ಉಡುಪಿ: ಪಕ್ಷದ ಪ್ರತಿ ಚಟುವಟಿಕೆಗಳಲ್ಲಿ ಜಿಲ್ಲಾ ಸಮಿತಿಯೊಂದಿಗೆ ಪ್ರತಿ ಮಂಡಲ, ಮೋರ್ಚಾ, ಪ್ರಕೋಷ್ಠಗಳ ಪದಾಧಿಕಾರಿಗಳು ಸಕ್ರಿಯವಾಗಿ ಭಾಗವಹಿಸಬೇಕು. ಪಕ್ಷದ ಎಲ್ಲಾ ಕಾರ್ಯಕ್ರಮಗಳನ್ನು ಪರಿಣಾಮಕಾರಿಯಾಗಿ ಅನುಷ್ಠಾನಗೊಳಿಸಿ ಪಕ್ಷ ಸಂಘಟನೆಯಲ್ಲಿ ಎಲ್ಲರೂ ಕ್ರಿಯಾಶೀಲತೆಯಿಂದ ತೊಡಗಿಸಿಕೊಳ್ಳಬೇಕು ಎಂದು ಬಿಜೆಪಿ ಜಿಲ್ಲಾಧ್ಯಕ್ಷ ಕುಯಿಲಾಡಿ ಸುರೇಶ್ ನಾಯಕ್ ಹೇಳಿದರು.
ಬಿಜೆಪಿ ಜಿಲ್ಲಾ ಕಚೇರಿಯಲ್ಲಿ ನಡೆದ ಜಿಲ್ಲಾ ಪದಾಧಿಕಾರಿಗಳ ಸಭೆಯ ಅಧ್ಯಕ್ಷತೆ ವಹಿಸಿ ವಿವಿಧ ಮಂಡಲಗಳ ಪ್ರಭಾರಿಗಳು, ಜಿಲ್ಲಾ ಮೋರ್ಚಾ ಮತ್ತು ಮಂಡಲಗಳ ಉಸ್ತುವಾರಿಗಳು, ಮೋರ್ಚಾ-ಪ್ರಕೋಷ್ಠಗಳ ಸಂಯೋಜಕರ ಯಾದಿ ಬಿಡುಗಡೆಗೊಳಿಸಿ ಮಾತನಾಡಿದರು.
ಪಕ್ಷದ ಅಧಿಕೃತ ಕಾರ್ಯಕ್ರಮ ಸಮಯದ ಇತಿಮಿತಿಯೊಳಗೆ ನಿರ್ವಹಿಸಿ, ಸಂಘಟನಾತ್ಮಕ ದೃಷ್ಟಿಯಿಂದ ವಿವಿಧ ಸ್ತರದ ಸಭೆಗಳನ್ನು ಪರಿಣಾಮಕಾರಿಯಾಗಿ ನಡೆಸುವುದರ ಜೊತೆಗೆ ಮುಂಬರಲಿರುವ ಗ್ರಾಪಂ ಚುನಾವಣೆ ಭರ್ಜರಿ ಗೆಲುವಿನ ಗುರಿಯೊಂದಿಗೆ ಸಮರ್ಥವಾಗಿ ಎದುರಿಸಲು ಎಲ್ಲರೂ ಸಜ್ಜಾಗಬೇಕು ಎಂದರು.
ಬಿಜೆಪಿ ಮಂಗಳೂರು ವಿಭಾಗ ಪ್ರಭಾರಿ ಕೆ.ಉದಯ ಕುಮಾರ್ ಶೆಟ್ಟಿ ಮಾತನಾಡಿ, ಬಿಜೆಪಿ ಇಂದು ಸರ್ವಸ್ಪರ್ಶಿ ಸರ್ವವ್ಯಾಪಿ ರಾಜಕೀಯ ಪಕ್ಷವಾಗಿದೆ. ಪಕ್ಷದ ತತ್ವ ಸಿದ್ಧಾಂತ ಮತ್ತು ಪ್ರಧಾನಿ ನರೇಂದ್ರ ಮೋದಿ ಕಾರ್ಯವೈಖರಿಯ ಮೆಚ್ಚಿ ಅಸಂಖ್ಯಾತ ಕಾರ್ಯಕರ್ತರು ಬದ್ಧತೆಯಿಂದ ಪಕ್ಷ ಸಂಘಟನೆಯಲ್ಲಿ ತೊಡಗಿದ್ದಾರೆ. ಕೇಂದ್ರ, ರಾಜ್ಯ ಸರಕಾರದ ವಿವಿಧ ಜನಪರ ಯೋಜನೆಗಳನ್ನು ಬೂತ್ ಮಟ್ಟಕ್ಕೆ ತಲುಪಿಸುವಲ್ಲಿ ಕಾರ್ಯಕರ್ತರು ತೊಡಗಿಸಿಕೊಳ್ಳಬೇಕು. ಸತತ ಪ್ರಯತ್ನ, ಸಾಧನೆಯಿಂದ ಯಶಸ್ಸು ಸಾಧ್ಯ. ಈ ನಿಟ್ಟಿನಲ್ಲಿ ಸದ್ಯದಲ್ಲೇ ನಡೆಯಲಿರುವ ಗ್ರಾಪಂ ಚುನಾವಣೆಯಲ್ಲಿ ಬಿಜೆಪಿ ಪರ ಇರುವ ಪೂರಕ ವಾತಾವರಣ ಸದುಪಯೋಗಗೊಳಿಸಿ ಎಲ್ಲಾ ಪಂಚಾಯತ್ಗಳಲ್ಲಿ ಅದ್ಬುತ ಗೆಲುವು ಸಾಧಿಸುವತ್ತ ಎಲ್ಲರೂ ಕಾರ್ಯಪ್ರವೃತ್ತರಾಗಬೇಕು ಎಂದರು.
ಬಿಜೆಪಿ ಜಿಲ್ಲಾ ಪದಾಧಿಕಾರಿಗಳು, ಮಂಡಲಗಳ ಅಧ್ಯಕ್ಷರು , ಪ್ರಧಾನ ಕಾರ್ಯದರ್ಶಿಗಳು, ಜಿಲ್ಲಾ ಮೋರ್ಚಾಗಳ ಅಧ್ಯಕ್ಷರು ಉಪಸ್ಥಿತರಿದ್ದರು.
ಉಪ್ಪೂರು : ವಯೋವಂದನ ಆತಿಥ್ಯ ಗೃಹ "ಸೈಟ್ ಆಫೀಸ್" ಉದ್ಘಾಟನೆ ; ರಾಷ್ಟ್ರಧ್ವಜಾರೋಹಣ, ವೃಕ್ಷಾರೋಪಣ ಕಾರ್ಯಕ್ರಮ ಉಡುಪಿ ಜಿಲ್ಲೆ ಬ್ರಹ್ಮಾವರ…
ಪುತ್ತೂರು: ಕೆಎಸ್ಆರ್ಟಿಸಿ ಬಸ್ ಮತ್ತು ಬೈಕ್ ನಡುವೆ ಭೀಕರ ಅಪಘಾತ: ಸವಾರ ಸ್ಥಳದಲ್ಲೇ ಮೃತ್ಯು ಪುತ್ತೂರು: ಕೆಯ್ಯರು ಗ್ರಾಮದ ಬೊಳಿಕ್ಕಳ…
ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ ಬೆಂಗಳೂರು : ಕೇಂದ್ರ ಸರಕಾರದ…
ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ ಬೆಂಗಳೂರು: ನಗರದ ರಾಜೇಶ್ವರಿ ನಗರದಲ್ಲಿ ಹೆಂಡತಿಯನ್ನು ಕೊಂದು ಗಂಡ…
ಸ್ವಕ್ಷೇತ್ರದಲ್ಲಿ 80ನೇ ಸ್ವಾತಂತ್ರ್ಯೋತ್ಸವ ಧ್ವಜಾರೋಹಣ ಕಾರ್ಯಕ್ರಮದಲ್ಲಿ ಜಮೀರ್ ಅಹ್ಮದ್ ಭಾಗಿ ನಾನು ಹಿಂದೂಸ್ತಾನಿ, ನಾನು ಕನ್ನಡಿಗ, ದೇಶದ ಅಭಿಮಾನವನ್ನ ಬಿಜೆಪಿಯವರಿಂದ…
ಗುಟ್ಕಾ, ಪಾನ್ ಮಸಾಲ ನಿಷೇಧ ಆದೇಶ ನಾವು ವಾಪಸ್ ಪಡೆದಿಲ್ಲ: ಯು.ಟಿ.ಖಾದರ್ ಸ್ಪಷ್ಟನೆ ಅಡಿಕೆ ಬೆಲೆ ಕುಸಿಯಲ್ಲ, ಬೆಳೆಗಾರರಿಗೆ ಸಮಸ್ಯೆ…