Featured

ಉಡುಪಿ ಪರಿಷತ್ ಚುನಾವಣೆ ಫಲಿತಾಂಶ : ದ.ಕ-ಉಡುಪಿ ನಾವು ಮಾರಾಟಕ್ಕಿಲ್ಲ ಅಂತ ತೋರಿಸಿಕೊಟ್ಟಿದೆ: ಬಿ.ಎಲ್ ಸಂತೋಷ್ – Vishwanews24

ಉಡುಪಿ ಪರಿಷತ್ ಚುನಾವಣೆ ಫಲಿತಾಂಶ : ದ.ಕ-ಉಡುಪಿ ನಾವು ಮಾರಾಟಕ್ಕಿಲ್ಲ ಅಂತ ತೋರಿಸಿಕೊಟ್ಟಿದೆ, ವಿಧಾನಪರಿಷತ್ ಚುನಾವಣೆಯಲ್ಲಿ ಇದು ಸಾಬೀತಾಗಬೇಕು : ಬಿ.ಎಲ್ ಸಂತೋಷ್ – Vishwanews24

ಕೋಟ ಶ್ರೀನಿವಾಸ್ ಪೂಜಾರಿ ಒಂದು ರುಪಾಯಿ ಖರ್ಚು ಮಾಡದೇ ಗೆದ್ದಿದ್ದಾರೆ..

ಉಡುಪಿ: ಕೋಟ ಶ್ರೀನಿವಾಸ್ ಪೂಜಾರಿ ಒಂದು ರುಪಾಯಿ ಖರ್ಚು ಮಾಡದೇ ಗೆದ್ದಿದ್ದಾರೆ ಎಂದು ಬಿಜೆಪಿ ಸಂಘಟನಾ ರಾಷ್ಟ್ರೀಯ ಕಾರ್ಯದರ್ಶಿ ಬಿ.ಎಲ್ ಸಂತೋಷ್ ಹೇಳಿದ್ದಾರೆ.

ವಿಧಾನ ಪರಿಷತ್ ಚುನಾವಣೆ ನಡೆದು ಫಲಿತಾಂಶ ಬಂದಿದೆ. ಬುದ್ಧಿವಂತರ ಚುನಾವಣೆ ಮಾದರಿ ಎಂದೆಲ್ಲಾ ಇವರಿಗೆ ಬಿಂಬಿತವಾದ ಪರಿಷತ್ ಚುನಾವಣೆಗೆ ಕೋಟಿ ಕೋಟಿ ರೂಪಾಯಿ ಹಣದ ಹೊಳೆ ಹರಿದ ಬಗ್ಗೆ ಜಿಲ್ಲಾ ಮಟ್ಟದ ಶಕ್ತಿಕೇಂದ್ರ ಪ್ರಮುಖರ ಸಭೆಯಲ್ಲಿ ಪಾಲ್ಗೊಂಡ ಸಂತೋಷ್ ಅವರು ಖೇದ ವ್ಯಕ್ತಪಡಿಸಿದ್ದಾರೆ. ಈ ವೇಳೆ ಅವರು, ಮತಗಳು, ಮತ ಹಾಕಿದ ಪ್ರತಿನಿಧಿಗಳು ಖರೀದಿಯಾಗಿದ್ದಾರೆ ಎಂದು ವಿರೋಧ ವ್ಯಕ್ತಪಡಿಸಿದರು.

ದ.ಕ-ಉಡುಪಿ ಶೇ.99 ನಾವು ಮಾರಾಟಕ್ಕಿಲ್ಲ ಅಂತ ತೋರಿಸಿಕೊಟ್ಟಿದೆ. ವಿಧಾನಪರಿಷತ್ ಚುನಾವಣೆಯಲ್ಲಿ ಇದು ಸಾಬೀತಾಗಬೇಕು. ನಾವು ಮಾರಾಟಕ್ಕಿಲ್ಲ, ದಾಕ್ಷಿಣ್ಯಕ್ಕೆ ಒಳಗಾಗುವುದಿಲ್ಲ ಎಂದು ಪ್ರತಿಜ್ಞೆ ಮಾಡಬೇಕು. ಸಾರ್ವಜನಿಕ ವ್ಯವಸ್ಥೆಯಲ್ಲಿ ಇರುವವರಿಗೆ ಈ ಬದ್ಧತೆ ಬೇಕು ಎಂದು ಕರೆ ನೀಡಿದರು.

ಕೆಲ ಜಿಲ್ಲೆಗಳಲ್ಲಿ ಕೋಟ್ಯಂತರ ರೂಪಾಯಿ ಪರಿಷತ್ತಿನ ಚುನಾವಣೆಗೆ ಖರ್ಚಾಗಿದೆ. ಆಮಿಷಗಳಿಗೆ ಮಣಿದು ಜನಪ್ರತಿನಿಧಿಗಳು ಮತ ಚಲಾವಣೆ ಮಾಡಿರುವುದು ಜಗಜ್ಜಾಹೀರಾಗಿದೆ. ದ.ಕ ಉಡುಪಿ ಬಿಜೆಪಿ ಅಭ್ಯರ್ಥಿ ಒಂದು ರೂಪಾಯಿ ಖರ್ಚು ಮಾಡದೆ ಗೆದ್ದಿದ್ದಾರೆ ಎಂದು ಕೋಟ ಶ್ರೀನಿವಾಸ್ ಪೂಜಾರಿ ಹೆಸರು ಉಲ್ಲೇಖ ಮಾಡದೇ ವಿಷಯ ಪ್ರಸ್ತಾಪ ಮಾಡಿದರು.

ವಿಧಾನ ಪರಿಷತ್ ರದ್ದು ಗೊಳಿಸುವ ಸಮಯ ಬಂದಿದೆಯಲ್ಲವೇ? ಅಂತ ಪಕ್ಷದ ಹಿರಿಯ ಮತ್ತು ಸಂವೇದನೆ ಇರುವ ಕಾರ್ಯಕರ್ತರೊಬ್ಬರು ನನ್ನನ್ನು ಪ್ರಶ್ನಿಸಿದರು. ದ.ಕನ್ನಡದ ಉಡುಪಿ ಜಿಲ್ಲೆಯಲ್ಲಿ ಈ ಪ್ರಶ್ನೆ ಉದ್ಭವಿಸುವುದಿಲ್ಲ. ಯಾರೂ ವೋಟ್ ಮಾರಾಟ ಮಾಡಬಾರದು ಅದೊಂದು ನಡವಳಿಕೆ. ನಾನು ಮಾರಾಟಕ್ಕಿಲ್ಲ ಎನ್ನುವುದು ರಾಜಕಾರಣಿಯೊಬ್ಬನಿಗೆ ಇರಬೇಕಾದ ಅತಿ ದೊಡ್ಡ ಗುಣ ಎಂದು ಹೇಳಿದರು.

Vishwa News 24

Recent Posts

ಉಡುಪಿ : ಅಕ್ಕ ಕೆಫೆ ನಿರ್ವಹಣೆ ;  ಏ. 13 ರಂದು ನೇರ ಸಂದರ್ಶನ – vishwanews24

ಉಡುಪಿ : ಅಕ್ಕ ಕೆಫೆ ನಿರ್ವಹಣೆ ;  ಏ. 13 ರಂದು ನೇರ ಸಂದರ್ಶನ ಉಡುಪಿ : ರಾಷ್ಟ್ರೀಯ ಗ್ರಾಮೀಣ…

2 days ago

ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ : ಉಡುಪಿ ಜಿಲ್ಲೆ ಪ್ರಥಮ,  ದ.ಕ ಜಿಲ್ಲೆ ದ್ವೀತಿಯ – vishwanews24

ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ : ಉಡುಪಿ ಜಿಲ್ಲೆ ಪ್ರಥಮ,  ದ.ಕ ಜಿಲ್ಲೆ ದ್ವೀತಿಯ ಬೆಂಗಳೂರು: 2025-26ನೇ ಸಾಲಿನ ದ್ವೀತಿಯ…

2 days ago

ಗುಜರಾತಿಗಳು ಅನಕ್ಷರಸ್ಥರು ಹೇಳಿಕೆಗೆ ವಿಷಾದ ವ್ಯಕ್ತಪಡಿಸಿದ ಖರ್ಗೆ – vishwanews24

ಗುಜರಾತ್ ಜನರ ಭಾವನೆಗಳನ್ನು ನೋಯಿಸುವುದು ನನ್ನ ಉದ್ದೇಶವಾಗಿರಲಿಲ್ಲ .. ಗುಜರಾತಿಗಳು ಅನಕ್ಷರಸ್ಥರು ಹೇಳಿಕೆಗೆ ವಿಷಾದ ವ್ಯಕ್ತಪಡಿಸಿದ ಖರ್ಗೆ ಬೆಂಗಳೂರು: ಕೇರಳ…

3 days ago

ಮಂಗಳೂರು : ಗುರುಪುರ ಬಳಿ ಬಸ್ ಹಾಗೂ ಲಾರಿ ಮುಖಾಮುಖಿ ಡಿಕ್ಕಿ ; ಬಸ್ ಚಾಲಕನಿಗೆ ಗಂಭೀರ ಗಾಯ – vishwanews24

ಮಂಗಳೂರು : ಗುರುಪುರ ಬಳಿ ಬಸ್ ಹಾಗೂ ಲಾರಿ ಮುಖಾಮುಖಿ ಡಿಕ್ಕಿ ; ಬಸ್ ಚಾಲಕನಿಗೆ ಗಂಭೀರ ಗಾಯ ಮಂಗಳೂರು:…

3 days ago

ಬಾಗಲಕೋಟೆ: ಕ್ಷುಲ್ಲಕ ಕಾರಣಕ್ಕೆ ಯುವ ಪ್ರೇಮಿಗಳು ಸಾವಿಗೆ ಶರಣು – vishwanews24

ಬಾಗಲಕೋಟೆ: ಕ್ಷುಲ್ಲಕ ಕಾರಣಕ್ಕೆ ಯುವ ಪ್ರೇಮಿಗಳು ಸಾವಿಗೆ ಶರಣು ಬಾಗಲಕೋಟೆ: ಯುವ ಪ್ರೇಮಿಗಳಿಬ್ಬರು ನೇಣು ಹಾಕಿಕೊಂಡು ಸಾವಿಗೆ ಶರಣಾದಂತಹ ಆಘಾತಕಾರಿ…

3 days ago

ನಾಳೆ ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ – vishwanews24

ನಾಳೆ ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ ಬೆಂಗಳೂರು: ದ್ವಿತೀಯ ಪಿಯುಸಿ ವಿದ್ಯಾರ್ಥಿಗಳ ಬಹುದಿನಗಳ ನಿರೀಕ್ಷೆ ಕೊನೆಗೂ ಅಂತ್ಯಗೊಳ್ಳಲಿದೆ. ನಾಳೆ (ಏಪ್ರಿಲ್…

3 days ago