Featured

ಉಡುಪಿ : ಪರಿಸರ ಸ್ನೇಹಿ ಗೌರಿ ಗಣೇಶ ಚತುರ್ಥಿ ಆಚರಿಸಿ – Vishwanews24

ಉಡುಪಿ : ಪರಿಸರ ಸ್ನೇಹಿ ಗೌರಿ ಗಣೇಶ ಚತುರ್ಥಿ ಆಚರಿಸಿ

ಉಡುಪಿ : ಗೌರಿ-ಗಣೇಶ ಹಬ್ಬದ ಪ್ರಯುಕ್ತ ಬಣ್ಣದಿಂದ ತಯಾರಿಸಿರುವ ಗೌರಿ ಹಾಗು ಗಣೇಶನ ವಿಗ್ರಹಗಳನ್ನು ಪ್ರತಿಷ್ಠಾಪಿಸಿ, ಪೂಜಿಸಿ ಕೆರೆ, ಬಾವಿ ಹಾಗೂ ಇತರೆ ನೈಸರ್ಗಿಕ ಜಲಮೂಲಗಳಿಗೆ ವಿಸರ್ಜಿಸುವುದರಿಂದ ನೀರು ಕಲುಷಿತವಾಗಿ, ಜಲಚರಗಳಿಗೆ ಹಾನಿಯುಂಟಾಗುತ್ತದೆ. ಇದನ್ನು ತಪ್ಪಿಸಲು ಜೇಡಿ ಮಣ್ಣಿನಿಂದ ಹಾಗೂ ನೈಸರ್ಗಿಕ ಬಣ್ಣಗಳಿಂದ ತಯಾರಿಸಿದ ಮೂರ್ತಿಗಳನ್ನು ಪ್ರತಿಷ್ಠಾಪಿಸಿ, ಗೌರಿ-ಗಣೇಶ ಚರ್ತುರ್ಥಿ ಆಚರಣೆಯನ್ನು ಪರಿಸರ ಸ್ನೇಹಿಯಾಗಿ ಆಚರಿಸುವಂತೆ ಮಾಲಿನ್ಯ ನಿಯಂತ್ರಣ ಮಂಡಳಿಯ ಪರಿಸರ ಅಧಿಕಾರಿಗಳು ಸಾರ್ವಜನಿಕರಲ್ಲಿ ಮನವಿ ಮಾಡಿದ್ದಾರೆ.

ವಿಷಕಾರಿ ರಾಸಾಯನಿಕ, ಲೋಹದ ಲೇಪದ ಪ್ಲಾಸ್ಟರ್ ಆಫ್ ಪ್ಯಾರಿಸ್‌ನ ಗಣೇಶನ ಮೂರ್ತಿ ಬಳಕೆ ಮಾಡದೆ, ಸಾದಾ ಜೇಡಿ ಮಣ್ಣಿನಿಂದ ತಯಾರಿಸಿದ, ಎಲೆ, ಹೂವುಗಳಿಂದ ಮಾಡಿದ ನೈಸರ್ಗಿಕ ಬಣ್ಣದಿಂದ ತಯಾರಿಸಿದ ಗಣಪತಿಯ ಮೂರ್ತಿಯನ್ನು ಪ್ರತಿಷ್ಠಾಪಿಸಬಹುದಾಗಿದೆ.

ಉಡುಪಿ : ಗಂಭೀರ ಕಾಯಿಲೆಯಿಂದ ಬಳಲುತ್ತಿರುವ ಬಾಲಕಿಗೆ ವೇಷ ಧರಿಸಿ ಒಂದೇ ದಿನದಲ್ಲಿ 10 ಲಕ್ಷ ಸಂಗ್ರಹಿಸಿ ಕೊಟ್ಟ ಯೂಟ್ಯೂಬರ್.. ಕಾಪು ಶಟರ್ ಬಾಕ್ಸ್ ಫಿಲಂಸ್ ಖ್ಯಾತಿಯ ಸಚಿನ್ ಶೆಟ್ಟಿ ತಂಡ..

ಸಾಮೂಹಿಕವಾಗಿ ನಡೆಸುವ ಗಣೇಶನ ಚಪ್ಪರಕ್ಕೆ ಪ್ಲಾಸ್ಟಿಕ್ ವಸ್ತುಗಳನ್ನು ಬಳಸದೇ ಪರಿಸರ ಸ್ನೇಹಿ ವಸ್ತುಗಳನ್ನೇ ಬಳಸಬೇಕು.    ಬಾವಿ, ಕೆರೆ ಹಾಗೂ ಹೊಳೆಗಳಲ್ಲಿ ಗಣಪತಿ ವಿಗ್ರಹಗಳನ್ನು ವಿಸರ್ಜನೆ ಮಾಡುವುದರಿಂದ ಅಂತರ್ಜಲ, ಕುಡಿಯುವ ನೀರಿನ ಸೆಲೆಗಳು ಹಾಳಾಗುತ್ತದೆ. ಆದ್ದರಿಂದ ಬಕೆಟ್‌ನಲ್ಲಿ ವಿಸರ್ಜಿಸಬೇಕು ಅಥವಾ ಸೂಚಿತ ಕೆರೆಗಳಲ್ಲಿ ವಿಸರ್ಜಿಸುವ ಮುನ್ನ ಹೂವು, ವಸ್ತç, ಪ್ಲಾಸ್ಟಿಕ್ ಹಾರ ಎಲ್ಲವನ್ನೂ ತೆಗೆದು ನಂತರ ಮೂರ್ತಿಯನ್ನು ವಿಸರ್ಜನೆ ಮಾಡಬೇಕು.

ಗಣಪತಿ ಹಬ್ಬದ ಸಂದರ್ಭದಲ್ಲಿ ಪಟಾಕಿಯನ್ನು ಸಿಡಿಸುವುದರಿಂದ ವಾಯು ಮಾಲಿನ್ಯ ಹಾಗೂ ಶಬ್ದ ಮಾಲಿನ್ಯ ಉಂಟಾಗಿ, ಪರಿಸರಕ್ಕೆ ಹಾನಿಯಾಗುತ್ತದೆ. ಗಣೇಶ ಹಬ್ಬದಲ್ಲಿ ರಸ್ತೆ, ಚರಂಡಿಯಲ್ಲಿ ಕಸಗಳನ್ನು ಎಸೆಯದೇ ಕಸದ ಡಬ್ಬಿಗಳಿಗೆ ಹಾಕುವಂತೆ ಪರಿಸರ ಇಲಾಖೆಯ ಪ್ರಕಟಣೆ ತಿಳಿಸಿದೆ.

ಉಡುಪಿ : ಗಂಭೀರ ಕಾಯಿಲೆಯಿಂದ ಬಳಲುತ್ತಿರುವ ಬಾಲಕಿಗೆ ವೇಷ ಧರಿಸಿ ಒಂದೇ ದಿನದಲ್ಲಿ 10 ಲಕ್ಷ ಸಂಗ್ರಹಿಸಿ ಕೊಟ್ಟ ಯೂಟ್ಯೂಬರ್.. ಕಾಪು ಶಟರ್ ಬಾಕ್ಸ್ ಫಿಲಂಸ್ ಖ್ಯಾತಿಯ ಸಚಿನ್ ಶೆಟ್ಟಿ ತಂಡ..

Vishwa News 24

Recent Posts

ಉಡುಪಿ : ಆ. 20 ರಂದು ನೇರ ಸಂದರ್ಶನ -vishwanews24

ಉಡುಪಿ : ಆ. 20 ರಂದು ನೇರ ಸಂದರ್ಶನ ಉಡುಪಿ : ನಗರದ ಅಂಬಲಪಾಡಿ ಕರಾವಳಿ ಬೈಪಾಸ್ ಬಳಿಯ ರೀಗಲ್…

8 hours ago

ಉಡುಪಿ: ಗೃಹ ಜ್ಯೋತಿ ಫಲಾನುಭವಿಗಳು ಮರುಪರಿಶೀಲನೆ ಪ್ರಕ್ರಿಯೆ ಪೂರ್ಣಗೊಳಿಸಿಕೊಳ್ಳಿ: ರಮೇಶ್ ಕಾಂಚನ್ -vishwanews24

ಉಡುಪಿ: ಗೃಹ ಜ್ಯೋತಿ ಫಲಾನುಭವಿಗಳು ಮರುಪರಿಶೀಲನೆ ಪ್ರಕ್ರಿಯೆ ಪೂರ್ಣಗೊಳಿಸಿಕೊಳ್ಳಿ: ರಮೇಶ್ ಕಾಂಚನ್ ಗೃಹ ಜ್ಯೋತಿ ಯೋಜನೆಯ ಫಲಾನುಭವಿಗಳ ಮನೆಗಳ ಮರುಪರಿಶೀಲನೆಗೆ…

8 hours ago

ಕರಾವಳಿಯಲ್ಲಿ ಹೈಕೋರ್ಟ್ ಪೀಠ ಸ್ಥಾಪನೆಗೆ ಆಗ್ರಹ: ಆ.22ರಂದು ಉಡುಪಿಯಲ್ಲಿ ಸಭೆ -vishwanews24

ಕರಾವಳಿಯಲ್ಲಿ ಹೈಕೋರ್ಟ್ ಪೀಠ ಸ್ಥಾಪನೆಗೆ ಆಗ್ರಹ: ಆ.22ರಂದು ಉಡುಪಿಯಲ್ಲಿ ಸಭೆ ಉಡುಪಿ: ಉಡುಪಿ, ದಕ್ಷಿಣ ಕನ್ನಡ ಹಾಗೂ ಉತ್ತರ ಕನ್ನಡ…

8 hours ago

ಉಡುಪಿ: ಗಣಪತಿ ಹಬ್ಬದ ಪ್ರಯುಕ್ತ ವಿಶೇಷ ರೈಲುಗಳ ಹೆಚ್ಚುವರಿ ಸಂಚಾರ -vishwanews24

ಉಡುಪಿ: ಗಣಪತಿ ಹಬ್ಬದ ಪ್ರಯುಕ್ತ ವಿಶೇಷ ರೈಲುಗಳ ಹೆಚ್ಚುವರಿ ಸಂಚಾರ ಉಡುಪಿ: ಗಣಪತಿ ಹಬ್ಬದ ಪ್ರಯುಕ್ತ ಪ್ರಯಾಣಿಕರ ಬೇಡಿಕೆಗೆ ಅನುಸಾರ…

8 hours ago

ಉಳ್ಳಾಲ: ನಾಪತ್ತೆಯಾಗಿದ್ದ ಕುಂದಾಪುರ ಮೂಲದ ಮೀನುಗಾರನ  ಮೃತದೇಹ ಪತ್ತೆ -vishwanews24

ಉಳ್ಳಾಲ: ನಾಪತ್ತೆಯಾಗಿದ್ದ ಕುಂದಾಪುರ ಮೂಲದ ಮೀನುಗಾರನ  ಮೃತದೇಹ ಪತ್ತೆ ಉಳ್ಳಾಲ : ಮೀನುಗಾರಿಕೆಗೆ ತೆರಳಿದ್ದ ವೇಳೆ ದೈತ್ಯ ಗಾತ್ರದ ಅಲೆಗೆ…

2 days ago

ನಿರೂಪಣಾ ವೃತ್ತಿಗೆ ಅಧಿಕೃತವಾಗಿ ನಿವೃತ್ತಿ ಘೋಷಿಸಿದ ಅನುಪಮಾ ಗೌಡ -vishwanews24

ನಿರೂಪಣಾ ವೃತ್ತಿಗೆ ಅಧಿಕೃತವಾಗಿ ನಿವೃತ್ತಿ ಘೋಷಿಸಿದ ಅನುಪಮಾ ಗೌಡ ಬೆಂಗಳೂರು : ನಟಿ ಅನುಪಮಾ ಗೌಡ ಅವರು ನಟನೆಯ ಮೂಲಕ…

2 days ago