ಉಡುಪಿ: ಉಡುಪಿ ಜಿಲ್ಲಾ ಶ್ರೀ ಕನಕದಾಸ ಸಮಾಜ ಸೇವಾ ಸಂಘ ಹಾಗೂ ಪರ್ಯಾಯ ಶ್ರೀ ಪುತ್ತಿಗೆ ಮಠ ಉಡುಪಿ ಕೃಷ್ಣಮಠದ ಸಂಯುಕ್ತ ಆಶ್ರಯದಲ್ಲಿ ಶ್ರೀ ಕನಕದಾಸರ 538ನೇ ಜಯಂತಿ ಮಹೋತ್ಸವ ಹಾಗೂ 351 ಕುಂಭ ಕಲಶ ಮೆರವಣಿಗೆ ನ.8ರಂದು ಉಡುಪಿಯಲ್ಲಿ ನಡೆಯಲಿದೆ ಎಂದು ಉಡುಪಿ ಜಿಲ್ಲಾ ಶ್ರೀ ಕನಕದಾಸ ಸಮಾಜ ಸೇವಾ ಸಂಘದ ಗೌರವಾಧ್ಯಕ್ಷ ಸಿದ್ದರಾಜು ಕೆ.ಎಸ್. ತಿಳಿಸಿದರು.
ಈ ಕುರಿತು ಸುದ್ದಿಗೋಷ್ಠಿಯಲ್ಲಿ ಮಾಹಿತಿ ನೀಡಿದ ಅವರು, ಅಂದು ಬೆಳಿಗ್ಗೆ 10ಗಂಟೆಗೆ ಉಡುಪಿ ಅಜ್ಜರಕಾಡಿನ ಭುಜಂಗ್ ಪಾರ್ಕ್ ನಲ್ಲಿ ಕನಕದಾಸರ ಜಯಂತಿ ನಡೆಯಲಿದೆ. ಬೆಳಿಗ್ಗೆ 11ಗಂಟೆಗೆ ಉಡುಪಿ ಜೋಡುಕಟ್ಟೆಯಲ್ಲಿ ಕುಂಭ ಕಲಶ ಮೆರವಣಿಗೆಗೆ ಕರ್ನಾಟಕ ಪ್ರದೇಶ ಕುರುಬರ ಸಂಘದ ಮಹಿಳಾ ಘಟಕದ ರಾಜ್ಯಾಧ್ಯಕ್ಷೆ ಪ್ರಭಾವತಿ ಕೆ.ಆರ್ ಚಾಲನೆ ನೀಡಲಿದ್ದಾರೆ. ಬಳಿಕ ಮೆರವಣಿಗೆ ಜೋಡುಕಟ್ಟೆಯಿಂದ ಶ್ರೀಕೃಷ್ಣಮಠದ ಕನಕದಾಸ ಮಂದಿರದವರೆಗೆ ಸಾಗಿಬರಲಿದೆ ಎಂದರು.
ಮಧ್ಯಾಹ್ನ 1 ಗಂಟೆಗೆ ಕನಕದಾಸರ ಮೂರ್ತಿಗೆ ಪರ್ಯಾಯ ಪುತ್ತಿಗೆ ಮಠದ ಶ್ರೀ ಸುಗುಣೇಂದ್ರತೀರ್ಥ ಶ್ರೀಪಾದರು ವಿಶೇಷ ಪೂಜೆ ಸಲ್ಲಿಸಲಿದ್ದಾರೆ. ಆ ಬಳಿಕ ಮಧ್ಯಾಹ್ನ 1.30ಕ್ಕೆ ರಾಜಾಂಗಣದಲ್ಲಿ ನಡೆಯುವ ಸಭಾಕಾರ್ಯಕ್ರಮದಲ್ಲಿ ಪುತ್ತಿಗೆ ಶ್ರೀಪಾದರು ಆಶೀರ್ವಚನ ನೀಡಲಿದ್ದಾರೆ. ಶಾಸಕ ಯಶ್ ಪಾಲ್ ಸುವರ್ಣ ಕಾರ್ಯಕ್ರಮ ಉದ್ಘಾಟಿಸಲಿದ್ದಾರೆ. ಉಡುಪಿ ಜಿಲ್ಲಾ ಶ್ರೀ ಕನಕದಾಸ ಸಮಾಜ ಸೇವಾ ಸಂಘದ ಹನುಮಂತ ಎಸ್. ಡೊಳ್ಳಿನ ಅಧ್ಯಕ್ಷತೆ ವಹಿಸಲಿದ್ದಾರೆ.
ಈ ಸಂದರ್ಭದಲ್ಲಿ ಉದ್ಯಮಿ ಕೆ. ಕೃಷ್ಣಮೂರ್ತಿ ಆಚಾರ್ಯ ಅವರಿಗೆ ಭಕ್ತ ಕನಕ ಪುರಸ್ಕಾರ ಪ್ರದಾನ ಮಾಡಲಾಗುವುದು ಎಂದು ತಿಳಿಸಿದರು.
ಸುದ್ದಿಗೋಷ್ಠಿಯಲ್ಲಿ ಸಂಘದ ಅಧ್ಯಕ್ಷ ಹನುಮಂತ ಎಸ್. ಡೊಳ್ಳಿನ, ಪ್ರಧಾನ ಕಾರ್ಯದರ್ಶಿ ಸಂಗಮೇಶ ಬ. ಆಸಂಗಿ, ಜೊತೆ ಕಾರ್ಯದರ್ಶಿ ದೇವು ಎಸ್. ಪೂಜಾರ, ಬ್ರಹ್ಮಾವರ ತಾಲೂಕು ಅಧ್ಯಕ್ಷ ಮಹಾಂತೇಶ್ ಕಾಟಾಪುರ, ಸಲಹೆಗಾರರಾದ ಮುತ್ತಪ್ಪ ಕುರಿ, ಬಸವರಾಜ ಕುರುಬ ಉಪಸ್ಥಿತರಿದ್ದರು.
ಕೊಲ್ಲೂರು : ಅಪಘಾತದಿಂದ ಮೃತಪಟ್ಟ ಮಹಿಳೆಯ ಚಿನ್ನಾಭರಣ ಕಳವು ಪ್ರಕರಣ : ಆರೋಪಿ ಬಂಧನ ಉಡುಪಿ: ಬೈಂದೂರು ತಾಲೂಕು ಕೊಲ್ಲೂರು…
ಭಟ್ಕಳ ಕಪ್ಪೆಚಿಪ್ಪು ದುರಂತ : ಮೃತ 11 ಮಂದಿಯ ಸಾಮೂಹಿಕ ಅಂತ್ಯಕ್ರಿಯೆ ಕಾರವಾರ: ಕಪ್ಪೆಚಿಪ್ಪು ತೆಗೆಯಲು ಹೋಗಿ ಸಾವನ್ನಪ್ಪಿದ್ದ 11 ಮಂದಿಯ…
ಕಂದಕಕ್ಕೆ ಉರುಳಿದ ಕಾರು : ಎಂಟು ಮಂದಿ ಸಾವು ಜೈಪುರ: ಸ್ಕಾರ್ಪಿಯೋ ಎಸ್ಯುವಿ ಕಾರೊಂದು ಸುಮಾರು 700 ಅಡಿ ಕಂದಕಕ್ಕೆ…
ಕೊಲ್ಲೂರು : ಅಪಘಾತದಿಂದ ಮೃತಪಟ್ಟ ಮಹಿಳೆಯ ಚಿನ್ನಾಭರಣ ಕಳವು ; ಆರೋಪಿ ಪತ್ತೆಗೆ ತೀವ್ರಗೊಂಡ ತನಿಖೆ ಕೊಲ್ಲೂರು: ಮೇ 17ರ…
ಮಂಗಳೂರು : ಹೆಚ್ಚುತ್ತಿರುವ ಎಬೋಲಾ ವೈರಸ್ ಪ್ರಕರಣ ; ವಿಮಾನ ನಿಲ್ದಾಣದಲ್ಲಿ ಹೈ ಅಲರ್ಟ್ ಘೋಷಣೆ ಮಂಗಳೂರು : ಆಫ್ರಿಕಾ…
ಇ.ಡಿ, ಐಟಿಯವರು ಬಿಜೆಪಿಗೆ ಸಹಾಯ ಮಾಡುತ್ತಿದ್ದಾರೆ : ದಿನೇಶ್ ಗುಂಡೂರಾವ್ ಆರೋಪ ಮಂಗಳೂರು: ಚುನಾವಣೆ ಗೆಲ್ಲಲು ಬಿಜೆಪಿಯಿಂದ ಚುನಾವಣಾ ಆಯೋಗದ…