ಉಡುಪಿ: ಮಾಜಿ ಸಚಿವ, ಬಿಜೆಪಿ ಮುಖಂಡ ಪ್ರಮೋದ್ ಮಧ್ವರಾಜ್ ಇಂದು ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡುತ್ತ, ಮೊಗವೀರ ಮಹಾಜನ ಸಂಘದಲ್ಲಿ 12 ವರ್ಷ ಅಧ್ಯಕ್ಷನಾಗಿದ್ದೆ. ಕರ್ನಾಟಕ ಕರಾವಳಿ ಕ್ರಿಯಾ ಸಮಿತಿ ನ್ಯಾಷನಲ್ ಫಿಶ್ ವರ್ಕರ್ಸ್ ಫಾರಂ ನಲ್ಲಿ ಕೆಲಸ ಮಾಡಿದ್ದೇನೆ ಒಳನಾಡು ಮೀನುಗಾರಿಕಾ ನೀತಿಯನ್ನು ಕೂಡ ನಾನು ರೂಪಿಸಿದ್ದಾಗಿದೆ. ಮೀನುಗಾರಿಕೆಗೆ ನಾನು ತಂದೆ ತಾಯಿ ನೀಡಿರುವ ಸೇವೆ ಪರಿಗಣಿಸಬಹುದು.ಮೀನುಗಾರರ ಸಮಸ್ಯೆಯನ್ನು ಸರ್ಕಾರಗಳ ಮುಂದೆ ಸಮರ್ಥವಾಗಿ ಮಂಡಿಸುವ ಅನುಭವ ಜನಪ್ರತಿನಿಧಿ ಆದವರಿಗೆ ಬೇಕಾಗುತ್ತದೆ. ಮೀನುಗಾರರು ವಿಶ್ವಾಸ ಇಟ್ಟು ಇಡೀ ರಾಜ್ಯದಿಂದ ಬೇಡಿಕೆ ಬರುತ್ತಿದೆ ಆದ್ದರಿಂದ ಬಿಜೆಪಿ ಹಿಂದುಳಿದ ವರ್ಗಕ್ಕೆ ನ್ಯಾಯ ಒದಗಿಸಿಕೊಡುತ್ತದೆ ಎಂಬ ವಿಶ್ವಾಸ ಇದೆ ಎಂದು ಹೇಳಿದರು.
ಗುಜರಾತ್ ನಿಂದ ಪಶ್ಚಿಮ ಬಂಗಾಳದವರೆಗೆ ಒಬ್ಬನೇ ಒಬ್ಬ ಮೀನುಗಾರ ಸಂಸದ ಇಲ್ಲ. ದೇಶದ ಮೀನುಗಾರರ ಸಮಸ್ಯೆಯನ್ನು ಕೇಂದ್ರ ಸರ್ಕಾರದ ಮುಂದೆ ಸಂಸತ್ ನಲ್ಲಿ ಮಾತನಾಡಲಿಕ್ಕೆ ಯೋಗ್ಯ ವ್ಯಕ್ತಿ ಬೇಕು ಎಂಬುದು ಮೀನುಗಾರರಿಗೆ ಮನವರಿಕೆ ಆಗಿದೆ. ಮಾಧ್ಯಮಗಳ ಮೂಲಕ ಈ ವಿಚಾರ ನನ್ನ ಗಮನಕ್ಕೆ ಬಂದಿದೆ. ಆರು ತಿಂಗಳಿಂದ ನಾನು ಪ್ರವಾಸ ಮಾಡುತ್ತಿದ್ದೇನೆ. ರಾಜ್ಯದ 24 ಜಿಲ್ಲೆಯಲ್ಲಿ ಮೀನುಗಾರ ಮುಖಂಡರ ಸಭೆ ಮಾಡಿದ್ದೇನೆ. ಉಡುಪಿ ಚಿಕ್ಕಮಗಳೂರಿನಲ್ಲಿ 6000 ಬಿಜೆಪಿಯ ಕಾರ್ಯಕರ್ತರು ಮುಖಂಡರನ್ನು ಭೇಟಿ ಮಾಡಿದ್ದೇನೆ ಎಂದರು.
ಪಕ್ಷ ಬಯಸಿದರೆ ನಾನು ಚುನಾವಣೆಗೆ ನಿಲ್ಲಲು ಸಿದ್ಧ. ಪಕ್ಷ ಯಾರಿಗೆ ಟಿಕೆಟ್ ಕೊಟ್ಟರೂ ನಾನು ಸಂಪೂರ್ಣವಾಗಿ ಬೆಂಬಲಿಸುತ್ತೇನೆ. ಪಕ್ಷಕ್ಕೆ ನಾನು ಅರ್ಹ ಎಂದು ಕಂಡರೆ ನನಗೆ ಟಿಕೆಟ್ ಕೊಡುತ್ತದೆ. ಬೇರೆಯವರು ಅರ್ಹರು ಇದ್ದರೆ ಅವರಿಗೆ ಟಿಕೆಟ್ ಕೊಡುತ್ತದೆ ಎಂದರು.
ಕಾರ್ಯಕರ್ತರು ಮತ್ತು ಜನರ ಅಭಿಪ್ರಾಯ ನನ್ನ ಕಡೆಗೆ ಇದೆ ಎಂಬ ಮಾಹಿತಿ ಇದೆ. ಟಿಕೆಟ್ ಗೆ ಎಲ್ಲರಿಗೂ ಪ್ರಯತ್ನ ಮಾಡುವ ಹಕ್ಕು ಇದೆ. ನಾನು ಆಕಾಂಕ್ಷಿ ಎಂದು ನಾಯಕರ ಬಳಿ ಹೇಳಿದ್ದೇನೆ. ಚುನಾವಣೆಯಲ್ಲಿ ಎದುರಾಳಿಯನ್ನು ಲಘುವಾಗಿ ಪರಿಗಣಿಸುವುದು ಸರಿಯಲ್ಲ. ಪ್ರಜಾಪ್ರಭುತ್ವದಲ್ಲಿ ಎದುರಾಳಿಯನ್ನು ಲಘುವಾಗಿ ತೆಗೆದುಕೊಳ್ಳುವುದು ಸರಿಯಲ್ಲ ಎಂದರು.
ಧರ್ಮಸ್ಥಳ ಪ್ರಕರಣ : ವಿಠಲ್ ಗೌಡ ವಿರುದ್ಧ ಅರೆಸ್ಟ್ ವಾರಂಟ್: ಪೊಲೀಸರಿಂದ ಹುಡುಕಾಟ ಬೆಳ್ತಂಗಡಿ: ಧರ್ಮಸ್ಥಳ ಮತ್ತು ವೀರೇಂದ್ರ ಹೆಗ್ಗಡೆ…
ಕನ್ನಡ ಸಿನಿಮಾ ನಿರ್ಮಾಪಕ ಬಾ.ಮಾ ಹರೀಶ್ ಪುತ್ರ ಹೃದಯಾಘಾತದಿಂದ ನಿಧನ ಬೆಂಗಳೂರು: ಕನ್ನಡ ಸಿನಿಮಾ ರಂಗದ ಖ್ಯಾತ ನಿರ್ಮಾಪಕ ಬಾ.ಮಾ.…
ರಾಮನ ಹೆಸರಿನಲ್ಲಿ ನಡೆದ ಪ್ರತಿಯೊಂದು ರೂಪಾಯಿಯ ಲೆಕ್ಕದಿಂದ ತಪ್ಪಿಸಿಕೊಳ್ಳಲು ಸಾಧ್ಯವಿಲ್ಲ: ಬಿ.ಕೆ.ಹರಿಪ್ರಸಾದ್ ಬೆಂಗಳೂರು: ಶ್ರೀರಾಮನನ್ನು ರಾಜಕೀಯವಾಗಿ ಬಳಸಿಕೊಡವರು, ಶ್ರೀರಾಮನ ಹೆಸರಿನಲ್ಲಿ ಒಂದೊಂದು…
ಉಡುಪಿ: 36.29 ಲಕ್ಷ ರೂ. ಮೌಲ್ಯದ ಮಾದಕ ವಸ್ತುಗಳನ್ನ ನಾಶಪಡಿಸಿದ ಪೊಲೀಸರು ಉಡುಪಿ: ಕಠಿಣ ಕಾನೂನು ಕ್ರಮ ಮತ್ತು ಜಾಗೃತಿ…
ತಮಿಳು ಚಿತ್ರರಂಗದ ಹಿರಿಯ ನಟ, ನಿರ್ದೇಶಕ ಕೆ. ಭಾಗ್ಯರಾಜ್ ಹೃದಯಾಘಾತದಿಂದ ನಿಧನ ಚೆನ್ನೈ: ತಮಿಳು ಚಿತ್ರರಂಗದ ಹಿರಿಯ ನಟ, ನಿರ್ದೇಶಕ,…
ಅಯೋಧ್ಯೆ ರಾಮಮಂದಿರ ದೇಣಿಗೆ ಲೂಟಿ ಪ್ರಕರಣ ಎಚ್ಚರಿಕೆ ಗಂಟೆ: ಕೆ.ಎಸ್. ಈಶ್ವರಪ್ಪ ಶಿವಮೊಗ್ಗ: ಅಯೋಧ್ಯೆ ರಾಮಮಂದಿರದ ದೇಣಿಗೆ ಲೂಟಿ ಆಗಿರುವ…