Featured

ಉಡುಪಿ: ಪಕ್ಷದ ವಿಶ್ವಾಸಕ್ಕೆ ಚ್ಯುತಿ ಬಾರದ ರೀತಿಯಲ್ಲಿ ನಾನು ಕೆಲಸ ಮಾಡುತ್ತೇನೆ : ಯಶ್‌ಪಾಲ್ ಸುವರ್ಣ – Vishwanews24

ಉಡುಪಿ: ಪಕ್ಷದ ವಿಶ್ವಾಸಕ್ಕೆ ಚ್ಯುತಿ ಬಾರದ ರೀತಿಯಲ್ಲಿ ನಾನು ಕೆಲಸ ಮಾಡುತ್ತೇನೆ : ಯಶ್‌ಪಾಲ್ ಸುವರ್ಣ

ಉಡುಪಿ: “ಒಬ್ಬ ಸಾಮಾನ್ಯ ಕಾರ್ಯಕರ್ತನನ್ನು ಗುರುತಿಸಿ ಪಕ್ಷ ನನಗೆ ಉಡುಪಿ ವಿದಾನಸಭಾ ಕ್ಷೇತ್ರದಿಂದ ಅವಕಾಶ ನೀಡಿದ್ದು, ಇದಕ್ಕಾಗಿ ಪಕ್ಷದ ಎಲ್ಲಾ ಹಿರಿಯರಿಗೆ ನನ್ನ ಕೃತಜ್ಞತೆಗಳು. ಪಕ್ಷದ ವಿಶ್ವಾಸಕ್ಕೆ ಚ್ಯುತಿ ಬಾರದ ರೀತಿಯಲ್ಲಿ ನಾನು ಕೆಲಸ ಮಾಡುತ್ತೇನೆ” ಎಂದು ಬಿಜೆಪಿ ಅಭ್ಯರ್ಥಿ ಯಶ್ ಪಾಲ್ ಸುವರ್ಣ ಟಿಕೆಟ್ ಘೋಷಣೆಯಾದ ಬಳಿಕ ಮಾಧ್ಯಮಕ್ಕೆ ಮೊದಲ ಬಾರಿ ಪ್ರತಿಕ್ರಿಯಿಸಿದ್ದಾರೆ.

ಕಾಪು ಕ್ಷೇತ್ರದ ಬದಲು ಬಿಜೆಪಿ ಉಡುಪಿಯಲ್ಲಿ ಟಿಕೆಟ್ ನೀಡಿದ್ದು, ಇದಕ್ಕೆ ಉತ್ತರಿಸಿದ ಅವರು ” ನಾನು ಯಾವುದೇ ಒಂದು ಕ್ಷೇತ್ರಕ್ಕೆ ಸೀಮಿತವಾದ ವ್ಯಕ್ತಿ ಅಲ್ಲ.ದೇಶದ ಮೂಲೆ ಮೂಲೆಗಳಲ್ಲಿ ಪಕ್ಷಕ್ಕಾಗಿ ಹಾಗೂ ವಿವಿಧ ರಾಜ್ಯಗಳ ಚುನಾವಣೆಗಳಲ್ಲಿ ಪಕ್ಷಕ್ಕಾಗಿ ಕೆಲಸ ಮಾಡಿದ್ದೇನೆ.ಪಕ್ಷ ನನಗೆ ಎಲ್ಲಿ ಕೆಲಸ ಮಾಡಬೇಕು ಎಂಬ ಸೂಚನೆ ನೀಡುತ್ತದೆ ಆ ಪ್ರಕಾರ ಕೆಲಸ ಮಾಡುತ್ತೇನೆ” ಎಂದು ಹೇಳಿದ್ದಾರೆ.

“ರಘುಪತಿ ಭಟ್ ಟಿಕೆಟ್ ತಪ್ಪಿದ ಹಿನ್ನಲೆಯಲ್ಲಿ ಮನವೊಲಿಕೆ ಬಗ್ಗೆ ಮಾತನಾಡಿದ ಅವರು,ರಘುಪತಿ ಭಟ್ ನನ್ನ ಮಾರ್ಗದರ್ಶಕರು ನಗರಸಭೆ ಚುನಾವಣೆ ಸಂದರ್ಭದಲ್ಲಿ ಕೂಡಾ ನನ್ನ ಪರವಾಗಿ ಕೆಲಸ ಮಾಡಿದ್ದರು.ಪಕ್ಷದ ವಿವಿಧ ಜವಬ್ದಾರಿಗಳನ್ನು ನಿರ್ವಹಿಸುವ ಸಂದರ್ಭದಲ್ಲಿ ಕೂಡಾ ನನಗೆ ಮಾರ್ಗದರ್ಶನ ಮಾಡಿದ್ದಾರೆ.ಅವರ ಸಲಹೆ ಸೂಚನೆ ಪಡೆದುಕೊಂಡು ನಾನು ಮುಂದುವರೆಯುತ್ತೇನೆ” ಎಂದು ಹೇಳಿದ್ದಾರೆ.

“ಮೊಗವೀರನಾದರೂ ಇವತ್ತು ನನ್ನನ್ನು ಅಷ್ಟ ಮಠದ ಯತಿಗಳು ಮತ್ತು ಇತರರು ಹಿಂದೂ ಎಂದೇ ಮನಗಾಣುತ್ತಾರೆ.ನಗರಸಭೆ ಸದಸ್ಯನಾಗುವ ಸಂದರ್ಭದಲ್ಲಿ ಎಲ್ಲಾ ಸಮಾಜದ ಬಾಂಧವರು ನನ್ನನ್ನು ಬೆಂಬಲಿಸಿದ್ದಾರೆ.ಹಿರಿಯರ ಮಾರ್ಗದರ್ಶನ ಕಿರಿಯರ ಸಹಕಾರದಲ್ಲಿ ಮುಂದುವರೆಯುತ್ತೇನೆ” ಎಂದು ಹೇಳಿದ್ದಾರೆ.

Vishwa News 24

Recent Posts

ಪಾನ್ ಮಸಾಲಾ, ಗುಟ್ಕಾ ಮಾರಾಟ  ಬ್ಯಾನ್ ಎಚ್ಚರಿಕೆ ನೀಡಿದ್ದ ಸಿಎಂ : ರಾಜ್ಯದಲ್ಲಿ 32 ಪಾನ್ ಮಸಾಲಾ ಮಾದರಿ ಸಂಗ್ರಹ – vishwanews24

ಪಾನ್ ಮಸಾಲಾ, ಗುಟ್ಕಾ ಮಾರಾಟ  ಬ್ಯಾನ್ ಎಚ್ಚರಿಕೆ ನೀಡಿದ್ದ ಸಿಎಂ:  ರಾಜ್ಯದಲ್ಲಿ 32 ಪಾನ್ ಮಸಾಲಾ ಮಾದರಿ ಸಂಗ್ರಹ ಬೆಂಗಳೂರು:…

9 minutes ago

ರಾಮನಗರ : ಕ್ರಷರ್ ಕಲ್ಲು ಕ್ವಾರಿಯಲ್ಲಿ ಬಂಡೆ ಕುಸಿದು 7 ಕಾರ್ಮಿಕರ ದುರ್ಮರಣ, ಹಲವರಿಗೆ ಗಾಯ – vishwanews24

ರಾಮನಗರ : ಕ್ರಷರ್ ಕಲ್ಲು ಕ್ವಾರಿಯಲ್ಲಿ ಬಂಡೆ ಕುಸಿದು 7 ಕಾರ್ಮಿಕರ ದುರ್ಮರಣ, ಹಲವರಿಗೆ ಗಾಯ ರಾಮನಗರ: ರಾಮನಗರ ಜಿಲ್ಲೆಯ ಬೆಂಗಳೂರು…

21 minutes ago

ಉಡುಪಿ : ಪೋಲಿಸ್ ಕಾನ್ಸ್ಟೇಬಲ್ ಹುದ್ದೆಗೆ ಉಚಿತ ತರಭೇತಿ ಕಾರ್ಯಗಾರ – vishwanews24

ಉಡುಪಿ : ಪೋಲಿಸ್ ಕಾನ್ಸ್ಟೇಬಲ್ ಹುದ್ದೆಗೆ ಉಚಿತ ತರಭೇತಿ ಕಾರ್ಯಗಾರ ಕರ್ನಾಟಕ ರಾಜ್ಯ ಪೋಲಿಸ್ ಇಲಾಖೆಯಲ್ಲಿ ಸಿವಿಲ್ ಪೋಲಿಸ್ ಕಾನ್ಸ್ಟೇಬಲ್ 3395…

34 minutes ago

ಕಾರ್ಕಳ : ಸುದೀಪ್ ರೈ ಆತ್ಮಹತ್ಯೆ ಪ್ರಕರಣ ; ಆರೋಪಿ ಸೌಮ್ಯ ಶೆಟ್ಟಿ ಜಾಮೀನು ನಿರಾಕರಿಸಿದ ಹೈಕೋರ್ಟ್‌ – vishwanews24

ಕಾರ್ಕಳ : ಸುದೀಪ್ ರೈ ಆತ್ಮಹತ್ಯೆ ಪ್ರಕರಣ ; ಆರೋಪಿ ಸೌಮ್ಯ ಶೆಟ್ಟಿ ಜಾಮೀನು ನಿರಾಕರಿಸಿದ ಹೈಕೋರ್ಟ್‌ ಉಡುಪಿ : ಕಳೆದ…

51 minutes ago

ಇಂಡಿಗೋ ಪ್ರಯಾಣಿಕರಿಗೆ ಗುಡ್ ನ್ಯೂಸ್ : ಹೊಸ ‘ಲೈಟ್’ ದರದಲ್ಲಿ ಸಿಗಲಿದೆ  ಭರ್ಜರಿ ಲಾಭ -vishwanews24

ಇಂಡಿಗೋ ಪ್ರಯಾಣಿಕರಿಗೆ ಗುಡ್ ನ್ಯೂಸ್ : ಹೊಸ 'ಲೈಟ್' ದರದಲ್ಲಿ ಸಿಗಲಿದೆ  ಭರ್ಜರಿ ಲಾಭ ನವದೆಹಲಿ: ಭಾರತದ ಪ್ರಮುಖ ವಿಮಾನಯಾನ…

1 hour ago

ಉಡುಪಿ : ಸಿಎ, ವೈದ್ಯ, ಪತ್ರಿಕಾ ರಂಗದ ಸಾಧಕರಿಗೆ ಮಲಬಾರ್ ವಿಶ್ವ ಗೌರವ ಪುರಸ್ಕಾರ – vishwanews24

ಉಡುಪಿ : ಸಿಎ, ವೈದ್ಯ, ಪತ್ರಿಕಾ ರಂಗದ ಸಾಧಕರಿಗೆ ಮಲಬಾರ್ ವಿಶ್ವ ಗೌರವ ಪುರಸ್ಕಾರ ಉಡುಪಿ : ಮಲಬಾರ್ ಗೋಲ್ಡ್…

1 hour ago