Featured

ಉಡುಪಿ : ಪಕ್ಷ ಬಯಸಿದರೆ ನಾನು ಚುನಾವಣೆಗೆ ನಿಲ್ಲಲು ಸಿದ್ಧ: ಪ್ರಮೋದ್ ಮಧ್ವರಾಜ್ –

ಪಕ್ಷ ಬಯಸಿದರೆ ನಾನು ಚುನಾವಣೆಗೆ ನಿಲ್ಲಲು ಸಿದ್ಧ..

ಪಕ್ಷ ಯಾರಿಗೆ ಟಿಕೆಟ್ ಕೊಟ್ಟರೂ ನಾನು ಸಂಪೂರ್ಣವಾಗಿ ಬೆಂಬಲಿಸುತ್ತೇನೆ..

ಪಕ್ಷಕ್ಕೆ ನಾನು ಅರ್ಹ ಎಂದು ಕಂಡರೆ ನನಗೆ ಟಿಕೆಟ್ ಕೊಡುತ್ತದೆ..

ಕಾರ್ಯಕರ್ತರು ಮತ್ತು ಜನರ ಅಭಿಪ್ರಾಯ ನನ್ನ ಕಡೆಗೆ ಇದೆ ಎಂಬ ಮಾಹಿತಿ ಇದೆ..

ಉಡುಪಿ: ಮಾಜಿ ಸಚಿವ, ಬಿಜೆಪಿ ಮುಖಂಡ ಪ್ರಮೋದ್ ಮಧ್ವರಾಜ್ ಇಂದು ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡುತ್ತ, ಮೊಗವೀರ ಮಹಾಜನ ಸಂಘದಲ್ಲಿ 12 ವರ್ಷ ಅಧ್ಯಕ್ಷನಾಗಿದ್ದೆ. ಕರ್ನಾಟಕ ಕರಾವಳಿ ಕ್ರಿಯಾ ಸಮಿತಿ ನ್ಯಾಷನಲ್ ಫಿಶ್ ವರ್ಕರ್ಸ್ ಫಾರಂ ನಲ್ಲಿ ಕೆಲಸ ಮಾಡಿದ್ದೇನೆ‌ ಒಳನಾಡು ಮೀನುಗಾರಿಕಾ ನೀತಿಯನ್ನು ಕೂಡ ನಾನು ರೂಪಿಸಿದ್ದಾಗಿದೆ. ಮೀನುಗಾರಿಕೆಗೆ ನಾನು ತಂದೆ ತಾಯಿ ನೀಡಿರುವ ಸೇವೆ ಪರಿಗಣಿಸಬಹುದು.ಮೀನುಗಾರರ ಸಮಸ್ಯೆಯನ್ನು ಸರ್ಕಾರಗಳ ಮುಂದೆ ಸಮರ್ಥವಾಗಿ ಮಂಡಿಸುವ ಅನುಭವ ಜನಪ್ರತಿನಿಧಿ ಆದವರಿಗೆ ಬೇಕಾಗುತ್ತದೆ. ಮೀನುಗಾರರು ವಿಶ್ವಾಸ ಇಟ್ಟು ಇಡೀ ರಾಜ್ಯದಿಂದ ಬೇಡಿಕೆ ಬರುತ್ತಿದೆ ಆದ್ದರಿಂದ ಬಿಜೆಪಿ ಹಿಂದುಳಿದ ವರ್ಗಕ್ಕೆ ನ್ಯಾಯ ಒದಗಿಸಿಕೊಡುತ್ತದೆ ಎಂಬ ವಿಶ್ವಾಸ ಇದೆ ಎಂದು ಹೇಳಿದರು.

ಗುಜರಾತ್ ನಿಂದ ಪಶ್ಚಿಮ ಬಂಗಾಳದವರೆಗೆ ಒಬ್ಬನೇ ಒಬ್ಬ ಮೀನುಗಾರ ಸಂಸದ ಇಲ್ಲ. ದೇಶದ ಮೀನುಗಾರರ ಸಮಸ್ಯೆಯನ್ನು ಕೇಂದ್ರ ಸರ್ಕಾರದ ಮುಂದೆ ಸಂಸತ್ ನಲ್ಲಿ ಮಾತನಾಡಲಿಕ್ಕೆ ಯೋಗ್ಯ ವ್ಯಕ್ತಿ ಬೇಕು ಎಂಬುದು ಮೀನುಗಾರರಿಗೆ ಮನವರಿಕೆ ಆಗಿದೆ. ಮಾಧ್ಯಮಗಳ ಮೂಲಕ ಈ ವಿಚಾರ ನನ್ನ ಗಮನಕ್ಕೆ ಬಂದಿದೆ. ಆರು ತಿಂಗಳಿಂದ ನಾನು ಪ್ರವಾಸ ಮಾಡುತ್ತಿದ್ದೇನೆ. ರಾಜ್ಯದ 24 ಜಿಲ್ಲೆಯಲ್ಲಿ ಮೀನುಗಾರ ಮುಖಂಡರ ಸಭೆ ಮಾಡಿದ್ದೇನೆ. ಉಡುಪಿ ಚಿಕ್ಕಮಗಳೂರಿನಲ್ಲಿ 6000 ಬಿಜೆಪಿಯ ಕಾರ್ಯಕರ್ತರು ಮುಖಂಡರನ್ನು ಭೇಟಿ ಮಾಡಿದ್ದೇನೆ ಎಂದರು.

ಪಕ್ಷ ಬಯಸಿದರೆ ನಾನು ಚುನಾವಣೆಗೆ ನಿಲ್ಲಲು ಸಿದ್ಧ. ಪಕ್ಷ ಯಾರಿಗೆ ಟಿಕೆಟ್ ಕೊಟ್ಟರೂ ನಾನು ಸಂಪೂರ್ಣವಾಗಿ ಬೆಂಬಲಿಸುತ್ತೇನೆ. ಪಕ್ಷಕ್ಕೆ ನಾನು ಅರ್ಹ ಎಂದು ಕಂಡರೆ ನನಗೆ ಟಿಕೆಟ್ ಕೊಡುತ್ತದೆ. ಬೇರೆಯವರು ಅರ್ಹರು ಇದ್ದರೆ ಅವರಿಗೆ ಟಿಕೆಟ್ ಕೊಡುತ್ತದೆ ಎಂದರು.

ಕಾರ್ಯಕರ್ತರು ಮತ್ತು ಜನರ ಅಭಿಪ್ರಾಯ ನನ್ನ ಕಡೆಗೆ ಇದೆ ಎಂಬ ಮಾಹಿತಿ ಇದೆ. ಟಿಕೆಟ್ ಗೆ ಎಲ್ಲರಿಗೂ ಪ್ರಯತ್ನ ಮಾಡುವ ಹಕ್ಕು ಇದೆ. ನಾನು ಆಕಾಂಕ್ಷಿ ಎಂದು ನಾಯಕರ ಬಳಿ ಹೇಳಿದ್ದೇನೆ. ಚುನಾವಣೆಯಲ್ಲಿ ಎದುರಾಳಿಯನ್ನು ಲಘುವಾಗಿ ಪರಿಗಣಿಸುವುದು ಸರಿಯಲ್ಲ. ಪ್ರಜಾಪ್ರಭುತ್ವದಲ್ಲಿ ಎದುರಾಳಿಯನ್ನು ಲಘುವಾಗಿ ತೆಗೆದುಕೊಳ್ಳುವುದು ಸರಿಯಲ್ಲ ಎಂದರು.

Vishwa News 24

Recent Posts

ಎಸ್‌ಟಿಪಿಯನ್ನು ಮೂಳೂರಿನಿಂದ ಬೆಳಪು ಪ್ರದೇಶಕ್ಕೆ ಸ್ಥಳಾಂತರ ಮಾಡಿದರೆ ಕಾಪು ಪುರಸಭೆಗೆ ಸಂಪೂರ್ಣ ಸ್ವಾಗತ : ದೇವಿಪ್ರಸಾದ್ ಶೆಟ್ಟಿ – vishwanews24

ಬೆಳಪು ಪ್ರದೇಶದಲ್ಲಿ ಎಲ್ಲಾ ಅಗತ್ಯ ಸೌಲಭ್ಯಗಳೊಂದಿಗೆ ಘಟಕ ನಿರ್ಮಿಸಿದರೆ ನಮ್ಮಿಂದ ಯಾವುದೇ ವಿರೋಧ ಇರುವುದಿಲ್ಲ : ದೇವಿಪ್ರಸಾದ್ ಶೆಟ್ಟಿ ಮೂಳೂರು…

22 hours ago

ಪ್ರಿಯಕರನ ಜೊತೆ ಸೇರಿ ಗಂಡನ ಮನೆಗೆ ಕನ್ನಹಾಕಿದ ಪತ್ನಿ; 21 ಲಕ್ಷ ಮೌಲ್ಯದ ಚಿನ್ನಾಭರಣ ಕಳ್ಳತನ – vishwanews24

ಪ್ರಿಯಕರನ ಜೊತೆ ಸೇರಿ ಗಂಡನ ಮನೆಗೆ ಕನ್ನಹಾಕಿದ ಪತ್ನಿ; 21 ಲಕ್ಷ ಮೌಲ್ಯದ ಚಿನ್ನಾಭರಣ ಕಳ್ಳತನ ಬೆಳಗಾವಿ: ಪ್ರಿಯಕರನ ಜೊತೆ…

1 day ago

ಬಿಜೆಪಿ ನಡೆಸಿರುವ ಅಪವಿತ್ರ ಮೈತ್ರಿ ಇತಿಹಾಸವನ್ನು ದೇಶ ಮರೆತಿಲ್ಲ : ಬಿ.ಕೆ.ಹರಿಪ್ರಸಾದ್ – vishwanews24

ದೇಶದ ಜಾತ್ಯತೀತ ಮೌಲ್ಯಗಳನ್ನು ರಕ್ಷಿಸಲು ಕಾಂಗ್ರೆಸ್ ಪಕ್ಷ ಸದಾ ಸಮಾನ ಚಿಂತನೆಯ ಪಕ್ಷಗಳೊಂದಿಗೆ ಕೈಜೋಡಿಸಿದೆ : ಬಿ.ಕೆ.ಹರಿಪ್ರಸಾದ್ ಬೆಂಗಳೂರು: ‘ಬಿಜೆಪಿ…

1 day ago

ಪಡುಬಿದ್ರಿ: ಕಿಶೋರ್ ಆಳ್ವ ಅವರಿಗೆ ಪ್ರತಿಷ್ಠಿತ ಮಹಾತ್ಮ ಗಾಂಧಿ ಸಬರಮತಿ ಸಂತ ಪ್ರಶಸ್ತಿ ಪ್ರದಾನ – vishwanews24

ಪಡುಬಿದ್ರಿ: ಕಿಶೋರ್ ಆಳ್ವ ಅವರಿಗೆ ಪ್ರತಿಷ್ಠಿತ ಮಹಾತ್ಮ ಗಾಂಧಿ ಸಬರಮತಿ ಸಂತ ಪ್ರಶಸ್ತಿ ಪ್ರದಾನ ಪಡುಬಿದ್ರಿ: ಸನಾತನ ಫೌಂಡೇಶನ್‌ನ ಅಧ್ಯಕ್ಷ,…

1 day ago

ವಿವಾಹಿತ ಮಹಿಳೆ  ಜತೆ ಲಿವ್ ಇನ್ ರಿಲೇಶನ್‌ ಶಿಪ್‌ನಲ್ಲಿದ್ದ ಯುವಕ ಶವವಾಗಿ ಪತ್ತೆ  – vishwanews24

ವಿವಾಹಿತ ಮಹಿಳೆ ಜತೆ ಲಿವ್ ಇನ್ ರಿಲೇಶನ್‌ಶಿಪ್‌ನಲ್ಲಿದ್ದ ಯುವಕ ಶವವಾಗಿ ಪತ್ತೆ  ಬೆಂಗಳೂರು: ಲಿವ್ ಇನ್ ರಿಲೇಶನ್‌ಶಿಪ್‌ನಲ್ಲಿದ್ದ ಯುವಕ ನೇಣುಬಿಗಿದ…

1 day ago

ಬಿಜೆಪಿ ನಾಯಕ ಸುವೇಂದು ಅಧಿಕಾರಿ ಬಂಗಾಳದ ನೂತನ ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕಾರ – vishwanews24

ಪಶ್ಚಿಮ ಬಂಗಾಳದ ರಾಜಕೀಯ ಇತಿಹಾಸದಲ್ಲಿ ಹೊಸ ಪರ್ವ.. ಬಿಜೆಪಿ ಮೊದಲ ಸಿಎಂ ಆಗಿ ಪ್ರಮಾಣ ಸ್ವೀಕಾರ.. ಐತಿಹಾಸಿಕ ಕ್ಷಣಕ್ಕೆ ಮೋದಿ,…

1 day ago