Featured

ಉಡುಪಿ : ಪರಂಪರಾಗತ ಪೌಷ್ಟಿಕ ಆಹಾರಗಳಿಗೆ ಒತ್ತು ನೀಡಿ : ಲಾಲಾಜಿ ಆರ್ ಮೆಂಡನ್ -Vishwanews24

ಉಡುಪಿ : ಪರಂಪರಾಗತ ಪೌಷ್ಟಿಕ ಆಹಾರಗಳಿಗೆ ಒತ್ತು ನೀಡಿ : ಲಾಲಾಜಿ ಆರ್ ಮೆಂಡನ್ -Vishwanews24

ಉಡುಪಿ : ಪರಂಪರಾಗತ ಪೌಷ್ಠಿಕ ಆಹಾರಗಳಿಗೆ ಹೆಚ್ಚು ಒತ್ತನ್ನು ನೀಡಿ, ಆರೋಗ್ಯಯುತ ಉತ್ತಮ ಹಾಗೂ ಬಲಿಷ್ಠ ಸಮಾಜ ನಿರ್ಮಿಸುವಂತೆ ಕಾಪು ಶಾಸಕ ಲಾಲಾಜಿ ಆರ್ ಮೆಂಡನ್ ಸಲಹೆ ನೀಡಿದರು.

ಅವರು ಇಂದು, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಶಿಶು ಅಭಿವೃದ್ಧಿ ಯೋಜನೆ ಉಡುಪಿ, ತಾಲೂಕು ಪಂಚಾಯತ್ ಕಾಪು, ಬಡಾ ಗ್ರಾಮ ಪಂಚಾಯತ್ ಹಾಗೂ ಸರಸ್ವತಿ ಶಾಲೆ ಉಚ್ಚಿಲ ಇವರ ಸಹಯೋಗದೊಂದಿಗೆ, ಪೋಷಣ್ ಅಭಿಯಾನ್ ಯೋಜನೆಯ ಪೋಷಣ್ ಪಕ್ವಾಡ-2021 ರಲ್ಲಿ ಪೋಷಣ್ ಪಂಚಸೂತ್ರಗಳು-ವಿಶೇಷ ಆರೋಗ್ಯ ತಪಾಸಣೆ ಹಾಗೂ ಉತ್ತಮ ಆರೋಗ್ಯಕ್ಕಾಗಿ ಪರಂಪರಾಗತ ಉತ್ತಮ ಆಹಾರ ಪದ್ಧತಿಗಳ ಕುರಿತು ನಡೆದ ಜಾಗೃತಿ ಮತ್ತು ಪ್ರಾತ್ಯಕ್ಷತೆ ಕಾರ್ಯಕ್ರಮದಲ್ಲಿ ಭಾಗ್ಯಲಕ್ಷ್ಮಿ ಬಾಂಡ್ ವಿತರಿಸಿ, ಮಾತನಾಡಿದರು.

ಇದನ್ನೂ ಓದಿ :ಉಡುಪಿ : ಕ್ಷಯ ರೋಗ ಮುಕ್ತ ಸಮಾಜ ನಿರ್ಮಾಣವಾಗಲಿ : ವನಿತಾ ಗುರುದತ್ -Vishwanews24

ಕೊರೋನ ಮಹಾಮಾರಿಯ ನಿಯಂತ್ರಣಕ್ಕೆ ಸಾಮಾಜಿಕ ಅಂತರ, ಮಾಸ್ಕ್ ಧರಿಸುವುದು ಹಾಗೂ ವೈಯುಕ್ತಿಕ ಸ್ವಚ್ಛತೆ ಕುರಿತು ಕಾಳಜಿ ವಹಿಸುವಂತೆ ತಿಳಿಸಿದರು.ಬಡಾ ಗ್ರಾಮ ಪಂಚಾಯತ್ ಅಧ್ಯಕ್ಷೆ ಜ್ಯೋತಿ ಗಣೇಶ್ ಕಾರ್ಯಕ್ರಮ ಉದ್ಘಾಟಿಸಿ, ಕಾರ್ಯಕ್ರಮದ ಪ್ರಯೋಜನ ಪಡೆದುಕೊಳ್ಳುವಂತೆ ಕರೆ ನೀಡಿದರು.

ಕಾರ್ಯಕ್ರಮದಲ್ಲಿ ಪೌಷ್ಠಿಕ ಆಹಾರಗಳ ಪ್ರಾತ್ಯಕ್ಷತೆ ಹಾಗೂ ಮಹಿಳೆಯರಿಗಾಗಿ ಆರೋಗ್ಯ ಇಲಾಖೆಯ ಸಹಕಾರದೊಂದಿಗೆ ರಕ್ತಹೀನತೆ ಪರೀಕ್ಷೆ ನಡೆಸಲಾಯಿತು.

ಕಾರ್ಯಕ್ರಮದಲ್ಲಿಆರೋಗ್ಯ ನಿರೀಕ್ಷಕ ದೇವಪ್ಪ ಪಟಗಾರ್, ತಾಲೂಕು ಪಂಚಾಯತ್ ಉಪಾಧ್ಯಕ್ಷ ಯು.ಸಿ. ಶೇಕಬ್ಬ, ಬಡಾ ಗ್ರಾಮ ಪಂಚಾಯತ್ ಉಪಾಧ್ಯಕ್ಷೆ ಶಕುಂತಲ ಕೋಟ್ಯಾನ್, ಪಂಚಾಯತ್ ಅಭಿವೃದ್ಧಿ ಅಧಿಕಾರಿ ಕುಶಾಲಿನಿ ವಿ.ಎಸ್, ಸರಸ್ವತಿ ಶಾಲೆಯ ಮುಖ್ಯೋಪಾಧ್ಯಾಯ ಬಾಬುರಾಯ ಆಚಾರ್ಯ, ಶಿಶು ಅಭಿವೃದ್ಧಿ ಯೋಜನಾ ವ್ಯಾಪ್ತಿಯ ಮೇಲ್ವಿಚಾರಕಿಯರು ಹಾಗೂ ಅಂಗನವಾಡಿ ಕಾರ್ಯಕರ್ತೆಯರು ಉಪಸ್ಥಿತರಿದ್ದರು.

ಗ್ರಾಮ ಪಂಚಾಯತ್ ಕಾರ್ಯದರ್ಶಿ ನಿರ್ಮಲ ನಿರೂಪಿಸಿ ವಂದಿಸಿದರು.

ಇದನ್ನೂ ಓದಿ :ಉಡುಪಿ : ಮಾ. 27 ರಂದು ಮೆಘಾ ಲೋಕ್ ಅದಾಲತ್ -Vishwanews24

Vishwa News 24

Recent Posts

ಬೆಂಗಳೂರು-ಮಂಗಳೂರು ನಡುವೆ ವಂದೇ ಭಾರತ್‌ ರೈಲು ಪ್ರಾಯೋಗಿಕ ಸಂಚಾರ ಯಶಸ್ವಿ – vishwanews24

ಬೆಂಗಳೂರು-ಮಂಗಳೂರು ನಡುವೆ ವಂದೇ ಭಾರತ್‌ ರೈಲು ಪ್ರಾಯೋಗಿಕ ಸಂಚಾರ ಯಶಸ್ವಿ ಮಂಗಳೂರು: ಬೆಂಗಳೂರು-ಮಂಗಳೂರು ನಡುವೆ ವಂದೇ ಭಾರತ್ ಎಕ್ಸ್ಪ್ರೆಸ್ ರೈಲು…

3 hours ago

ಆಗಸ್ಟ್ 17ಕ್ಕೆ ನಾಗರ ಪಂಚಮಿ: ಉಭಯ ಜಿಲ್ಲೆಗಳಲ್ಲಿ ಸ್ಥಳೀಯ ರಜೆ ಘೋಷಣೆಗೆ ಶಾಸಕ ವೇದವ್ಯಾಸ ಕಾಮತ್ ಮನವಿ – vishwanews24

ಆಗಸ್ಟ್ 17ಕ್ಕೆ ನಾಗರ ಪಂಚಮಿ: ಉಭಯ ಜಿಲ್ಲೆಗಳಲ್ಲಿ ಸ್ಥಳೀಯ ರಜೆ ಘೋಷಣೆಗೆ ಶಾಸಕ ವೇದವ್ಯಾಸ ಕಾಮತ್ ಮನವಿ ಮಂಗಳೂರು  :…

3 hours ago

ಭೀಕರ ಅಪಘಾತದಲ್ಲಿ 6 ಮಂದಿ ಕೂಲಿಕಾರ ಮಹಿಳೆಯರು ಸಾವು; ಮೃತರ ಕುಟುಂಬಕ್ಕೆ 5 ಲಕ್ಷ ಪರಿಹಾರ ಘೋಷಣೆ  – vishwanews24

ಭೀಕರ ಅಪಘಾತದಲ್ಲಿ 6 ಮಂದಿ ಕೂಲಿಕಾರ ಮಹಿಳೆಯರು ಸಾವು; ಮೃತರ ಕುಟುಂಬಕ್ಕೆ 5 ಲಕ್ಷ ಪರಿಹಾರ ಘೋಷಣೆ .. ವಿದ್ಯಾಭ್ಯಾಸ…

3 hours ago

ಮುದರಂಗಡಿ ಡೇವಿಡ್ ಡಿಸೋಜಾ ಹತ್ಯೆ ಪ್ರಕರಣ : ಹಣಕಾಸಿನ ನೆರವು ನೀಡಿದ್ದ ಮತ್ತಿಬ್ಬರು ಆರೋಪಿಗಳ ಬಂಧನ – vishwanews24

ಮುದರಂಗಡಿ ಡೇವಿಡ್ ಡಿಸೋಜಾ ಹತ್ಯೆ ಪ್ರಕರಣ : ಹಣಕಾಸಿನ ನೆರವು ನೀಡಿದ್ದ ಮತ್ತಿಬ್ಬರು ಆರೋಪಿಗಳ ಬಂಧನ ಮುದರಂಗಡಿ: ಕಾಪು ತಾಲೂಕಿನ…

3 hours ago

ಮಂಗಳೂರಿನಲ್ಲಿ ರಾಜ್ಯದ ಎರಡನೇ ಪ್ರಾದೇಶಿಕ ಪಾಸ್‌ಪೋರ್ಟ್ ಕಚೇರಿ ತ್ವರಿತವಾಗಿ ಸ್ಥಾಪಿಸಲು ಕಾಂಗ್ರೆಸ್ ಆಗ್ರಹ – vishwanews24

ಮಂಗಳೂರಿನಲ್ಲಿ ರಾಜ್ಯದ ಎರಡನೇ ಪ್ರಾದೇಶಿಕ ಪಾಸ್‌ಪೋರ್ಟ್ ಕಚೇರಿ ತ್ವರಿತವಾಗಿ ಸ್ಥಾಪಿಸಲು ಕಾಂಗ್ರೆಸ್ ಆಗ್ರಹ ಕರಾವಳಿ ಹಾಗೂ ಮಲೆನಾಡಿನ ಜನರ ಪಾಸ್‌ಪೋರ್ಟ್…

4 hours ago

ದೆಹಲಿ-ಪುಣೆ ಸ್ಪೈಸ್‌ಜೆಟ್ ವಿಮಾನದಲ್ಲಿ ಎಸಿ ವೈಫಲ್ಯ: ಉಸಿರಾಟದ ತೊಂದರೆಯಿಂದ ಕಂಗಾಲಾದ ಪ್ರಯಾಣಿಕರು – vishwanews24

ದೆಹಲಿ-ಪುಣೆ ಸ್ಪೈಸ್‌ಜೆಟ್ ವಿಮಾನದಲ್ಲಿ ಎಸಿ ವೈಫಲ್ಯ: ಉಸಿರಾಟದ ತೊಂದರೆಯಿಂದ ಕಂಗಾಲಾದ ಪ್ರಯಾಣಿಕರು ನವದೆಹಲಿ: ದೆಹಲಿ-ಪುಣೆ ಸ್ಪೈಸ್‌ಜೆಟ್ (Spice Jet) ವಿಮಾನದಲ್ಲಿ…

4 hours ago