ಉಡುಪಿ: ಪರೇಶ್ ಮೇಸ್ತನನ್ನು ನೂರಕ್ಕೆ ನೂರು ಕೊಲೆ ಮಾಡಲಾಗಿದೆ. ಆ ಸಂದರ್ಭದಲ್ಲಿ ಅಧಿಕಾರದಲ್ಲಿದ್ದ ಕಾಂಗ್ರೆಸ್ ಸರ್ಕಾರ ಎಲ್ಲಾ ಸಾಕ್ಷಗಳನ್ನು ನಾಶ ಮಾಡಿದೆ. ಕೇಂದ್ರ ಸರ್ಕಾರ ಕೇಸ್ನ್ನು ರೀ ಓಪನ್ ಮಾಡಬೇಕು ಎಂದು ಶ್ರೀರಾಮ ಸೇನೆ ಮುಖ್ಯಸ್ಥ ಪ್ರಮೋದ್ ಮುತಾಲಿಕ್ ಆಗ್ರಹಿಸಿದ್ದಾರೆ.
ಪರೇಶ್ ಮೇಸ್ತ ಕೊಲೆಯಲ್ಲ ಆಕಸ್ಮಿಕ ಸಾವು ಎಂಬುದಾಗಿ ಸಿಬಿಐ ಸಲ್ಲಿಸಿದ ವರದಿ ವಿಚಾರವಾಗಿ ಉಡುಪಿಯಲ್ಲಿ ಮಂಗಳವಾರ ಪ್ರತಿಕ್ರಿಯೆ ನೀಡಿದ ಅವರು, ಸಹಜ ಸಾವು ಅನ್ನೋದು ತಪ್ಪು. ಈ ಪ್ರಕ್ರಿಯೆಯಲ್ಲಿ ಅನ್ಯಾಯವಾಗಿದೆ. ನಾನು ಇದನ್ನು ಧಿಕ್ಕರಿಸುತ್ತೇನೆ, ವಿರೋಧಿಸುತ್ತೇನ. ಇದು ಅತ್ಯಂತ ಮೋಸ ಮಾಡಿದ ವರದಿಯಾಗಿದ್ದು, ಪರೇಶ್ ಮೇಸ್ತಾನನ್ನು ನೂರಕ್ಕೆ ನೂರು ಕೊಲೆ ಮಾಡಲಾಗಿದೆ. ಆ ಸಂದರ್ಭದಲ್ಲಿ ಅಧಿಕಾರದಲ್ಲಿದ್ದ ಕಾಂಗ್ರೆಸ್ ಸರ್ಕಾರ ಎಲ್ಲಾ ಸಾಕ್ಷಗಳನ್ನು ನಾಶ ಮಾಡಿದೆ ಎಂದು ಆಪಾದಿಸಿದರು.
ಪರೇಶ್ ಮೇಸ್ತ ಕೊಲೆಯಲ್ಲ ಆಕಸ್ಮಿಕವಾಗಿ ನಡೆದ ಸಾವು : ಸಿಬಿಐ – Vishwanews24
ತಪ್ಪತಸ್ಥರು ಮುಸ್ಲಿಂ ಗೂಂಡಾ ಕಿಡಿಗೇಡಿಗಳು. ಈ ವರದಿಯಿಂದ ಹಿಂದೂ ಸಮಾಜಕ್ಕೆ, ಆತನ ಕುಟುಂಬಕ್ಕೆ ತೀರಾ ಅನ್ಯಾಯವಾಗಿದೆ ಎಂದು ಅವರು ಅಸಮಾಧಾನ ವ್ಯಕ್ತಪಡಿಸಿದರು.
2017ರಲ್ಲಿ ಪರೇಶ್ ಮೆಸ್ತ ಹತ್ಯೆಯಾಯಿತು. ಇಡೀ ರಾಜ್ಯಾದ್ಯಂತ ಹಿಂದುಗಳ ಆಕ್ರೋಶ ಪ್ರತಿಭಟನೆ ನಡೆಯಿತು. ಗೃಹ ಸಚಿವ ಅಮಿತ್ ಶಾ ಕೂಡ ಅವರ ಮನೆಗೆ ಭೇಟಿ ಕೊಟ್ಟರು. ಆ ಪ್ರಕರಣ ನಡೆದಾಗ ಸಿದ್ದರಾಮಯ್ಯ ಮುಖ್ಯಮಂತ್ರಿಯಾಗಿದ್ದರು. ಪ್ರಕರಣವನ್ನು 2019ರಲ್ಲಿ ಸಿಬಿಐಗೆ ಒಪ್ಪಿಸಲಾಯಿತು. ಮೂರು ವರ್ಷದ ನಂತರ ಸಿಬಿಐ ಬಿ ರಿಪೋರ್ಟ್ ಹಾಕಿದೆ. ಆದರೆ ಈ ರಿಪೋರ್ಟ್ ಮೋಸದಿಂದ ಕೂಡಿದ್ದು, ಈಗಿನ ಕೇಂದ್ರ ಸರ್ಕಾರ ಕೇಸ್ನ್ನು ರೀ ಓಪನ್ ಮಾಡಬೇಕು. ಸಂಪೂರ್ಣವಾಗಿ ತನಿಖೆ ಮಾಡಬೇಕು. ಈ ನಿಟ್ಟಿನಲ್ಲಿ ರಾಜ್ಯಾದ್ಯಂತ ಶ್ರೀರಾಮ ಸೇನೆ ಹೋರಾಟ ಮಾಡುತ್ತದೆ ಎಂದವರು ಇದೇ ವೇಳೆ ತಿಳಿಸಿದರು.
ಫಲ್ಗುಣಿ ನದಿಯಲ್ಲಿ ಮಗುಚಿ ಬಿದ್ದ ದೋಣಿ: ಇಬ್ಬರು ಯುವಕರು ನೀರುಪಾಲು ಮೀನುಗಾರಿಕೆಗೆ ತೆರಳಿದ್ದಾಗ ಆಕಸ್ಮಿಕವಾಗಿ ದೋಣಿ ಮುಗುಚಿ ಇಬ್ಬರು ಯುವಕರು…
ನಮ್ಮದು ಪಕ್ಷಾತೀತ ಅಭಿವೃದ್ಧಿಪರ ಸರ್ಕಾರ.. ದಲಿತರಿಗೆ ಮೀಸಲಾತಿ ತಂದವರು ನಾವು .. ರಾಜ್ಯದಲ್ಲಿ ಬಿಜೆಪಿ ಸ್ವಂತ ಬಲದಿಂದ ಯಾವತ್ತೂ ಅಧಿಕಾರಕ್ಕೆ…
ಕಾಪು : 94/ಸಿಯಡಿ ಹಕ್ಕುಪತ್ರ ; ಉಚಿತ ಉಪಕರಣಗಳ ವಿತರಣೆ ಕಾಪು : ವಿಧಾನಸಭಾ ಕ್ಷೇತ್ರದ ಕಾಪು ತಾಲ್ಲೂಕು ವ್ಯಾಪ್ತಿಯ…
ರೈಲ್ವೆ ಇಲಾಖೆಯ 5 ಹೊಸ ನಿಯಮ ಜಾರಿ: ತತ್ಕಾಲ್ ಬುಕಿಂಗ್ಗೆ ಆಧಾರ್ ಕಡ್ಡಾಯ; ರೀಫಂಡ್ ನಿಯಮ ಹೇಗಿದೆ? ರೈಲ್ವೆ ಇಲಾಖೆಯ…
ಉಡುಪಿ: ಯುವ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ ಉಡುಪಿ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ(ಕೆಯುಡಬ್ಲೂಜೆ)ದ 2024ನೇ…
ಉಡುಪಿ ಜಿಲ್ಲೆಯ ಐದು ಗ್ರಾಮ ಪಂಚಾಯತ್ಗಳು ರಾಷ್ಟ್ರೀಯ ಪ್ರಶಸ್ತಿಗೆ ಆಯ್ಕೆ ಉಡುಪಿ: ಕೇಂದ್ರ ಸರ್ಕಾರದ ವಿವಿಧ ವಿಭಾಗಗಳ ಅಡಿಯಲ್ಲಿ ನೀಡಲಾಗುವ…