ಉಡುಪಿ: ಉಡುಪಿ ಜಿಲ್ಲೆಯ ಮಲ್ಪೆ ಸಮೀಪ ಇರುವ ಪಡುಕೆರೆ ಬೀಚ್ ನಲ್ಲಿ ಇಂದು ಮತ್ತೆ ಪ್ರವಾಸಿಗರ ಹುಚ್ಚಾಟ ಕಂಡು ಬಂದಿದೆ.
ಮಳೆಗಾಲದ ಹಿನ್ನೆಲೆಯಲ್ಲಿ ಜಿಲ್ಲೆಯ ಎಲ್ಲಾ ಬೀಚ್ ಗಳಿಗೂ ಜಿಲ್ಲಾಡಳಿತ ಪ್ರವೇಶ ನಿಷೇಧಿಸಿ ಈ ಹಿಂದೆಯೇ ಆದೇಶ ಹೊರಡಿಸಿದೆ.
ಮಳೆಗಾಲದಲ್ಲಿ ಕಡಲಬ್ಬರ ಜಾಸ್ತಿ ಆಗುವ ಹಿನ್ನಲೆಯಲ್ಲಿ ಜೂ. ತಿಂಗಳಿನಿಂದ ಸೆಪ್ಟೆಂಬರ್ ತಿಂಗಳಿನವರೆಗೆ ಬೀಚ್ ಗೆ ಪ್ರವೇಶವನ್ನು ನಿರ್ಬಂಧಿಸಲಾಗಿದೆ.
ಈಗಾಗಲೇ ಜಿಲ್ಲೆಯ ಮಲ್ಪೆ ಬೀಚ್ ಗೆ ಪ್ರವಾಸಿಗರ ಸುರಕ್ಷತಾ ದೃಷ್ಟಿ ತಡೆಬೇಲಿಯನ್ನು ಅಳವಡಿಕೆ ಮಾಡಲಾಗಿದೆ.
ಆದ್ರೆ ಪಡುಕೆರೆ ಬೀಚ್ ಗೆ ಯಾವುದೇ ಭದ್ರತೆ ಇಲ್ಲ.ಇಲ್ಲಿ ಒಂದು ಬದಿ ಸಮುದ್ರ, ಇನ್ನೊಂದು ನದಿ ಇದ್ದು ಬಹಳ ಆಕರ್ಷವಾಗಿದೆ.
ಹೀಗಾಗಿ ಬೀಚ್ ಗೆ ಆಗಮಿಸುವ ಪ್ರವಾಸಿಗರು ಸ್ಥಳೀಯರ ಮಾತಿಗೆ ಬೆಲೆ ಕೊಡದೇ ಸಮುದ್ರಕ್ಕೆ ಇಳಿತಾ ಇದ್ದಾರೆ.ಮಾತ್ರವಲ್ಲ ಕಡಲ ಕೊರತಕ್ಕೆ ಹಾಕಿದ ಬಂಡೆಗಳ ಮೇಲೆ ನಿಂತು ಸೆಲ್ಫಿ ಕ್ಲಿಕಿಸಿಕೊಳ್ಳುತಿದ್ದಾರೆ.
ಇನ್ನು ಸಾಮಾನ್ಯವಾಗಿ ಮಳೆಗಾಲದಲ್ಲಿ ಈ ಪಡುಕರೆ ಬೀಚ್ ಅಪಾಯಕ್ಕೆ ಆಹ್ವಾನ ನೀಡುವ ಬೀಚ್ ಆಗಿದೆ.
ಆದ್ದರಿಂದ ಜಿಲ್ಲಾಡಳಿತ ಹಾಗೂ ಸಂಬಂಧಪಟ್ಟವರು ಕಠಿಣ ಕ್ರಮ ಕೈಗೊಂಡು ಪ್ರವಾಸಿಗರ ಸುರಕ್ಷತೆಯನ್ನು ಎಂದು ಸಾರ್ವಜನಿಕರು ಆಗ್ರಹಿಸಿದ್ದಾರೆ.
ರೇಣುಕಾಸ್ವಾಮಿ ಕೊಲೆ ಪ್ರಕರಣ : ದರ್ಶನ್ ಅರ್ಜಿ ವಿಚಾರಣೆಗೆ ಅರ್ಹವಲ್ಲ: ಮತ್ತೊಮ್ಮೆ ಜಾಮೀನು ತಿರಸ್ಕರಿಸಿದ ಸುಪ್ರೀಂ ನಟ ದರ್ಶನ್ ರೇಣುಕಾ…
ಗೃಹ ಜ್ಯೋತಿ ಪರಿಶೀಲನೆ: ಪ್ರವರ್ಗ ಮಾಹಿತಿ (ಜಾತಿ ಪ್ರಮಾಣಪತ್ರ) ಕಡ್ಡಾಯವಲ್ಲ ಬೆಂಗಳೂರು: ರಾಜ್ಯಾದ್ಯಂತ ಜುಲೈ 1 ರಿಂದ ಆರಂಭಗೊಂಡಿರುವ ಗೃಹ ಜ್ಯೋತಿ…
ಎಸ್ಐಆರ್ ಪ್ರಕ್ರಿಯೆಯಲ್ಲಿ ಭಾರೀ ಅಕ್ರಮ : ಸಮಗ್ರ ತನಿಖೆಗೆ ಪ್ರಲ್ಹಾದ ಜೋಶಿ ಆಗ್ರಹ ನವದೆಹಲಿ: ರಾಮನಗರ ಜಿಲ್ಲೆಯಲ್ಲಿ ನಡೆದ ಮತದಾರರ…
ಅಕ್ರಮ ಎಸ್ಐಆರ್ ಪ್ರಕ್ರಿಯೆ : 2028ರ ಚುನಾವಣೆ ಗೆಲ್ಲಲು ಬಾಂಗ್ಲಾದೇಶಿಯರ ಸಕ್ರಮಕ್ಕೆ ಕಾಂಗ್ರೆಸ್ ಸಂಚು : ಶೋಭಾ ಕರಂದ್ಲಾಜೆ ಗಂಭೀರ…
ಮೂಲ ನೆಲದಿಂದ ಬೇರ್ಪಡಿಸಿ ಕರಾವಳಿಯ ಮಣ್ಣಿನ ಸಂಸ್ಕೃತಿಯ ಪಾವಿತ್ರ್ಯಕ್ಕೆ ಧಕ್ಕೆ ತರಬೇಡಿ .. ಕರಾವಳಿ ಕಂಬಳವು ತನ್ನದೇ ಆದ ಆಳವಾದ ಸಾಂಪ್ರದಾಯಿಕ…
ಮಂಗಳೂರು:ಸಾಮಾಜಿಕ ಜಾಲತಾಣಗಳಲ್ಲಿ ಸೆಲಿನಾ ಟ್ರಾವೆಲ್ಸ್ ವಿರುದ್ಧ ಹರಿದಾಡಿದ ಕರಪತ್ರ : ಪೊಲೀಸ್ ಇಲಾಖೆ ಸ್ಪಷ್ಟನೆ ಮಂಗಳೂರು: ಖಾಸಗಿ ಸಾರಿಗೆ ಸಂಸ್ಥೆಯಾದ…