ಉಡುಪಿ : ಟಿಕೆಟ್ ಮಿಸ್ ಆದ ಬೆನ್ನಲ್ಲೆ ಶಾಸಕ ರಘುಪತಿ ಭಟ್ ತಮ್ಮ ಅಸಮಧಾನ ವ್ಯಕ್ತಪಡಿಸಿದ್ದಾರೆ. ಬೇರೆ ಪಕ್ಷ ಸೇರುವುದಿಲ್ಲ ಆದರೆ ಟಿಕೆಟ್ ಹಂಚಿಕೆ ಸಂದರ್ಭ ಪಕ್ಷ ನಡೆಸಿಕೊಂಡ ರೀತಿ ಬೇಸರ ತಂದಿದೆ ಎಂದಿದ್ದಾರೆ.
ಪೆರಂಪಳ್ಳಿಯ ತಮ್ಮ ಮನೆಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪಕ್ಷ ಬಿಡುವ ಪ್ರಶ್ನೆಯೇ ಇಲ್ಲ. ಪಕ್ಷೇತರ ಅಭ್ಯರ್ಥಿಯಾಗಿ ನಿಲ್ಲುವ ಬಗ್ಗೆ ಇನ್ನೂ ನಿರ್ಧಾರ ಮಾಡಿಲ್ಲ. ಪಕ್ಷ ಸೀಟ್ ನೀಡದೇ ಇರುವುದಕ್ಕೆ ಬೇಸರವಿಲ್ಲ. ಆದರೆ, ಪಕ್ಷ ನಡೆಸಿಕೊಂಡ ರೀತಿ ಸಾಕಷ್ಟು ಬೇಸರ ತಂದಿದೆ ಮತ್ತು ಶಾಕ್ ಕೂಡ ಆಗಿದೆ.
ಕಾರ್ಯಕರ್ತರನ್ನು ನಡು ನೀರಿನಲ್ಲಿ ಬಿಡುವ ಪ್ರಶ್ನೆಯೇ ಇಲ್ಲ. ಯಾಕೆ ಹೀಗಾಯಿತು ಎಂಬುದು ತುಂಬ ಬೇಸರ ತಂದಿದೆ. ನಾನು ಬೆಳೆಸಿದ ಹುಡುಗ ಇಂದು ಅಭ್ಯರ್ಥಿಯಾಗಿದ್ದು, ಅವರಿಗೆ ಶುಭಾಶಯ ಕೋರುತ್ತೇನೆ. ಅಭ್ಯರ್ಥಿ ಬಗ್ಗೆ ಯಾವುದೇ ಆಕ್ಷೇಪವಿಲ್ಲ. ಉಡುಪಿಯಲ್ಲಿ ಪಾರ್ಟಿ ಕಟ್ಟಿದ್ದೇನೆ ಮತ್ತು ಬಿಜೆಪಿಯಿಂದ ಇಲ್ಲಿ ಯಾರು ನಿಂತರೂ ಗೆಲ್ಲಲಿದ್ದಾರೆ ಅಂತಹ ಸ್ಥಿತಿ ನಿರ್ಮಾಣ ಮಾಡಿದ್ದೇನೆ. ಪಕ್ಷಕ್ಕೆ ಈಗ ನನ್ನ ಅವಶ್ಯಕತೆ ಇಲ್ಲ ಎಂಬುದು ತೋರಿಸುತ್ತಿದ್ದಾರೆ. ಅಮಿತ್ ಶಾ ಬೇಡ, ರಾಜ್ಯ ನಾಯಕರು ಅಥವಾ ಜಿಲ್ಲಾಧ್ಯಕ್ಷರು ಕರೆ ಮಾಡದೇ ಇರುವುದು ಬೇಸರ ತಂದಿದೆ ಎಂದರು.
ಮಂಜನಾಡಿ ಮನೆ ಕುಸಿತ ದುರಂತ ; ಎರಡೂ ಕಾಲುಗಳನ್ನು ಕಳಕೊಂಡ ಅಶ್ವಿನಿಗೆ ಕೃತಕ ಕಾಲುಗಳ ಜೋಡಣೆಗೆ 23 ಲಕ್ಷ ನೆರವು …
ಮಂಗಳೂರು: ತಡೆಗೋಡೆ ಕುಸಿದು ಬಿದ್ದು ಮೂವರು ಮೃತ್ಯು; 5 ಲಕ್ಷ ರೂ.ಗಳ ಪರಿಹಾರ ಮೊತ್ತದ ಚೆಕ್ ವಿತರಣೆ ಮಂಗಳೂರು: ತಡೆಗೋಡೆ…
ಡಿವಿ ಸದಾನಂದಗೌಡ ಆಡಿಯೋ ವೈರಲ್ ಬಗ್ಗೆ ವಿಜಯೇಂದ್ರ ಫಸ್ಟ್ ರಿಯಾಕ್ಷನ್ ಆಡಿಯೋ ಧ್ವನಿ ತಮ್ಮದಲ್ಲ ಎಂದು ಸದಾನಂದಗೌಡರೇ ಹೇಳಿದ್ದಾರೆ ;…
ಬೆಳಗಾವಿ : ಜುಲೈ 10 ರಿಂದ ಆರ್ಎಸ್ಎಸ್ ಅಖಿಲ ಭಾರತೀಯ ಪ್ರಾಂತ ಪ್ರಚಾರಕರ ವಾರ್ಷಿಕ ಸಭೆ ಜು.6 ಕ್ಕೆ ಬೆಳಗಾವಿಗೆ…
ಸಪ್ತಪದಿ ಸೇರಿ ಅಗತ್ಯ ವಿಧಿ-ವಿಧಾನಗಳು ನೆರವೇರಿದಾಗ ಮಾತ್ರ ಹಿಂದೂ ವಿವಾಹ ಮಾನ್ಯ: ಗುಜರಾತ್ ಹೈಕೋರ್ಟ್ ಮಹತ್ವದ ತೀರ್ಪು ಅಹಮದಾಬಾದ್: ಕೇವಲ…
ಪಾನ್ ಮಸಾಲಾ, ಗುಟ್ಕಾ ಮಾರಾಟ ಬ್ಯಾನ್ ಎಚ್ಚರಿಕೆ ನೀಡಿದ್ದ ಸಿಎಂ: ರಾಜ್ಯದಲ್ಲಿ 32 ಪಾನ್ ಮಸಾಲಾ ಮಾದರಿ ಸಂಗ್ರಹ ಬೆಂಗಳೂರು:…