Featured

ಉಡುಪಿ : ಪಡುಕೆರೆ ಬೀಚ್‌ನಲ್ಲಿ ಬಿಕಿನಿ ಫೋಟೋಶೂಟ್‌ ಗೆ ಪೊಲೀಸರ ಅಡ್ಡಿ ; ಸೋಶಿಯಲ್‌ ಮೀಡಿಯಾದಲ್ಲಿ ಮಾಡೆಲ್‌ ಬೇಸರ – vishwanews24

ಉಡುಪಿ : ಬೀಚ್‌ನಲ್ಲಿ ಬಿಕಿನಿ ಧರಿಸುವುದು ಯಾವುದೇ ಅಪರಾಧವಲ್ಲ..

ನೈತಿಕ ಪೊಲೀಸ್‌ಗಿರಿ ನಡೆಸಲು ಸ್ಥಳೀಯರು ಯಾರು..?

ಬೀಚ್‌ ಸಾರ್ವಜನಿಕ ಪ್ರದೇಶ ಅಲ್ಲಿ ಫೋಟೋಶೂಟ್‌ ಮಾಡಿಕೊಂಡರೆ ತಪ್ಪೇನು ?

ಬಿಕಿನಿ ಹಾಕಿಕೊಂಡು ಫೋಟೋಶೂಟ್‌ ಮಾಡುವುದು ಕಾನೂನು ಉಲ್ಲಂಘನೆಯೇ? ಪೊಲೀಸರಿಗೆ ಮಾಡೆಲ್‌ ಪ್ರಶ್ನೆ

ಮಹಿಳೆ ವಿರುದ್ಧ ಹಿಂದೂ ಸಂಘಟನೆಗಳು ಗರಂ..

ಉಡುಪಿ: ಉಡುಪಿಯ ಪಡುಕೆರೆ ಬೀಚ್‌ನಲ್ಲಿ ಯುವತಿಯ ಬಿಕಿನಿ ಫೋಟೋಶೂಟ್‌ಗೆ ಪೊಲೀಸರು ಅಡ್ಡಗಾಲು ಹಾಕಿದ್ದಾರೆ ಎಂಬ ಆರೋಪ ಕೇಳಿ ಬಂದಿದೆ. ಸ್ಥಳೀಯರ ಮಾಹಿತಿ ಮೇರೆಗೆ ಪೊಲೀಸರು ಅಡ್ಡಿಪಡಿಸಿದ್ದಾರೆ ಎಂದು ಮಾಡೆಲ್‌ವೊಬ್ಬರು ಸೋಶಿಯಲ್‌ ಮೀಡಿಯಾದಲ್ಲಿ ಬೇಸರ ವ್ಯಕ್ತಪಡಿಸಿದ್ದಾರೆ.

ಯುವತಿಯ ಇನ್​ಸ್ಟಾಗ್ರಾಂ ಪ್ರೊಫೈಲ್ ಮಾಹಿತಿ ಪ್ರಕಾರ ಆಕೆ ಡಿಜಿಟಲ್ ಕ್ರಿಯೇಟರ್ ಆಗಿದ್ದಾರೆ. ಆಕೆ ರೂಪದರ್ಶಿಯೂ ಆಗಿದ್ದಾರೆ ಎನ್ನಲಾಗಿದೆ.

ಇನ್‌ಸ್ಟಾಗ್ರಾಮ್‌ನಲ್ಲಿ ಫೋಟೋಶೂಟ್‌ ಮಾಡಿದ ಫೋಟೋಗಳ ಸಹಿತ ಪಡುಕೆರೆ ಬೀಚ್‌ನಲ್ಲಾದ ಕಹಿ ಅನುಭವವನ್ನು ಮಾಡೆಲ್‌ ಹಂಚಿಕೊಂಡಿದ್ದಾರೆ. ಬೀಚ್‌ನಲ್ಲಿ ನನ್ನ ಪತಿ ಬಿಕಿನಿ ಫೋಟೊಶೂಟ್‌ ಮಾಡುತ್ತಿದ್ದರು. ಈ ವೇಳೆ ಸ್ಥಳಕ್ಕೆ ಬಂದ ಪೊಲೀಸರು ಬಿಕಿನಿ ಹಾಕಿಕೊಂಡು ಫೋಟೊಶೂಟ್‌ ಮಾಡಿಸಲು ಯಾರು ಪರ್ಮಿಷನ್‌ ಕೊಟ್ಟಿದ್ದು ಯಾರು? ಬಟ್ಟೆ ಬದಲಿಸಿ ಎಂದು ಸೂಚಿಸಿದ್ದರಂತೆ. ಇಲ್ಲದೇ ಹೋದರೆ ಸ್ಥಳೀಯರು ನಿಮ್ಮ ಮೇಲೆ ಹಲ್ಲೆ ನಡೆಸುತ್ತಾರೆ ಎಂದು ಹೇಳಿದ್ದರಂತೆ.

ಆಗ ಮಾಡೆಲ್‌ನ ಪತಿ ಪ್ರತಿಕ್ರಿಯಿಸಿ ಬೀಚ್‌ನಲ್ಲಿ ಬಿಕಿನಿ ಧರಿಸುವುದು ಯಾವುದೇ ಅಪರಾಧವಲ್ಲ. ಸಾರ್ವಜನಿಕ ಸ್ಥಳದಲ್ಲಿ ಫೋಟ್‌ಶೂಟ್‌ ಮಾಡಲು ಯಾವುದೇ ಲೈಸೆನ್ಸ್‌ ಪಡೆಯುವ ಅಗತ್ಯವಿಲ್ಲ ಎಂದಿದ್ದಾರೆ. ನೈತಿಕ ಪೊಲೀಸ್‌ಗಿರಿ ನಡೆಸಲು ಸ್ಥಳೀಯರು ಯಾರು ಎಂದು ಮಾಡೆಲ್ ಪ್ರಶ್ನೆ ಮಾಡಿದ್ದಾರೆ. ಬೀಚ್‌ ಸಾರ್ವಜನಿಕ ಪ್ರದೇಶ ಅಲ್ಲಿ ಫೋಟೋಶೂಟ್‌ ಮಾಡಿಕೊಂಡರೆ ತಪ್ಪೇನು? ಬಿಕಿನಿ ಹಾಕಿಕೊಂಡು ಫೋಟೋಶೂಟ್‌ ಮಾಡುವುದು ಕಾನೂನು ಉಲ್ಲಂಘನೆಯೇ? ಎಂದು ಸಾಮಾಜಿಕ ಜಾಲತಾಣದಲ್ಲಿ ಉಡುಪಿ ಪೊಲೀಸರಿಗೆ ಮಾಡೆಲ್‌ ಪ್ರಶ್ನೆ ಮಾಡಿದ್ದಾಳೆ.

 

ಸದ್ಯ ಸಾಮಾಜಿಕ ಜಾಲತಾಣದಲ್ಲಿ ಇದಕ್ಕೆ ಪರ-ವಿರೋಧಗಳು ವ್ಯಕ್ತವಾಗಿವೆ. ಫ್ಯಾಷನ್‌ ವಲಯದಲ್ಲಿ ಪೊಲೀಸರ ನಡೆಗೆ ವಿರೋಧಗಳು ವ್ಯಕ್ತವಾಗಿವೆ.

ಮಹಿಳೆ ವಿರುದ್ಧ ಹಿಂದೂ ಸಂಘಟನೆಗಳು ಗರಂ
ಉಡುಪಿಯ ಪಡುಕೆರೆ ಬೀಚ್‌ನಲ್ಲಿ ಬಿಕಿನಿ ಫೋಟೋಶೂಟ್ ವಿಚಾರವಾಗಿ ಹಿಂದು ಸಂಘಟನೆಗಳು ಗರಂ ಆಗಿವೆ. ಬಿಕಿನಿ ಫೋಟೋ ವೈರಲ್ ಬೆನ್ನಲ್ಲೇ ಬಿಕಿನಿ ಫೋಟೋಶೂಟ್‌ಗೆ ಉಡುಪಿಯಲ್ಲಿ ಅವಕಾಶವಿಲ್ಲ. ಅಸಭ್ಯ ವರ್ತನೆಗೆ ತುಳುನಾಡಲ್ಲಿ ಅವಕಾಶವಿಲ್ಲ ಎಂದು ಎಚ್ಚರಿಕೆ ನೀಡಿದ್ದಾರೆ.

Vishwa News 24

Recent Posts

ಪಡುಬಿದ್ರಿ: ಹೆಜಮಾಡಿ ಟೋಲ್ ಗೇಟ್ ವಿರುದ್ಧ ಪ್ರತಿಭಟನೆ ; ಟೋಲ್ ಗೇಟನ್ನು ತಕ್ಷಣ ತೆರವುಗೊಳಿಸಬೇಕೆಂದು ಆಗ್ರಹ – vishwanews24

ಪಡುಬಿದ್ರಿ: ಹೆಜಮಾಡಿ ಟೋಲ್ ಗೇಟ್ ವಿರುದ್ಧ ಪ್ರತಿಭಟನೆ .. ಟೋಲ್ ಗೇಟ ನ್ನು ತಕ್ಷಣ ತೆರವುಗೊಳಿಸಬೇಕು ಎಂದು ಆಗ್ರಹ 15…

2 days ago

ಪೊಲೀಸ್ ಕಾನ್ಸ್ ಟೇಬಲ್ ಪರೀಕ್ಷೆ: ಹಿಜಾಬ್ ಧರಿಸಲು ಅವಕಾಶ ಇಲ್ಲ : ಧಾರ್ಮಿಕ ಉಡುಪುಗಳ ಗೊಂದಲ ಬಗ್ಗೆ ಪ್ರಿಯಾಂಕ ಖರ್ಗೆ ಸ್ಪಷ್ಟನೆ – vishwanews24

ಪೊಲೀಸ್ ಕಾನ್ಸ್ ಟೇಬಲ್ ಪರೀಕ್ಷೆ: ಹಿಜಾಬ್ ಧರಿಸಿ ಪರೀಕ್ಷೆ ಬರೆಯುವಂತಿಲ್ಲ : ಪ್ರಿಯಾಂಕ ಖರ್ಗೆ ಸ್ಪಷ್ಟನೆ ಬೆಂಗಳೂರು: ಕರ್ನಾಟಕದ ಪೊಲೀಸ್…

2 days ago

ಸಾಂಸ್ಕೃತಿಕ ನಗರಿ ಮೈಸೂರಿಗೆ ಆಗಮಿಸಿದ ಪ್ರಧಾನಿ ಮೋದಿ – vishwanews24

ಸಾಂಸ್ಕೃತಿಕ ನಗರಿ ಮೈಸೂರಿಗೆ ಆಗಮಿಸಿದ ಪ್ರಧಾನಿ ಮೋದಿ ಮೈಸೂರು: ಸಾಂಸ್ಕೃತಿಕ ನಗರಿ ಮೈಸೂರಿಗೆ ಪ್ರಧಾನಿ ನರೇಂದ್ರ ಮೋದಿ ಆಗಮಿಸಿದ್ದಾರೆ. ವಿಶೇಷ ಸೇನಾ…

2 days ago

ಕಡಬ: ಕುಕ್ಕೆ ಸುಬ್ರಹ್ಮಣ್ಯದ ಕುಮಾರಧಾರಾ ಸ್ನಾನಘಟ್ಟ ಮುಳುಗಡೆ – vishwanews24

ಕಡಬ: ಕುಕ್ಕೆ ಸುಬ್ರಹ್ಮಣ್ಯದ ಕುಮಾರಧಾರಾ ಸ್ನಾನಘಟ್ಟ ಮುಳುಗಡೆ :ಭಕ್ತರಿಗೆ ಡ್ರಮ್‌ಗಳಲ್ಲಿ ಪರ್ಯಾಯ ಸ್ನಾನ ವ್ಯವಸ್ಥೆ ಕಡಬ:ಕುಕ್ಕೆ ಸುಬ್ರಹ್ಮಣ್ಯದಲ್ಲಿ ನಿರಂತರ ಸುರಿಯುತ್ತಿರುವ…

2 days ago

ಮೀನುಗಾರಿಕಾ ಋತು ಆರಂಭ ಹಿನ್ನೆಲೆ : ಮಲ್ಪೆ ಬಂದರಿಗೆ ಶಾಸಕ ಯಶ್ಪಾಲ್ ಸುವರ್ಣ ಭೇಟಿ – vishwanews24

ಮೀನುಗಾರಿಕಾ ಋತು ಆರಂಭ ಹಿನ್ನೆಲೆ : ಮಲ್ಪೆ ಬಂದರಿಗೆ ಶಾಸಕ ಯಶ್ಪಾಲ್ ಸುವರ್ಣ ಭೇಟಿ ಉಡುಪಿ: ಜೂನ್ ಮತ್ತು ಜುಲೈ…

2 days ago

ಕುಂದಾಪುರ ರಿಚರ್ಡ್‌ ಹತ್ಯೆ ಪ್ರಕರಣ : ಆರೋಪಿ ಭಟ್ಕಳದಲ್ಲಿ ಬಂಧನ – vishwanews24

ಕುಂದಾಪುರ ರಿಚರ್ಡ್‌ ಹತ್ಯೆ ಪ್ರಕರಣ : ಆರೋಪಿ ಭಟ್ಕಳದಲ್ಲಿ ಬಂಧನ ಕುಂದಾಪುರ: ಇಲ್ಲಿನ ಚರ್ಚ್ ರಸ್ತೆಯ ಸಮೀಪ ಗುರುವಾರ ತಡರಾತ್ರಿ…

2 days ago