Featured

ಉಡುಪಿ ಪರಿಷತ್ ಚುನಾವಣೆ ಫಲಿತಾಂಶ : ದ.ಕ-ಉಡುಪಿ ನಾವು ಮಾರಾಟಕ್ಕಿಲ್ಲ ಅಂತ ತೋರಿಸಿಕೊಟ್ಟಿದೆ: ಬಿ.ಎಲ್ ಸಂತೋಷ್ – Vishwanews24

ಉಡುಪಿ ಪರಿಷತ್ ಚುನಾವಣೆ ಫಲಿತಾಂಶ : ದ.ಕ-ಉಡುಪಿ ನಾವು ಮಾರಾಟಕ್ಕಿಲ್ಲ ಅಂತ ತೋರಿಸಿಕೊಟ್ಟಿದೆ, ವಿಧಾನಪರಿಷತ್ ಚುನಾವಣೆಯಲ್ಲಿ ಇದು ಸಾಬೀತಾಗಬೇಕು : ಬಿ.ಎಲ್ ಸಂತೋಷ್ – Vishwanews24

ಕೋಟ ಶ್ರೀನಿವಾಸ್ ಪೂಜಾರಿ ಒಂದು ರುಪಾಯಿ ಖರ್ಚು ಮಾಡದೇ ಗೆದ್ದಿದ್ದಾರೆ..

ಉಡುಪಿ: ಕೋಟ ಶ್ರೀನಿವಾಸ್ ಪೂಜಾರಿ ಒಂದು ರುಪಾಯಿ ಖರ್ಚು ಮಾಡದೇ ಗೆದ್ದಿದ್ದಾರೆ ಎಂದು ಬಿಜೆಪಿ ಸಂಘಟನಾ ರಾಷ್ಟ್ರೀಯ ಕಾರ್ಯದರ್ಶಿ ಬಿ.ಎಲ್ ಸಂತೋಷ್ ಹೇಳಿದ್ದಾರೆ.

ವಿಧಾನ ಪರಿಷತ್ ಚುನಾವಣೆ ನಡೆದು ಫಲಿತಾಂಶ ಬಂದಿದೆ. ಬುದ್ಧಿವಂತರ ಚುನಾವಣೆ ಮಾದರಿ ಎಂದೆಲ್ಲಾ ಇವರಿಗೆ ಬಿಂಬಿತವಾದ ಪರಿಷತ್ ಚುನಾವಣೆಗೆ ಕೋಟಿ ಕೋಟಿ ರೂಪಾಯಿ ಹಣದ ಹೊಳೆ ಹರಿದ ಬಗ್ಗೆ ಜಿಲ್ಲಾ ಮಟ್ಟದ ಶಕ್ತಿಕೇಂದ್ರ ಪ್ರಮುಖರ ಸಭೆಯಲ್ಲಿ ಪಾಲ್ಗೊಂಡ ಸಂತೋಷ್ ಅವರು ಖೇದ ವ್ಯಕ್ತಪಡಿಸಿದ್ದಾರೆ. ಈ ವೇಳೆ ಅವರು, ಮತಗಳು, ಮತ ಹಾಕಿದ ಪ್ರತಿನಿಧಿಗಳು ಖರೀದಿಯಾಗಿದ್ದಾರೆ ಎಂದು ವಿರೋಧ ವ್ಯಕ್ತಪಡಿಸಿದರು.

ದ.ಕ-ಉಡುಪಿ ಶೇ.99 ನಾವು ಮಾರಾಟಕ್ಕಿಲ್ಲ ಅಂತ ತೋರಿಸಿಕೊಟ್ಟಿದೆ. ವಿಧಾನಪರಿಷತ್ ಚುನಾವಣೆಯಲ್ಲಿ ಇದು ಸಾಬೀತಾಗಬೇಕು. ನಾವು ಮಾರಾಟಕ್ಕಿಲ್ಲ, ದಾಕ್ಷಿಣ್ಯಕ್ಕೆ ಒಳಗಾಗುವುದಿಲ್ಲ ಎಂದು ಪ್ರತಿಜ್ಞೆ ಮಾಡಬೇಕು. ಸಾರ್ವಜನಿಕ ವ್ಯವಸ್ಥೆಯಲ್ಲಿ ಇರುವವರಿಗೆ ಈ ಬದ್ಧತೆ ಬೇಕು ಎಂದು ಕರೆ ನೀಡಿದರು.

ಕೆಲ ಜಿಲ್ಲೆಗಳಲ್ಲಿ ಕೋಟ್ಯಂತರ ರೂಪಾಯಿ ಪರಿಷತ್ತಿನ ಚುನಾವಣೆಗೆ ಖರ್ಚಾಗಿದೆ. ಆಮಿಷಗಳಿಗೆ ಮಣಿದು ಜನಪ್ರತಿನಿಧಿಗಳು ಮತ ಚಲಾವಣೆ ಮಾಡಿರುವುದು ಜಗಜ್ಜಾಹೀರಾಗಿದೆ. ದ.ಕ ಉಡುಪಿ ಬಿಜೆಪಿ ಅಭ್ಯರ್ಥಿ ಒಂದು ರೂಪಾಯಿ ಖರ್ಚು ಮಾಡದೆ ಗೆದ್ದಿದ್ದಾರೆ ಎಂದು ಕೋಟ ಶ್ರೀನಿವಾಸ್ ಪೂಜಾರಿ ಹೆಸರು ಉಲ್ಲೇಖ ಮಾಡದೇ ವಿಷಯ ಪ್ರಸ್ತಾಪ ಮಾಡಿದರು.

ವಿಧಾನ ಪರಿಷತ್ ರದ್ದು ಗೊಳಿಸುವ ಸಮಯ ಬಂದಿದೆಯಲ್ಲವೇ? ಅಂತ ಪಕ್ಷದ ಹಿರಿಯ ಮತ್ತು ಸಂವೇದನೆ ಇರುವ ಕಾರ್ಯಕರ್ತರೊಬ್ಬರು ನನ್ನನ್ನು ಪ್ರಶ್ನಿಸಿದರು. ದ.ಕನ್ನಡದ ಉಡುಪಿ ಜಿಲ್ಲೆಯಲ್ಲಿ ಈ ಪ್ರಶ್ನೆ ಉದ್ಭವಿಸುವುದಿಲ್ಲ. ಯಾರೂ ವೋಟ್ ಮಾರಾಟ ಮಾಡಬಾರದು ಅದೊಂದು ನಡವಳಿಕೆ. ನಾನು ಮಾರಾಟಕ್ಕಿಲ್ಲ ಎನ್ನುವುದು ರಾಜಕಾರಣಿಯೊಬ್ಬನಿಗೆ ಇರಬೇಕಾದ ಅತಿ ದೊಡ್ಡ ಗುಣ ಎಂದು ಹೇಳಿದರು.

Vishwa News 24

Recent Posts

ಉಡುಪಿ : ಹಣಕಾಸಿನ ವಿಚಾರದಲ್ಲಿ ವೈಮನಸ್ಸು ಡೇವಿಡ್ ಡಿಸೋಜ ಹತ್ಯೆಗೆ ಕಾರಣ; ತನಿಖೆಯಿಂದ ಬಯಲು -vishwanews24

ಉಡುಪಿ : ಹಣಕಾಸಿನ ವಿಚಾರದಲ್ಲಿ ವೈಮನಸ್ಸು ಡೇವಿಡ್ ಡಿಸೋಜ ಹತ್ಯೆಗೆ ಕಾರಣ; ತನಿಖೆಯಿಂದ ಬಯಲು ಉಡುಪಿ: ಮುದರಂಗಡಿ ಗ್ರಾ.ಪಂ ಮಾಜಿ…

9 hours ago

ಮುದರಂಗಡಿ ಡೇವಿಡ್‌ ಡಿಸೋಜಾ ಹತ್ಯೆ ಪ್ರಕರಣ: ಮೂವರು ಆರೋಪಿಗಳ ಬಂಧನ -vishwanews24

ಮುದರಂಗಡಿ ಡೇವಿಡ್‌ ಡಿಸೋಜಾ ಹತ್ಯೆ ಪ್ರಕರಣ: ಮೂವರು ಆರೋಪಿಗಳ ಬಂಧನ ಉಡುಪಿ: ಮುದರಂಗಡಿಯಲ್ಲಿ ಉದ್ಯಮಿ ಹಾಗೂ ಕಾಂಗ್ರೆಸ್ ಮುಖಂಡ ಡೇವಿಡ್‌…

10 hours ago

ಹಿಮಾಚಲ ಪ್ರದೇಶದಲ್ಲಿ ಭೀಕರ ರಸ್ತೆ ದುರಂತ ; ಕಂದಕಕ್ಕೆ ಉರುಳಿದ ಖಾಸಗಿ ಬಸ್, 7 ಮಂದಿ ಮೃತ್ಯು -vishwanews24

ಹಿಮಾಚಲ ಪ್ರದೇಶದಲ್ಲಿ ಭೀಕರ ರಸ್ತೆ ದುರಂತ ; ಕಂದಕಕ್ಕೆ ಉರುಳಿದ ಖಾಸಗಿ ಬಸ್, 7 ಮಂದಿ ಮೃತ್ಯು ಶಿಮ್ಲಾ :…

10 hours ago

ಗೃಹಲಕ್ಷ್ಮಿ 32ನೇ ಕಂತಿನ ಹಣ 2443 ಕೋಟಿ ರೂ. ಬಿಡುಗಡೆ -vishwanews24

ಗೃಹಲಕ್ಷ್ಮಿ 32ನೇ ಕಂತಿನ ಹಣ 2443 ಕೋಟಿ ರೂ. ಬಿಡುಗಡೆ ಬೆಂಗಳೂರು: ಗೃಹಲಕ್ಷ್ಮಿ ಯೋಜನೆಯಡಿ 32ನೇ ಕಂತಿನ ಹಣ ಬಿಡುಗಡೆಯಾಗಿದೆ.…

11 hours ago

ನನ್ನ ಅವಶ್ಯಕತೆ ಇರಲಿಲ್ಲವೇನೋ ಅದಕ್ಕೆ ಕೊನೆ ಕ್ಷಣದಲ್ಲಿ ಕೈಬಿಟ್ಟರು: ಮಂಕಾಳ ವೈದ್ಯ ಅಸಮಾಧಾನ -vishwanews24

ನನ್ನ ಅವಶ್ಯಕತೆ ಇರಲಿಲ್ಲವೇನೋ ಅದಕ್ಕೆ ಕೊನೆ ಕ್ಷಣದಲ್ಲಿ ಕೈಬಿಟ್ಟರು: ಮಂಕಾಳ ವೈದ್ಯ ಅಸಮಾಧಾನ ಮೈಸೂರು: ನನ್ನ ಅವಶ್ಯಕತೆ ಇರಲಿಲ್ಲವೇನೋ ?…

11 hours ago

ಶಿರ್ವ: ದ್ವಿಚಕ್ರ ವಾಹನಕ್ಕೆ ಕಾರು ಢಿಕ್ಕಿ; ಸವಾರ ಸಾವು -vishwanews24

ಶಿರ್ವ: ರಸ್ತೆ ದಾಟಲು ನಿಂತಿದ್ದ ದ್ವಿಚಕ್ರ ವಾಹನಕ್ಕೆ ಕಾರು ಢಿಕ್ಕಿ; ಸವಾರ ಸಾವು ಶಿರ್ವ : ರಸ್ತೆ ದಾಟಲು ನಿಂತಿದ್ದ…

11 hours ago