Featured

ಉಡುಪಿ: ಪಡೆದ ಸಾಲವನ್ನು ಮರುಪಾವತಿಸದೆ, ನಕಲಿ ದಾಖಲೆ ಸೃಷ್ಟಿಸಿ ಮರು ಸಾಲ; ಪ್ರಕರಣ ದಾಖಲು – vishwanews24

ಉಡುಪಿ: ಪಡೆದ ಸಾಲವನ್ನು ಮರುಪಾವತಿಸದೆ, ನಕಲಿ ದಾಖಲೆ ಸೃಷ್ಟಿಸಿ ಮರು ಸಾಲ; ಪ್ರಕರಣ ದಾಖಲು

ಉಡುಪಿ: ಸೊಸೈಟಿಗೆ ಸಾಲ ಮರುಪಾವತಿಸದೆ, ಸಾಲ ಸಂದಾಯದ ಬಗ್ಗೆ ನಕಲಿ ದಾಖಲೆ ಸೃಷ್ಟಿಸಿರುವ ಬಗ್ಗೆ ನಗರ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಅಜ್ಜರಕಾಡು ನೂತನ್‌ ಕ್ರೆಡಿಟ್‌ ಕೋ-ಆಪರೇಟಿವ್‌ ಸೊಸೈಟಿಯಲ್ಲಿ ರಿಯಾನತ್‌ ಬಾನು, ಮೊಹಮ್ಮದ್‌ ಹನೀಫ್, ನುಮಾನ್‌ ಅಜ್ಜರಕಾಡು ಶಾಖೆಯಲ್ಲಿ ಹ್ಯುಂಡೈ ವೆನ್ಯೂ ಕಾರನ್ನು ಅಡಮಾನವಿರಿಸಿ, ರಿಯಾನತ್‌ ಬಾನು ಹೆಸರಿನಲ್ಲಿ 8 ಲಕ್ಷ ರೂ. ಸಾಲ ಪಡೆದಿದ್ದರು. ಜಾಮೀನುದಾರಾಗಿ ಮೊಹಮ್ಮದ್‌ ಹನೀಫ್, ನುಮಾನ್‌ ಸಹಿ ಮಾಡಿದ್ದರು.

ಸಾಲದ ಅರ್ಜಿ, ಪ್ರಾಮಿಸರಿ ನೋಟ್‌ ಹಾಗೂ ಒಪ್ಪಿಗೆ ಪತ್ರ ಮತ್ತು ಇತರ ದಾಖಲಾತಿಗಳನ್ನು ಸೊಸೈಟಿಗೆ ಬರೆದುಕೊಟ್ಟು ಸಾಲ ಮರು ಪಾವತಿಸುವುದಾಗಿ ನಂಬಿಸಿ, ವಾಹನ ಸಾಲ ಪಡೆದು ಅನಂತರ ಸೊಸೈಟಿಗೆ ಸಾಲ ಮರುಪಾವತಿಸದೆ ಸೊಸೈಟಿಯವರು ಸಾಲ ಸಂದಾಯವಾಗಿರುವುದಾಗಿ ಪತ್ರ ನೀಡಿರುವಂತೆ ಮತ್ತು ನಮೂನೆ 35ಕ್ಕೆ ಸಹಿ ಹಾಕಿರುವಂತೆ ನಕಲಿ ಸಹಿ ಮತ್ತು ಸೀಲು ಹಾಕಿ ನಕಲಿ ದಾಖಲೆಗಳನ್ನು ಸೃಷ್ಟಿಸಿ, ಆ ನಕಲಿ ದಾಖಲೆಗಳು ನೈಜ್ಯವೆಂದು ನಂಬಿಸಿ ಆರ್‌ಟಿಒ ಕಚೇರಿಗೆ ಸಲ್ಲಿಸಿದ್ದರು.

ಈ ನಕಲಿ ದಾಖಲೆಗಳ ಆಧಾರದ ಮೇರೆಗೆ ಕಾರನ್ನು ಅಡಮಾನ ನಮೂದನ್ನು ಸರಿಪಡಿಸಿ, ಐಸಿಐಸಿ ಬ್ಯಾಂಕ್‌ ಮಂಗಳೂರು ಶಾಖೆಯಲ್ಲಿ ಇದೇ ವಾಹನವನ್ನು ಅಡಮಾನ ಇರಿಸಿ ಸಾಲ ಪಡೆದುಕೊಂಡಿದ್ದರು. ಸೊಸೈಟಿಯಲ್ಲಿ ಪಡೆದ ಸಾಲವನ್ನು ಮರುಪಾವತಿಸದೆ, ನಕಲಿ ದಾಖಲೆ ಸೃಷ್ಟಿಸಿ ಲೋಪ ಎಸಗಿದ ಬಗ್ಗೆ ಸೊಸೈಟಿ ಮ್ಯಾನೇಜರ್‌ ಗಣೇಶ್‌ ನೀಡಿದ ದೂರಿನಂತೆ ಪ್ರಕರಣ ದಾಖಲಾಗಿದೆ.

Vishwa News 24

Recent Posts

ಬೆಳ್ತಂಗಡಿ: ಕೆಎಸ್ಸಾರ್ಟಿಸಿ ಬಸ್‌ ಹಾಗೂ ಬೈಕ್ ಢಿಕ್ಕಿ; ಸವಾರ ಮೃತ್ಯು, ಸಹ ಸವಾರ ಗಂಭೀರ -vishwanews24

ಬೆಳ್ತಂಗಡಿ: ಕೆಎಸ್ಸಾರ್ಟಿಸಿ ಬಸ್‌ ಹಾಗೂ ಬೈಕ್ ಢಿಕ್ಕಿ; ಸವಾರ ಮೃತ್ಯು, ಸಹ ಸವಾರ ಗಂಭೀರ ಬೆಳ್ತಂಗಡಿ: ನೀರಚಿಲುಮೆಯ ತಿರುವಿನಲ್ಲಿ ಕೆಎಸ್ಸಾರ್ಟಿಸಿ…

5 hours ago

ಮೂಡುಬಿದಿರೆ: ಮನೆಯಲ್ಲಿ ಸಿಲಿಂಡರ್ ಸ್ಫೋಟ; ಮೂವರಿಗೆ ಗಾಯ, ಓರ್ವನ ಸ್ಥಿತಿ ಗಂಭೀರ -vishwanews24

ಮೂಡುಬಿದಿರೆ: ಮನೆಯಲ್ಲಿ ಸಿಲಿಂಡರ್ ಸ್ಫೋಟ; ಮೂವರಿಗೆ ಗಾಯ, ಓರ್ವನ ಸ್ಥಿತಿ ಗಂಭೀರ ಮೂಡುಬಿದಿರೆ : ಮನೆಯಲ್ಲಿನ ಸಿಲಿಂಡರ್ ಸ್ಫೋಟಗೊಂಡ ಪರಿಣಾಮ…

6 hours ago

ಉಡುಪಿ : ಮರಕ್ಕೆ ಬೈಕ್ ಢಿಕ್ಕಿ ; ಯುವಕ ಮೃತ್ಯು -vishwanews24

ಉಡುಪಿ : ಮರಕ್ಕೆ ಬೈಕ್ ಢಿಕ್ಕಿ ; ಯುವಕ ಮೃತ್ಯು ಉಡುಪಿ: ಮಣಿಪಾಲದಿಂದ ಪರ್ಕಳ ಕಡೆಗೆ ತೆರಳುತ್ತಿದ್ದ ಬುಲೆಟ್ ಬೈಕ್…

6 hours ago

ಉಡುಪಿ: ಸಾಯಿರಾಜ್ ಸೊಸೈಟಿ ಸಿಇಒ ಆತ್ಮಹತ್ಯೆ ಪ್ರಕರಣ:ಕ್ರಿಕೆಟ್ ಬೆಟ್ಟಿಂಗ್‌ನಲ್ಲಿ ಕೋಟ್ಯಂತರ ರೂಪಾಯಿ ನಷ್ಟ ;  ಡೆತ್ ನೋಟ್ ನಲ್ಲಿ ಬಹಿರಂಗ! -vishwanews24

ಉಡುಪಿ: ಸಾಯಿರಾಜ್ ಸೊಸೈಟಿ ಸಿಇಒ ಆತ್ಮಹತ್ಯೆ ಪ್ರಕರಣ.. ಕ್ರಿಕೆಟ್ ಬೆಟ್ಟಿಂಗ್‌ನಲ್ಲಿ ಕೋಟ್ಯಂತರ ರೂಪಾಯಿ ನಷ್ಟ ;  ಡೆತ್ ನೋಟ್ ನಲ್ಲಿ…

6 hours ago

ಉಡುಪಿ: ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಜೆಸಿಟಿಯು ನೇತೃತ್ವದಲ್ಲಿ ಜೈಲ್ ಭರೋ ಪ್ರತಿಭಟನೆ; ಕಾರ್ಯಕರ್ತರು ಪೊಲೀಸ್ ವಶಕ್ಕೆ – vishwanews24

ಉಡುಪಿ: ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಜೆಸಿಟಿಯು ನೇತೃತ್ವದಲ್ಲಿ ಜೈಲ್ ಭರೋ ಪ್ರತಿಭಟನೆ; ಕಾರ್ಯಕರ್ತರು ಪೊಲೀಸ್ ವಶಕ್ಕೆ ಉಡುಪಿ: ಕೇಂದ್ರ…

1 day ago

ಕಾಪು: ಎಲ್ಲೂರಿನಲ್ಲಿ ಮನೆಯ ಮೇಲ್ಛಾವಣಿ ಕುಸಿತ; ಮಹಿಳೆ ಪವಾಡಸದೃಶ ಪಾರು, ಲಕ್ಷಾಂತರ ರೂ. ನಷ್ಟ – vishwanews24

ಕಾಪು: ಎಲ್ಲೂರಿನಲ್ಲಿ ಮನೆಯ ಮೇಲ್ಛಾವಣಿ ಕುಸಿತ; ಮಹಿಳೆ ಪವಾಡಸದೃಶ ಪಾರು, ಲಕ್ಷಾಂತರ ರೂ. ನಷ್ಟ ಕಾಪು,: ಎಲ್ಲೂರಿನ ರೇವತಿ ಕುಂದರ್…

1 day ago