ಉಡುಪಿ: ನಾನು 3 ಬಾರಿ ಶಾಸಕನಾಗಿ ಜನತೆಗೆ ಸ್ಪಂದಿಸಿದ ರೀತಿ, ಮಾಡಿದ ಅಭಿವೃದ್ಧಿ ಕಾರ್ಯಗಳು ಹಾಗೂ ಕ್ಷೇತ್ರದಲ್ಲಿ ನಡೆಸಿದ ವಿನೂತನ ಜನಪರ ಕಾರ್ಯಕ್ರಮಗಳ ಬಗ್ಗೆ ಅರಿವಿರುವ ನೈಋತ್ಯ ಪದವೀಧರರ ಕ್ಷೇತ್ರದ ಮತದಾರರು ಬಿಜೆಪಿ ಕಾರ್ಯಕರ್ತರ ಬೆಂಬಲಿತ ಅಭ್ಯರ್ಥಿಯಾಗಿ ಸ್ಪರ್ಧಿಸುತ್ತಿರುವ ನನ್ನ ಕೈ ಹಿಡಿಯುತ್ತಾರೆ ಎನ್ನುವ ವಿಶ್ವಾಸವಿದೆ ಎಂದು ನೈಋತ್ಯ ಪದವೀಧರ ಕ್ಷೇತ್ರದ ಅಭ್ಯರ್ಥಿ ಕೆ. ರಘುಪತಿ ಭಟ್ ಹೇಳಿದರು.
ನಾನು ರಾಜಕೀಯ ಮಾಡಲು ಅಥವಾ ಯಾರನ್ನೋ ಸೋಲಿಸಲು ಸ್ಪರ್ಧಿಸುತ್ತಿಲ್ಲ. ಜನರ ಸೇವೆಗಾಗಿ ಪರಿಷತ್ಗೆ ಆಯ್ಕೆ ಬಯಸಿದ್ದೇನೆ. 5 ಜಿಲ್ಲೆ ಹಾಗೂ ದಾವಣಗೆರೆಯ ಮೂರು ತಾಲೂಕುಗಳನ್ನೊಳಗೊಂಡ ಭೌಗೋಳಿಕವಾಗಿ ಅತಿ ದೊಡ್ಡ ಕ್ಷೇತ್ರವಾಗಿರುವ ಇಲ್ಲಿನ ಜನತೆ ತೋರಿಸಿದ ಪ್ರೀತಿಯಿಂದಾಗಿ ನನ್ನ ಗೆಲುವಿನ ವಿಸ್ವಾಸ ಇಮ್ಮಡಿಗೊಂಡಿದೆ. ಕೊಡಗು ಜಿಲ್ಲೆಯಲ್ಲಿ ನಿವೃತ್ತ ಸೈನಿಕರು ನನ್ನ ಪರವಾಗಿ ಕೆಲಸ ಮಾಡುತ್ತಿದ್ದಾರೆ. ಹಲವಾರು ಉದ್ಯಮಗಳನ್ನು ಒಳಗೊಂಡ ಈ ಕ್ಷೇತ್ರದ ಪದವೀಧರರಿಗೆ ಅವರವರ ಶೈಕ್ಷಣಿಕ ಅರ್ಹತೆಗನುಗುಣವಾಗಿ ಉದ್ಯೋಗ ಮತ್ತು ಉದ್ಯಮಕ್ಕೆ ಸಹಕಾರಿಯಾಗಬಲ್ಲ ಸವಲತ್ತುಗಳು ಮತ್ತು ಪೂರಕವಾದ ಸರಕಾರದ ಶಾಸನಗಳು ರೂಪಿತವಾಗಿ ಜಾರಿಯಾಗುವ ಅವಶ್ಯಕತೆಗಳನ್ನು ಮನಗಂಡಿರುತ್ತೇನೆ. ಶಿಕ್ಷಕರ ಮತ್ತು ಸರಕಾರಿ ನೌಕರರ ಬೇಡಿಕೆ ಹಾಗೂ ಹೊಸ ಕಾರ್ಯಕ್ರಮಗಳ ಅನುಷ್ಠಾನಕ್ಕಾಗಿ ಶಕ್ತಿಮೀರಿ ಪ್ರಾಮಾಣಿಕ ಪ್ರಯತ್ನ ಮಾಡುತ್ತೇನೆ ಎಂದು ತಿಳಿಸಿದ್ದಾರೆ.
ಪುತ್ತೂರು: ಕೆಎಸ್ಆರ್ಟಿಸಿ ಬಸ್ ಮತ್ತು ಬೈಕ್ ನಡುವೆ ಭೀಕರ ಅಪಘಾತ: ಸವಾರ ಸ್ಥಳದಲ್ಲೇ ಮೃತ್ಯು ಪುತ್ತೂರು: ಕೆಯ್ಯರು ಗ್ರಾಮದ ಬೊಳಿಕ್ಕಳ…
ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ ಬೆಂಗಳೂರು : ಕೇಂದ್ರ ಸರಕಾರದ…
ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ ಬೆಂಗಳೂರು: ನಗರದ ರಾಜೇಶ್ವರಿ ನಗರದಲ್ಲಿ ಹೆಂಡತಿಯನ್ನು ಕೊಂದು ಗಂಡ…
ಸ್ವಕ್ಷೇತ್ರದಲ್ಲಿ 80ನೇ ಸ್ವಾತಂತ್ರ್ಯೋತ್ಸವ ಧ್ವಜಾರೋಹಣ ಕಾರ್ಯಕ್ರಮದಲ್ಲಿ ಜಮೀರ್ ಅಹ್ಮದ್ ಭಾಗಿ ನಾನು ಹಿಂದೂಸ್ತಾನಿ, ನಾನು ಕನ್ನಡಿಗ, ದೇಶದ ಅಭಿಮಾನವನ್ನ ಬಿಜೆಪಿಯವರಿಂದ…
ಗುಟ್ಕಾ, ಪಾನ್ ಮಸಾಲ ನಿಷೇಧ ಆದೇಶ ನಾವು ವಾಪಸ್ ಪಡೆದಿಲ್ಲ: ಯು.ಟಿ.ಖಾದರ್ ಸ್ಪಷ್ಟನೆ ಅಡಿಕೆ ಬೆಲೆ ಕುಸಿಯಲ್ಲ, ಬೆಳೆಗಾರರಿಗೆ ಸಮಸ್ಯೆ…
2047ರ ವೇಳೆಗೆ ಅಭಿವೃದ್ಧಿ ಹೊಂದಿದ ರಾಷ್ಟ್ರವನ್ನು ನಿರ್ಮಿಸುತ್ತೇವೆ : ಪ್ರಧಾನಿ ಮೋದಿ ನವದೆಹಲಿ: 2047ರ ವೇಳೆಗೆ ‘ವಿಕಸಿತ ಭಾರತ’ದ ಕನಸನ್ನು…