ಉಡುಪಿ: ಮಾಜಿ ಸಚಿವ, ಬಿಜೆಪಿ ಮುಖಂಡ ಪ್ರಮೋದ್ ಮಧ್ವರಾಜ್ ಇಂದು ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡುತ್ತ, ಮೊಗವೀರ ಮಹಾಜನ ಸಂಘದಲ್ಲಿ 12 ವರ್ಷ ಅಧ್ಯಕ್ಷನಾಗಿದ್ದೆ. ಕರ್ನಾಟಕ ಕರಾವಳಿ ಕ್ರಿಯಾ ಸಮಿತಿ ನ್ಯಾಷನಲ್ ಫಿಶ್ ವರ್ಕರ್ಸ್ ಫಾರಂ ನಲ್ಲಿ ಕೆಲಸ ಮಾಡಿದ್ದೇನೆ ಒಳನಾಡು ಮೀನುಗಾರಿಕಾ ನೀತಿಯನ್ನು ಕೂಡ ನಾನು ರೂಪಿಸಿದ್ದಾಗಿದೆ. ಮೀನುಗಾರಿಕೆಗೆ ನಾನು ತಂದೆ ತಾಯಿ ನೀಡಿರುವ ಸೇವೆ ಪರಿಗಣಿಸಬಹುದು.ಮೀನುಗಾರರ ಸಮಸ್ಯೆಯನ್ನು ಸರ್ಕಾರಗಳ ಮುಂದೆ ಸಮರ್ಥವಾಗಿ ಮಂಡಿಸುವ ಅನುಭವ ಜನಪ್ರತಿನಿಧಿ ಆದವರಿಗೆ ಬೇಕಾಗುತ್ತದೆ. ಮೀನುಗಾರರು ವಿಶ್ವಾಸ ಇಟ್ಟು ಇಡೀ ರಾಜ್ಯದಿಂದ ಬೇಡಿಕೆ ಬರುತ್ತಿದೆ ಆದ್ದರಿಂದ ಬಿಜೆಪಿ ಹಿಂದುಳಿದ ವರ್ಗಕ್ಕೆ ನ್ಯಾಯ ಒದಗಿಸಿಕೊಡುತ್ತದೆ ಎಂಬ ವಿಶ್ವಾಸ ಇದೆ ಎಂದು ಹೇಳಿದರು.
ಗುಜರಾತ್ ನಿಂದ ಪಶ್ಚಿಮ ಬಂಗಾಳದವರೆಗೆ ಒಬ್ಬನೇ ಒಬ್ಬ ಮೀನುಗಾರ ಸಂಸದ ಇಲ್ಲ. ದೇಶದ ಮೀನುಗಾರರ ಸಮಸ್ಯೆಯನ್ನು ಕೇಂದ್ರ ಸರ್ಕಾರದ ಮುಂದೆ ಸಂಸತ್ ನಲ್ಲಿ ಮಾತನಾಡಲಿಕ್ಕೆ ಯೋಗ್ಯ ವ್ಯಕ್ತಿ ಬೇಕು ಎಂಬುದು ಮೀನುಗಾರರಿಗೆ ಮನವರಿಕೆ ಆಗಿದೆ. ಮಾಧ್ಯಮಗಳ ಮೂಲಕ ಈ ವಿಚಾರ ನನ್ನ ಗಮನಕ್ಕೆ ಬಂದಿದೆ. ಆರು ತಿಂಗಳಿಂದ ನಾನು ಪ್ರವಾಸ ಮಾಡುತ್ತಿದ್ದೇನೆ. ರಾಜ್ಯದ 24 ಜಿಲ್ಲೆಯಲ್ಲಿ ಮೀನುಗಾರ ಮುಖಂಡರ ಸಭೆ ಮಾಡಿದ್ದೇನೆ. ಉಡುಪಿ ಚಿಕ್ಕಮಗಳೂರಿನಲ್ಲಿ 6000 ಬಿಜೆಪಿಯ ಕಾರ್ಯಕರ್ತರು ಮುಖಂಡರನ್ನು ಭೇಟಿ ಮಾಡಿದ್ದೇನೆ ಎಂದರು.
ಪಕ್ಷ ಬಯಸಿದರೆ ನಾನು ಚುನಾವಣೆಗೆ ನಿಲ್ಲಲು ಸಿದ್ಧ. ಪಕ್ಷ ಯಾರಿಗೆ ಟಿಕೆಟ್ ಕೊಟ್ಟರೂ ನಾನು ಸಂಪೂರ್ಣವಾಗಿ ಬೆಂಬಲಿಸುತ್ತೇನೆ. ಪಕ್ಷಕ್ಕೆ ನಾನು ಅರ್ಹ ಎಂದು ಕಂಡರೆ ನನಗೆ ಟಿಕೆಟ್ ಕೊಡುತ್ತದೆ. ಬೇರೆಯವರು ಅರ್ಹರು ಇದ್ದರೆ ಅವರಿಗೆ ಟಿಕೆಟ್ ಕೊಡುತ್ತದೆ ಎಂದರು.
ಕಾರ್ಯಕರ್ತರು ಮತ್ತು ಜನರ ಅಭಿಪ್ರಾಯ ನನ್ನ ಕಡೆಗೆ ಇದೆ ಎಂಬ ಮಾಹಿತಿ ಇದೆ. ಟಿಕೆಟ್ ಗೆ ಎಲ್ಲರಿಗೂ ಪ್ರಯತ್ನ ಮಾಡುವ ಹಕ್ಕು ಇದೆ. ನಾನು ಆಕಾಂಕ್ಷಿ ಎಂದು ನಾಯಕರ ಬಳಿ ಹೇಳಿದ್ದೇನೆ. ಚುನಾವಣೆಯಲ್ಲಿ ಎದುರಾಳಿಯನ್ನು ಲಘುವಾಗಿ ಪರಿಗಣಿಸುವುದು ಸರಿಯಲ್ಲ. ಪ್ರಜಾಪ್ರಭುತ್ವದಲ್ಲಿ ಎದುರಾಳಿಯನ್ನು ಲಘುವಾಗಿ ತೆಗೆದುಕೊಳ್ಳುವುದು ಸರಿಯಲ್ಲ ಎಂದರು.
ಉಪ್ಪೂರು : ವಯೋವಂದನ ಆತಿಥ್ಯ ಗೃಹ "ಸೈಟ್ ಆಫೀಸ್" ಉದ್ಘಾಟನೆ ; ರಾಷ್ಟ್ರಧ್ವಜಾರೋಹಣ, ವೃಕ್ಷಾರೋಪಣ ಕಾರ್ಯಕ್ರಮ ಉಡುಪಿ ಜಿಲ್ಲೆ ಬ್ರಹ್ಮಾವರ…
ಪುತ್ತೂರು: ಕೆಎಸ್ಆರ್ಟಿಸಿ ಬಸ್ ಮತ್ತು ಬೈಕ್ ನಡುವೆ ಭೀಕರ ಅಪಘಾತ: ಸವಾರ ಸ್ಥಳದಲ್ಲೇ ಮೃತ್ಯು ಪುತ್ತೂರು: ಕೆಯ್ಯರು ಗ್ರಾಮದ ಬೊಳಿಕ್ಕಳ…
ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ ಬೆಂಗಳೂರು : ಕೇಂದ್ರ ಸರಕಾರದ…
ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ ಬೆಂಗಳೂರು: ನಗರದ ರಾಜೇಶ್ವರಿ ನಗರದಲ್ಲಿ ಹೆಂಡತಿಯನ್ನು ಕೊಂದು ಗಂಡ…
ಸ್ವಕ್ಷೇತ್ರದಲ್ಲಿ 80ನೇ ಸ್ವಾತಂತ್ರ್ಯೋತ್ಸವ ಧ್ವಜಾರೋಹಣ ಕಾರ್ಯಕ್ರಮದಲ್ಲಿ ಜಮೀರ್ ಅಹ್ಮದ್ ಭಾಗಿ ನಾನು ಹಿಂದೂಸ್ತಾನಿ, ನಾನು ಕನ್ನಡಿಗ, ದೇಶದ ಅಭಿಮಾನವನ್ನ ಬಿಜೆಪಿಯವರಿಂದ…
ಗುಟ್ಕಾ, ಪಾನ್ ಮಸಾಲ ನಿಷೇಧ ಆದೇಶ ನಾವು ವಾಪಸ್ ಪಡೆದಿಲ್ಲ: ಯು.ಟಿ.ಖಾದರ್ ಸ್ಪಷ್ಟನೆ ಅಡಿಕೆ ಬೆಲೆ ಕುಸಿಯಲ್ಲ, ಬೆಳೆಗಾರರಿಗೆ ಸಮಸ್ಯೆ…