Featured

ಉಡುಪಿ:  ಪದವೀಧರರು ನನ್ನ ಕೈ ಬಿಡಲಾರರು: ರಘುಪತಿ ಭಟ್‌ – vishwanews24

ಉಡುಪಿ:  ಪದವೀಧರರು ನನ್ನ ಕೈ ಬಿಡಲಾರರು: ರಘುಪತಿ ಭಟ್‌

ಉಡುಪಿ: ನಾನು 3 ಬಾರಿ ಶಾಸಕನಾಗಿ ಜನತೆಗೆ ಸ್ಪಂದಿಸಿದ ರೀತಿ, ಮಾಡಿದ ಅಭಿವೃದ್ಧಿ ಕಾರ್ಯಗಳು ಹಾಗೂ ಕ್ಷೇತ್ರದಲ್ಲಿ ನಡೆಸಿದ ವಿನೂತನ ಜನಪರ ಕಾರ್ಯಕ್ರಮಗಳ ಬಗ್ಗೆ ಅರಿವಿರುವ ನೈಋತ್ಯ ಪದವೀಧರರ ಕ್ಷೇತ್ರದ ಮತದಾರರು ಬಿಜೆಪಿ ಕಾರ್ಯಕರ್ತರ ಬೆಂಬಲಿತ ಅಭ್ಯರ್ಥಿಯಾಗಿ ಸ್ಪರ್ಧಿಸುತ್ತಿರುವ ನನ್ನ ಕೈ ಹಿಡಿಯುತ್ತಾರೆ ಎನ್ನುವ ವಿಶ್ವಾಸವಿದೆ ಎಂದು ನೈಋತ್ಯ ಪದವೀಧರ ಕ್ಷೇತ್ರದ ಅಭ್ಯರ್ಥಿ ಕೆ. ರಘುಪತಿ ಭಟ್‌ ಹೇಳಿದರು.

 

ನಾನು ರಾಜಕೀಯ ಮಾಡಲು ಅಥವಾ ಯಾರನ್ನೋ ಸೋಲಿಸಲು ಸ್ಪರ್ಧಿಸುತ್ತಿಲ್ಲ. ಜನರ ಸೇವೆಗಾಗಿ ಪರಿಷತ್‌ಗೆ ಆಯ್ಕೆ ಬಯಸಿದ್ದೇನೆ. 5 ಜಿಲ್ಲೆ ಹಾಗೂ ದಾವಣಗೆರೆಯ ಮೂರು ತಾಲೂಕುಗಳನ್ನೊಳಗೊಂಡ ಭೌಗೋಳಿಕವಾಗಿ ಅತಿ ದೊಡ್ಡ ಕ್ಷೇತ್ರವಾಗಿರುವ ಇಲ್ಲಿನ ಜನತೆ ತೋರಿಸಿದ ಪ್ರೀತಿಯಿಂದಾಗಿ ನನ್ನ ಗೆಲುವಿನ ವಿಸ್ವಾಸ ಇಮ್ಮಡಿಗೊಂಡಿದೆ. ಕೊಡಗು ಜಿಲ್ಲೆಯಲ್ಲಿ ನಿವೃತ್ತ ಸೈನಿಕರು ನನ್ನ ಪರವಾಗಿ ಕೆಲಸ ಮಾಡುತ್ತಿದ್ದಾರೆ. ಹಲವಾರು ಉದ್ಯಮಗಳನ್ನು ಒಳಗೊಂಡ ಈ ಕ್ಷೇತ್ರದ ಪದವೀಧರರಿಗೆ ಅವರವರ ಶೈಕ್ಷಣಿಕ ಅರ್ಹತೆಗನುಗುಣವಾಗಿ ಉದ್ಯೋಗ ಮತ್ತು ಉದ್ಯಮಕ್ಕೆ ಸಹಕಾರಿಯಾಗಬಲ್ಲ ಸವಲತ್ತುಗಳು ಮತ್ತು ಪೂರಕವಾದ ಸರಕಾರದ ಶಾಸನಗಳು ರೂಪಿತವಾಗಿ ಜಾರಿಯಾಗುವ ಅವಶ್ಯಕತೆಗಳನ್ನು ಮನಗಂಡಿರುತ್ತೇನೆ. ಶಿಕ್ಷಕರ ಮತ್ತು ಸರಕಾರಿ ನೌಕರರ ಬೇಡಿಕೆ ಹಾಗೂ ಹೊಸ ಕಾರ್ಯಕ್ರಮಗಳ ಅನುಷ್ಠಾನಕ್ಕಾಗಿ ಶಕ್ತಿಮೀರಿ ಪ್ರಾಮಾಣಿಕ ಪ್ರಯತ್ನ ಮಾಡುತ್ತೇನೆ ಎಂದು ತಿಳಿಸಿದ್ದಾರೆ.

Vishwa News 24

Recent Posts

ಉಡುಪಿ ಮಲಬಾರ್ ಗೋಲ್ಡ್‌ನಲ್ಲಿ ಹಫೀಝ್ ರೆಹಮಾನ್‌ಗೆ ಬೀಳ್ಕೊಡುಗೆ -vishwanews24

ಉಡುಪಿ ಮಲಬಾರ್ ಗೋಲ್ಡ್‌ನಲ್ಲಿ ಹಫೀಝ್ ರೆಹಮಾನ್‌ಗೆ ಬೀಳ್ಕೊಡುಗೆ ಉಡುಪಿ : ಉಡುಪಿ ಮಲಬಾರ್ ಗೋಲ್ಡ್ ಆಂಡ್ ಡೈಮಂಡ್ಸ್ ಶಾಖೆಯಲ್ಲಿ ಕಳೆದ…

4 days ago

ದೋಣಿ ಮುಗುಚಿ ಇಬ್ಬರು ಯುವಕರು ನೀರುಪಾಲು : ಓರ್ವನ ಮೃತದೇಹ ಪತ್ತೆ, ಇನ್ನೋರ್ವನಿಗಾಗಿ ಶೋಧ – vishwanews24

ಫಲ್ಗುಣಿ ನದಿಯಲ್ಲಿ ಮಗುಚಿ ಬಿದ್ದ ದೋಣಿ: ಇಬ್ಬರು ಯುವಕರು ನೀರುಪಾಲು  ಮೀನುಗಾರಿಕೆಗೆ ತೆರಳಿದ್ದಾಗ ಆಕಸ್ಮಿಕವಾಗಿ ದೋಣಿ ಮುಗುಚಿ ಇಬ್ಬರು ಯುವಕರು…

5 days ago

ಬಿಜೆಪಿ ಬೆಂಬಲಿಸುವವರೂ ನಮ್ಮ ಗ್ಯಾರಂಟಿಗಳ ಫಲಾನುಭವಿಗಳು : ಸಿದ್ದರಾಮಯ್ಯ – vishwanews24

 ನಮ್ಮದು ಪಕ್ಷಾತೀತ ಅಭಿವೃದ್ಧಿಪರ ಸರ್ಕಾರ.. ದಲಿತರಿಗೆ ಮೀಸಲಾತಿ ತಂದವರು ನಾವು .. ರಾಜ್ಯದಲ್ಲಿ ಬಿಜೆಪಿ ಸ್ವಂತ ಬಲದಿಂದ ಯಾವತ್ತೂ ಅಧಿಕಾರಕ್ಕೆ…

5 days ago

ಕಾಪು : 94/ಸಿಯಡಿ ಹಕ್ಕುಪತ್ರ ; ಉಚಿತ ಉಪಕರಣಗಳ ವಿತರಣೆ – vishwanews24

ಕಾಪು : 94/ಸಿಯಡಿ ಹಕ್ಕುಪತ್ರ ; ಉಚಿತ ಉಪಕರಣಗಳ ವಿತರಣೆ ಕಾಪು : ವಿಧಾನಸಭಾ ಕ್ಷೇತ್ರದ ಕಾಪು ತಾಲ್ಲೂಕು ವ್ಯಾಪ್ತಿಯ…

5 days ago

ರೈಲು ಪ್ರಯಾಣಿಕರ ಗಮನಕ್ಕೆ: ಇಂದಿನಿಂದ ಬುಕ್ಕಿಂಗ್ ಮತ್ತು ರದ್ದತಿ  ನಿಯಮದಲ್ಲಿ ಭಾರಿ ಬದಲಾವಣೆ ; ಇಲ್ಲಿದೆ ಪೂರ್ಣ ಮಾಹಿತಿ – vishwanews24

ರೈಲ್ವೆ ಇಲಾಖೆಯ 5 ಹೊಸ ನಿಯಮ ಜಾರಿ: ತತ್ಕಾಲ್ ಬುಕಿಂಗ್‌ಗೆ ಆಧಾರ್ ಕಡ್ಡಾಯ; ರೀಫಂಡ್ ನಿಯಮ ಹೇಗಿದೆ? ರೈಲ್ವೆ ಇಲಾಖೆಯ…

5 days ago

ಉಡುಪಿ:  ಯುವ‌ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ – vishwanews24

ಉಡುಪಿ:  ಯುವ‌ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ ಉಡುಪಿ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ(ಕೆಯುಡಬ್ಲೂಜೆ)ದ 2024ನೇ…

5 days ago