ಉಡುಪಿ: ಸೊಸೈಟಿಗೆ ಸಾಲ ಮರುಪಾವತಿಸದೆ, ಸಾಲ ಸಂದಾಯದ ಬಗ್ಗೆ ನಕಲಿ ದಾಖಲೆ ಸೃಷ್ಟಿಸಿರುವ ಬಗ್ಗೆ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಅಜ್ಜರಕಾಡು ನೂತನ್ ಕ್ರೆಡಿಟ್ ಕೋ-ಆಪರೇಟಿವ್ ಸೊಸೈಟಿಯಲ್ಲಿ ರಿಯಾನತ್ ಬಾನು, ಮೊಹಮ್ಮದ್ ಹನೀಫ್, ನುಮಾನ್ ಅಜ್ಜರಕಾಡು ಶಾಖೆಯಲ್ಲಿ ಹ್ಯುಂಡೈ ವೆನ್ಯೂ ಕಾರನ್ನು ಅಡಮಾನವಿರಿಸಿ, ರಿಯಾನತ್ ಬಾನು ಹೆಸರಿನಲ್ಲಿ 8 ಲಕ್ಷ ರೂ. ಸಾಲ ಪಡೆದಿದ್ದರು. ಜಾಮೀನುದಾರಾಗಿ ಮೊಹಮ್ಮದ್ ಹನೀಫ್, ನುಮಾನ್ ಸಹಿ ಮಾಡಿದ್ದರು.
ಸಾಲದ ಅರ್ಜಿ, ಪ್ರಾಮಿಸರಿ ನೋಟ್ ಹಾಗೂ ಒಪ್ಪಿಗೆ ಪತ್ರ ಮತ್ತು ಇತರ ದಾಖಲಾತಿಗಳನ್ನು ಸೊಸೈಟಿಗೆ ಬರೆದುಕೊಟ್ಟು ಸಾಲ ಮರು ಪಾವತಿಸುವುದಾಗಿ ನಂಬಿಸಿ, ವಾಹನ ಸಾಲ ಪಡೆದು ಅನಂತರ ಸೊಸೈಟಿಗೆ ಸಾಲ ಮರುಪಾವತಿಸದೆ ಸೊಸೈಟಿಯವರು ಸಾಲ ಸಂದಾಯವಾಗಿರುವುದಾಗಿ ಪತ್ರ ನೀಡಿರುವಂತೆ ಮತ್ತು ನಮೂನೆ 35ಕ್ಕೆ ಸಹಿ ಹಾಕಿರುವಂತೆ ನಕಲಿ ಸಹಿ ಮತ್ತು ಸೀಲು ಹಾಕಿ ನಕಲಿ ದಾಖಲೆಗಳನ್ನು ಸೃಷ್ಟಿಸಿ, ಆ ನಕಲಿ ದಾಖಲೆಗಳು ನೈಜ್ಯವೆಂದು ನಂಬಿಸಿ ಆರ್ಟಿಒ ಕಚೇರಿಗೆ ಸಲ್ಲಿಸಿದ್ದರು.
ಈ ನಕಲಿ ದಾಖಲೆಗಳ ಆಧಾರದ ಮೇರೆಗೆ ಕಾರನ್ನು ಅಡಮಾನ ನಮೂದನ್ನು ಸರಿಪಡಿಸಿ, ಐಸಿಐಸಿ ಬ್ಯಾಂಕ್ ಮಂಗಳೂರು ಶಾಖೆಯಲ್ಲಿ ಇದೇ ವಾಹನವನ್ನು ಅಡಮಾನ ಇರಿಸಿ ಸಾಲ ಪಡೆದುಕೊಂಡಿದ್ದರು. ಸೊಸೈಟಿಯಲ್ಲಿ ಪಡೆದ ಸಾಲವನ್ನು ಮರುಪಾವತಿಸದೆ, ನಕಲಿ ದಾಖಲೆ ಸೃಷ್ಟಿಸಿ ಲೋಪ ಎಸಗಿದ ಬಗ್ಗೆ ಸೊಸೈಟಿ ಮ್ಯಾನೇಜರ್ ಗಣೇಶ್ ನೀಡಿದ ದೂರಿನಂತೆ ಪ್ರಕರಣ ದಾಖಲಾಗಿದೆ.
ಉಡುಪಿ :ಜಿಲ್ಲೆಯ ಎಲ್ಲಾ ಹೊಟೇಲ್ಗಳನ್ನು ಸಾಮೂಹಿಕವಾಗಿ ಮುಚ್ಚಬೇಕು ಎಂಬ ಒತ್ತಡ ಹೆಚ್ಚುತ್ತಿದೆ: ತಲ್ಲೂರು ಶಿವರಾಮ ಶೆಟ್ಟಿ ಉಡುಪಿ/ಕುಂದಾಪುರ: ಪಶ್ಚಿಮ ಏಷ್ಯಾ…
ಉಪಚುನಾವಣೆ : ದಾವಣಗೆರೆ ದಕ್ಷಿಣ, ಬಾಗಲಕೋಟೆಗೆ ಬಿಜೆಪಿ ಅಭ್ಯರ್ಥಿ ಘೋಷಣೆ ಬೆಂಗಳೂರು: ಉಪಚುನಾವಣೆಗೆ ಬಿಜೆಪಿ ತನ್ನ ಅಭ್ಯರ್ಥಿಗಳನ್ನು ಘೋಷಿಸಿದೆ. ಬಾಗಲಕೋಟೆ…
ಕುಂದಾಪುರ: ಕಾರ್ಮಿಕರಿಗೆ ಸ್ಮಾರ್ಟ್ ಕಾರ್ಡ್ ನೀಡುವಂತೆ ಶಾಸಕ ಕಿರಣ್ ಕುಮಾರ್ ಕೊಡ್ಗಿ ಮನವಿ ಕುಂದಾಪುರ: ರಾಜ್ಯ ಮೋಟಾರು ಸಾರಿಗೆ ಮತ್ತು…
ಉಡುಪಿ: ಗ್ಯಾಸ್ ಸಮಸ್ಯೆಯನ್ನೇ ಬಂಡವಾಳ ಮಾಡಿಕೊಂಡ ಸೈಬರ್ ವಂಚಕರು : ವೃದ್ಧ ದಂಪತಿಯಿಂದ ₹9.78 ಲಕ್ಷ ವಸೂಲಿ ಉಡುಪಿ: ಇರಾನ್…
ಮಂಗಳೂರು : ಪಿಲಿಕುಳದಲ್ಲಿ ಏಳು ಮರಿಗಳಿಗೆ ಜನ್ಮ ನೀಡಿದ ಭಾರತೀಯ ತೋಳ 'ಗೀತಾ' ಮಂಗಳೂರು: ಪಿಲಿಕುಳ ಜೈವಿಕ ಉದ್ಯಾನವನದಲ್ಲಿ ಭಾರತೀಯ ತೋಳ–…
ಮಂಗಳೂರು : ಅಪ್ರಾಪ್ತ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣ ; ಆರೋಪಿ ವಶ ಮಂಗಳೂರು: ಸಮೀಪದ ಕೊಣಾಜೆ ಪೊಲೀಸ್…