Featured

ಉಡುಪಿ: ಪಕ್ಷದ ವಿಶ್ವಾಸಕ್ಕೆ ಚ್ಯುತಿ ಬಾರದ ರೀತಿಯಲ್ಲಿ ನಾನು ಕೆಲಸ ಮಾಡುತ್ತೇನೆ : ಯಶ್‌ಪಾಲ್ ಸುವರ್ಣ – Vishwanews24

ಉಡುಪಿ: ಪಕ್ಷದ ವಿಶ್ವಾಸಕ್ಕೆ ಚ್ಯುತಿ ಬಾರದ ರೀತಿಯಲ್ಲಿ ನಾನು ಕೆಲಸ ಮಾಡುತ್ತೇನೆ : ಯಶ್‌ಪಾಲ್ ಸುವರ್ಣ

ಉಡುಪಿ: “ಒಬ್ಬ ಸಾಮಾನ್ಯ ಕಾರ್ಯಕರ್ತನನ್ನು ಗುರುತಿಸಿ ಪಕ್ಷ ನನಗೆ ಉಡುಪಿ ವಿದಾನಸಭಾ ಕ್ಷೇತ್ರದಿಂದ ಅವಕಾಶ ನೀಡಿದ್ದು, ಇದಕ್ಕಾಗಿ ಪಕ್ಷದ ಎಲ್ಲಾ ಹಿರಿಯರಿಗೆ ನನ್ನ ಕೃತಜ್ಞತೆಗಳು. ಪಕ್ಷದ ವಿಶ್ವಾಸಕ್ಕೆ ಚ್ಯುತಿ ಬಾರದ ರೀತಿಯಲ್ಲಿ ನಾನು ಕೆಲಸ ಮಾಡುತ್ತೇನೆ” ಎಂದು ಬಿಜೆಪಿ ಅಭ್ಯರ್ಥಿ ಯಶ್ ಪಾಲ್ ಸುವರ್ಣ ಟಿಕೆಟ್ ಘೋಷಣೆಯಾದ ಬಳಿಕ ಮಾಧ್ಯಮಕ್ಕೆ ಮೊದಲ ಬಾರಿ ಪ್ರತಿಕ್ರಿಯಿಸಿದ್ದಾರೆ.

ಕಾಪು ಕ್ಷೇತ್ರದ ಬದಲು ಬಿಜೆಪಿ ಉಡುಪಿಯಲ್ಲಿ ಟಿಕೆಟ್ ನೀಡಿದ್ದು, ಇದಕ್ಕೆ ಉತ್ತರಿಸಿದ ಅವರು ” ನಾನು ಯಾವುದೇ ಒಂದು ಕ್ಷೇತ್ರಕ್ಕೆ ಸೀಮಿತವಾದ ವ್ಯಕ್ತಿ ಅಲ್ಲ.ದೇಶದ ಮೂಲೆ ಮೂಲೆಗಳಲ್ಲಿ ಪಕ್ಷಕ್ಕಾಗಿ ಹಾಗೂ ವಿವಿಧ ರಾಜ್ಯಗಳ ಚುನಾವಣೆಗಳಲ್ಲಿ ಪಕ್ಷಕ್ಕಾಗಿ ಕೆಲಸ ಮಾಡಿದ್ದೇನೆ.ಪಕ್ಷ ನನಗೆ ಎಲ್ಲಿ ಕೆಲಸ ಮಾಡಬೇಕು ಎಂಬ ಸೂಚನೆ ನೀಡುತ್ತದೆ ಆ ಪ್ರಕಾರ ಕೆಲಸ ಮಾಡುತ್ತೇನೆ” ಎಂದು ಹೇಳಿದ್ದಾರೆ.

“ರಘುಪತಿ ಭಟ್ ಟಿಕೆಟ್ ತಪ್ಪಿದ ಹಿನ್ನಲೆಯಲ್ಲಿ ಮನವೊಲಿಕೆ ಬಗ್ಗೆ ಮಾತನಾಡಿದ ಅವರು,ರಘುಪತಿ ಭಟ್ ನನ್ನ ಮಾರ್ಗದರ್ಶಕರು ನಗರಸಭೆ ಚುನಾವಣೆ ಸಂದರ್ಭದಲ್ಲಿ ಕೂಡಾ ನನ್ನ ಪರವಾಗಿ ಕೆಲಸ ಮಾಡಿದ್ದರು.ಪಕ್ಷದ ವಿವಿಧ ಜವಬ್ದಾರಿಗಳನ್ನು ನಿರ್ವಹಿಸುವ ಸಂದರ್ಭದಲ್ಲಿ ಕೂಡಾ ನನಗೆ ಮಾರ್ಗದರ್ಶನ ಮಾಡಿದ್ದಾರೆ.ಅವರ ಸಲಹೆ ಸೂಚನೆ ಪಡೆದುಕೊಂಡು ನಾನು ಮುಂದುವರೆಯುತ್ತೇನೆ” ಎಂದು ಹೇಳಿದ್ದಾರೆ.

“ಮೊಗವೀರನಾದರೂ ಇವತ್ತು ನನ್ನನ್ನು ಅಷ್ಟ ಮಠದ ಯತಿಗಳು ಮತ್ತು ಇತರರು ಹಿಂದೂ ಎಂದೇ ಮನಗಾಣುತ್ತಾರೆ.ನಗರಸಭೆ ಸದಸ್ಯನಾಗುವ ಸಂದರ್ಭದಲ್ಲಿ ಎಲ್ಲಾ ಸಮಾಜದ ಬಾಂಧವರು ನನ್ನನ್ನು ಬೆಂಬಲಿಸಿದ್ದಾರೆ.ಹಿರಿಯರ ಮಾರ್ಗದರ್ಶನ ಕಿರಿಯರ ಸಹಕಾರದಲ್ಲಿ ಮುಂದುವರೆಯುತ್ತೇನೆ” ಎಂದು ಹೇಳಿದ್ದಾರೆ.

Vishwa News 24

Recent Posts

ಉಳ್ಳಾಲ: ನಾಪತ್ತೆಯಾಗಿದ್ದ ಕುಂದಾಪುರ ಮೂಲದ ಮೀನುಗಾರನ  ಮೃತದೇಹ ಪತ್ತೆ -vishwanews24

ಉಳ್ಳಾಲ: ನಾಪತ್ತೆಯಾಗಿದ್ದ ಕುಂದಾಪುರ ಮೂಲದ ಮೀನುಗಾರನ  ಮೃತದೇಹ ಪತ್ತೆ ಉಳ್ಳಾಲ : ಮೀನುಗಾರಿಕೆಗೆ ತೆರಳಿದ್ದ ವೇಳೆ ದೈತ್ಯ ಗಾತ್ರದ ಅಲೆಗೆ…

15 hours ago

ನಿರೂಪಣಾ ವೃತ್ತಿಗೆ ಅಧಿಕೃತವಾಗಿ ನಿವೃತ್ತಿ ಘೋಷಿಸಿದ ಅನುಪಮಾ ಗೌಡ -vishwanews24

ನಿರೂಪಣಾ ವೃತ್ತಿಗೆ ಅಧಿಕೃತವಾಗಿ ನಿವೃತ್ತಿ ಘೋಷಿಸಿದ ಅನುಪಮಾ ಗೌಡ ಬೆಂಗಳೂರು : ನಟಿ ಅನುಪಮಾ ಗೌಡ ಅವರು ನಟನೆಯ ಮೂಲಕ…

15 hours ago

ಉಪ್ಪೂರು : ವಯೋವಂದನ ಆತಿಥ್ಯ ಗೃಹ “ಸೈಟ್ ಆಫೀಸ್” ಉದ್ಘಾಟನೆ ; ರಾಷ್ಟ್ರಧ್ವಜಾರೋಹಣ, ವೃಕ್ಷಾರೋಪಣ ಕಾರ್ಯಕ್ರಮ -vishwanews24

ಉಪ್ಪೂರು : ವಯೋವಂದನ ಆತಿಥ್ಯ ಗೃಹ "ಸೈಟ್ ಆಫೀಸ್" ಉದ್ಘಾಟನೆ ; ರಾಷ್ಟ್ರಧ್ವಜಾರೋಹಣ, ವೃಕ್ಷಾರೋಪಣ ಕಾರ್ಯಕ್ರಮ ಉಡುಪಿ ಜಿಲ್ಲೆ ಬ್ರಹ್ಮಾವರ…

3 days ago

ಪುತ್ತೂರು:  ಕೆಎಸ್‌ಆರ್‌ಟಿಸಿ ಬಸ್ – ಬೈಕ್ ನಡುವೆ ಭೀಕರ ಅಪಘಾತ : ಸವಾರ ಸ್ಥಳದಲ್ಲೇ ಮೃತ್ಯು – vishwanews24

ಪುತ್ತೂರು:  ಕೆಎಸ್‌ಆರ್‌ಟಿಸಿ ಬಸ್ ಮತ್ತು ಬೈಕ್ ನಡುವೆ  ಭೀಕರ ಅಪಘಾತ: ಸವಾರ ಸ್ಥಳದಲ್ಲೇ ಮೃತ್ಯು ಪುತ್ತೂರು: ಕೆಯ್ಯರು ಗ್ರಾಮದ ಬೊಳಿಕ್ಕಳ…

4 days ago

ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ – vishwanews24

ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ ಬೆಂಗಳೂರು : ಕೇಂದ್ರ ಸರಕಾರದ…

4 days ago

ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ – vishwanews24

ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ ಬೆಂಗಳೂರು: ನಗರದ ರಾಜೇಶ್ವರಿ ನಗರದಲ್ಲಿ ಹೆಂಡತಿಯನ್ನು ಕೊಂದು ಗಂಡ…

4 days ago