ಉಡುಪಿ: ಸೊಸೈಟಿಗೆ ಸಾಲ ಮರುಪಾವತಿಸದೆ, ಸಾಲ ಸಂದಾಯದ ಬಗ್ಗೆ ನಕಲಿ ದಾಖಲೆ ಸೃಷ್ಟಿಸಿರುವ ಬಗ್ಗೆ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಅಜ್ಜರಕಾಡು ನೂತನ್ ಕ್ರೆಡಿಟ್ ಕೋ-ಆಪರೇಟಿವ್ ಸೊಸೈಟಿಯಲ್ಲಿ ರಿಯಾನತ್ ಬಾನು, ಮೊಹಮ್ಮದ್ ಹನೀಫ್, ನುಮಾನ್ ಅಜ್ಜರಕಾಡು ಶಾಖೆಯಲ್ಲಿ ಹ್ಯುಂಡೈ ವೆನ್ಯೂ ಕಾರನ್ನು ಅಡಮಾನವಿರಿಸಿ, ರಿಯಾನತ್ ಬಾನು ಹೆಸರಿನಲ್ಲಿ 8 ಲಕ್ಷ ರೂ. ಸಾಲ ಪಡೆದಿದ್ದರು. ಜಾಮೀನುದಾರಾಗಿ ಮೊಹಮ್ಮದ್ ಹನೀಫ್, ನುಮಾನ್ ಸಹಿ ಮಾಡಿದ್ದರು.
ಸಾಲದ ಅರ್ಜಿ, ಪ್ರಾಮಿಸರಿ ನೋಟ್ ಹಾಗೂ ಒಪ್ಪಿಗೆ ಪತ್ರ ಮತ್ತು ಇತರ ದಾಖಲಾತಿಗಳನ್ನು ಸೊಸೈಟಿಗೆ ಬರೆದುಕೊಟ್ಟು ಸಾಲ ಮರು ಪಾವತಿಸುವುದಾಗಿ ನಂಬಿಸಿ, ವಾಹನ ಸಾಲ ಪಡೆದು ಅನಂತರ ಸೊಸೈಟಿಗೆ ಸಾಲ ಮರುಪಾವತಿಸದೆ ಸೊಸೈಟಿಯವರು ಸಾಲ ಸಂದಾಯವಾಗಿರುವುದಾಗಿ ಪತ್ರ ನೀಡಿರುವಂತೆ ಮತ್ತು ನಮೂನೆ 35ಕ್ಕೆ ಸಹಿ ಹಾಕಿರುವಂತೆ ನಕಲಿ ಸಹಿ ಮತ್ತು ಸೀಲು ಹಾಕಿ ನಕಲಿ ದಾಖಲೆಗಳನ್ನು ಸೃಷ್ಟಿಸಿ, ಆ ನಕಲಿ ದಾಖಲೆಗಳು ನೈಜ್ಯವೆಂದು ನಂಬಿಸಿ ಆರ್ಟಿಒ ಕಚೇರಿಗೆ ಸಲ್ಲಿಸಿದ್ದರು.
ಈ ನಕಲಿ ದಾಖಲೆಗಳ ಆಧಾರದ ಮೇರೆಗೆ ಕಾರನ್ನು ಅಡಮಾನ ನಮೂದನ್ನು ಸರಿಪಡಿಸಿ, ಐಸಿಐಸಿ ಬ್ಯಾಂಕ್ ಮಂಗಳೂರು ಶಾಖೆಯಲ್ಲಿ ಇದೇ ವಾಹನವನ್ನು ಅಡಮಾನ ಇರಿಸಿ ಸಾಲ ಪಡೆದುಕೊಂಡಿದ್ದರು. ಸೊಸೈಟಿಯಲ್ಲಿ ಪಡೆದ ಸಾಲವನ್ನು ಮರುಪಾವತಿಸದೆ, ನಕಲಿ ದಾಖಲೆ ಸೃಷ್ಟಿಸಿ ಲೋಪ ಎಸಗಿದ ಬಗ್ಗೆ ಸೊಸೈಟಿ ಮ್ಯಾನೇಜರ್ ಗಣೇಶ್ ನೀಡಿದ ದೂರಿನಂತೆ ಪ್ರಕರಣ ದಾಖಲಾಗಿದೆ.
ಸುರತ್ಕಲ್ : ಪ್ರೀತಿಸುವುದಾಗಿ ನಂಬಿಸಿ ದೈಹಿಕ ಸಂಪರ್ಕ ಬೆಳೆಸಿ ವಂಚನೆ ಆರೋಪ: ಅಪ್ರಾಪ್ತೆ ಆತ್ಮಹತ್ಯೆ; ಯುವಕನ ವಿರುದ್ಧ ಪೋಕ್ಸೊ ಪ್ರಕರಣ ದಾಖಲು…
ರಾಜ್ಯ ಸರ್ಕಾರದಿಂದ 133 ಪ್ರಧಾನಮಂತ್ರಿ ಜನೌಷಧಿ ಕೇಂದ್ರಗಳಿಗೆ ಶೋಕಾಸ್ ನೋಟಿಸ್ ಬೆಂಗಳೂರು: ರಾಜ್ಯ ಸರ್ಕಾರ 133 ಪ್ರಧಾನಮಂತ್ರಿ ಜನೌಷಧಿ ಕೇಂದ್ರಗಳಿಗೆ …
ಉಡುಪಿ: ಅಸ್ವಸ್ಥಗೊಂಡ ಪ್ರಯಾಣಿಕ ; ಬಸ್ನಲ್ಲೇ ಆಸ್ಪತ್ರೆಗೆ ಕರೆದುಕೊಂಡು ಹೋಗಿ ಪ್ರಾಣ ಉಳಿಸಿದ ಚಾಲಕ ಉಡುಪಿ : ಶಿವಮೊಗ್ಗದಿಂದ ಬರುತ್ತಿದ್ದ ಖಾಸಗಿ…
ಮುಂಬೈನಲ್ಲಿ ಮುಂಗಾರು: ತಗ್ಗು ಪ್ರದೇಶಗಳು ಜಲಾವೃತ, ರೈಲು ಸಂಚಾರ ವ್ಯತ್ಯಯ ಮುಂಬೈ: ಮುಂಬೈನಲ್ಲಿ ಮುಂಗಾರು ಆರಂಭವಾದ ಒಂದು ದಿನದ ನಂತರ,…
ಜೂ.25ಕ್ಕೆ ಮಂಗಳೂರಿಗೆ ಶಾರುಖ್ ಖಾನ್: ರೋಹನ್ ಕಾರ್ಪೊರೇಶನ್ ವಿಶೇಷ ಕಾರ್ಯಕ್ರಮದಲ್ಲಿ ಭಾಗಿ ಮಂಗಳೂರು: ಬಾಲಿವುಡ್ ನ ಖ್ಯಾತ ನಟ ಹಾಗೂ…
ಕರ್ತವ್ಯದ ವೇಳೆ ಹೃದಯಾಘಾತ : ಡಿಎಆರ್ ಪೊಲೀಸ್ ಕಾನ್ಸ್ಟೇಬಲ್ ಸಾವು ರಾಯಚೂರು: ಜಿಲ್ಲೆಯ ದೇವದುರ್ಗ ಜಿಲ್ಲಾ ಸಶಸ್ತ್ರ ಮೀಸಲು ಪಡೆ ಕಾನ್ಸ್ಟೇಬಲ್…