಅಜೆಕಾರು ಪದ್ಮ ಗೋಪಾಲ ಎಜ್ಯುಕೇಶನ್ ಟ್ರಸ್ಟಿನ ಅಧ್ಯಕ್ಷರಾದ ಡಾ| ಸುಧಾಕರ ಶೆಟ್ಟಿ ಉದ್ಘಾಟಿಸಲಿದ್ದಾರೆ.
ಸಮಾರಂಭದಲ್ಲಿ ಪ್ರತಿಭಾ ಪುರಸ್ಕಾರವನ್ನು ಗೀತಾನಂದ ಫೌಂಡೇಶನ್ ಕೋಟ ಪ್ರವರ್ತಕರಾದ ಆನಂದ ಸಿ. ಕುಂದರ್ ವಿತರಿಸಲಿದ್ದು, ಬ್ಯಾಂಕಿನ 2025ನೇ ಸಾಲಿನ ಡೈರಿಯನ್ನು ಜಿ. ಶಂಕರ್ ಫ್ಯಾಮಿಲಿ ಟ್ರಸ್ಟಿನ ನಿರ್ದೇಶಕರಾದ ಶ್ಯಾಮಿಲಿ ನವೀನ್ ಬಿಡುಗಡೆ ಮಾಡಲಿದ್ದು, ಮುಖ್ಯ ಅತಿಥಿಗಳಾಗಿ ದಕ್ಷಿಣ ಕನ್ನಡ ಮೊಗವೀರ ಮಹಾಜನ ಸಂಘದ ಅಧ್ಯಕ್ಷರಾದ ಜಯ ಸಿ. ಕೋಟ್ಯಾನ್, ಉಡುಪಿ ಜಿಲ್ಲಾ ಸಹಕಾರಿ ಯೂನಿಯನ್ ಅಧ್ಯಕ್ಷರಾದ ಜಯಕರ ಶೆಟ್ಟಿ ಇಂದ್ರಾಳಿ, ಮಲ್ಪೆ ಮೀನುಗಾರರ ಸಂಘದ ಅಧ್ಯಕ್ಷರಾದ ದಯಾನಂದ ಕೆ. ಸುವರ್ಣ, ಉದ್ಯಮಿ ಆನಂದ ಪಿ. ಸುವರ್ಣ, ಉಜ್ವಲ್ ಸಮೂಹ ಸಂಸ್ಥೆಗಳ ಆಡಳಿತ ನಿರ್ದೇಶಕರಾದ ಅಜಯ್ ಪಿ. ಶೆಟ್ಟಿ, ಉಪಸ್ಥಿತರಿರಲಿದ್ದಾರೆ ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಪುತ್ತೂರು: ಕೆಎಸ್ಆರ್ಟಿಸಿ ಬಸ್ ಮತ್ತು ಬೈಕ್ ನಡುವೆ ಭೀಕರ ಅಪಘಾತ: ಸವಾರ ಸ್ಥಳದಲ್ಲೇ ಮೃತ್ಯು ಪುತ್ತೂರು: ಕೆಯ್ಯರು ಗ್ರಾಮದ ಬೊಳಿಕ್ಕಳ…
ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ ಬೆಂಗಳೂರು : ಕೇಂದ್ರ ಸರಕಾರದ…
ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ ಬೆಂಗಳೂರು: ನಗರದ ರಾಜೇಶ್ವರಿ ನಗರದಲ್ಲಿ ಹೆಂಡತಿಯನ್ನು ಕೊಂದು ಗಂಡ…
ಸ್ವಕ್ಷೇತ್ರದಲ್ಲಿ 80ನೇ ಸ್ವಾತಂತ್ರ್ಯೋತ್ಸವ ಧ್ವಜಾರೋಹಣ ಕಾರ್ಯಕ್ರಮದಲ್ಲಿ ಜಮೀರ್ ಅಹ್ಮದ್ ಭಾಗಿ ನಾನು ಹಿಂದೂಸ್ತಾನಿ, ನಾನು ಕನ್ನಡಿಗ, ದೇಶದ ಅಭಿಮಾನವನ್ನ ಬಿಜೆಪಿಯವರಿಂದ…
ಗುಟ್ಕಾ, ಪಾನ್ ಮಸಾಲ ನಿಷೇಧ ಆದೇಶ ನಾವು ವಾಪಸ್ ಪಡೆದಿಲ್ಲ: ಯು.ಟಿ.ಖಾದರ್ ಸ್ಪಷ್ಟನೆ ಅಡಿಕೆ ಬೆಲೆ ಕುಸಿಯಲ್ಲ, ಬೆಳೆಗಾರರಿಗೆ ಸಮಸ್ಯೆ…
2047ರ ವೇಳೆಗೆ ಅಭಿವೃದ್ಧಿ ಹೊಂದಿದ ರಾಷ್ಟ್ರವನ್ನು ನಿರ್ಮಿಸುತ್ತೇವೆ : ಪ್ರಧಾನಿ ಮೋದಿ ನವದೆಹಲಿ: 2047ರ ವೇಳೆಗೆ ‘ವಿಕಸಿತ ಭಾರತ’ದ ಕನಸನ್ನು…