ಉಡುಪಿ : ಪರಂಪರಾಗತ ಪೌಷ್ಠಿಕ ಆಹಾರಗಳಿಗೆ ಹೆಚ್ಚು ಒತ್ತನ್ನು ನೀಡಿ, ಆರೋಗ್ಯಯುತ ಉತ್ತಮ ಹಾಗೂ ಬಲಿಷ್ಠ ಸಮಾಜ ನಿರ್ಮಿಸುವಂತೆ ಕಾಪು ಶಾಸಕ ಲಾಲಾಜಿ ಆರ್ ಮೆಂಡನ್ ಸಲಹೆ ನೀಡಿದರು.
ಅವರು ಇಂದು, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಶಿಶು ಅಭಿವೃದ್ಧಿ ಯೋಜನೆ ಉಡುಪಿ, ತಾಲೂಕು ಪಂಚಾಯತ್ ಕಾಪು, ಬಡಾ ಗ್ರಾಮ ಪಂಚಾಯತ್ ಹಾಗೂ ಸರಸ್ವತಿ ಶಾಲೆ ಉಚ್ಚಿಲ ಇವರ ಸಹಯೋಗದೊಂದಿಗೆ, ಪೋಷಣ್ ಅಭಿಯಾನ್ ಯೋಜನೆಯ ಪೋಷಣ್ ಪಕ್ವಾಡ-2021 ರಲ್ಲಿ ಪೋಷಣ್ ಪಂಚಸೂತ್ರಗಳು-ವಿಶೇಷ ಆರೋಗ್ಯ ತಪಾಸಣೆ ಹಾಗೂ ಉತ್ತಮ ಆರೋಗ್ಯಕ್ಕಾಗಿ ಪರಂಪರಾಗತ ಉತ್ತಮ ಆಹಾರ ಪದ್ಧತಿಗಳ ಕುರಿತು ನಡೆದ ಜಾಗೃತಿ ಮತ್ತು ಪ್ರಾತ್ಯಕ್ಷತೆ ಕಾರ್ಯಕ್ರಮದಲ್ಲಿ ಭಾಗ್ಯಲಕ್ಷ್ಮಿ ಬಾಂಡ್ ವಿತರಿಸಿ, ಮಾತನಾಡಿದರು.
ಇದನ್ನೂ ಓದಿ :ಉಡುಪಿ : ಕ್ಷಯ ರೋಗ ಮುಕ್ತ ಸಮಾಜ ನಿರ್ಮಾಣವಾಗಲಿ : ವನಿತಾ ಗುರುದತ್ -Vishwanews24
ಕೊರೋನ ಮಹಾಮಾರಿಯ ನಿಯಂತ್ರಣಕ್ಕೆ ಸಾಮಾಜಿಕ ಅಂತರ, ಮಾಸ್ಕ್ ಧರಿಸುವುದು ಹಾಗೂ ವೈಯುಕ್ತಿಕ ಸ್ವಚ್ಛತೆ ಕುರಿತು ಕಾಳಜಿ ವಹಿಸುವಂತೆ ತಿಳಿಸಿದರು.ಬಡಾ ಗ್ರಾಮ ಪಂಚಾಯತ್ ಅಧ್ಯಕ್ಷೆ ಜ್ಯೋತಿ ಗಣೇಶ್ ಕಾರ್ಯಕ್ರಮ ಉದ್ಘಾಟಿಸಿ, ಕಾರ್ಯಕ್ರಮದ ಪ್ರಯೋಜನ ಪಡೆದುಕೊಳ್ಳುವಂತೆ ಕರೆ ನೀಡಿದರು.
ಕಾರ್ಯಕ್ರಮದಲ್ಲಿ ಪೌಷ್ಠಿಕ ಆಹಾರಗಳ ಪ್ರಾತ್ಯಕ್ಷತೆ ಹಾಗೂ ಮಹಿಳೆಯರಿಗಾಗಿ ಆರೋಗ್ಯ ಇಲಾಖೆಯ ಸಹಕಾರದೊಂದಿಗೆ ರಕ್ತಹೀನತೆ ಪರೀಕ್ಷೆ ನಡೆಸಲಾಯಿತು.
ಕಾರ್ಯಕ್ರಮದಲ್ಲಿಆರೋಗ್ಯ ನಿರೀಕ್ಷಕ ದೇವಪ್ಪ ಪಟಗಾರ್, ತಾಲೂಕು ಪಂಚಾಯತ್ ಉಪಾಧ್ಯಕ್ಷ ಯು.ಸಿ. ಶೇಕಬ್ಬ, ಬಡಾ ಗ್ರಾಮ ಪಂಚಾಯತ್ ಉಪಾಧ್ಯಕ್ಷೆ ಶಕುಂತಲ ಕೋಟ್ಯಾನ್, ಪಂಚಾಯತ್ ಅಭಿವೃದ್ಧಿ ಅಧಿಕಾರಿ ಕುಶಾಲಿನಿ ವಿ.ಎಸ್, ಸರಸ್ವತಿ ಶಾಲೆಯ ಮುಖ್ಯೋಪಾಧ್ಯಾಯ ಬಾಬುರಾಯ ಆಚಾರ್ಯ, ಶಿಶು ಅಭಿವೃದ್ಧಿ ಯೋಜನಾ ವ್ಯಾಪ್ತಿಯ ಮೇಲ್ವಿಚಾರಕಿಯರು ಹಾಗೂ ಅಂಗನವಾಡಿ ಕಾರ್ಯಕರ್ತೆಯರು ಉಪಸ್ಥಿತರಿದ್ದರು.
ಗ್ರಾಮ ಪಂಚಾಯತ್ ಕಾರ್ಯದರ್ಶಿ ನಿರ್ಮಲ ನಿರೂಪಿಸಿ ವಂದಿಸಿದರು.
ಇದನ್ನೂ ಓದಿ :ಉಡುಪಿ : ಮಾ. 27 ರಂದು ಮೆಘಾ ಲೋಕ್ ಅದಾಲತ್ -Vishwanews24
ದೇವೇಗೌಡರ ಕುರಿತು ಕಾಂಗ್ರೆಸ್ ಮೊಸಳೆ ಕಣ್ಣೀರು ಸುರಿಸುವ ಅವಶ್ಯಕತೆ ಇಲ್ಲ: ಬಿ.ವೈ.ವಿಜಯೇಂದ್ರ ಬೆಂಗಳೂರು,: ಕರ್ನಾಟಕದ ಕಾಂಗ್ರೆಸ್ ಪಕ್ಷದ ಉಸ್ತುವಾರಿ ಸುರ್ಜೇವಾಲ…
ಕಾರವಾರ - ಮಡಗಾಂವ್ ವಿಶೇಷ ರೈಲು ಸೇವೆ ಇನ್ನು ಮುಂದೆ ಖಾಯಂ ಶಿರಸಿ: ಕಾರವಾರ ಮತ್ತು ಮಡಗಾಂವ್ ನಡುವೆ ಸಂಚರಿಸುತ್ತಿದ್ದ ವಿಶೇಷ…
ಡಿಕೆಶಿ ಸಂಪುಟದಲ್ಲಿ ಸಚಿವ ಸ್ಥಾನಕ್ಕಾಗಿ ಯಾವುದೇ ಬೇಡಿಕೆ ಇಟ್ಟಿಲ್ಲ, ಸ್ಪರ್ಧೆಯಲ್ಲೂ ಇಲ್ಲ: ರಾಜಣ್ಣ ಖಡಕ್ ಹೇಳಿಕೆ ಬೆಂಗಳೂರು: ನೂತನ ಮುಖ್ಯಮಂತ್ರಿ ಡಿ.…
ಬೆಳ್ತಂಗಡಿ ಮನೆ ಕಳ್ಳತನ ಪ್ರಕರಣ : ಇಬ್ಬರು ಅಂತರಾಜ್ಯ ಕಳ್ಳರ ಬಂಧನ ; ₹23.67 ಲಕ್ಷ ಮೌಲ್ಯದ ಸೊತ್ತು ವಶ…
ಉಡುಪಿ : ಯುವಕ ನಾಪತ್ತೆ ಉಡುಪಿ : ಮೂಲತಃ ನೇಪಾಳ ದೇಶದವರಾದ, ಪ್ರಸ್ತುತ ಮಣಿಪಾಲದ ಲಕ್ಷಿö್ಮÃಶ ನಗರದಲ್ಲಿರುವ ಹೋಟೆಲ್ ಒಂದರಲ್ಲಿ…
ಉಡುಪಿ: ಜೂನ್ 9 ರಿಂದ ಕರ್ನಾಟಕದಾದ್ಯಂತ ಖಾಸಗಿ ಬಸ್ ಪ್ರಯಾಣ ದರ ಏರಿಕೆ : ಕುಯಿಲಾಡಿ ಸುರೇಶ್ ನಾಯಕ್ ಉಡುಪಿ…