Featured

ಉಡುಪಿ : ಪಡುಕೆರೆ ಬೀಚ್‌ನಲ್ಲಿ ಬಿಕಿನಿ ಫೋಟೋಶೂಟ್‌ ಗೆ ಪೊಲೀಸರ ಅಡ್ಡಿ ; ಸೋಶಿಯಲ್‌ ಮೀಡಿಯಾದಲ್ಲಿ ಮಾಡೆಲ್‌ ಬೇಸರ – vishwanews24

ಉಡುಪಿ : ಬೀಚ್‌ನಲ್ಲಿ ಬಿಕಿನಿ ಧರಿಸುವುದು ಯಾವುದೇ ಅಪರಾಧವಲ್ಲ..

ನೈತಿಕ ಪೊಲೀಸ್‌ಗಿರಿ ನಡೆಸಲು ಸ್ಥಳೀಯರು ಯಾರು..?

ಬೀಚ್‌ ಸಾರ್ವಜನಿಕ ಪ್ರದೇಶ ಅಲ್ಲಿ ಫೋಟೋಶೂಟ್‌ ಮಾಡಿಕೊಂಡರೆ ತಪ್ಪೇನು ?

ಬಿಕಿನಿ ಹಾಕಿಕೊಂಡು ಫೋಟೋಶೂಟ್‌ ಮಾಡುವುದು ಕಾನೂನು ಉಲ್ಲಂಘನೆಯೇ? ಪೊಲೀಸರಿಗೆ ಮಾಡೆಲ್‌ ಪ್ರಶ್ನೆ

ಮಹಿಳೆ ವಿರುದ್ಧ ಹಿಂದೂ ಸಂಘಟನೆಗಳು ಗರಂ..

ಉಡುಪಿ: ಉಡುಪಿಯ ಪಡುಕೆರೆ ಬೀಚ್‌ನಲ್ಲಿ ಯುವತಿಯ ಬಿಕಿನಿ ಫೋಟೋಶೂಟ್‌ಗೆ ಪೊಲೀಸರು ಅಡ್ಡಗಾಲು ಹಾಕಿದ್ದಾರೆ ಎಂಬ ಆರೋಪ ಕೇಳಿ ಬಂದಿದೆ. ಸ್ಥಳೀಯರ ಮಾಹಿತಿ ಮೇರೆಗೆ ಪೊಲೀಸರು ಅಡ್ಡಿಪಡಿಸಿದ್ದಾರೆ ಎಂದು ಮಾಡೆಲ್‌ವೊಬ್ಬರು ಸೋಶಿಯಲ್‌ ಮೀಡಿಯಾದಲ್ಲಿ ಬೇಸರ ವ್ಯಕ್ತಪಡಿಸಿದ್ದಾರೆ.

ಯುವತಿಯ ಇನ್​ಸ್ಟಾಗ್ರಾಂ ಪ್ರೊಫೈಲ್ ಮಾಹಿತಿ ಪ್ರಕಾರ ಆಕೆ ಡಿಜಿಟಲ್ ಕ್ರಿಯೇಟರ್ ಆಗಿದ್ದಾರೆ. ಆಕೆ ರೂಪದರ್ಶಿಯೂ ಆಗಿದ್ದಾರೆ ಎನ್ನಲಾಗಿದೆ.

ಇನ್‌ಸ್ಟಾಗ್ರಾಮ್‌ನಲ್ಲಿ ಫೋಟೋಶೂಟ್‌ ಮಾಡಿದ ಫೋಟೋಗಳ ಸಹಿತ ಪಡುಕೆರೆ ಬೀಚ್‌ನಲ್ಲಾದ ಕಹಿ ಅನುಭವವನ್ನು ಮಾಡೆಲ್‌ ಹಂಚಿಕೊಂಡಿದ್ದಾರೆ. ಬೀಚ್‌ನಲ್ಲಿ ನನ್ನ ಪತಿ ಬಿಕಿನಿ ಫೋಟೊಶೂಟ್‌ ಮಾಡುತ್ತಿದ್ದರು. ಈ ವೇಳೆ ಸ್ಥಳಕ್ಕೆ ಬಂದ ಪೊಲೀಸರು ಬಿಕಿನಿ ಹಾಕಿಕೊಂಡು ಫೋಟೊಶೂಟ್‌ ಮಾಡಿಸಲು ಯಾರು ಪರ್ಮಿಷನ್‌ ಕೊಟ್ಟಿದ್ದು ಯಾರು? ಬಟ್ಟೆ ಬದಲಿಸಿ ಎಂದು ಸೂಚಿಸಿದ್ದರಂತೆ. ಇಲ್ಲದೇ ಹೋದರೆ ಸ್ಥಳೀಯರು ನಿಮ್ಮ ಮೇಲೆ ಹಲ್ಲೆ ನಡೆಸುತ್ತಾರೆ ಎಂದು ಹೇಳಿದ್ದರಂತೆ.

ಆಗ ಮಾಡೆಲ್‌ನ ಪತಿ ಪ್ರತಿಕ್ರಿಯಿಸಿ ಬೀಚ್‌ನಲ್ಲಿ ಬಿಕಿನಿ ಧರಿಸುವುದು ಯಾವುದೇ ಅಪರಾಧವಲ್ಲ. ಸಾರ್ವಜನಿಕ ಸ್ಥಳದಲ್ಲಿ ಫೋಟ್‌ಶೂಟ್‌ ಮಾಡಲು ಯಾವುದೇ ಲೈಸೆನ್ಸ್‌ ಪಡೆಯುವ ಅಗತ್ಯವಿಲ್ಲ ಎಂದಿದ್ದಾರೆ. ನೈತಿಕ ಪೊಲೀಸ್‌ಗಿರಿ ನಡೆಸಲು ಸ್ಥಳೀಯರು ಯಾರು ಎಂದು ಮಾಡೆಲ್ ಪ್ರಶ್ನೆ ಮಾಡಿದ್ದಾರೆ. ಬೀಚ್‌ ಸಾರ್ವಜನಿಕ ಪ್ರದೇಶ ಅಲ್ಲಿ ಫೋಟೋಶೂಟ್‌ ಮಾಡಿಕೊಂಡರೆ ತಪ್ಪೇನು? ಬಿಕಿನಿ ಹಾಕಿಕೊಂಡು ಫೋಟೋಶೂಟ್‌ ಮಾಡುವುದು ಕಾನೂನು ಉಲ್ಲಂಘನೆಯೇ? ಎಂದು ಸಾಮಾಜಿಕ ಜಾಲತಾಣದಲ್ಲಿ ಉಡುಪಿ ಪೊಲೀಸರಿಗೆ ಮಾಡೆಲ್‌ ಪ್ರಶ್ನೆ ಮಾಡಿದ್ದಾಳೆ.

 

ಸದ್ಯ ಸಾಮಾಜಿಕ ಜಾಲತಾಣದಲ್ಲಿ ಇದಕ್ಕೆ ಪರ-ವಿರೋಧಗಳು ವ್ಯಕ್ತವಾಗಿವೆ. ಫ್ಯಾಷನ್‌ ವಲಯದಲ್ಲಿ ಪೊಲೀಸರ ನಡೆಗೆ ವಿರೋಧಗಳು ವ್ಯಕ್ತವಾಗಿವೆ.

ಮಹಿಳೆ ವಿರುದ್ಧ ಹಿಂದೂ ಸಂಘಟನೆಗಳು ಗರಂ
ಉಡುಪಿಯ ಪಡುಕೆರೆ ಬೀಚ್‌ನಲ್ಲಿ ಬಿಕಿನಿ ಫೋಟೋಶೂಟ್ ವಿಚಾರವಾಗಿ ಹಿಂದು ಸಂಘಟನೆಗಳು ಗರಂ ಆಗಿವೆ. ಬಿಕಿನಿ ಫೋಟೋ ವೈರಲ್ ಬೆನ್ನಲ್ಲೇ ಬಿಕಿನಿ ಫೋಟೋಶೂಟ್‌ಗೆ ಉಡುಪಿಯಲ್ಲಿ ಅವಕಾಶವಿಲ್ಲ. ಅಸಭ್ಯ ವರ್ತನೆಗೆ ತುಳುನಾಡಲ್ಲಿ ಅವಕಾಶವಿಲ್ಲ ಎಂದು ಎಚ್ಚರಿಕೆ ನೀಡಿದ್ದಾರೆ.

Vishwa News 24

Recent Posts

ಬಿಜೆಪಿ ಪಕ್ಷಕ್ಕೆ ಸೇರ್ಪಡೆಗೊಂಡ ಟೆನಿಸ್ ಆಟಗಾರ ಲಿಯಾಂಡರ್ ಪೇಸ್ – vishwanews24

ಬಿಜೆಪಿ ಪಕ್ಷಕ್ಕೆ ಸೇರ್ಪಡೆಗೊಂಡ ಟೆನಿಸ್ ಆಟಗಾರ ಲಿಯಾಂಡರ್ ಪೇಸ್ ಹೊಸದಿಲ್ಲಿ: ಪಶ್ಚಿಮ ಬಂಗಾಳ ವಿಧಾನಸಭಾ ಚುನಾವಣೆಗೆ ಮುನ್ನ ಟೆನಿಸ್ ಆಟಗಾರ…

3 hours ago

ಬೀದರ್ : ಮಳೆ ಆರ್ಭಟ ; ಸಿಡಿಲು ಬಡಿದು ಯುವಕ ಸಾವು – vishwanews24

ಬೀದರ್ : ಮಳೆ ಆರ್ಭಟ - ಸಿಡಿಲು ಬಡಿದು ಯುವಕ ಸಾವು ಬೀದರ್: ಸಿಡಿಲು ಬಡಿದು ಯುವಕನೊಬ್ಬ ಮೃತಪಟ್ಟ ಘಟನೆ ಔರಾದ್…

4 hours ago

ಬೆಳ್ತಂಗಡಿ:  ಚಲಿಸುತ್ತಿದ್ದ ಕೆಎಸ್ಸಾರ್ಟಿಸಿ ಬಸ್ಸಿನಿಂದ ಎಸೆಯಲ್ಪಟ್ಟು ಇಬ್ಬರು ವಿದ್ಯಾರ್ಥಿನಿಯರಿಗೆ ಗಾಯ – vishwanews24

ಬೆಳ್ತಂಗಡಿ:  ಏಕಾಏಕಿ ತೆರೆಯಲ್ಪಟ್ಟ ಬಸ್ಸಿನ ಬಾಗಿಲು ; ನಿಯಂತ್ರಣ ತಪ್ಪಿ ರಸ್ತೆಗೆ ಎಸೆಯಲ್ಪಟ್ಟು ಇಬ್ಬರು ವಿದ್ಯಾರ್ಥಿನಿಯರಿಗೆ ಗಾಯ ಬೆಳ್ತಂಗಡಿ: ಚಲಿಸುತ್ತಿದ್ದ ಬಸ್ಸಿನಿಂದ…

4 hours ago

ಉಡುಪಿ: ಚಲಿಸುತ್ತಿದ್ದ ರೈಲಿನಿಂದ ಜಿಗಿಯಲು ಯತ್ನ; ಯುವಕನ ರಕ್ಷಣೆ – vishwanews24

ಉಡುಪಿ: ಚಲಿಸುತ್ತಿದ್ದ ರೈಲಿನಿಂದ ಜಿಗಿಯಲು ಯತ್ನ; ಯುವಕನ ರಕ್ಷಣೆ ಉಡುಪಿ: ಟಿಕೆಟ್ ಇಲ್ಲದೆ ಪ್ರಯಾಣಿಸುತ್ತಿದ್ದ ಯುವಕನೊಬ್ಬ ರೈಲಿನಿಂದ ಜಿಗಿಯಲು ಯತ್ನಿಸುತ್ತಿದ್ದ…

4 hours ago

ಕಾಸರಗೋಡು :  ಕೆಟ್ಟು ನಿಂತಿದ್ದ ಪಿಕಪ್ ವ್ಯಾನ್ ಗೆ ಬೈಕ್ ಢಿಕ್ಕಿ: ಸವಾರ ಮೃತ್ಯು – vishwanews24

ಕಾಸರಗೋಡು :  ಕೆಟ್ಟು ನಿಂತಿದ್ದ ಪಿಕಪ್ ವ್ಯಾನ್ ಗೆ ಬೈಕ್ ಢಿಕ್ಕಿ: ಸವಾರ ಮೃತ್ಯು ಕಾಸರಗೋಡು : ರಾಷ್ಟ್ರೀಯ ಹೆದ್ದಾರಿಯ ಬದಿಯಲ್ಲಿ…

5 hours ago

ಪ್ರಥಮ ಪಿಯುಸಿ ಫಲಿತಾಂಶ ಪ್ರಕಟ ; ಆನ್‌ಲೈನ್‌ನಲ್ಲಿ ವೀಕ್ಷಿಸುವುದು ಹೇಗೆ? – vishwanews24

ಪ್ರಥಮ ಪಿಯುಸಿ ಫಲಿತಾಂಶ ಪ್ರಕಟ ; ಆನ್‌ಲೈನ್‌ನಲ್ಲಿ ವೀಕ್ಷಿಸುವುದು ಹೇಗೆ? ಬೆಂಗಳೂರು: ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯನಿರ್ಣಯ ಮಂಡಳಿಯು…

5 hours ago