ಉಡುಪಿ: ಪಕ್ಷದ ವಿಶ್ವಾಸಕ್ಕೆ ಚ್ಯುತಿ ಬಾರದ ರೀತಿಯಲ್ಲಿ ನಾನು ಕೆಲಸ ಮಾಡುತ್ತೇನೆ : ಯಶ್ಪಾಲ್ ಸುವರ್ಣ – Vishwanews24
ಉಡುಪಿ: ಪಕ್ಷದ ವಿಶ್ವಾಸಕ್ಕೆ ಚ್ಯುತಿ ಬಾರದ ರೀತಿಯಲ್ಲಿ ನಾನು ಕೆಲಸ ಮಾಡುತ್ತೇನೆ : ಯಶ್ಪಾಲ್ ಸುವರ್ಣ
ಉಡುಪಿ: “ಒಬ್ಬ ಸಾಮಾನ್ಯ ಕಾರ್ಯಕರ್ತನನ್ನು ಗುರುತಿಸಿ ಪಕ್ಷ ನನಗೆ ಉಡುಪಿ ವಿದಾನಸಭಾ ಕ್ಷೇತ್ರದಿಂದ ಅವಕಾಶ ನೀಡಿದ್ದು, ಇದಕ್ಕಾಗಿ ಪಕ್ಷದ ಎಲ್ಲಾ ಹಿರಿಯರಿಗೆ ನನ್ನ ಕೃತಜ್ಞತೆಗಳು. ಪಕ್ಷದ ವಿಶ್ವಾಸಕ್ಕೆ ಚ್ಯುತಿ ಬಾರದ ರೀತಿಯಲ್ಲಿ ನಾನು ಕೆಲಸ ಮಾಡುತ್ತೇನೆ” ಎಂದು ಬಿಜೆಪಿ ಅಭ್ಯರ್ಥಿ ಯಶ್ ಪಾಲ್ ಸುವರ್ಣ ಟಿಕೆಟ್ ಘೋಷಣೆಯಾದ ಬಳಿಕ ಮಾಧ್ಯಮಕ್ಕೆ ಮೊದಲ ಬಾರಿ ಪ್ರತಿಕ್ರಿಯಿಸಿದ್ದಾರೆ.
ಕಾಪು ಕ್ಷೇತ್ರದ ಬದಲು ಬಿಜೆಪಿ ಉಡುಪಿಯಲ್ಲಿ ಟಿಕೆಟ್ ನೀಡಿದ್ದು, ಇದಕ್ಕೆ ಉತ್ತರಿಸಿದ ಅವರು ” ನಾನು ಯಾವುದೇ ಒಂದು ಕ್ಷೇತ್ರಕ್ಕೆ ಸೀಮಿತವಾದ ವ್ಯಕ್ತಿ ಅಲ್ಲ.ದೇಶದ ಮೂಲೆ ಮೂಲೆಗಳಲ್ಲಿ ಪಕ್ಷಕ್ಕಾಗಿ ಹಾಗೂ ವಿವಿಧ ರಾಜ್ಯಗಳ ಚುನಾವಣೆಗಳಲ್ಲಿ ಪಕ್ಷಕ್ಕಾಗಿ ಕೆಲಸ ಮಾಡಿದ್ದೇನೆ.ಪಕ್ಷ ನನಗೆ ಎಲ್ಲಿ ಕೆಲಸ ಮಾಡಬೇಕು ಎಂಬ ಸೂಚನೆ ನೀಡುತ್ತದೆ ಆ ಪ್ರಕಾರ ಕೆಲಸ ಮಾಡುತ್ತೇನೆ” ಎಂದು ಹೇಳಿದ್ದಾರೆ.
ಕಾಪು ಸುರೇಶ್ ಶೆಟ್ಟಿ ಗುರ್ಮೆ ಅವರಿಗೆ ಬಿಜೆಪಿ ಟಿಕೆಟ್ ಫೈನಲ್ – VishwaNews24
“ರಘುಪತಿ ಭಟ್ ಟಿಕೆಟ್ ತಪ್ಪಿದ ಹಿನ್ನಲೆಯಲ್ಲಿ ಮನವೊಲಿಕೆ ಬಗ್ಗೆ ಮಾತನಾಡಿದ ಅವರು,ರಘುಪತಿ ಭಟ್ ನನ್ನ ಮಾರ್ಗದರ್ಶಕರು ನಗರಸಭೆ ಚುನಾವಣೆ ಸಂದರ್ಭದಲ್ಲಿ ಕೂಡಾ ನನ್ನ ಪರವಾಗಿ ಕೆಲಸ ಮಾಡಿದ್ದರು.ಪಕ್ಷದ ವಿವಿಧ ಜವಬ್ದಾರಿಗಳನ್ನು ನಿರ್ವಹಿಸುವ ಸಂದರ್ಭದಲ್ಲಿ ಕೂಡಾ ನನಗೆ ಮಾರ್ಗದರ್ಶನ ಮಾಡಿದ್ದಾರೆ.ಅವರ ಸಲಹೆ ಸೂಚನೆ ಪಡೆದುಕೊಂಡು ನಾನು ಮುಂದುವರೆಯುತ್ತೇನೆ” ಎಂದು ಹೇಳಿದ್ದಾರೆ.
“ಮೊಗವೀರನಾದರೂ ಇವತ್ತು ನನ್ನನ್ನು ಅಷ್ಟ ಮಠದ ಯತಿಗಳು ಮತ್ತು ಇತರರು ಹಿಂದೂ ಎಂದೇ ಮನಗಾಣುತ್ತಾರೆ.ನಗರಸಭೆ ಸದಸ್ಯನಾಗುವ ಸಂದರ್ಭದಲ್ಲಿ ಎಲ್ಲಾ ಸಮಾಜದ ಬಾಂಧವರು ನನ್ನನ್ನು ಬೆಂಬಲಿಸಿದ್ದಾರೆ.ಹಿರಿಯರ ಮಾರ್ಗದರ್ಶನ ಕಿರಿಯರ ಸಹಕಾರದಲ್ಲಿ ಮುಂದುವರೆಯುತ್ತೇನೆ” ಎಂದು ಹೇಳಿದ್ದಾರೆ.
