ಉಡುಪಿ: ಉಡುಪಿ ಜಿಲ್ಲೆಯ ಮಲ್ಪೆ ಸಮೀಪ ಇರುವ ಪಡುಕೆರೆ ಬೀಚ್ ನಲ್ಲಿ ಇಂದು ಮತ್ತೆ ಪ್ರವಾಸಿಗರ ಹುಚ್ಚಾಟ ಕಂಡು ಬಂದಿದೆ.
ಮಳೆಗಾಲದ ಹಿನ್ನೆಲೆಯಲ್ಲಿ ಜಿಲ್ಲೆಯ ಎಲ್ಲಾ ಬೀಚ್ ಗಳಿಗೂ ಜಿಲ್ಲಾಡಳಿತ ಪ್ರವೇಶ ನಿಷೇಧಿಸಿ ಈ ಹಿಂದೆಯೇ ಆದೇಶ ಹೊರಡಿಸಿದೆ.
ಮಳೆಗಾಲದಲ್ಲಿ ಕಡಲಬ್ಬರ ಜಾಸ್ತಿ ಆಗುವ ಹಿನ್ನಲೆಯಲ್ಲಿ ಜೂ. ತಿಂಗಳಿನಿಂದ ಸೆಪ್ಟೆಂಬರ್ ತಿಂಗಳಿನವರೆಗೆ ಬೀಚ್ ಗೆ ಪ್ರವೇಶವನ್ನು ನಿರ್ಬಂಧಿಸಲಾಗಿದೆ.
ಈಗಾಗಲೇ ಜಿಲ್ಲೆಯ ಮಲ್ಪೆ ಬೀಚ್ ಗೆ ಪ್ರವಾಸಿಗರ ಸುರಕ್ಷತಾ ದೃಷ್ಟಿ ತಡೆಬೇಲಿಯನ್ನು ಅಳವಡಿಕೆ ಮಾಡಲಾಗಿದೆ.
ಆದ್ರೆ ಪಡುಕೆರೆ ಬೀಚ್ ಗೆ ಯಾವುದೇ ಭದ್ರತೆ ಇಲ್ಲ.ಇಲ್ಲಿ ಒಂದು ಬದಿ ಸಮುದ್ರ, ಇನ್ನೊಂದು ನದಿ ಇದ್ದು ಬಹಳ ಆಕರ್ಷವಾಗಿದೆ.
ಹೀಗಾಗಿ ಬೀಚ್ ಗೆ ಆಗಮಿಸುವ ಪ್ರವಾಸಿಗರು ಸ್ಥಳೀಯರ ಮಾತಿಗೆ ಬೆಲೆ ಕೊಡದೇ ಸಮುದ್ರಕ್ಕೆ ಇಳಿತಾ ಇದ್ದಾರೆ.ಮಾತ್ರವಲ್ಲ ಕಡಲ ಕೊರತಕ್ಕೆ ಹಾಕಿದ ಬಂಡೆಗಳ ಮೇಲೆ ನಿಂತು ಸೆಲ್ಫಿ ಕ್ಲಿಕಿಸಿಕೊಳ್ಳುತಿದ್ದಾರೆ.
ಇನ್ನು ಸಾಮಾನ್ಯವಾಗಿ ಮಳೆಗಾಲದಲ್ಲಿ ಈ ಪಡುಕರೆ ಬೀಚ್ ಅಪಾಯಕ್ಕೆ ಆಹ್ವಾನ ನೀಡುವ ಬೀಚ್ ಆಗಿದೆ.
ಆದ್ದರಿಂದ ಜಿಲ್ಲಾಡಳಿತ ಹಾಗೂ ಸಂಬಂಧಪಟ್ಟವರು ಕಠಿಣ ಕ್ರಮ ಕೈಗೊಂಡು ಪ್ರವಾಸಿಗರ ಸುರಕ್ಷತೆಯನ್ನು ಎಂದು ಸಾರ್ವಜನಿಕರು ಆಗ್ರಹಿಸಿದ್ದಾರೆ.
ಉಡುಪಿ : ಆ. 20 ರಂದು ನೇರ ಸಂದರ್ಶನ ಉಡುಪಿ : ನಗರದ ಅಂಬಲಪಾಡಿ ಕರಾವಳಿ ಬೈಪಾಸ್ ಬಳಿಯ ರೀಗಲ್…
ಉಡುಪಿ: ಗೃಹ ಜ್ಯೋತಿ ಫಲಾನುಭವಿಗಳು ಮರುಪರಿಶೀಲನೆ ಪ್ರಕ್ರಿಯೆ ಪೂರ್ಣಗೊಳಿಸಿಕೊಳ್ಳಿ: ರಮೇಶ್ ಕಾಂಚನ್ ಗೃಹ ಜ್ಯೋತಿ ಯೋಜನೆಯ ಫಲಾನುಭವಿಗಳ ಮನೆಗಳ ಮರುಪರಿಶೀಲನೆಗೆ…
ಕರಾವಳಿಯಲ್ಲಿ ಹೈಕೋರ್ಟ್ ಪೀಠ ಸ್ಥಾಪನೆಗೆ ಆಗ್ರಹ: ಆ.22ರಂದು ಉಡುಪಿಯಲ್ಲಿ ಸಭೆ ಉಡುಪಿ: ಉಡುಪಿ, ದಕ್ಷಿಣ ಕನ್ನಡ ಹಾಗೂ ಉತ್ತರ ಕನ್ನಡ…
ಉಡುಪಿ: ಗಣಪತಿ ಹಬ್ಬದ ಪ್ರಯುಕ್ತ ವಿಶೇಷ ರೈಲುಗಳ ಹೆಚ್ಚುವರಿ ಸಂಚಾರ ಉಡುಪಿ: ಗಣಪತಿ ಹಬ್ಬದ ಪ್ರಯುಕ್ತ ಪ್ರಯಾಣಿಕರ ಬೇಡಿಕೆಗೆ ಅನುಸಾರ…
ಉಳ್ಳಾಲ: ನಾಪತ್ತೆಯಾಗಿದ್ದ ಕುಂದಾಪುರ ಮೂಲದ ಮೀನುಗಾರನ ಮೃತದೇಹ ಪತ್ತೆ ಉಳ್ಳಾಲ : ಮೀನುಗಾರಿಕೆಗೆ ತೆರಳಿದ್ದ ವೇಳೆ ದೈತ್ಯ ಗಾತ್ರದ ಅಲೆಗೆ…
ನಿರೂಪಣಾ ವೃತ್ತಿಗೆ ಅಧಿಕೃತವಾಗಿ ನಿವೃತ್ತಿ ಘೋಷಿಸಿದ ಅನುಪಮಾ ಗೌಡ ಬೆಂಗಳೂರು : ನಟಿ ಅನುಪಮಾ ಗೌಡ ಅವರು ನಟನೆಯ ಮೂಲಕ…