Featured

ಉಡುಪಿ: ನ.8ರಂದು ಶ್ರೀ ಕನಕದಾಸರ 538ನೇ ಜಯಂತಿ‌ ಮಹೋತ್ಸವ ಹಾಗೂ 351 ಕುಂಭ ಕಲಶ ಮೆರವಣಿಗೆ – vishwanews24

ಉಡುಪಿ: ನ.8ರಂದು ಶ್ರೀ ಕನಕದಾಸರ 538ನೇ ಜಯಂತಿ‌ ಮಹೋತ್ಸವ ಹಾಗೂ 351 ಕುಂಭ ಕಲಶ ಮೆರವಣಿಗೆ

ಉಡುಪಿ: ಉಡುಪಿ ಜಿಲ್ಲಾ ಶ್ರೀ ಕನಕದಾಸ ಸಮಾಜ ಸೇವಾ ಸಂಘ ಹಾಗೂ ಪರ್ಯಾಯ ಶ್ರೀ ಪುತ್ತಿಗೆ ಮಠ ಉಡುಪಿ ಕೃಷ್ಣಮಠದ ಸಂಯುಕ್ತ ಆಶ್ರಯದಲ್ಲಿ ಶ್ರೀ ಕನಕದಾಸರ 538ನೇ ಜಯಂತಿ‌ ಮಹೋತ್ಸವ ಹಾಗೂ 351 ಕುಂಭ ಕಲಶ ಮೆರವಣಿಗೆ ನ.8ರಂದು ಉಡುಪಿಯಲ್ಲಿ ನಡೆಯಲಿದೆ ಎಂದು ಉಡುಪಿ ಜಿಲ್ಲಾ ಶ್ರೀ ಕನಕದಾಸ ಸಮಾಜ ಸೇವಾ ಸಂಘದ ಗೌರವಾಧ್ಯಕ್ಷ ಸಿದ್ದರಾಜು ಕೆ.ಎಸ್. ತಿಳಿಸಿದರು.

ಈ ಕುರಿತು ಸುದ್ದಿಗೋಷ್ಠಿಯಲ್ಲಿ ಮಾಹಿತಿ ನೀಡಿದ ಅವರು, ಅಂದು ಬೆಳಿಗ್ಗೆ 10ಗಂಟೆಗೆ ಉಡುಪಿ ಅಜ್ಜರಕಾಡಿನ ಭುಜಂಗ್ ಪಾರ್ಕ್ ನಲ್ಲಿ ಕನಕದಾಸರ ಜಯಂತಿ ನಡೆಯಲಿದೆ. ಬೆಳಿಗ್ಗೆ 11ಗಂಟೆಗೆ ಉಡುಪಿ ಜೋಡುಕಟ್ಟೆಯಲ್ಲಿ ಕುಂಭ ಕಲಶ ಮೆರವಣಿಗೆಗೆ ಕರ್ನಾಟಕ ಪ್ರದೇಶ ಕುರುಬರ ಸಂಘದ ಮಹಿಳಾ ಘಟಕದ ರಾಜ್ಯಾಧ್ಯಕ್ಷೆ ಪ್ರಭಾವತಿ ಕೆ.ಆರ್ ಚಾಲನೆ ನೀಡಲಿದ್ದಾರೆ. ಬಳಿಕ ಮೆರವಣಿಗೆ ಜೋಡುಕಟ್ಟೆಯಿಂದ ಶ್ರೀಕೃಷ್ಣಮಠದ ಕನಕದಾಸ ಮಂದಿರದವರೆಗೆ ಸಾಗಿಬರಲಿದೆ ಎಂದರು.

ಮಧ್ಯಾಹ್ನ 1 ಗಂಟೆಗೆ ಕನಕದಾಸರ ಮೂರ್ತಿಗೆ ಪರ್ಯಾಯ ಪುತ್ತಿಗೆ ಮಠದ ಶ್ರೀ ಸುಗುಣೇಂದ್ರತೀರ್ಥ ಶ್ರೀಪಾದರು ವಿಶೇಷ ಪೂಜೆ ಸಲ್ಲಿಸಲಿದ್ದಾರೆ. ಆ ಬಳಿಕ ಮಧ್ಯಾಹ್ನ 1.30ಕ್ಕೆ ರಾಜಾಂಗಣದಲ್ಲಿ ನಡೆಯುವ ಸಭಾಕಾರ್ಯಕ್ರಮದಲ್ಲಿ ಪುತ್ತಿಗೆ ಶ್ರೀಪಾದರು ಆಶೀರ್ವಚನ ನೀಡಲಿದ್ದಾರೆ. ಶಾಸಕ ಯಶ್ ಪಾಲ್ ಸುವರ್ಣ ಕಾರ್ಯಕ್ರಮ ಉದ್ಘಾಟಿಸಲಿದ್ದಾರೆ. ಉಡುಪಿ ಜಿಲ್ಲಾ ಶ್ರೀ ಕನಕದಾಸ ಸಮಾಜ ಸೇವಾ ಸಂಘದ ಹನುಮಂತ ಎಸ್. ಡೊಳ್ಳಿನ ಅಧ್ಯಕ್ಷತೆ ವಹಿಸಲಿದ್ದಾರೆ.

ಈ ಸಂದರ್ಭದಲ್ಲಿ ಉದ್ಯಮಿ ಕೆ. ಕೃಷ್ಣಮೂರ್ತಿ ಆಚಾರ್ಯ ಅವರಿಗೆ ಭಕ್ತ ಕನಕ ಪುರಸ್ಕಾರ ಪ್ರದಾನ ಮಾಡಲಾಗುವುದು ಎಂದು ತಿಳಿಸಿದರು.
ಸುದ್ದಿಗೋಷ್ಠಿಯಲ್ಲಿ ಸಂಘದ ಅಧ್ಯಕ್ಷ ಹನುಮಂತ ಎಸ್. ಡೊಳ್ಳಿನ, ಪ್ರಧಾನ ಕಾರ್ಯದರ್ಶಿ ಸಂಗಮೇಶ ಬ. ಆಸಂಗಿ, ಜೊತೆ ಕಾರ್ಯದರ್ಶಿ ದೇವು ಎಸ್. ಪೂಜಾರ, ಬ್ರಹ್ಮಾವರ ತಾಲೂಕು ಅಧ್ಯಕ್ಷ ಮಹಾಂತೇಶ್ ಕಾಟಾಪುರ, ಸಲಹೆಗಾರರಾದ ಮುತ್ತಪ್ಪ ಕುರಿ, ಬಸವರಾಜ ಕುರುಬ ಉಪಸ್ಥಿತರಿದ್ದರು.

Vishwa News 24

Recent Posts

ಕಾಪು: ಫ್ಲ್ಯಾಟ್ ನಿರ್ಮಿಸಿ ಹಸ್ತಾಂತರಿಸುವುದಾಗಿ ಭರವಸೆ ನೀಡಿ 15 ಲಕ್ಷ ರೂ.ವಂಚನೆ – vishwanews24

ಕಾಪು: ಫ್ಲ್ಯಾಟ್ ನಿರ್ಮಿಸಿ ಹಸ್ತಾಂತರಿಸುವುದಾಗಿ ಭರವಸೆ ನೀಡಿ 15 ಲಕ್ಷ ರೂ.ವಂಚನೆ ಕಾಪು: ಫ್ಲ್ಯಾಟ್ ನಿರ್ಮಿಸಿ ಹಸ್ತಾಂತರಿಸುವುದಾಗಿ ಭರವಸೆ ನೀಡಿ…

6 hours ago

ಹಾಸನ : ಡೆತ್ ನೋಟ್ ಬರೆದಿಟ್ಟು ಪ್ಯಾರಾಮೆಡಿಕಲ್ ವಿದ್ಯಾರ್ಥಿ ಆತ್ಮಹತ್ಯೆ – vishwanews24

ಹಾಸನ : ಡೆತ್ ನೋಟ್ ಬರೆದಿಟ್ಟು ಪ್ಯಾರಾಮೆಡಿಕಲ್ ವಿದ್ಯಾರ್ಥಿ ಆತ್ಮಹತ್ಯೆ ಹಾಸನ: ಡೆತ್ ನೋಟ್ ಬರೆದಿಟ್ಟು 21 ವರ್ಷದ ಪ್ಯಾರಾಮೆಡಿಕಲ್ ವಿದ್ಯಾರ್ಥಿಯೋರ್ವ…

6 hours ago

ಮೂಳೂರು ಹಾಲು ಉತ್ಪಾದಕರ ಸಹಕಾರ ಸಂಘದ ವಾರ್ಷಿಕ ಸಾಮಾನ್ಯ ಸಭೆ – vishwanews24

ಮೂಳೂರು ಹಾಲು ಉತ್ಪಾದಕರ ಸಹಕಾರ ಸಂಘ ಸಭೆ ೨೦೨೩-೨೦೨೪ ಮೂಳೂರು ಹಾಲು ಉತ್ಪಾದಕರ ಸಹಕಾರ ಸಂಘದ ವಾರ್ಷಿಕ ಸಾಮಾನ್ಯ ಸಭೆ…

6 hours ago

ಆನ್‌ಲೈನ್‌ನಲ್ಲಿ ಮಾರಾಟ ಮಾಡುವ ತರಕಾರಿಗಳಿಗೆ ಕೆಮಿಕಲ್‌ ಸ್ಪ್ರೇ ಬಗ್ಗೆ ಕ್ರಮ : ಖಾದರ್‌ – vishwanews24

ಆನ್‌ಲೈನ್‌ನಲ್ಲಿ ಮಾರಾಟ ಮಾಡೋ ತರಕಾರಿಗೆ ಕೆಮಿಕಲ್‌ ಸ್ಪ್ರೇ ಮಾಡುವ ಬಗ್ಗೆ ದೂರು ಬಂದಿದೆ.. ಪರಿಶೀಲನೆ ಮಾಡ್ತಿದ್ದೇವೆ, ಮುಂದಿನ ದಿನಗಳಲ್ಲಿ ಕ್ರಮ…

8 hours ago

ಕಾಸರಗೋಡು : ನಿಯಂತ್ರಣ ತಪ್ಪಿ ಡಿವೈಡರ್‌ಗೆ ಢಿಕ್ಕಿ ಹೊಡೆದ ಆ್ಯಂಬುಲೆನ್ಸ್ ; ರೋಗಿ ಮೃತ್ಯು, ನಾಲ್ವರಿಗೆ ಗಾಯ – vishwanews24

ಕಾಸರಗೋಡು : ನಿಯಂತ್ರಣ ತಪ್ಪಿ ಡಿವೈಡರ್‌ಗೆ ಢಿಕ್ಕಿ ಹೊಡೆದ ಆ್ಯಂಬುಲೆನ್ಸ್ ; ರೋಗಿ ಮೃತ್ಯು, ನಾಲ್ವರಿಗೆ ಗಾಯ ಕಾಸರಗೋಡು :…

8 hours ago

ಇನ್ನು ಮುಂದೆ ರಾಜ್ಯ ಸರ್ಕಾರದ ಯಾವುದೇ ಕಾರ್ಯಕ್ರಮಗಳಲ್ಲಿ ವಂದೇ ಮಾತರಂನ ಎರಡು ಚರಣ ಮಾತ್ರ ಬಳಕೆ:  CM ಡಿ.ಕೆ. ಶಿ ಸ್ಪಷ್ಟನೆ – vishwanews24

ರಾಜ್ಯ ಸರ್ಕಾರದ ಯಾವುದೇ ಕಾರ್ಯಕ್ರಮಗಳಲ್ಲಿ ಇನ್ನು ಮುಂದೆ ವಂದೇ ಮಾತರಂನ ಎರಡು ಚರಣ ಮಾತ್ರ ಬಳಕೆ:  ಡಿ.ಕೆ. ಶಿ ಸ್ಪಷ್ಟನೆ…

8 hours ago